ಚಿಕ್ಕ ವಯಸ್ಸಿನಲ್ಲೇ ಶಾಸಕರಾದ ಸಮರ್ಥ್ ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಎಂಟ್ರಿ
ತಂದೆ ಮಲ್ಲಿಕಾರ್ಜುನ ರೀತಿ ಪುತ್ರ ಸಮರ್ಥ ಸಹ ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಚಿವರಾಗಿರುವ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್ಎಸ್ ಮಲ್ಲಿಕಾರ್ಜುನ ಅವರು 28ನೇ ವಯಸ್ಸಿನಲ್ಲಿ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದರು. ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ನಲ್ಲಿ ಗೆದ್ದ ಕಾಂಗ್ರೆಸ್ನ ಸಮರ್ಥ್ ಶಾಮನೂರು ವಿಧಾನಸೌಧಕ್ಕೆ ಭೇಟಿ ನೀಡಿದ್ದು, ಈ ವೇಳೆ ಮೆಟ್ಟಿಲಯಗಳಿಗೆ ನಮಸ್ಕರಿಸಿ ಶಕ್ತಿ ಕೇಂದ್ರದೊಳಗೆ ಪ್ರವೇಶಿಸಿದ್ದಾರೆ.
- Sunil MH
- Updated on: May 7, 2026
- 6:59 pm
ದಯವಿಟ್ಟು ನನ್ನನ್ನ ಬದುಕಲು ಬಿಡಿ: ಸಿಎಂ, ಡಿಸಿಎಂಗೆ ಕೈಮುಗಿದು ಕೇಳಿಕೊಂಡ ಶೃಂಗೇರಿ ನೂತನ ಶಾಸಕ ಜೀವರಾಜ್
ಶೃಂಗೇರಿ ನೂತನ ಶಾಸಕ ಡಿ.ಎನ್. ಜೀವರಾಜ್ ಅವರು ತಮ್ಮ ಶಾಸಕ ಸ್ಥಾನದ ಜಟಾಪಟಿ ಮಧ್ಯೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ದಯವಿಟ್ಟು ನನ್ನನ್ನು ಬದುಕಲು ಬಿಡಿ ಎಂದು ಕೈಮುಗಿದು ಕೇಳಿಕೊಂಡಿದ್ದಾರೆ. ಮರು ಎಣಿಕೆ ಪ್ರಕರಣ, ಎಫ್ಐಆರ್ ಹಾಗೂ ನ್ಯಾಯಾಲಯದ ಆದೇಶಗಳ ಬಳಿಕವೂ ಪ್ರಮಾಣವಚನ ಸ್ವೀಕರಿಸಲು ವಿಳಂಬವಾಗುತ್ತಿರುವುದರ ಕುರಿತು ಅವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
- Sunil MH
- Updated on: May 6, 2026
- 1:23 pm
ಯಾದಗಿರಿ-ಮೈಸೂರು ದುರ್ಘಟನೆ: ಪರಿಹಾರ ತಾರತಮ್ಯದ ಬಗ್ಗೆ ಸಿಎಂ ವಿರುದ್ಧ ಜೆಡಿಎಸ್ ಶಾಸಕ ಆಕ್ರೋಶ
ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ತಾರತಮ್ಯ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಪತ್ರ ಬರೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕದ ಜನರ ಬಗ್ಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದಿರುವ ಶಾಸಕ, ತಕ್ಷಣ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
- Sunil MH
- Updated on: Apr 20, 2026
- 7:13 pm
ವಿಳಂಬವಾದ್ರು ಬಿಜೆಪಿ ಮಹಿಳಾ ಮೀಸಲಾತಿ ಬಿಲ್ ಜಾರಿ ಮಾಡುತ್ತೆ: ಸಂಸದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ, ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಕಾಂಗ್ರೆಸ್ ನಿಲುವನ್ನು ಟೀಕಿಸಿದ್ದಾರೆ. 1992ರಿಂದಲೂ ಬಿಜೆಪಿ ಈ ಮಸೂದೆಗೆ ಬೆಂಬಲ ನೀಡಿದೆ, ಆದರೆ ಕಾಂಗ್ರೆಸ್ ನಿರಂತರವಾಗಿ ವಿಳಂಬ ಮಾಡುತ್ತಿದೆ. 2023ರಲ್ಲಿ ಬಿಜೆಪಿ ಮಸೂದೆಯನ್ನು ಅಂಗೀಕರಿಸಿತು. 2011ರ ಜನಗಣತಿ ಆಧಾರದ ಮೇಲೆ ಜಾರಿಗೊಳಿಸಲು ಮುಂದಾದರೆ ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ ಎಂದಿದ್ದಾರೆ.
- Sunil MH
- Updated on: Apr 19, 2026
- 3:08 pm
ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ: ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ; ಬೆಳ್ಳಿಹಬ್ಬದ ಮೂಲಕ ಜಿಬಿಎ ಚುನಾವಣೆಗೆ ರಣಕಹಳೆ
ಪ್ರಾದೇಶಿಕ ಪಕ್ಷ ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಕೊಮ್ಮಗಟದಲ್ಲಿ ಬೃಹತ್ ಸಮಾವೇಶ ಮಾಡಲಾಗಿದ್ದು, ಆ ಮೂಲಕ ದಳಪತಿಗಳು ಭರ್ಜರಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರನ್ನ ಸೇರಿಸಿ ಜಿಬಿಎ ಚುನಾವಣೆಗೆ ದಳಪತಿಗಳು ರಾಷ್ಟ್ರೀಯ ಪಕ್ಷಗಳಿಗಿಂತ ಮುಂಚಿತವಾಗಿ ರಣ ಕಹಳೆ ಊದಿದ್ದಾರೆ.
- Sunil MH
- Updated on: Apr 11, 2026
- 8:06 pm
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅಚ್ಚರಿ ಮಾತು
ಜೆಡಿಎಸ್ (JDS) ಯುವಕ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಕ್ಷೇತ್ರದ್ದೇ ದೊಡ್ಡ ತಲೆನೋವಾಗಿದೆ. ಕೇವಲ ನಿಖಿಲ್ ಕುಮಾರಸ್ವಾಮಿಗೆ ಮಾತ್ರವಲ್ಲ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲೂ ಕ್ಷೇತ್ರದ ಗೊಂದಲ ಸೃಷ್ಟಿಸಿದೆ. ಯಾಕಂದ್ರೆ ಮಂಡ್ಯ ಲೋಕಸಭೆಯಲ್ಲಿ ಸೋತರು. ರಾಮನಗರ ವಿಧಾನಸಭೆ ಹಾಗೂ ಚನ್ನಪಟ್ಟಣ ಉಪಚುನಾವಣೆಯಲ್ಲೂ ಸಹ ನಿಖಿಲ್ ಪರಾಭವಗೊಂಡಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆನ್ನುವುದೇ ನಿಖಿಲ್ಗೆ ಗೊಂದಲಕ್ಕೀಡು ಮಾಡಿದೆ.
- Sunil MH
- Updated on: Apr 10, 2026
- 4:14 pm
ಬೆಂಗಳೂರು ಬಿಟ್ಟು 40 ಕಿಮೀ ಹೋದ್ರೆ ಸೌದೆ ಸಿಗುತ್ತೆ: ಕಟ್ಟಿಗೆ ಬಳಸುವಂತೆ ಸಚಿವ ಮುನಿಯಪ್ಪ ಕರೆ
ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿ ಭರ್ತಿ ಒಂದು ತಿಂಗಳು ಆಯ್ತು. ಆದರೆ ಸಮರ ಕ್ಷಿಣಿಸುವ ಲಕ್ಷಣ ಕಾಣುತ್ತಿಲ್ಲ. ಇತ್ತ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವದಿಂದ ಜನರ ಪರದಾಟ ಮುಂದುವರೆದಿದೆ. ಹೀಗಿರುವಾಗ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸೌದೆ ಒಲೆ ಬಳಸುಂತೆ ಮನವಿ ಮಾಡಿದ್ದಾರೆ.
- Sunil MH
- Updated on: Mar 29, 2026
- 5:03 pm
ಸದನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್- ಶಾಸಕ ಮುನಿರತ್ನ ನಡುವೆ ಮಾತಿನ ಕದನ
ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಶಾಸಕ ಮುನಿರತ್ನ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ವಾಗ್ವಾದ ನಡೆಯಿತು. ವೈಯಕ್ತಿಕ ಆರೋಪಗಳು, ಎಫ್ಐಆರ್ ಮತ್ತು ಅಧಿಕಾರದ ದುರುಪಯೋಗದ ಬಗ್ಗೆ ಪ್ರಸ್ತಾಪಿಸಿದ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸಭಾಧ್ಯಕ್ಷರು ಸದಸ್ಯರನ್ನು ಸಮಾಧಾನಪಡಿಸಲು ಪದೇ ಪದೇ ಮಧ್ಯಪ್ರವೇಶಿಸಬೇಕಾಯಿತು.
- Sunil MH
- Updated on: Mar 26, 2026
- 1:56 pm
ರಾಹುಕಾಲ ಬಿಟ್ಟು ಬಜೆಟ್ ಮಂಡಿಸಿದ್ದು ನಿಜವೆಂದ ಸಿದ್ದರಾಮಯ್ಯ! ಕೊಟ್ಟ ಕಾರಣ ಏನು ಗೊತ್ತಾ?
ಬಜೆಟ್ ಮಂಡನೆಗೆ ರಾಹುಕಾಲದ ಅಡ್ಡಿ ಇತ್ತೇ? ಈ ಹಿಂದೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಎತ್ತಿದ್ದ ಪ್ರಶ್ನೆಯನ್ನೇ ಪ್ರತಿಪಕ್ಷ ನಾಯಕ ಅಶೋಕ್ ಸಹ ಪ್ರಸ್ತಾಪಿಸಿದ್ದಾರೆ. ಇದಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ಸದನದಲ್ಲಿ ಉತ್ತರಿಸಿದ್ದು, ಸಮಯ ನೋಡಿ ಬಜೆಟ್ ಮಂಡಿಸಿದ್ದನ್ನು ಒಪ್ಪಿಕೊಂಡಿದ್ದಾರೆ. ಅದಕ್ಕೆ ಕಾರಣವನ್ನೂ ತಿಳಿಸಿದ್ದಾರೆ. ಸಿದ್ದರಾಮಯ್ಯ ಕೊಟ್ಟ ಕಾರಣ ಇಲ್ಲಿದೆ.
- Sunil MH
- Updated on: Mar 25, 2026
- 1:19 pm
ಅಂತರ್ಜಾತಿ ವಿವಾಹವಾಗುವವರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ
ಕರ್ನಾಟಕ ಸರ್ಕಾರವು ಅಂತರ್ಜಾತಿ ವಿವಾಹಿತರನ್ನು ರಕ್ಷಿಸಲು "ಇವ ನಮ್ಮವ" ವಿಧೇಯಕವನ್ನು ಮಂಡಿಸಿದೆ. ಈ ಕಾಯ್ದೆಯು ಅಂತರ್ಜಾತಿ ವಿವಾಹದ ಜೋಡಿಗಳ ವಿರುದ್ಧ ಸಾಮಾಜಿಕ ಬಹಿಷ್ಕಾರ, ಆರ್ಥಿಕ ಕಿರುಕುಳ ಮತ್ತು ಕೊಲೆಯಂತಹ ಘಟನೆಗಳನ್ನು ತಡೆಯುವ ಗುರಿ ಹೊಂದಿದೆ. ಇದು ಜಾತಿ ಶ್ರೇಣೀಕರಣದ ಹೆಸರಿನಲ್ಲಿ ನಡೆಯುವ ಹಿಂಸೆಯನ್ನು ನಿಷೇಧಿಸಿ, ವಿವಾಹಿತರಿಗೆ ಕಾನೂನು ರಕ್ಷಣೆ ನೀಡುತ್ತದೆ ಮತ್ತು ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಮಾನ್ಯತೆ ನೀಡುತ್ತದೆ.
- Sunil MH
- Updated on: Mar 18, 2026
- 2:12 pm
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ವಿಧಾನಸಭೆ ಕಲಾಪದಲ್ಲಿಂದು ಹಿರಿಯ ಶಾಸಕ ಬಿ ಆರ್ ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ. ವರ್ಗಾವಣೆ ಆದೇಶ ನನ್ನ ಬಳಿ ಇದೆ. ಅಧಿಕಾರಿಗಳೇ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ. ದಿನೇಶ್ ಗುಂಡೂರಾವ್ ಬಂದ ಮೇಲೆ ಇಲಾಖೆಯಲ್ಲಿ ಸುಧಾರಣೆ ತರುತ್ತಿದ್ದಾರೆ. ಆದರೆ ರಿವರ್ಸ್ ಗೇರ್ ನಲ್ಲಿ ತರಬೇಕಾ? ಹಿಂದೆ ಹೋಗುವ ಗಾಡಿ ಮುಂದೆ ಹೋಗಬೇಕು. ಆದರೆ ಅದು ಹಿಂದನೆ ಹೋಗುತ್ತಿದೆ. ಡೆಲಿವರಿನೇ ಆಗಿಲ್ಲ ಎಂದು ವೈದ್ಯರ ವರ್ಗಾವಣೆ ಮಾಡಿದ್ದೀರಿ. ಒಬ್ಬ ಡಾಕ್ಟರ್ ಏಳು ಕಡೆ ಹೋಗಬೇಕು. ಸರ್ಕಾರ ಕೂಡಲೇ ಆ ಆದೇಶ ಹಿಂಪಡೆಯಬೇಕು. ಹಿಂದೆ ಇದ್ದಂತೆ ಆ ಡಾಕ್ಟರ್ ಗಳನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.
- Sunil MH
- Updated on: Mar 17, 2026
- 8:49 pm
ಸದನದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಸಿಗ್ತಿಲ್ಲ ಸರಿಯಾದ ಉತ್ತರ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು
ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಸಚಿವರು ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದಿರುವ ಬಗ್ಗೆ ಸ್ಪೀಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕರು ಕೇಳಿದ ನೂರಾರು ಪ್ರಶ್ನೆಗಳಿಗೆ ಕಡಿಮೆ ಉತ್ತರಗಳು ಬರುತ್ತಿರುವುದು ಸರ್ಕಾರಕ್ಕೆ ಮುಜುಗರ ತರುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ.
- Sunil MH
- Updated on: Mar 16, 2026
- 5:03 pm