ಸಭಾಪತಿ ಹುದ್ದೆ ತೊರೆಯಲು ಮುಂದಾದ ಬಸವರಾಜ ಹೊರಟ್ಟಿ: ಆಗಸ್ಟ್ 14ರಂದು ರಾಜೀನಾಮೆಗೆ ನಿರ್ಧಾರ
Basavaraj Horatti: ಕರ್ನಾಟಕ ವಿಧಾನ ಪರಿಷತ್ನ ಸಭಾಪತಿ ಸ್ಥಾನದಿಂದ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ನಿರ್ಗಮಿಸುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸಲೀಂ ಅಹ್ಮದ್ ಅವರ ಹೆಸರನ್ನು ಸಭಾಪತಿ ಹುದ್ದೆಗೆ ಶಿಫಾರಸು ಮಾಡಿದ ಬೆನ್ನಲ್ಲೇ ಈ ಬೆಳವಣಿಗೆಗಳು ನಡೆದಿದ್ದು, ಆಗಸ್ಟ್ 14ರಂದು ತಾವು ರಾಜೀನಾಮೆ ನೀಡಲಿರುವುದಾಗಿ ಹೊರಟ್ಟಿ ಅವರು ಪ್ರಕಟಿಸಿದ್ದಾರೆ.
- Sunil MH
- Updated on: Aug 6, 2026
- 3:50 pm
ಜಲ ಮಾಲಿನ್ಯದ ಆತಂಕ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಿಒಪಿ ಗಣೇಶ ಮೂರ್ತಿ ಸ್ಥಾಪನೆಗಿಲ್ಲ ಅವಕಾಶ
ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜಲಮೂಲಗಳು ಹಾಗೂ ಪರಿಸರ ಸಂರಕ್ಷಣೆಗಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ತಯಾರಿಕೆ, ಸಾಗಾಟ ಹಾಗೂ ವಿಸರ್ಜನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ ನೀಡಿದ್ದಾರೆ. ಆ ಕುರಿತ ಮಾಹಿತ ಇಲ್ಲಿದೆ.
- Sunil MH
- Updated on: Aug 6, 2026
- 3:49 pm
ನಮ್ಮಲ್ಲಿ ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಿಲ್ಲ ಎಂದ ಬಿಕೆ ಹರಿಪ್ರಸಾದ್
Karnataka Cabinet Expansion: ಎಲ್ಲಾ ಸಮುದಾಯಕ್ಕೆ ಪ್ರಾತಿನಿಧ್ಯ ಕೊಟ್ಟು ಸಚಿವ ಸಂಪುಟ ವಿಸ್ತರಣೆ ಆದ್ರೂ ಹಿರಿಯ ಶಾಸಕರ ಅಸಮಾಧಾನ ಭುಗಿಲೆದ್ದಿದೆ. ಕೆಲವರು ಅಂತೂ ರಾಜೀನಾಮೆಗೆ ಮುಂದಾಗಿದ್ದಾರೆ. ಇತ್ತ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಾತ್ರ ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ಕೂಡ ನೀಡಿಲ್ಲ ಎಂದಿದ್ದಾರೆ.
- Sunil MH
- Updated on: Aug 4, 2026
- 3:18 pm
ದಿನೇಶ್ ಗುಂಡೂರಾವ್ಗೆ ಕೈತಪ್ಪಿದ ಸಚಿವ ಸ್ಥಾನ: ಶಾಸಕರ ಬೆಂಬಲಿಗರಿಂದ ಕೆಪಿಸಿಸಿ ಕಚೇರಿ ಬಳಿ ಪ್ರತಿಭಟನೆ
ಸಚಿವ ಸಂಪುಟ ವಿಸ್ತರಣೆಯಲ್ಲಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ, ಅವರ ಬೆಂಬಲಿಗರು ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬ್ರಾಹ್ಮಣ ಸಮುದಾಯಕ್ಕೆ ಅನ್ಯಾಯವಾಗಿದೆ, ದಿನೇಶ್ ಗುಂಡೂರಾವ್ ಅವರಿಗೆ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. ಹಿರಿಯ ನಾಯಕರು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಅವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.
- Sunil MH
- Updated on: Aug 4, 2026
- 3:01 pm
ಬಿಜೆಪಿ ರಾಜ್ಯ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ: ಯಾವೆಲ್ಲ ಪ್ರಮುಖ ವಿಷಯಗಳು ಚರ್ಚೆ?
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಮಹತ್ವದ ಕೋರ್ ಕಮಿಟಿ ಸಭೆಯಲ್ಲಿ, ರಾಜ್ಯದ ಮಳೆ ಕೊರತೆ, ಪಿಂಚಣಿ ವಿವಾದ ಮತ್ತು ಮುಂಬರುವ ಉಪಚುನಾವಣೆ ಸೇರಿದಂತೆ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಬೇಕಾದ ಹೋರಾಟಗಳ ಕುರಿತು ಚರ್ಚಿಸಲಾಗಿದೆ. ಕರ್ನಾಟಕದಲ್ಲಿ ಭೀಕರ ಬರವಿದ್ರೂ ಸರ್ಕಾರ ಕೈಕಟ್ಟಿಕುಳಿತಿದೆ. ಹೀಗಾಗಿ ಸದನವನ್ನ ರೈತರ ಧ್ವನಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ತೀರ್ಮಾನಿಸಲಾಗಿದೆ ಎನ್ನಲಾಗಿದೆ.
- Sunil MH
- Updated on: Aug 2, 2026
- 12:45 pm
ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್: ಕಠಿಣ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ
ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆಗೆ ಝೀರೋ ಟಾಲರೆನ್ಸ್ ನೀತಿಯಡಿ ತಡೆ ನೀಡಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ. ಅಕ್ರಮಕೋರರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮ ಜರುಗಿಸಲು ಹಾಗೂ ಕರ್ತವ್ಯ ಲೋಪವೆಸಗುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಡಿಜಿಪಿಗೆ ನಿರ್ದೇಶನ ನೀಡಿದ್ದಾರೆ.
- Sunil MH
- Updated on: Jul 27, 2026
- 8:46 pm
ಸಂಪುಟ ವಿಸ್ತರಣೆಗೆ ಇಂದು ದೆಹಲಿಯಲ್ಲಿ ಮಹತ್ವದ ಕಸರತ್ತು: ಹೈಕಮಾಂಡ್ ಗ್ರೀನ್ ಸಿಗ್ನಲ್ ನಿರೀಕ್ಷೆ
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ಚರ್ಚೆಗೆ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ನ ಪ್ರಮುಖ ನಾಯಕರು ಇಂದು ದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್ ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ. ಕಳೆದ ವಾರ ನೀಟ್ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಭಾಗಿಯಾಗಿದ್ದರಿಂದ ಸಂಪುಟ ಕುರಿತ ನಿರ್ಧಾರ ಅಂತಿಮಗೊಂಡಿರಲಿಲ್ಲ.
- Sunil MH
- Updated on: Jul 27, 2026
- 7:03 am
ನೀಟ್ ವಿಚಾರವಾಗಿ ರಾಜ್ಯದಲ್ಲಿ ಹೋರಾಟ: ಕಾಂಗ್ರೆಸ್ಗೆ 2016ರ ಇತಿಹಾಸ ನೆನಪಿಸಿ ತಿವಿದ ಜೆಡಿಎಸ್
NEET Row: ನೀಟ್ (NEET) ಪರೀಕ್ಷೆ ಅಕ್ರಮ ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟದ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದ್ದು, 2016ರ ಪಿಯುಸಿ ಕೆಮಿಸ್ಟ್ರಿ ಪ್ರಶ್ನೆ ಪತ್ರಿಕೆ ಸೋರಿಕೆ ಇತಿಹಾಸವನ್ನು ನೆನಪಿಸಿ ವಾಗ್ದಾಳಿ ನಡೆಸಿದೆ. ಸಾಲು ಸಾಲು ಹಗರಣಗಳಾದಾಗ ಬಾಯಿ ಮುಚ್ಚಿಕೊಳ್ಳುವ ಕಾಂಗ್ರೆಸ್ ನಾಯಕರಿಗೆ, ಈಗ ಮಾತನಾಡಲು ಯಾವ ನೈತಿಕತೆ ಇದೆ ? ಎಂದೂ ಪ್ರಶ್ನಿಸಿದೆ.
- Sunil MH
- Updated on: Jul 23, 2026
- 2:18 pm
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ಪುತ್ರಿ ಅನುಸೂಯ ತಾಯಿ ಚೆನ್ನಮ್ಮ ಬಗ್ಗೆ ಟಿವಿ9ನ ಜೊತೆ ಹಂಚಿಕೊಂಡಿದ್ದು, ಅಮ್ಮ ಮುತ್ತೈದೆ ಸಾವನ್ನ ಬಯಸಿದ್ದರು. ಅದರಂತೆ ಮುತ್ತೈದೆಯಾಗಿ ಪ್ರಾಣ ಬಿಟ್ಟಿದ್ದಾರೆ. ಒಂದು ಕಡೆ ಅವರ ಅಗಲಿಕೆ ನೋವಿದ್ದರೆ ಮತ್ತೊಂದೆಡೆ ಮುತ್ತೈದೆಯಾಗಿ ಸಾವನಪ್ಪಿರೋದು ತೃಪ್ತಿ ಇದೆ. ಅಪ್ಪ ಯಾವಾಗಲೂ ಹೇಳುತ್ತಿದ್ದರು ಮೊದಲು ನೀನು ಹೋಗು ಹಿಂದೆ ನಾನು ಬರುತ್ತೇನೆ ಎಂದು ಅದೇ ರೀತಿ ಮುತ್ತೈದೆಯಾಗಿ ಹೋಗಿದ್ದಾರೆ ಎಂದರು.
- Sunil MH
- Updated on: Jul 19, 2026
- 6:16 pm
ಐಸಿಯುನಲ್ಲಿ ಚೆನ್ನಮ್ಮರ ಕೊನೆಕ್ಷಣಗಳು ಹೇಗಿತ್ತು? ಪುತ್ರಿ ಅನುಸೂಯ ಭಾವುಕ ಮಾತು
ಚನ್ನಮ್ಮನವರ ಅಂತಿಮ ಕ್ಷಣಗಳನ್ನು ಅವರ ಪುತ್ರಿ ಅನುಸೂಯಾ ಅವರು ಭಾವುಕವಾಗಿ ವಿವರಿಸಿದ್ದಾರೆ. ಮುತ್ತೈದೆಯಾಗಿ ತಮ್ಮ ತಾಯಿ ಅಗಲಿದ್ದು, ತಂದೆ ದೇವೇಗೌಡರು ಶಿವನ ರುದ್ರಾಭಿಷೇಕದ ತೀರ್ಥ, ಮಲ್ಲಿಗೆ ಹೂವು ಮತ್ತು ಗಂಧವನ್ನು ಇಟ್ಟು ಬೀಳ್ಕೊಟ್ಟ ಕ್ಷಣ ಸ್ಮರಣೀಯ ಎಂದಿದ್ದಾರೆ. ಚನ್ನಮ್ಮನವರು ನಿಸ್ವಾರ್ಥ ಸೇವೆ ಹಾಗೂ ಪೂಜೆಗಳಿಂದ ಪುಣ್ಯದ ಸಾವು ಪಡೆದಿದ್ದಾರೆ ಎಂದವರು ಅಭಿಪ್ರಾಯಪಟ್ಟಿದ್ದಾರೆ.
- Sunil MH
- Updated on: Jul 19, 2026
- 1:54 pm
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಅಮ್ಮನ ಅಗಲುವಿಕೆ ನೆನೆದು ಹೆಚ್.ಡಿ. ಕುಮಾರಸ್ವಾಮಿ ಭಾವುಕ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಮತ್ತು ತಮ್ಮ ತಾಯಿಯೂ ಆಗಿರುವ ಚೆನ್ನಮ್ಮ ಅವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಾಯಿ ತಮಗೆ ಕಲಿಸಿದ ಬದುಕಿನ ಪಾಠಗಳು ಮತ್ತು ಅವರ ಸರಳ ದಾಂಪತ್ಯ ಜೀವನವನ್ನು ನೆನೆದು ಅವರು ಭಾವುಕರಾದ ಪ್ರಸಂಗ ನಡೆದಿದೆ. ಇವತ್ತಿನ ಸಮಾಜಕ್ಕೆ ನಮ್ಮ ತಂದೆ ತಾಯಿಯ ದಾಂಪತ್ಯ ಮಾದರಿ ಎಂದೂ ಅವರು ಈ ವೇಳೆ ಅಭಿಪ್ರಾಯಪಟ್ಟಿದ್ದಾರೆ.
- Sunil MH
- Updated on: Jul 19, 2026
- 9:20 am
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಈಗ ಹೇಗಿದೆ? ಮಣಿಪಾಲ್ ಆಸ್ಪತ್ರೆಯ ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
HD Deve Gowda wife Chennamma Health update: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ನಿನ್ನೆಗಿಂತ ಇಂದು ಸುಧಾರಣೆ ಕಂಡುಬಂದಿದ್ದು, ಉಸಿರಾಟದ ತೊಂದರೆ ಶೇ 20ರಿಂದ 30ರಷ್ಟು ಹತೋಟಿಗೆ ಬಂದಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ವೈದ್ಯರ ಹೇಳಿಕೆಯ ವಿಡಿಯೋ ಇಲ್ಲಿದೆ.
- Sunil MH
- Updated on: Jul 18, 2026
- 11:19 am