AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunil MH

Sunil MH

Author - TV9 Kannada

sunilmadre.hoovana@tv9.com
ವಿಧಾನ ಪರಿಷತ್ ಚುನಾವಣೆ: 5ನೇ ಅಭ್ಯರ್ಥಿಯ ಅವಿರೋಧ ಆಯ್ಕೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​ಗೆ ಬಿಜೆಪಿ-ಜೆಡಿಎಸ್ ಶಾಕ್

ವಿಧಾನ ಪರಿಷತ್ ಚುನಾವಣೆ: 5ನೇ ಅಭ್ಯರ್ಥಿಯ ಅವಿರೋಧ ಆಯ್ಕೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​ಗೆ ಬಿಜೆಪಿ-ಜೆಡಿಎಸ್ ಶಾಕ್

ಕರ್ನಾಟಕ ವಿಧಾನಪರಿಷತ್‌ನ 7 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟವು ಮೂರನೇ ಅಭ್ಯರ್ಥಿ ಗೋವಿಂದರಾಜು ಅವರನ್ನು ಕಣಕ್ಕಿಳಿಸಿ ಮಾಸ್ಟರ್‌ಸ್ಟ್ರೋಕ್ ನೀಡಿದೆ. ಇದು ಕಾಂಗ್ರೆಸ್‌ನ 5ನೇ ಅಭ್ಯರ್ಥಿಯ ಅವಿರೋಧ ಆಯ್ಕೆಯ ನಿರೀಕ್ಷೆಗೆ ದೊಡ್ಡ ತಿರುಗೇಟು ನೀಡಿದ್ದು, ಚುನಾವಣೆ ಕಣವನ್ನು ರಂಗೇರಿಸಿದೆ. ಪರಿಷತ್ ಚುನಾವಣೆ ಲೆಕ್ಕಾಚಾರ ಹೇಗಿದೆ ಎಂಬ ವಿವರ ಇಲ್ಲಿದೆ.

  • Sunil MH
  • Updated on: Jun 8, 2026
  • 12:40 pm
ಇಂದು ಸಂಜೆಯೇ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಸಾಧ್ಯತೆ! ರಣದೀಪ್ ಸುರ್ಜೇವಾಲ, ಡಿಕೆಶಿ ತುರ್ತು ಮಾತುಕತೆ

ಇಂದು ಸಂಜೆಯೇ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಸಾಧ್ಯತೆ! ರಣದೀಪ್ ಸುರ್ಜೇವಾಲ, ಡಿಕೆಶಿ ತುರ್ತು ಮಾತುಕತೆ

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಂಧಾನದ ಬಳಿಕ ಸಚಿವ ರಾಮಲಿಂಗಾ ರೆಡ್ಡಿ ಸಂಜೆ ವೇಳೆಗೆ ರಾಜೀನಾಮೆ ವಾಪಸ್ ಪಡೆಯುವ ಮುನ್ಸೂಚನೆ ನೀಡಿದ್ದಾರೆ. ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರು ಮುನಿಯಪ್ಪಗೆ ಸಣ್ಣ ನೀರಾವರಿ ಹೆಚ್ಚುವರಿ ಖಾತೆ ನೀಡುವಂತೆ ಸಿಎಂ ಡಿಕೆಶಿ ಬಳಿ ಮಾತುಕತೆ ನಡೆಸಿದ್ದಾರೆ.

  • Sunil MH
  • Updated on: Jun 6, 2026
  • 12:23 pm
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್ ಅರವಿಂದ್

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್ ಅರವಿಂದ್

ಕರ್ನಾಟಕದ ಹೊಸ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಕೂಡ ಸಾಕ್ಷಿಯಾದರು. ಬಳಿಕ ಅವರು ಟಿವಿ9 ಜೊತೆ ಮಾತನಾಡಿದರು. ಡಿಕೆ ಶಿವಕುಮಾರ್ ಮತ್ತು ತಮ್ಮ ನಡುವಿನ ಒಡನಾಟವನ್ನು ರಮೇಶ್ ಅರವಿಂದ್ ಮೆಲುಕು ಹಾಕಿದರು.

  • Sunil MH
  • Updated on: Jun 3, 2026
  • 7:20 pm
ಸಿಎಂ ಆಗುವ ಮುನ್ನವೇ ಡಿಕೆಶಿ ತಂತ್ರಗಾರಿಕೆ: ರಾಜಕೀಯ ಬದ್ಧವೈರಿಗಳ ಭೇಟಿ ಹಿಂದಿನ ಲೆಕ್ಕಾಚಾರವೇನು?

ಸಿಎಂ ಆಗುವ ಮುನ್ನವೇ ಡಿಕೆಶಿ ತಂತ್ರಗಾರಿಕೆ: ರಾಜಕೀಯ ಬದ್ಧವೈರಿಗಳ ಭೇಟಿ ಹಿಂದಿನ ಲೆಕ್ಕಾಚಾರವೇನು?

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಅಧಿಕಾರ ಸ್ವೀಕಾರ ಮುನ್ನ ಡಿಕೆ ಶಿವಕುಮಾರ್ ಅವರು ರಾಜ್ಯದ ಇಬ್ಬರು ಪ್ರಭಾವಿ ಜಾತಿ ಸಮುದಾಯಗಳ ಪ್ರಶ್ನಾತೀತ ನಾಯಕರನ್ನು ಭೇಟಿ ಮಾಡಿದ್ದಾರೆ. ಈ ಮೂಲಕ ಇಡೀ ರಾಜ್ಯಕ್ಕೆ ಅತ್ಯಂತ ಸ್ಪಷ್ಟ ಹಾಗೂ ಪ್ರಬಲ ಸಂದೇಶ ರವಾನಿಸಿದ್ದಾರೆ. ಜೊತೆಗೆ ಇಬ್ಬರು ನಾಯಕರಿಗೆ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.

  • Sunil MH
  • Updated on: Jun 3, 2026
  • 2:59 pm
ಸಿಎಂ ಆಗಿ ನಾಳೆ ಡಿಕೆಶಿ ಪ್ರಮಾಣ: ಪದಗ್ರಹಣಕ್ಕೆ ಅಂತಿಮ ಹಂತದ ತಯಾರಿ, ಅತಿಥಿಗಳಿಗೆ  3 ರೀತಿಯ ಪಾಸ್​​ ವಿತರಣೆ

ಸಿಎಂ ಆಗಿ ನಾಳೆ ಡಿಕೆಶಿ ಪ್ರಮಾಣ: ಪದಗ್ರಹಣಕ್ಕೆ ಅಂತಿಮ ಹಂತದ ತಯಾರಿ, ಅತಿಥಿಗಳಿಗೆ 3 ರೀತಿಯ ಪಾಸ್​​ ವಿತರಣೆ

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ನಾಳೆ ಸಂಜೆ 4:05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಸರಳವಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮಕ್ಕೆ ಬರುವರಿಗೆ ಮೂರು ರೀತಿ ಪಾಸ್ ನೀಡಲು ಸಿದ್ಧತೆ ನಡೆದಿದೆ. ಮಧ್ಯಾಹ್ನ 2 ಗಂಟೆ ಒಳಗಾಗಿ ಲೋಕಭವನಕ್ಕೆ ಬರುವಂತೆ ಅತಿಥಿಗಳಿಗೆ ಸೂಚನೆ ನೀಡಲಾಗಿದ್ದು, ಯಾವುದೇ ಆಡಂಬರವಿಲ್ಲದೆ ಸರಳವಾಗಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.

  • Sunil MH
  • Updated on: Jun 2, 2026
  • 12:23 pm
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ಬಿಚ್ಚಿಟ್ಟ ಯತೀಂದ್ರ

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ಬಿಚ್ಚಿಟ್ಟ ಯತೀಂದ್ರ

ಯತೀಂದ್ರ ಸಿದ್ದರಾಮಯ್ಯನವರಿಗೆ ಒಂದು ಒಳ್ಳೆಯ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಯತೀಂದ್ರ ಅವರು ಡಿಸಿಎಂ ಆಗಲಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿವೆ. ಆದ್ರೆ, ಡಿಸಿಎಂ ಆಗುತ್ತಾರೋ ಬಿಡುತ್ತಾರೋ ಗೊತ್ತಿಲ್ಲ. ಡಿಕೆಶಿ ಸಚಿವ ಸಂಪುಟದಲ್ಲಿ ಯತೀಂದ್ರ ಅವರಿಗೆ ಒಂದು ಸ್ಥಾನ ಖಚಿತ. ಈ ಬಗ್ಗೆ ಹೈಕಮಾಂಡ್ ಕೊಟ್ಟ ಭರವಸೆಯನ್ನು ಸ್ವತಃ ಯತೀಂದ್ರ ಅವರೇ ಬಹಿರಂಗಪಡಿಸಿದ್ದಾರೆ.

  • Sunil MH
  • Updated on: May 30, 2026
  • 9:04 pm
ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಕಾಂಗ್ರೆಸ್​​ನ ಮುಸ್ಲಿಂ ನಾಯಕರ ಸಭೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಕಾಂಗ್ರೆಸ್​​ನ ಮುಸ್ಲಿಂ ನಾಯಕರ ಸಭೆ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆಗಳ ವದಂತಿಗಳ ಬೆನ್ನಲ್ಲೇ ಮುಸ್ಲಿಂ ನಾಯಕರು ಖಾಸಗಿ ಸ್ಥಳದಲ್ಲಿ ಸಭೆ ನಡೆಸಿದ್ದಾರೆ. ಸಚಿವ ಜಮೀರ್ ಅಹಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಅಲ್ಪಸಂಖ್ಯಾತ ನಾಯಕರು ತಮ್ಮ ಸಮುದಾಯದ ಸ್ಥಾನಮಾನ ಮತ್ತು ಭವಿಷ್ಯದ ಬಗ್ಗೆ ಚರ್ಚಿಸಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

  • Sunil MH
  • Updated on: May 27, 2026
  • 5:20 pm
ವಯಸ್ಸಾಗಿದೆ ಅಂತಾ ಮನೇಲಿ ಕೂರಲ್ಲ ಎಂದ ದೇವೇಗೌಡ್ರು! ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ಹೆಚ್​ಡಿಡಿ?

ವಯಸ್ಸಾಗಿದೆ ಅಂತಾ ಮನೇಲಿ ಕೂರಲ್ಲ ಎಂದ ದೇವೇಗೌಡ್ರು! ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ಹೆಚ್​ಡಿಡಿ?

ಜೂನ್ 25 ಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ರಾಜ್ಯಸಭಾ ಅವಧಿ ಮುಗಿಯಲಿದ್ದು, ಅವರನ್ನು ಮತ್ತೊಂದು ಅವಧಿಗೆ ಮರು ಆಯ್ಕೆ ಮಾಡಲು ಜೆಡಿಎಸ್-ಬಿಜೆಪಿ ಮೈತ್ರಿಕೂಟದಲ್ಲಿ ಚರ್ಚೆಗಳು ಆರಂಭವಾಗಿವೆ. ರಾಜ್ಯಸಭೆ ಚುನಾವಣೆಯ ಮತಗಳ ಲೆಕ್ಕಾಚಾರ ಹಾಕಿದಾಗ ಗೌಡರ ಗೆಲುವು ನಿಶ್ಚಿತವೆಂದು ಹೇಳಲಾಗುತ್ತಿದೆ. ತಮ್ಮ ಮರು ಆಯ್ಕೆಯ ಕುರಿತು ದೇವೇಗೌಡರು ಪ್ರತಿಕ್ರಿಯಿಸಿದ್ದು, ವಯಸ್ಸಾಗಿದೆ ಎಂದ ಮಾತ್ರಕ್ಕೆ ಮನೆಯಲ್ಲಿ ಕೂರಲ್ಲ ಎಂದಿದ್ದಾರೆ.

  • Sunil MH
  • Updated on: May 23, 2026
  • 8:32 am
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ಹೀಗಿದೆ ದಳಪತಿಗಳ ಲೆಕ್ಕಾಚಾರ

ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ಹೀಗಿದೆ ದಳಪತಿಗಳ ಲೆಕ್ಕಾಚಾರ

ಡಿ. ಸುಧಾಕರ್ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಅಭ್ಯರ್ಥಿಯ ಆಯ್ಕೆ, ಗೆಲುವು ಹಾಗೂ ಮುಂದಿನ ಚುನಾವಣೆಯ ಲೆಕ್ಕಾಚಾರದೊಂದಿಗೆ ಜೆಡಿಎಸ್ ವರಿಷ್ಠ ಹೆಚ್.ಡಿ. ಕುಮಾರಸ್ವಾಮಿ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಲು ಸಿದ್ಧರಾಗಿದ್ದಾರೆ. ಒಕ್ಕಲಿಗ ಮತ್ತು ಯಾದವ ಸಮುದಾಯದ ಮತಗಳು ಇಲ್ಲಿ ನಿರ್ಣಾಯಕವಾಗಿದ್ದು, ಎನ್‌ಡಿಎ ಮೈತ್ರಿ ಅಭ್ಯರ್ಥಿಗೆ ಗೆಲುವು ಸುಲಭವಾಗಲಿದೆ ಎಂಬುದು ಜೆಡಿಎಸ್ ಲೆಕ್ಕಾಚಾರ.

  • Sunil MH
  • Updated on: May 21, 2026
  • 10:25 am
ಚಿಕ್ಕ ವಯಸ್ಸಿನಲ್ಲೇ ಶಾಸಕರಾದ ಸಮರ್ಥ್​ ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಎಂಟ್ರಿ

ಚಿಕ್ಕ ವಯಸ್ಸಿನಲ್ಲೇ ಶಾಸಕರಾದ ಸಮರ್ಥ್​ ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಎಂಟ್ರಿ

ತಂದೆ ಮಲ್ಲಿಕಾರ್ಜುನ ರೀತಿ ಪುತ್ರ ಸಮರ್ಥ ಸಹ ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಚಿವರಾಗಿರುವ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್​​ಎಸ್​​ ಮಲ್ಲಿಕಾರ್ಜುನ ಅವರು 28ನೇ ವಯಸ್ಸಿನಲ್ಲಿ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದರು. ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್​ನಲ್ಲಿ ಗೆದ್ದ ಕಾಂಗ್ರೆಸ್​​ನ ಸಮರ್ಥ್ ಶಾಮನೂರು ವಿಧಾನಸೌಧಕ್ಕೆ ಭೇಟಿ ನೀಡಿದ್ದು, ಈ ವೇಳೆ ಮೆಟ್ಟಿಲಯಗಳಿಗೆ ನಮಸ್ಕರಿಸಿ ಶಕ್ತಿ ಕೇಂದ್ರದೊಳಗೆ ಪ್ರವೇಶಿಸಿದ್ದಾರೆ.

  • Sunil MH
  • Updated on: May 7, 2026
  • 6:59 pm
ದಯವಿಟ್ಟು ನನ್ನನ್ನ ಬದುಕಲು ಬಿಡಿ: ಸಿಎಂ, ಡಿಸಿಎಂಗೆ ಕೈಮುಗಿದು ಕೇಳಿಕೊಂಡ ಶೃಂಗೇರಿ ನೂತನ ಶಾಸಕ ಜೀವರಾಜ್

ದಯವಿಟ್ಟು ನನ್ನನ್ನ ಬದುಕಲು ಬಿಡಿ: ಸಿಎಂ, ಡಿಸಿಎಂಗೆ ಕೈಮುಗಿದು ಕೇಳಿಕೊಂಡ ಶೃಂಗೇರಿ ನೂತನ ಶಾಸಕ ಜೀವರಾಜ್

ಶೃಂಗೇರಿ ನೂತನ ಶಾಸಕ ಡಿ.ಎನ್. ಜೀವರಾಜ್ ಅವರು ತಮ್ಮ ಶಾಸಕ ಸ್ಥಾನದ ಜಟಾಪಟಿ ಮಧ್ಯೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ದಯವಿಟ್ಟು ನನ್ನನ್ನು ಬದುಕಲು ಬಿಡಿ ಎಂದು ಕೈಮುಗಿದು ಕೇಳಿಕೊಂಡಿದ್ದಾರೆ. ಮರು ಎಣಿಕೆ ಪ್ರಕರಣ, ಎಫ್‌ಐಆರ್‌ ಹಾಗೂ ನ್ಯಾಯಾಲಯದ ಆದೇಶಗಳ ಬಳಿಕವೂ ಪ್ರಮಾಣವಚನ ಸ್ವೀಕರಿಸಲು ವಿಳಂಬವಾಗುತ್ತಿರುವುದರ ಕುರಿತು ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

  • Sunil MH
  • Updated on: May 6, 2026
  • 1:23 pm
ಯಾದಗಿರಿ-ಮೈಸೂರು ದುರ್ಘಟನೆ: ಪರಿಹಾರ ತಾರತಮ್ಯದ ಬಗ್ಗೆ ಸಿಎಂ ವಿರುದ್ಧ ಜೆಡಿಎಸ್ ಶಾಸಕ ಆಕ್ರೋಶ

ಯಾದಗಿರಿ-ಮೈಸೂರು ದುರ್ಘಟನೆ: ಪರಿಹಾರ ತಾರತಮ್ಯದ ಬಗ್ಗೆ ಸಿಎಂ ವಿರುದ್ಧ ಜೆಡಿಎಸ್ ಶಾಸಕ ಆಕ್ರೋಶ

ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ತಾರತಮ್ಯ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್​​ ಪತ್ರ ಬರೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕದ ಜನರ ಬಗ್ಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದಿರುವ ಶಾಸಕ, ತಕ್ಷಣ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

  • Sunil MH
  • Updated on: Apr 20, 2026
  • 7:13 pm