ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಈಗ ಹೇಗಿದೆ? ಮಣಿಪಾಲ್ ಆಸ್ಪತ್ರೆಯ ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
HD Deve Gowda wife Chennamma Health update: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ನಿನ್ನೆಗಿಂತ ಇಂದು ಸುಧಾರಣೆ ಕಂಡುಬಂದಿದ್ದು, ಉಸಿರಾಟದ ತೊಂದರೆ ಶೇ 20ರಿಂದ 30ರಷ್ಟು ಹತೋಟಿಗೆ ಬಂದಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ವೈದ್ಯರ ಹೇಳಿಕೆಯ ವಿಡಿಯೋ ಇಲ್ಲಿದೆ.
- Sunil MH
- Updated on: Jul 18, 2026
- 11:19 am
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
HD Deve Gowda Wife Chennamma health update: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಇಂದು ಬೆಳಗ್ಗೆ ಆರೋಗ್ಯ ಬುಲೆಟಿನ್ ಬಿಡುಗಡೆ ಮಾಡುವ ಸಾಧ್ಯತೆಯಿದೆ.
- Sunil MH
- Updated on: Jul 18, 2026
- 8:11 am
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಟುಂಬಸ್ಥರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಪುತ್ರ ಹೆಚ್ಡಿ ರೇವಣ್ಣ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
- Sunil MH
- Updated on: Jul 16, 2026
- 6:33 am
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿ ಕುಮಾರಸ್ವಾಮಿ ಮನವಿ
ಬಿಡದಿ ಟೌನ್ಶಿಪ್ ವಿರುದ್ಧ 500 ದಿನಗಳಿಂದ ನಡೆಯುತ್ತಿರುವ ರೈತರ ಶಾಂತಿಯುತ ಹೋರಾಟದಲ್ಲಿ ಸರ್ವೆಗೆ ಬಂದ ಅಧಿಕಾರಿಗಳ ಮೇಲೆ ನಡೆದ ಘಟನೆ ಕುರಿತು ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ರೈತರಿಗೆ ಶಾಂತಿಯುತ ಹೋರಾಟ ಮುಂದುವರಿಸಲು ಮನವಿ ಮಾಡಿದ ಅವರು, ಪೊಲೀಸ್ ಇಲಾಖೆ ಸರ್ಕಾರದ ಒತ್ತಡಕ್ಕೆ ಮಣಿದು ರೈತ ವಿರೋಧಿ ಕ್ರಮ ಕೈಗೊಂಡರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
- Sunil MH
- Updated on: Jul 13, 2026
- 6:00 pm
‘ಬೆಂಗಳೂರಿಗರಿಗೆ ಬಸ್ಸುಗಳು ಬೇಡವೇ?’: ಇ-ಬಸ್ ವಿಳಂಬ ನೀತಿ ವಿರುದ್ಧ ಜೆಡಿಎಸ್ ಕೆಂಡಾಮಂಡಲ!
ಕೇಂದ್ರ ಸರ್ಕಾರದ 'ಪಿಎಂ ಇ-ಡ್ರೈವ್' ಯೋಜನೆಯಡಿ ಬೆಂಗಳೂರಿಗೆ ಮಂಜೂರಾಗಿರುವ 4,500 ಎಲೆಕ್ಟ್ರಿಕ್ ಬಸ್ಗಳ ಜಾರಿಗೆ ಕ್ಯಾಬಿನೆಟ್ ಅನುಮೋದನೆ ನೀಡದ ಕಾಂಗ್ರೆಸ್ ಸರ್ಕಾರದ ವಿಳಂಬ ನೀತಿಯನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ. ವಾರ್ಷಿಕ 1,000 ಕೋಟಿ ರೂ. ನಷ್ಟದ ಭೀತಿಯಿಂದ ಸರ್ಕಾರ ಹಿಂದೇಟು ಹಾಕುತ್ತಿದ್ದರೆ, ಇತ್ತ ಜೆಡಿಎಸ್ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಎಕ್ಸ್ ಖಾತೆಯಲ್ಲಿ ವಾಗ್ದಾಳಿ ನಡೆಸಿದೆ.
- Sunil MH
- Updated on: Jul 12, 2026
- 11:39 am
ಆರ್ಎಸ್ಎಸ್ನವರು ಯಾವಾಗೆಲ್ಲಾ ಸಭೆ ಸೇರುತ್ತಾರೋ, ಆವಾಗೆಲ್ಲಾ ಗಲಭೆಗಳಾಗಿವೆ: ಪ್ರಿಯಾಂಕ್ ಖರ್ಗೆ
Priyank Kharge Sparks on RSS: ಆರ್ಎಸ್ಎಸ್ ಕುರಿತಾಗಿ ಬಿಕೆ ಹರಿಪ್ರಸಾದ್ ನೀಡಿರುವ ಹೇಳಿಕೆ ಸದ್ಯ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಇದಕ್ಕೆ ಧ್ವನಿ ಗೂಡಿಸಿದ್ದು, ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗೆ ಸಮರ್ಥನೆ ನೀಡಿದ್ದಾರೆ. ‘‘ಈ ಬಗ್ಗೆ ಇಂಟೆಲಿಜೆನ್ಸ್ ಕಡೆಯಿಂದ ನಮಗೂ ಕೆಲ ಮಾಹಿತಿ ಬಂದಿದೆ, ಸೂಕ್ತ ಸಮಯದಲ್ಲಿ ಹೇಳುತ್ತೇನೆ’’ ಎಂದಿದ್ದಾರೆ.
- Sunil MH
- Updated on: Jul 11, 2026
- 4:41 pm
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಬಿಜೆಪಿ ಆರೋಪಗಳಿಗೆ ಪರಮೇಶ್ವರ್ ತಿರುಗೇಟು
ಡಿಸಿಎಂ ಡಾ.ಜಿ.ಪರಮೇಶ್ವರ್ ಶಾಶ್ವತ ವಾಸಸ್ಥಳ ಪ್ರಮಾಣಪತ್ರ ವಿತರಣೆಯನ್ನು ಸಮರ್ಥಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರ ಈ ಪ್ರಮಾಣಪತ್ರಗಳನ್ನು ಕಾನೂನುಬದ್ಧವಾಗಿ ನೀಡುತ್ತಿದ್ದು, ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆ ಎಂದು ಹೇಳಿದ್ದಾರೆ. ಬಿಜೆಪಿ ಅಕ್ರಮ ಆರೋಪಗಳನ್ನು ತಳ್ಳಿಹಾಕಿದ ಅವರು, ಬಾಂಗ್ಲಾದೇಶಿಗರಿಗೆ ಪೌರತ್ವ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
- Sunil MH
- Updated on: Jul 11, 2026
- 3:02 pm
ಉಪ ಚುನಾವಣೆ ಘೋಷಣೆಗೂ ಮುನ್ನವೇ ಹಿರಿಯೂರು ಕ್ಷೇತ್ರದ ಮೇಲೆ ದಳಪತಿಗಳ ಕಣ್ಣು: ತೆರೆಮರೆಯಲ್ಲಿ ಹೆಚ್ಡಿಕೆ ತಂತ್ರಗಾರಿಕೆ
Hiriyur Byelection update: ಡಿ. ಸುಧಾಕರ್ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಜಕೀಯ ಕಣ ಸಜ್ಜಾಗುತ್ತಿದೆ. ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಜೆಡಿಎಸ್ ತೆರೆಮರೆಯ ಕಸರತ್ತು ಆರಂಭಿಸಿದ್ದು, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮೈತ್ರಿ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಇದರೊಂದಿಗೆ, ಉಪಚುನಾವಣೆ ಘೋಷಣೆಗೂ ಮುನ್ನವೇ ಕಸರತ್ತು ಜೋರಾದಂತಾಗಿದೆ.
- Sunil MH
- Updated on: Jul 10, 2026
- 8:39 am
ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಉಗ್ರಪ್ಪ ನೇತೃತ್ವದ ನಿಯೋಗ: ಕಾರಣ ಇಲ್ಲಿದೆ
SC ST OBC Reservation: ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ನೇತೃತ್ವದ ನಿಯೋಗವು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿತು. ಈ ಸಂದರ್ಭದಲ್ಲಿ ಎಸ್.ಸಿ., ಎಸ್.ಟಿ., ಓ.ಬಿ.ಸಿ. ಮೀಸಲಾತಿ ಕುರಿತು ಪ್ರಮುಖ ಚರ್ಚೆಗಳು ನಡೆದವು.
- Sunil MH
- Updated on: Jul 8, 2026
- 9:31 pm
2ನೇ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಮಹತ್ವದ ಸಭೆ: ಬೆಂಗಳೂರು ದಕ್ಷಿಣದಲ್ಲಿ ಏರ್ಪೋರ್ಟ್ ಮಾಡಲು ಸರ್ಕಾರ ಒಲವು
ಬೆಂಗಳೂರಿನ ಹೆಚ್ಚುತ್ತಿರುವ ವಿಮಾನ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ವೇಗ ನೀಡಿದೆ. ಈ ಕುರಿತಾಗಿ ಇಂದು ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ಮಾಡಲಾಗಿದೆ. ಆ ಮೂಲಕ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡಲಾಗಿದೆ.
- Sunil MH
- Updated on: Jul 8, 2026
- 8:27 pm
ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು
ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಾಯಕರು ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದ್ದಾರೆ. ಮನೆ ಮನೆಗೆ ತೆರಳಿ ಮಾಡುವ ಬದಲು ಸಾಮೂಹಿಕವಾಗಿ ಎಸ್ಐಆರ್ ನಡೆಸಲಾಗುತ್ತಿದ್ದು, ನಕಲಿ ದಾಖಲೆ ಸೃಷ್ಟಿಸಿ ಅನರ್ಹರನ್ನು ಸೇರಿಸಲು ಬಿಎಲ್ಒಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
- Sunil MH
- Updated on: Jul 6, 2026
- 11:46 am
ರಾಮನಗರದಲ್ಲಿ SIR ಪ್ರಕ್ರಿಯೆಯಲ್ಲಿ ಲೋಪ: ಕುಮಾರಸ್ವಾಮಿ ಗಂಭೀರ ಆರೋಪ, ಆಗಿದ್ದೇನು?
ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ ಕಂಡುಬಂದಿರುವ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕೂಡ ಮಾತನಾಡಿದ್ದು, ಕಳ್ಳ ಮತದಾರರನ್ನ ಒಂದೆಡೆ ಕೂರಿಸಿ ಎಸ್ಐಆರ್ ಮಾಡುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.
- Sunil MH
- Updated on: Jul 2, 2026
- 4:29 pm