ಅಧಿಕಾರ ಹಂಚಿಕೆ: ಡಿಕೆ ಶಿವಕುಮಾರ್ ಜತೆಗಿನ ಮಾತುಕತೆ ರಹಸ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಬಣದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಡಿಕೆಶಿ ಜತೆಗೆ ಏನೇನು ಮಾತುಕತೆ ನಡೆಯಿತು ಎಂಬ ಬಗ್ಗೆ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ವಿವರಗಳು ಇಲ್ಲಿವೆ.
- Sunil MH
- Updated on: Nov 26, 2025
- 2:11 pm
ಕಬ್ಬು ದರ ಬಗ್ಗೆ ಸಿಎಂ ಸಭೆಯಲ್ಲಿ ಏನಾಯ್ತು? ಶುಗರ್ ಫ್ಯಾಕ್ಟರಿ ಓನರ್ ನಿರಾಣಿ ಹೇಳಿದ್ದಿಷ್ಟು
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಮುಕ್ತಾಯಗೊಂಡಿದೆ. ಸಭೆ ಬಳಿಕ ಪ್ರತಿಕ್ರಿಯಿಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ, ಸಿಎಂ ಜೊತೆ ಕಾರ್ಖಾನೆ ಮಾಲೀಕರ ಮೊದಲ ಹಂತದ ಸಭೆ ನಡೆದಿದೆ. ರೈತರ ಜೊತೆಗಿನ ಸಭೆ ಮುಗಿದ ಬಳಿಕ ಅಂತಿಮ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.
- Sunil MH
- Updated on: Nov 7, 2025
- 4:13 pm
ಕಬ್ಬಿನ ಗಾಣಕ್ಕೆ ಸಿಲುಕಿದ ಸರ್ಕಾರ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಪ್ರತೀ ಟನ್ ಕಬ್ಬಿಗೆ 3500 ರೂ. ದರ ನಿಗದಿ ಮಾಡುವಂತೆ ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡುತ್ತಿದ್ದಾರೆ. ಸದ್ಯ ರೈತರ ಈ ಹೋರಾಟ ರಾಷ್ಟ್ರಮಟ್ಟದಲ್ಲೂ ಚರ್ಚೆ ಆಗುತ್ತಿದೆ. ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ನೆರವಿಗೆ ಬರುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
- Sunil MH
- Updated on: Nov 6, 2025
- 10:23 pm
ಬಿಹಾರ ಸಂಘಕ್ಕೆ ಬೆಂಗಳೂರಲ್ಲಿ ಜಾಗ: ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ JDS ಕೆಂಡ
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಹಾರ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ನೀಡುವ ಭರವಸೆ ನೀಡಿದ ಬೆನ್ನಲ್ಲೇ ಜಾತ್ಯಾತೀತ ಜನತಾದಳ (ಜೆಡಿಎಸ್) ಆಕ್ರೋಶ ವ್ಯಕ್ತಪಡಿಸಿದೆ. ಕನ್ನಡಿಗರ ಹಿತಾಸಕ್ತಿ ಕಡೆಗಣಿಸಿ, ಬಿಹಾರ ಚುನಾವಣೆಯಲ್ಲಿ ಮತ ಗಳಿಕೆಗಾಗಿ ವಲಸಿಗರಿಗೆ ಭೂಮಿ ನೀಡುವ ಮೂಲಕ ಕಾಂಗ್ರೆಸ್ 'ಓಲೈಕೆ ರಾಜಕಾರಣ' ಮಾಡುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ. ಈ ನಿರ್ಧಾರವು ಕನ್ನಡಿಗರ ತೆರಿಗೆ ಹಣದ ದುರ್ಬಳಕೆ ಎಂದು ಟೀಕಿಸಿದೆ.
- Sunil MH
- Updated on: Nov 3, 2025
- 1:54 pm
ಶಾಸಕರ ಅನುದಾನ ತಾರತಮ್ಯ ಸಮರ: ಕೋರ್ಟ್ನಲ್ಲೇ ತೀರ್ಮಾನವಾಗಲಿ ಎಂದ ಸಿಎಂ ಸಿದ್ದರಾಮಯ್ಯ
ವಿಪಕ್ಷ ಶಾಸಕರು ಮತ್ತು ಆಡಳಿತ ಪಕ್ಷದ ಶಾಸಕರಿಗೆ ನೀಡಲಾಗುತ್ತಿರುವ ಅನುದಾನದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ ಕೋರ್ಟ್ ಮೊರೆ ಹೋಗಿದ್ದರೆ, ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆದ್ರೆ ಸಿಎಂ ಸಿದ್ದರಾಮಯ್ಯ ಮಾತ್ರ ಈ ಬಗ್ಗೆ ಕೋರ್ಟ್ನಲ್ಲೇ ತೀರ್ಮಾನವಾಗಲಿ ಎಂದಿದ್ದಾರೆ.
- Sunil MH
- Updated on: Oct 15, 2025
- 6:43 pm
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಆರೋಗ್ಯದಲ್ಲಿ ಸುಧಾರಣೆ, ಆಸ್ಪತ್ರೆಯಿಂದ ಡಿಸ್ಚಾರ್ಜ್
HD Deve Gowda health update: ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಚೇತರಿಸಿಕೊಂಡಿದ್ದು, ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರ ಆರೋಗ್ಯ ಚೇತರಿಕೆಯಾಗಿದೆ. ಮುಂದಿನ ಕೆಲವು ದಿನಗಳ ಕಾಲ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂಉ ಮೂಲಗಳು ತಿಳಿಸಿವೆ.
- Sunil MH
- Updated on: Oct 13, 2025
- 1:01 pm
ಬಂಡೆ ಕಲ್ಲಿನಂತ ಹೃದಯದವರಿಗೆ ಜನರ ಕಷ್ಟ ಅರ್ಥವಾಗಲ್ಲ: ಜೆಡಿಎಸ್ ಕಿಡಿ
ಸಿಎಂ ಡಿ.ಕೆ. ಶಿವಕುಮಾರ್ ಅವರ ಬೆಂಗಳೂರು ನಡಿಗೆ ಕಾರ್ಯಕ್ರಮದ ಬಗ್ಗೆ ಜೆಡಿಎಸ್ ಟೀಕಾಪ್ರಹಾರ ನಡೆಸಿದೆ. ಬೆಂಗಳೂರು ಉಸ್ತುವಾರಿ ಸಚಿವರಾಗಿರುವ ಡಿಕೆಶಿ, ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಕಷ್ಟಗಳನ್ನು ಆಲಿಸಬೇಕಿತ್ತು. ಅವರಿಗೆ ಸಾಂತ್ವನ ಹೇಳಿ, ಶಾಶ್ವತ ಪರಿಹಾರ ಕಲ್ಪಿಸುವ ಭರವಸೆ ನೀಡಬೇಕಿತ್ತು. ಅದರ ಬದಲು ನಡಿಗೆ ಮಾಡಿದರೆ ವಾಸ್ತವ ಪರಿಸ್ಥಿತಿ ಅರ್ಥವಾಗುತ್ತದೆಯೇ ? ಎಂದು ಜೆಡಿಎಸ್ ಪ್ರಶ್ನಿಸಿದೆ.
- Sunil MH
- Updated on: Oct 12, 2025
- 12:03 pm
ಉತ್ತರ ಕರ್ನಾಟಕ ಪ್ರವಾಹ, ಬೆಳೆಹಾನಿ: ಪ್ರಧಾನಿ ಮೋದಿ, ಶಾ ಜತೆ ಕುಮಾರಸ್ವಾಮಿ ಚರ್ಚೆ, ತಕ್ಷಣದ ಪರಿಹಾರಕ್ಕೆ ಆಗ್ರಹ
ಉತ್ತರ ಕರ್ನಾಟಕದಲ್ಲಿ ನಿರಂತರ ಮಳೆಯಿಂದಾಗಿ ಭಾರಿ ಬೆಳೆ ಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗಿದೆ. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಮನವಿ ಮಾಡಿದ್ದು, ಕೇಂದ್ರದಿಂದ ಅಧ್ಯಯನ ತಂಡ ಕಳುಹಿಸಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
- Sunil MH
- Updated on: Oct 11, 2025
- 11:39 am
ದಸರಾ ಪರೇಡ್ನಲ್ಲಿ ಸಿಎಂ ಸಿದ್ದರಾಮಯ್ಯ ಜತೆ ಸಚಿವ ಮಹದೇವಪ್ಪ ಮೊಮ್ಮಗ: ಕಾಂಗ್ರೆಸ್ ಹೈಕಮಾಂಡ್ ಗರಂ
ನಾಡ ಹಬ್ಬ ದಸರಾ ಸಂಭ್ರಮ ಮುಗಿದಿದೆ. ಆದರೆ ಅದೊಂದು ವಿಷಯ ಬೆಂಗಳೂರು ಅಲ್ಲ, ದೆಹಲಿ ಮಟ್ಟದಲ್ಲೂ ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗುವಂತೆ ಮಾಡಿದೆ. ದಸರಾ ಉತ್ಸವದ ಮೇಲೆ ಕಣ್ಣಿಟ್ಟಿದ ಕಾಂಗ್ರೆಸ್ ಹೈಕಮಾಂಡ್, ಸಿಎಂ ಪರೇಡ್ನಲ್ಲಿ ಕಾಣಿಸಿಕೊಂಡ ಬಾಲಕನ ಬಗ್ಗೆ ಕರ್ನಾಟಕ ಕಾಂಗ್ರೆಸ್ ನಾಯಕರಿಂದ ಮಾಹಿತಿ ಕೇಳಿದೆ.
- Sunil MH
- Updated on: Oct 4, 2025
- 9:49 am
ಮೋದಿ, ನನ್ನ ಸಂಬಂಧ ಚೆನ್ನಾಗಿದೆ: ಪ್ರವಾಹ ಪರಿಹಾರಕ್ಕೆ ಒತ್ತಾಯ ಮಾಡ್ತೇನೆ ಎಂದ ಹೆಚ್ಡಿ ದೇವೇಗೌಡ
ಬೆಂಗಳೂರಿನ ಜೆಡಿಎಸ್ ಕಚೇರಿಯ ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಮೋದಿ ಮತ್ತು ನಮ್ಮದು 10 ವರ್ಷದಿಂದ ಇರುವ ಸಂಬಂಧ, ಇದನ್ನು ಯಾರಿಂದಲೂ ಹಾಳು ಮಾಡಲಾಗುವುದಿಲ್ಲ ಎಂದಿದ್ದಾರೆ. ಜೊತೆಗೆ ರಾಜ್ಯದಲ್ಲಿ ಉಂಟಾದ ಅತಿವೃಷ್ಟಿಗೆ ಪರಿಹಾರಕ್ಕೆ ಒತ್ತಾಯಿಸುವೆ ಎಂದು ಹೇಳಿದ್ದಾರೆ.
- Sunil MH
- Updated on: Oct 3, 2025
- 3:23 pm
ಮೈಸೂರು ದಸರಾ ಜಂಬೂ ಸವಾರಿ: ಪೊಲೀಸ್ ಭದ್ರತೆ ಬಗ್ಗೆ ಐಜಿಪಿ ಡಾ ಸಲೀಂ ಹೇಳಿದ್ದೇನು ನೋಡಿ
ಮೈಸೂರು ದಸರಾ 2025ರ ಜಂಬೂಸವಾರಿಗಾಗಿ ಭದ್ರತಾ ಸಿದ್ಧತೆಗಳನ್ನು ಡಿಜಿ&ಐಜಿಪಿ ಡಾ. ಸಲೀಂ ಅವರು ಪರಿಶೀಲಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ 6,500ಕ್ಕೂ ಹೆಚ್ಚು ಪೊಲೀಸರು, ವಿಶೇಷ ಕಾರ್ಯಪಡೆ ಹಾಗೂ ಬೆಂಗಳೂರು ನಗರ ಸಂಚಾರ ಪೊಲೀಸರನ್ನು ನಿಯೋಜಿಸಲಾಗಿದೆ. ಉತ್ಸಾಹದಿಂದ ಭಾಗವಹಿಸುವ ಜನರಿಗೆ ಸುರಕ್ಷಿತ ಅನುಭವ ನೀಡಲು ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
- Sunil MH
- Updated on: Oct 2, 2025
- 1:48 pm
ಬೆಂಗಳೂರು ಗುಂಡಿ ಅಪಮಾನಕ್ಕೆ ಸಿಎಂ, ಡಿಸಿಎಂ ಹೊಣೆ ಎಂದ ಕುಮಾರಸ್ವಾಮಿ: ರಾಜಧಾನಿ ಬಿಡದಂತೆ ಕಂಪನಿಗಳಿಗೆ ಮನವಿ
ಇಡೀ ಬೆಂಗಳೂರೇ ಏನ್ ರೋಡ್ ಗುರೂ ಅಂತಿದೆ. ಇತ್ತೀಚೆಗೆ ವಿದ್ಯಾರ್ಥಿಗಳು ವಿಡಿಯೋ ಮೂಲಕ ಆಕ್ರೋಶ ಹೊರಹಾಕಿದ್ದರು. ಅದರ ಬೆನ್ನಲ್ಲೇ ಬುಧವಾರ ಉದ್ಯಮಿಗಳು ಕೂಡಾ ಕಿಡಿಕಾರಿದ್ದರು. ಇದೀಗ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಜೊತೆಗೆ ಕಂಪನಿಗಳು ಬೆಂಗಳೂರು ತೊರೆಯದಂತೆ ಮನವಿ ಮಾಡಿದ್ದಾರೆ.
- Sunil MH
- Updated on: Sep 18, 2025
- 1:03 pm