ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ದೇವೇಗೌಡರ ಅಚ್ಚರಿಯ ಹೇಳಿಕೆ: ಜೆಡಿಎಸ್ ಮುಂದಿನ ನಡೆ ಏನು?
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎನ್ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಆಕಾಂಕ್ಷೆ ಹೊಂದಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಬೆಂಗಳೂರಿನಲ್ಲಿ ಹೇಳಿದ್ದಾರೆ. ನಾವು ಪ್ರಾದೇಶಿಕ ಪಕ್ಷ, ಬಿಜೆಪಿ ರಾಷ್ಟ್ರೀಯ ಪಕ್ಷ. ಅವರ ತೀರ್ಮಾನಕ್ಕಾಗಿ ಕಾಯುತ್ತಿದ್ದೇವೆ. ಕುಮಾರಸ್ವಾಮಿಯವರು ದೆಹಲಿಯಿಂದ ಕೇಂದ್ರದ ನಾಯಕರೊಂದಿಗೆ ಚರ್ಚಿಸಿ ಬಂದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
- Sunil MH
- Updated on: Feb 25, 2026
- 6:55 pm
BJP-JDS ಮೈತ್ರಿ ಗೊಂದಲಕ್ಕೆ ಶೀಘ್ರವೇ ಇತಿಶ್ರೀ: ಸಮನ್ವಯ ಸಭೆಗೆ ನಾಯಕರ ನಿರ್ಧಾರ
ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬೆಂಗಳೂರಿನಲ್ಲಿ ಸಮನ್ವಯ ಸಭೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ಮೈತ್ರಿ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶ. ಕುಮಾರಸ್ವಾಮಿ, ಆರ್. ಅಶೋಕ್, ಬಿ.ವೈ. ವಿಜಯೇಂದ್ರರಂತಹ ಪ್ರಮುಖ ನಾಯಕರ ನೇತೃತ್ವದಲ್ಲಿ ಮೀಟಿಂಗ್ ನಡೆಯಲಿದೆ ಎನ್ನಲಾಗಿದೆ.
- Sunil MH
- Updated on: Feb 19, 2026
- 11:58 am
ದೋಸ್ತಿ ನಾಯಕರ ನಡುವೆ ದಂಗಲ್: ಜಿಬಿಎ ಎಲೆಕ್ಷನ್ಗೆ ಜೆಡಿಎಸ್ ಪ್ರತ್ಯೇಕ ಸ್ಪರ್ಧೆ?; ಕುತೂಹಲ ಮೂಡಿಸಿದ ಹೆಚ್ಡಿಕೆ ನಡೆ
ಸ್ಥಳೀಯ ಸಂಸ್ಥೆ ಚುನಾವಣೆ ಹೊತ್ತಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿದೆ. ಜಿಬಿಎ ಚುನಾವಣೆಯಲ್ಲಿ ಸೀಟು ಹಂಚಿಕೆ ಬಗ್ಗೆ ಸಮನ್ವಯದ ಕೊರತೆಯಿಂದ 85-100 ವಾರ್ಡ್ಗಳಲ್ಲಿ JDS ಪ್ರತ್ಯೇಕವಾಗಿ ಸ್ಪರ್ಧಿಸಲು ಹೆಚ್.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ. ಮತ್ತೊಂದೆಡೆ, 2028ರ ಸಿಎಂ ಸ್ಥಾನಕ್ಕೆ ಮೈತ್ರಿ ನಾಯಕರ ನಡುವೆ ಈಗಲೇ ಆಂತರಿಕ ಪೈಪೋಟಿ ತೀವ್ರಗೊಂಡಿದ್ದು, ಮೈತ್ರಿ ಭವಿಷ್ಯ ಕುರಿತು ಕುತೂಹಲ ಹೆಚ್ಚಿಸಿದೆ.
- Sunil MH
- Updated on: Feb 15, 2026
- 9:27 am
Karnataka Budget 2026: ಕರ್ನಾಟಕ ಬಜೆಟ್ಗೆ ದಿನಾಂಕ ನಿಗದಿ; ಯಾವಾಗ? ಎಷ್ಟು ಗಂಟೆಗೆ?
ಕರ್ನಾಟಕ ಬಜೆಟ್ 2026: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮೊದಲ ದಿನ ಅಂದರೆ ಮಾ.6 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಧಾರಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
- Sunil MH
- Updated on: Feb 19, 2026
- 1:40 pm
ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲ: ಹೆಚ್ಡಿಕೆಗೆ ಬಿಜೆಪಿ ಹೈಕಮಾಂಡ್ನಿಂದ ಸಿಕ್ತು ಅಭಯ!
ಕರ್ನಾಟಕದಲ್ಲಿ ಎನ್ಡಿಎ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹೇಳಿಕೆಗಳಿಂದ ರಾಜಕೀಯ ಗೊಂದಲ ಉಂಟಾಗಿದ್ದು, ಇದೀಗ ಹೈಕಮಾಂಡ್ ಅಂಗಳ ತಲುಪಿದೆ. ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ಕರ್ನಾಟಕ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಹೆಚ್ಡಿಕೆ ಮಾತಿಗೆ ಪೂರಕವಾಗಿ ರಾಧಾಮೋಹನ್ ಸ್ಪಂದಿಸಿದ್ದಾರೆ ಎನ್ನಲಾಗಿದೆ.
- Sunil MH
- Updated on: Feb 10, 2026
- 10:59 am
‘ಗೃಹಲಕ್ಷ್ಮಿ’ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ: ಮೃತಪಟ್ಟ ಫಲಾನುಭವಿಗಳ ಖಾತೆಗೆ ಹೋಗುತ್ತಿದೆ ಕೋಟ್ಯಂತರ ರೂ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗ ತಡೆಯಲು ಹೊಸ ನಿಯಮ ಜಾರಿಗೆ ಬರುತ್ತಿದೆ. ಮೃತಪಟ್ಟ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುವುದನ್ನು ನಿಲ್ಲಿಸಲು ಜೀವಿತ ಪ್ರಮಾಣಪತ್ರ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಚಿಂತಿಸುತ್ತಿದೆ. ಪಿಂಚಣಿದಾರರಿಗೆ ಇರುವಂತೆ, ಗೃಹಲಕ್ಷ್ಮಿ ಯೋಜನೆಯಲ್ಲಿಯೂ ಈ ನಿಯಮ ಜಾರಿಯಾದರೆ ಕೋಟಿಗಟ್ಟಲೆ ಸರ್ಕಾರಿ ಹಣ ಸೋರಿಕೆಯಾಗುವುದನ್ನು ತಡೆಯಬಹುದು.
- Sunil MH
- Updated on: Feb 7, 2026
- 7:31 pm
ರಾಜ್ಯದಲ್ಲಿ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ
ಅಕ್ರಮ ಬಾಂಗ್ಲಾ ವಲಸಿಗರು ಮತ್ತು ಇತರ ವಿದೇಶಿಯರನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರ ವಿಶೇಷ ಕಾರ್ಯಾಚರಣೆಗೆ ಮುಂದಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈಗಾಗಲೇ ಇಲಾಖೆಗೆ ನಿರ್ದೇಶನ ನೀಡಿದ್ದು, ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅನಧಿಕೃತವಾಗಿ ವಾಸಿಸುವವರನ್ನು ಗುರುತಿಸಿ ಗಡೀಪಾರು ಮಾಡುವುದು ಕಾರ್ಯಾಚರಣೆಯ ಮುಖ್ಯ ಉದ್ದೇಶವಾಗಿದೆ.
- Sunil MH
- Updated on: Feb 5, 2026
- 12:11 pm
ಜೆಡಿಎಸ್ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ ಎಂದ ಸಾರಾ ಮಹೇಶ್
ಸಾ.ರಾ. ಮಹೇಶ್ ಅವರು ಜಿ.ಟಿ.ದೇವೇಗೌಡರ ವಿರುದ್ಧ ಚಾಮುಂಡೇಶ್ವರಿಯಲ್ಲಿ ಸ್ಪರ್ಧಿಸಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ಶಾಸಕರು ಸಕ್ರಿಯವಾಗಿಲ್ಲದ ಕಾರಣ, ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರ ತೀರ್ಮಾನಕ್ಕೆ ಬದ್ಧನಾಗಿರುವುದಾಗಿ ಹೇಳಿದ್ದಾರೆ. ಕೆ.ಆರ್. ನಗರ ಅಥವಾ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ತಾವು ಸಿದ್ಧ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
- Sunil MH
- Updated on: Jan 18, 2026
- 8:58 pm
ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ-JDS ಮೈತ್ರಿಯಲ್ಲಿ ಭಿನ್ನರಾಗ: ಹೆಚ್ಡಿಕೆ ಮುಂದಿನ ನಡೆ ಏನು?
ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ವಿಚಾರದಲ್ಲಿ ಭಿನ್ನಮತ ಭುಗಿಲೆದ್ದಿದೆ. ಜೆಡಿಎಸ್ ಎಲ್ಲಾ ಚುನಾವಣೆಗಳಲ್ಲೂ ಒಟ್ಟಾಗಿ ಬಯಸಿದರೆ, ಕೆಲವು ಬಿಜೆಪಿ ನಾಯಕರು ಸ್ಥಳೀಯ ಮಟ್ಟದಲ್ಲಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಈ ವಿರೋಧ ಎದುರಾಗಿದೆ ಎನ್ನಲಾಗಿದೆ. ಆದರೆ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಹೈಕಮಾಂಡ್ ಜೊತೆ ಸಭೆ ನಡೆಸಿ ಈ ಗೊಂದಲಗಳಿಗೆ ಶೀಘ್ರ ತೆರೆ ಎಳೆಯಲು ಮುಂದಾಗಿದ್ದಾರೆ.
- Sunil MH
- Updated on: Jan 14, 2026
- 12:36 pm
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ವೇಣುಗೋಪಾಲ್ಗೆ ಅಶೋಕ್ ಟಾಂಗ್
ಆರ್. ಅಶೋಕ್ ಅವರು ಕೆ.ಸಿ. ವೇಣುಗೋಪಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಕೇರಳದಲ್ಲಿ ಕನ್ನಡದ ಬಗ್ಗೆ ಮಾತನಾಡದೆ ಇಲ್ಲಿ ಕೋಗಿಲೆ ಕೂಗಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋಗಿಲು ಬಡಾವಣೆಯಲ್ಲಿನ ಅನ್ಯಾಯದ ಬಗ್ಗೆ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು "ಲೀಸ್" ರಾಜಕಾರಣಿ ಎಂದು ಟೀಕಿಸಿ, ಕರ್ನಾಟಕದ ಹಣವನ್ನು ಬೇರೆ ರಾಜ್ಯಗಳ ಚುನಾವಣೆಗೆ ಬಳಸುವುದರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
- Sunil MH
- Updated on: Jan 10, 2026
- 9:29 pm
ಬಳ್ಳಾರಿ ಗಲಭೆ ಬಗ್ಗೆ ಹೆಚ್ಡಿಕೆ ಹೊಸ ಬಾಂಬ್: ಪೋಸ್ಟ್ ಮಾರ್ಟಮ್ ಸತ್ಯ ಬಿಚ್ಚಿಟ್ಟ ಕೇಂದ್ರ ಸಚಿವ
ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ಕೇಂದ್ರ ಸಚಿವ ಹಚ್ಡಿ ಕುಮಾರಸ್ವಾಮಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಎರಡು ಬಾರಿ ಮರಣೋತ್ತರ ಪರೀಕ್ಷೆ, ಅಧಿಕಾರಿಗಳ ಅಮಾನತು, ಪರಿಹಾರದ ಮೂಲದ ಬಗ್ಗೆ ಪ್ರಶ್ನಿಸಿದ್ದಾರೆ. ಅಲ್ಲದೆ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ.
- Sunil MH
- Updated on: Jan 8, 2026
- 6:24 am
ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು: ಶೋಭಾ ಕರಂದ್ಲಾಜೆ ಸ್ಫೋಟಕ ಆರೋಪ
ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆ, ಭಡ್ತಿ ಮತ್ತು ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಇದರಿಂದ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಗ್ಗಿದೆ ಎಂದು ಅವರು ಆರೋಪಿಸಿದ್ದಾರೆ.
- Sunil MH
- Updated on: Jan 4, 2026
- 2:17 pm