ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.
ಏಕಾಏಕಿ ಚಿರತೆ ದಾಳಿ: ಕುರಿ ಮೇಯಿಸುತ್ತಿದ್ದ ಆದಿವಾಸಿ ಮಹಿಳೆ ಬದುಕಿದ್ದೇ ಪವಾಡ!
Chamarajanagara News: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಹಾಡಿಯಲ್ಲಿ ಚಿರತೆ ಏಕಾಏಕಿ ದಾಳಿ ನಡೆಸಿದ್ದು ಕುರಿ ಮೇಯಿಸುತ್ತಿದ್ದ ಆದಿವಾಸಿ ಮಹಿಳೆ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಜನವಸತಿ ಪ್ರದೇಶಗಳಿಗೆ ಮೇಲಿಂದ ಮೇಲೆ ವನ್ಯ ಜೀವಿಗಳು ಲಗ್ಗೆ ಇಡುತ್ತಿರವ ಕಾರಣಕ್ಕೆ ಜಿಲ್ಲೆಯ ಜನರು ಕಂಗಾಲಾಗಿರುವ ನಡುವೆಯೇ ನಡೆದ ಮತ್ತೊಂದು ಘಟನೆ ಆತಂಕ ಇಮ್ಮಡಿಗೊಳಿಸಿದೆ.
- Suraj Prasad SN
- Updated on: Jun 24, 2026
- 11:55 am
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ: ಹೋಮ್ ಗಾರ್ಡ್ ಕಾರು ಜಖಂ, ಅಂಗಡಿ ಪುಡಿ!
ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಬಿಳಿಗಿರಿರಂಗನಾಥಸ್ವಾಮಿ ದೇವಾಲಯದ ಆವರಣಕ್ಕೆ ರಾತ್ರಿ ವೇಳೆ ಲಗ್ಗೆ ಇಟ್ಟ ಒಂಟಿ ಸಲಗವೊಂದು ತೀವ್ರ ಆಟಾಟೋಪ ನಡೆಸಿದೆ. ಕರ್ತವ್ಯ ನಿರತ ಹೋಮ್ ಗಾರ್ಡ್ ಒಬ್ಬರ ಕಾರನ್ನು ಜಖಂ ಮಾಡುವುದರ ಜೊತೆಗೆ ಪೆಟ್ಟಿ ಅಂಗಡಿಯೊಂದರ ಶೆಟರ್ ಅನ್ನು ಪುಡಿಪುಡಿ ಮಾಡಿದ್ದು, ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದ ಭಕ್ತಾದಿಗಳಲ್ಲಿ ಆತಂಕ ಮೂಡಿಸಿದೆ.
- Suraj Prasad SN
- Updated on: Jun 23, 2026
- 10:54 am
ಚಾಮರಾಜನಗರದಲ್ಲಿ ಗಣಿ ಧಣಿಗಳದ್ದೇ ಕಾರುಬಾರು: ಜಿಲ್ಲಾಧಿಕಾರಿ ಆದೇಶಕ್ಕೂ ಡೊಂಟ್ ಕೇರ್
ಚಾಮರಾಜನಗರದಲ್ಲಿ ಟಿಪ್ಪರ್ ಲಾರಿಗಳ ಹಾವಳಿ ಮಿತಿ ಮೀರಿದೆ. ಶಾಲಾ-ಕಾಲೇಜು ಅವಧಿಯಲ್ಲಿ ಲಾರಿಗಳ ಸಂಚಾರ ನಿರ್ಬಂಧವನ್ನು ಗಣಿ ಮಾಲೀಕರು ಉಲ್ಲಂಘಿಸುತ್ತಿದ್ದಾರೆ. ಇದರಿಂದ ಗ್ರಾಮಗಳಲ್ಲಿ ಧೂಳು, ಮಕ್ಕಳ ಆರೋಗ್ಯಕ್ಕೆ ಹಾನಿ ಮತ್ತು ಅಪಘಾತಗಳು ಹೆಚ್ಚಿವೆ. ಗುಂಡ್ಲುಪೇಟೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
- Suraj Prasad SN
- Updated on: Jun 22, 2026
- 8:17 pm
ದಶಕ ಕಳೆದರೂ ಸಿಗದ ರೇಷನ್ ಕಾರ್ಡ್; ಹಸಿವಿನಿಂದ ಕಣ್ಣೀರು ಇಡುತ್ತಿದ್ದಾರೆ ಆನೆ ದಿಂಬ ಹಾಡಿಯ ಆದಿವಾಸಿಗಳು!
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಸಮೀಪವಿರುವ ಆನೆ ದಿಂಬ ಹಾಡಿಯ ಆದಿವಾಸಿ ಸೋಲಿಗ ಜನಾಂಗದವರು ಕಳೆದ ಹತ್ತು ವರ್ಷಗಳಿಂದ ರೇಷನ್ ಕಾರ್ಡ್ ಸಿಗದೆ ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಿದ್ದಾರೆ. ಸಮಾಜದ ಮುಖ್ಯವಾಹಿನಿಗೆ ಬಂದರೂ ಮೂಲಭೂತ ಸೌಕರ್ಯಗಳಿಲ್ಲದೆ ಹಸಿವಿನಿಂದ ಕಣ್ಣೀರು ಇಡುತ್ತಿರುವ ಬಡ ಕುಟುಂಬಗಳು ಕರುಣಾಜನಕ ಸ್ಥಿತಿ ತಲುಪಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯವಹಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
- Suraj Prasad SN
- Updated on: Jun 22, 2026
- 12:12 pm
ಮೈಸೂರು ಮೃಗಾಲಯಕ್ಕೆ ಕಳಿಸಿದ್ದೇವೆ ಎಂದಿದ್ದ ನರಭಕ್ಷಕ ಚಿರತೆ ಹನೂರು ಕಾಡಿನಲ್ಲಿ ಪತ್ತೆ; ಅಧಿಕಾರಿಗಳ ವಿರುದ್ಧ ಸೋಲಿಗರು ಗರಂ
ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆಯು ನರಭಕ್ಷಕ ಚಿರತೆಯೊಂದನ್ನು ಗುಟ್ಟಾಗಿ ಬಿಟ್ಟಿರುವುದು ಆದಿವಾಸಿ ಸೋಲಿಗರು ಮತ್ತು ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ. ಕಾಲರ್ ಐಡಿ ಇರುವ ಈ ಚಿರತೆಯನ್ನು ಮೈಸೂರಿಗೆ ರವಾನಿಸಲಾಗಿದೆ ಎಂದು ಹೇಳಿದ್ದ ಅರಣ್ಯಾಧಿಕಾರಿಗಳು, ಸೂಕ್ಷ್ಮ ಪ್ರದೇಶದಲ್ಲಿ ಬಿಟ್ಟು ಅಪಾಯ ತಂದಿದ್ದಾರೆ. ಇದರಿಂದ ಜಾನುವಾರುಗಳಿಗೆ ನಷ್ಟ, ಜೀವಕ್ಕೆ ಅಪಾಯ ಎದುರಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
- Suraj Prasad SN
- Updated on: Jun 20, 2026
- 10:05 am
ದಾಖಲೆ ಬರೆದ ಮಾದಪ್ಪನ ಹುಂಡಿ: ಕೇವಲ 27 ದಿನದಲ್ಲಿ ಬರೋಬ್ಬರಿ 2.73 ಕೋಟಿ ಸಂಗ್ರಹ!
ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿದೆ. ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ.
- Suraj Prasad SN
- Updated on: Jun 18, 2026
- 10:00 am
ಚಾಮರಾಜನಗರದಲ್ಲೊಂದು ಹೃದಯ ವಿದ್ರಾವಕ ಘಟನೆ: ಗ್ರೈಂಡರ್ನಿಂದ ವಿದ್ಯುತ್ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲಿಗೌಡನಹಳ್ಳಿಯಲ್ಲಿ ಗ್ರೈಂಡರ್ನಿಂದ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ನೀರು ತರಲು ಅಡುಗೆ ಮನೆಗೆ ತೆರಳಿದ್ದ ಮಗು ಆನ್ ಆಗಿದ್ದ ಗ್ರೈಂಡರ್ ಮುಟ್ಟಿದ ತಕ್ಷಣ ಸಾವನ್ನಪ್ಪಿದೆ. ಪೋಷಕರ ಎದುರೇ ನಡೆದ ಈ ಹೃದಯ ವಿದ್ರಾವಕ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
- Suraj Prasad SN
- Updated on: Jun 17, 2026
- 12:11 pm
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರದ ಶುಭ ದಿನದಂದೇ ಮಹಾ ಅಮಾವಾಸ್ಯೆ ಬಂದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬಂದಿದ್ದಾರೆ. ಮಾದಪ್ಪನ ದರ್ಶನ ಪಡೆದ ಭಕ್ತರು ವಿಶೇಷ ಎಣ್ಣೆ ಮಜ್ಜನ, ಚಿನ್ನ ಹಾಗೂ ಬೆಳ್ಳಿ ತೇರು ಸೇವೆಗಳನ್ನು ನೆರವೇರಿಸಿ ಪುನೀತರಾಗಿದ್ದಾರೆ.
- Suraj Prasad SN
- Updated on: Jun 15, 2026
- 10:42 am
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿಶೀಟರ್ ಎಣ್ಣೆ ಪಾರ್ಟಿ ಪ್ರಕರಣ: ಮದ್ದೂರು ವಲಯದ ಆರ್ಎಫ್ಒ ಪುನೀತ್ ಕುಮಾರ್ ಅಮಾನತು
ಬಂಡೀಪುರ ಅರಣ್ಯದ ಕಳ್ಳಬೇಟೆ ತಡೆ ಶಿಬಿರದ ಮುಂದೆ ರೌಡಿಶೀಟರ್ ಸತೀಶ್ ಮದ್ಯದ ಪಾರ್ಟಿ ಮಾಡಿದ್ದ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದಡಿ ಮದ್ದೂರು ವಲಯದ ಆರ್ಎಫ್ಒ ಪುನೀತ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ. ಬಡ ರೈತರ ಮೇಲೆ ಕೇಸ್ ಹಾಕುವ ಅಧಿಕಾರಿಗಳು ಕ್ರಿಮಿನಲ್ಗಳಿಗೆ ಸಾಥ್ ನೀಡಿದ್ದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
- Suraj Prasad SN
- Updated on: Jun 9, 2026
- 9:52 am
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಎಣ್ಣೆ ಪಾರ್ಟಿ!
ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಭದ್ರತಾ ಲೋಪ ಎದ್ದು ಕಂಡಿದೆ. ಸಾರ್ವಜನಿಕರಿಗೆ ನಿರ್ಬಂಧವಿರುವ ಕಳ್ಳಬೇಟೆ ತಡೆ ಶಿಬಿರದ (APC) ಮುಂಭಾಗದಲ್ಲೇ ಗುಂಡ್ಲುಪೇಟೆಯ ರೌಡಿ ಶೀಟರ್ ಸತೀಶ್ ಮತ್ತು ಆತನ ಸಂಗಡಿಗರು ಮದ್ಯದ ಪಾರ್ಟಿ ನಡೆಸಿದ್ದಾರೆ. ಸಾಮಾನ್ಯ ರೈತರಿಗೆ ದಂಡ ಹಾಕುವ ಅರಣ್ಯ ಇಲಾಖೆ, ಕ್ರಿಮಿನಲ್ಗಳ ಈ ಕೃತ್ಯಕ್ಕೆ ಮೂಕಪ್ರೇಕ್ಷಕನಾಗಿ ನಿಂತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
- Suraj Prasad SN
- Updated on: Jun 5, 2026
- 8:54 am
ಜೂ.1ರಿಂದ ಆ. 31ರವರೆಗೆ ದಾಂಡೇಲಿಗೆ ನೋ ಎಂಟ್ರಿ; ಸ್ಕೂಬಾ ಡೈವಿಂಗ್, ರ್ಯಾಫ್ಟಿಂಗ್ಗೆ ಬ್ರೇಕ್ ಹಾಕಿದ ಉತ್ತರ ಕನ್ನಡ ಡಿಸಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಗಾಲದ ಸುರಕ್ಷತೆಗಾಗಿ ಜೂನ್ 1 ರಿಂದ ಆಗಸ್ಟ್ 31 ರವರೆಗೆ ಎಲ್ಲಾ ಜಲಸಾಹಸ ಕ್ರೀಡೆಗಳನ್ನು ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಈ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಸ್ಕೂಬಾ ಡೈವಿಂಗ್, ಬೋಟಿಂಗ್, ರಾಫ್ಟಿಂಗ್ ಸೇರಿ ಎಲ್ಲ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ಪ್ರವಾಸಿಗರ ಪ್ರಾಣ ರಕ್ಷಣೆ ಇದರ ಮುಖ್ಯ ಉದ್ದೇಶವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.
- Suraj Prasad SN
- Updated on: May 31, 2026
- 4:36 pm
ವರುಣಾರ್ಭಟಕ್ಕೆ ಮನೆಗಳಿಗೆ ನುಗ್ಗಿದ ನೀರು: ದವಸ ಧಾನ್ಯಗಳು ಸೇರಿ ಗೃಹೋಪಯೋಗಿ ವಸ್ತುಗಳು ಜಲಾಹುತಿ
ಚಾಮರಾಜನಗರದ ಪೊನ್ನಾಚಿ ಗ್ರಾಮದಲ್ಲಿ ಭಾರಿ ಮಳೆಗೆ ಮನೆಗಳಿಗೆ ನೀರು ನುಗ್ಗಿದ್ದು, ದವಸ ಧಾನ್ಯಗಳು ಜಲಾಹುತಿಯಾಗಿವೆ. ಕಾಲುವೆ ಸ್ವಚ್ಛಗೊಳಿಸದ ಗ್ರಾಮ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಶಂಕರ, ಶಿವಮ್ಮ ಎಂಬುವರ ಮನೆಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ.
- Suraj Prasad SN
- Updated on: May 31, 2026
- 8:12 am