AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunil MH

Sunil MH

Author - TV9 Kannada

sunilmadre.hoovana@tv9.com
ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ-JDS ಮೈತ್ರಿಯಲ್ಲಿ ಭಿನ್ನರಾಗ: ಹೆಚ್​​ಡಿಕೆ ಮುಂದಿನ ನಡೆ ಏನು?

ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ-JDS ಮೈತ್ರಿಯಲ್ಲಿ ಭಿನ್ನರಾಗ: ಹೆಚ್​​ಡಿಕೆ ಮುಂದಿನ ನಡೆ ಏನು?

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ವಿಚಾರದಲ್ಲಿ ಭಿನ್ನಮತ ಭುಗಿಲೆದ್ದಿದೆ. ಜೆಡಿಎಸ್ ಎಲ್ಲಾ ಚುನಾವಣೆಗಳಲ್ಲೂ ಒಟ್ಟಾಗಿ ಬಯಸಿದರೆ, ಕೆಲವು ಬಿಜೆಪಿ ನಾಯಕರು ಸ್ಥಳೀಯ ಮಟ್ಟದಲ್ಲಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಈ ವಿರೋಧ ಎದುರಾಗಿದೆ ಎನ್ನಲಾಗಿದೆ. ಆದರೆ ಹೆಚ್​.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಹೈಕಮಾಂಡ್ ಜೊತೆ ಸಭೆ ನಡೆಸಿ ಈ ಗೊಂದಲಗಳಿಗೆ ಶೀಘ್ರ ತೆರೆ ಎಳೆಯಲು ಮುಂದಾಗಿದ್ದಾರೆ.

  • Sunil MH
  • Updated on: Jan 14, 2026
  • 12:36 pm
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ವೇಣುಗೋಪಾಲ್​​ಗೆ ಅಶೋಕ್ ಟಾಂಗ್

ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ವೇಣುಗೋಪಾಲ್​​ಗೆ ಅಶೋಕ್ ಟಾಂಗ್

ಆರ್. ಅಶೋಕ್ ಅವರು ಕೆ.ಸಿ. ವೇಣುಗೋಪಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಕೇರಳದಲ್ಲಿ ಕನ್ನಡದ ಬಗ್ಗೆ ಮಾತನಾಡದೆ ಇಲ್ಲಿ ಕೋಗಿಲೆ ಕೂಗಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋಗಿಲು ಬಡಾವಣೆಯಲ್ಲಿನ ಅನ್ಯಾಯದ ಬಗ್ಗೆ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು "ಲೀಸ್" ರಾಜಕಾರಣಿ ಎಂದು ಟೀಕಿಸಿ, ಕರ್ನಾಟಕದ ಹಣವನ್ನು ಬೇರೆ ರಾಜ್ಯಗಳ ಚುನಾವಣೆಗೆ ಬಳಸುವುದರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • Sunil MH
  • Updated on: Jan 10, 2026
  • 9:29 pm
ಬಳ್ಳಾರಿ ಗಲಭೆ ಬಗ್ಗೆ ಹೆಚ್​​ಡಿಕೆ ಹೊಸ ಬಾಂಬ್​: ಪೋಸ್ಟ್ ಮಾರ್ಟಮ್ ಸತ್ಯ ಬಿಚ್ಚಿಟ್ಟ ಕೇಂದ್ರ ಸಚಿವ

ಬಳ್ಳಾರಿ ಗಲಭೆ ಬಗ್ಗೆ ಹೆಚ್​​ಡಿಕೆ ಹೊಸ ಬಾಂಬ್​: ಪೋಸ್ಟ್ ಮಾರ್ಟಮ್ ಸತ್ಯ ಬಿಚ್ಚಿಟ್ಟ ಕೇಂದ್ರ ಸಚಿವ

ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ಕೇಂದ್ರ ಸಚಿವ ಹಚ್​​ಡಿ ಕುಮಾರಸ್ವಾಮಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಎರಡು ಬಾರಿ ಮರಣೋತ್ತರ ಪರೀಕ್ಷೆ, ಅಧಿಕಾರಿಗಳ ಅಮಾನತು, ಪರಿಹಾರದ ಮೂಲದ ಬಗ್ಗೆ ಪ್ರಶ್ನಿಸಿದ್ದಾರೆ. ಅಲ್ಲದೆ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ.

  • Sunil MH
  • Updated on: Jan 8, 2026
  • 6:24 am
ಬಳ್ಳಾರಿ ಎಸ್​​ಪಿ ಪವನ್ ನೆಜ್ಜೂರ್ ಅಮಾನತು: ಶೋಭಾ ಕರಂದ್ಲಾಜೆ ಸ್ಫೋಟಕ ಆರೋಪ

ಬಳ್ಳಾರಿ ಎಸ್​​ಪಿ ಪವನ್ ನೆಜ್ಜೂರ್ ಅಮಾನತು: ಶೋಭಾ ಕರಂದ್ಲಾಜೆ ಸ್ಫೋಟಕ ಆರೋಪ

ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರ್ ಅಮಾನತು ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆ, ಭಡ್ತಿ ಮತ್ತು ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಇದರಿಂದ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಗ್ಗಿದೆ ಎಂದು ಅವರು ಆರೋಪಿಸಿದ್ದಾರೆ.

  • Sunil MH
  • Updated on: Jan 4, 2026
  • 2:17 pm
ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ಗೆ ಜೆಡಿಎಸ್​​ ​ದೂರು: ಆರೋಪವೇನು?

ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ಗೆ ಜೆಡಿಎಸ್​​ ​ದೂರು: ಆರೋಪವೇನು?

ದ್ವೇಷ ಭಾಷಣ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕಾರ, ರೈತರ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡದಿರುವುದು ಮತ್ತು ಕೋಗಿಲು ಲೇಔಟ್‌ನಲ್ಲಿ ಮನೆಗಳ ತೆರವು ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಕುಮಾರಸ್ವಾಮಿಯವರ ಹಿಂದಿನ ಆಡಳಿತವನ್ನು ಸ್ಮರಿಸಿದ ಜೆಡಿಎಸ್, ಪ್ರಸ್ತುತ ಸರ್ಕಾರದ ನೀತಿಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.

  • Sunil MH
  • Updated on: Dec 31, 2025
  • 3:55 pm
ಯುದ್ಧಕ್ಕೆ ಸಿದ್ಧ: ಸುದೀಪ್ ಮಾತಿನ ನಿಜವಾದ ಅರ್ಥ ಏನು? ವಿವರಿಸಿದ ಕಿಚ್ಚನ ಆಪ್ತ ರಾಜು ಗೌಡ

ಯುದ್ಧಕ್ಕೆ ಸಿದ್ಧ: ಸುದೀಪ್ ಮಾತಿನ ನಿಜವಾದ ಅರ್ಥ ಏನು? ವಿವರಿಸಿದ ಕಿಚ್ಚನ ಆಪ್ತ ರಾಜು ಗೌಡ

ಕಿಚ್ಚ ಸುದೀಪ್ ಅವರು ‘ಮಾರ್ಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಹೇಳಿದ ಮಾತುಗಳು ವಿವಾದಕ್ಕೆ ಕಾರಣ ಆಗಿವೆ. ದರ್ಶನ್ ಅಭಿಮಾನಿಗಳನ್ನು ಉದ್ದೇಶಿಸಿ ಸುದೀಪ್ ಅವರು ಮಾತನಾಡಿದರು ಎಂಬುದು ಕೆಲವರ ವಾದ ಆಗಿದೆ. ಅದರೆ ಸುದೀಪ್ ಮಾತನಾಡಿದ್ದು ಪೈರಸಿ ಮಾಡುವವರ ವಿರುದ್ಧ ಎಂದು ಅವರ ಆಪ್ತ ರಾಜು ಗೌಡ ಹೇಳಿದ್ದಾರೆ.

  • Sunil MH
  • Updated on: Dec 22, 2025
  • 3:56 pm
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್: ಡಿಕೆ ಶಿವಕುಮಾರ್ ಗುಡ್ ನ್ಯೂಸ್

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್: ಡಿಕೆ ಶಿವಕುಮಾರ್ ಗುಡ್ ನ್ಯೂಸ್

ಬೆಂಗಳೂರಿನಲ್ಲಿ ಐಪಿಎಲ್ ಮತ್ತು ಇತರೆ ಕ್ರಿಕೆಟ್ ಪಂದ್ಯಗಳ ಆಯೋಜನೆ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (KSCA) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನೇತೃತ್ವದ ತಂಡ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದೆ. ಪಂದ್ಯಗಳಿಗೆ ಅನುಮತಿ ಕೋರಲಾಗಿದ್ದು, ನಾಳೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಕೆಶಿ ತಿಳಿಸಿದ್ದಾರೆ.

  • Sunil MH
  • Updated on: Dec 10, 2025
  • 12:05 pm
ಲಕ್ಷಾಂತರ ದುಡಿಯೋ ಹೆಣ್ಮಕ್ಕಳಿಗೂ ಬಸ್ ಫ್ರೀ ಬೇಕಾ? ಸಿಎಲ್​ಪಿ ಸಭೆಯಲ್ಲೇ ಕಾಂಗ್ರೆಸ್ ಶಾಸಕರ ಆಕ್ಷೇಪ!

ಲಕ್ಷಾಂತರ ದುಡಿಯೋ ಹೆಣ್ಮಕ್ಕಳಿಗೂ ಬಸ್ ಫ್ರೀ ಬೇಕಾ? ಸಿಎಲ್​ಪಿ ಸಭೆಯಲ್ಲೇ ಕಾಂಗ್ರೆಸ್ ಶಾಸಕರ ಆಕ್ಷೇಪ!

ಬೆಳಗಾವಿಯಲ್ಲಿ ಮಂಗಳವಾರ ರಾತ್ರಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ಕೇವಲ ಗ್ಯಾರಂಟಿಗಳನ್ನು ನೆಚ್ಚಿಕೊಂಡರೆ ಗೆಲುವು ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಮುಂದೆಯೇ ಬೇಸರ ತೋಡಿಕೊಂಡಿದ್ದಾರೆ. ಅಭಿವೃದ್ಧಿ ಯೋಜನೆಗಳತ್ತ ಗಮನ ಹರಿಸುವಂತೆ ಆಗ್ರಹಿಸಿ, ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆಗೆ ಒತ್ತಾಯಿಸಿದ್ದಾರೆ.

  • Sunil MH
  • Updated on: Dec 10, 2025
  • 9:22 am
ಸಿದ್ದರಾಮಯ್ಯಗೆ ಟಕ್ಕರ್​: ಡಿಕೆಶಿ ನೇತೃತ್ವದಲ್ಲಿ ಅತಿ ಹಿಂದುಳಿದ ವರ್ಗಗಳ ಸಮಾವೇಶ?

ಸಿದ್ದರಾಮಯ್ಯಗೆ ಟಕ್ಕರ್​: ಡಿಕೆಶಿ ನೇತೃತ್ವದಲ್ಲಿ ಅತಿ ಹಿಂದುಳಿದ ವರ್ಗಗಳ ಸಮಾವೇಶ?

ಅತಿ ಹಿಂದುಳಿದ ವರ್ಗಗಳ 11 ಸ್ವಾಮೀಜಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಅವರು ಸಿಎಂ ಆಗಬೇಕೆಂದು ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಡಿಕೆಶಿ ನೇತೃತ್ವದಲ್ಲಿ ಸಮಾವೇಶದ ಬೇಡಿಕೆಯನ್ನೂ ಇಟ್ಟಿದ್ದಾರೆ. ಹೀಗಾಗಿ ಒಂದೊಮ್ಮೆ ಸಿಎಂ ಸ್ಥಾನಕ್ಕೆ ಕುತ್ತು ಬಂದರೆ ಅಹಿಂದ ದಾಳ ಉರುಳಿಸಲು ಪ್ಲ್ಯಾನ್​​ ಮಾಡಿದ್ದ ಸಿದ್ದರಾಮಯ್ಯನವರಿಗೆ ಟಕ್ಕರ್​​ ನೀಡಲು ಸಿದ್ಧತೆ ನಡೆದಿದ್ಯಾ ಎನ್ನುವ ಪ್ರಶ್ನೆ ಉದ್ಭವಿಸಿದೆ.

  • Sunil MH
  • Updated on: Dec 5, 2025
  • 7:40 pm
ಅಧಿಕಾರ ಹಂಚಿಕೆ: ಡಿಕೆ ಶಿವಕುಮಾರ್ ಜತೆಗಿನ ಮಾತುಕತೆ ರಹಸ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

ಅಧಿಕಾರ ಹಂಚಿಕೆ: ಡಿಕೆ ಶಿವಕುಮಾರ್ ಜತೆಗಿನ ಮಾತುಕತೆ ರಹಸ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಬಣದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಡಿಕೆಶಿ ಜತೆಗೆ ಏನೇನು ಮಾತುಕತೆ ನಡೆಯಿತು ಎಂಬ ಬಗ್ಗೆ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ವಿವರಗಳು ಇಲ್ಲಿವೆ.

  • Sunil MH
  • Updated on: Nov 26, 2025
  • 2:11 pm
ಕಬ್ಬು ದರ ಬಗ್ಗೆ ಸಿಎಂ ಸಭೆಯಲ್ಲಿ ಏನಾಯ್ತು? ಶುಗರ್ ಫ್ಯಾಕ್ಟರಿ ಓನರ್ ನಿರಾಣಿ ಹೇಳಿದ್ದಿಷ್ಟು

ಕಬ್ಬು ದರ ಬಗ್ಗೆ ಸಿಎಂ ಸಭೆಯಲ್ಲಿ ಏನಾಯ್ತು? ಶುಗರ್ ಫ್ಯಾಕ್ಟರಿ ಓನರ್ ನಿರಾಣಿ ಹೇಳಿದ್ದಿಷ್ಟು

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಮುಕ್ತಾಯಗೊಂಡಿದೆ. ಸಭೆ ಬಳಿಕ ಪ್ರತಿಕ್ರಿಯಿಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ, ಸಿಎಂ ಜೊತೆ ಕಾರ್ಖಾನೆ ಮಾಲೀಕರ ಮೊದಲ ಹಂತದ ಸಭೆ ನಡೆದಿದೆ. ರೈತರ ಜೊತೆಗಿನ ಸಭೆ ಮುಗಿದ ಬಳಿಕ ಅಂತಿಮ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.

  • Sunil MH
  • Updated on: Nov 7, 2025
  • 4:13 pm
ಕಬ್ಬಿನ ಗಾಣಕ್ಕೆ ಸಿಲುಕಿದ ಸರ್ಕಾರ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಕಬ್ಬಿನ ಗಾಣಕ್ಕೆ ಸಿಲುಕಿದ ಸರ್ಕಾರ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಪ್ರತೀ ಟನ್ ಕಬ್ಬಿಗೆ 3500 ರೂ. ದರ ನಿಗದಿ ಮಾಡುವಂತೆ ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡುತ್ತಿದ್ದಾರೆ. ಸದ್ಯ ರೈತರ ಈ ಹೋರಾಟ ರಾಷ್ಟ್ರಮಟ್ಟದಲ್ಲೂ ಚರ್ಚೆ ಆಗುತ್ತಿದೆ. ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ನೆರವಿಗೆ ಬರುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

  • Sunil MH
  • Updated on: Nov 6, 2025
  • 10:23 pm