ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.
ಈ ಸಮಸ್ಯೆಗಳ ಬಗೆಹರಿಸದಿದ್ದರೆ ಮತದಾನ ಬಹಿಷ್ಕರಿಸುತ್ತೇವೆ: ಕಾಡು ಮಕ್ಕಳ ಆಕ್ರೋಶ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಾಮಯ್ಯನಪುರ ಗ್ರಾಮಸ್ಥರು ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಕಾಡು ಪ್ರಾಣಿಗಳ ಕಾಟದಿಂದ ರೋಸಿ ಹೋಗಿದ್ದಾರೆ. ರಸ್ತೆ, ಕುಡಿಯುವ ನೀರಿನ ಸಮಸ್ಯೆಗಳಿಂದಾಗಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಬೇಡಿಕೆಗಳು ಈಡೇರದಿದ್ದರೆ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಕ್ಕಳ ಶಾಲಾ ಸಂಕಷ್ಟ ಮತ್ತು ಪ್ರತಿನಿಧಿಗಳ ನಿರ್ಲಕ್ಷ್ಯ ಜನರ ಅಸಮಾಧಾನಕ್ಕೆ ಕಾರಣವಾಗಿದೆ.
- Suraj Prasad SN
- Updated on: Dec 11, 2025
- 1:56 pm
ಬರೋಬ್ಬರಿ ಒಂದು ಕಿಲೋ ಮೀಟರ್ ಈಜಿಕೊಂಡೇ ಬಂದ ಒಂಟಿ ಸಲಗ!
ಚಾಮರಾಜನಗರದ ಸುವರ್ಣಾವತಿ ಜಲಾಶಯ ಹಿನ್ನಿರಿನಲ್ಲಿ ಒಂದು ಕಿಲೋಮೀಟರ್ ದೂರ ಒಂಟಿ ಸಲಗ ಈಜಿ ಬಂದಿದೆ. ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದ ಆನೆಯ ಈಜಾಟ ಸ್ಥಳೀಯರನ್ನು ಅಚ್ಚರಿಗೊಳಿಸಿದೆ. ರೈತರು ಆತಂಕಗೊಂಡಿದ್ದು, ಆನೆಯನ್ನು ತಕ್ಷಣ ಕಾಡಿಗಟ್ಟಲು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಸ್ಥಳೀಯರ ಮೊಬೈಲ್ ಕ್ಯಾಮರದಲ್ಲಿ ಒಂಟಿ ಸಲಗದ ಓಡಾಟದ ದೃಶ್ಯ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
- Suraj Prasad SN
- Updated on: Dec 10, 2025
- 10:29 am
ಚಾಮರಾಜನಗರ: ಟಿವಿ9 ವರದಿಯ ಬಿಗ್ ಇಂಪ್ಯಾಕ್ಟ್; ಪಚ್ಚೆದೊಡ್ಡಿ ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಜಿಲ್ಲಾಧಿಕಾರಿ
ಚಾಮರಾಜನಗರದ ಪಚ್ಚೆದೊಡ್ಡಿ ಗ್ರಾಮದ ವಿದ್ಯಾರ್ಥಿಗಳು ಪ್ರತಿದಿನ 14 ಕಿ.ಮೀ ಕಾಡಿನಲ್ಲಿ ನಡೆದು ಶಾಲೆಗೆ ಹೋಗುತ್ತಿದ್ದರು. ಕಾಡು ಪ್ರಾಣಿಗಳ ಹಾವಳಿಯಿಂದ ಭಯಭೀತರಾಗಿದ್ದ ವಿದ್ಯಾರ್ಥಿಗಳು ಸಿಎಂಗೆ ಪತ್ರ ಬರೆದಿದ್ದರು. ಟಿವಿ9 ವರದಿ ನಂತರ ಎಚ್ಚೆತ್ತ ಜಿಲ್ಲಾಧಿಕಾರಿ ಶಿಲ್ಪಾನಾಗ್, ಅರಣ್ಯ ಇಲಾಖೆ ಮೂಲಕ ವಿದ್ಯಾರ್ಥಿಗಳಿಗೆ ಸುರಕ್ಷಿತ ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದಾರೆ.
- Suraj Prasad SN
- Updated on: Dec 10, 2025
- 10:13 am
ಚಾಮರಾಜನಗರ: ಕಾಂಗ್ರೆಸ್ ಯುವ ಮುಖಂಡನಿಗೆ ಚಾಕು ಇರಿತ, ಆಗಿದ್ದೇನು?
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಯುವ ಮುಖಂಡನಿಗೆ ವ್ಯಕ್ತಿಯೋರ್ವ ಚಾಕುವಿನಿಂದ ಇರಿದಿರುವಂತಹ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಈ ವೇಳೆ ಚಾಕು ಇರಿಯಲಾಗಿದೆ. ಸದ್ಯ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.
- Suraj Prasad SN
- Updated on: Dec 3, 2025
- 3:17 pm
ಚಾಮರಾಜನಗರ: 40ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಗ್ರಾಮಕ್ಕೆ ಲಗ್ಗೆ, ಬೆಚ್ಚಿಬೀಳಿಸುವ ವಿಡಿಯೋ ಇಲ್ಲಿದೆ ನೋಡಿ
ಚಾಮರಾಜನಗರ ಜಿಲ್ಲೆಯ ತಮಿಳುನಾಡು ಗಡಿ ಭಾಗದ ರೈತರು ಕಾಡಾನೆ ಭೀತಿಯಿಂದ ಜಮೀನುಗಳಿಗೆ ತೆರಳದೆ ಮನೆಯಲ್ಲೇ ಉಳಿಯುವಂತಾಗಿದೆ. ಅರಳವಾಡಿ ಹಾಗೂ ತಾಳವಾಡಿ ಗ್ರಾಮಗಳ ಬಳಿ 40ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿದ್ದು, ರೈತರನ್ನು ಬೆಚ್ಚಿಬೀಳಿಸಿದೆ. ಕಾಡಾನೆ ಹಿಂಡು ಗ್ರಾಮದಲ್ಲಿ ಸಂಚರಿಸುತ್ತಿರುವ ಭಯಾನಕ ವಿಡಿಯೋ ಇಲ್ಲಿದೆ ನೋಡಿ.
- Suraj Prasad SN
- Updated on: Dec 3, 2025
- 8:14 am
ಮೆದುಳು ತಿನ್ನೋ ಅಮೀಬಾ ವೈರಸ್: ಚಾಮರಾಜನಗರದಲ್ಲಿ ಹೈ ಅಲರ್ಟ್, ಜಾಗೃತಿ ಕಾರ್ಯ
ಕೇರಳದಲ್ಲಿ ಅಮೀಬಾ ವೈರಸ್ ಪ್ರಕರಣಗಳ ಹಿನ್ನೆಲೆಯಲ್ಲಿ, ಚಾಮರಾಜನಗರ ಜಿಲ್ಲಾ ಆರೋಗ್ಯ ಇಲಾಖೆ ಗಡಿಭಾಗದಲ್ಲಿ ಹೈ ಅಲರ್ಟ್ ಘೋಷಿಸಿದೆ. ಗುಂಡ್ಲುಪೇಟೆ ಚೆಕ್ಪೋಸ್ಟ್ನಲ್ಲಿ ಶಬರಿಮಲೆ ಯಾತ್ರಾರ್ಥಿಗಳಿಗೆ ರೋಗದ ಕುರಿತು ಜಾಗೃತಿ ಮೂಡಿಸಿ, ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮತ್ತು ಸ್ವಚ್ಛತೆ ಕಾಪಾಡುವ ಮಾರ್ಗಸೂಚಿಗಳನ್ನು ವಿತರಿಸಲಾಗುತ್ತಿದೆ.
- Suraj Prasad SN
- Updated on: Nov 24, 2025
- 9:03 am
ಚಾಮರಾಜನಗರದಲ್ಲಿ ಮತ್ತೆ ಆಕ್ಟೀವ್ ಆಯ್ತಾ ನಟೋರಿಯಸ್ ಕೇರಳಿಯನ್ ಗ್ಯಾಂಗ್?; ಕೆಜಿಗಟ್ಟಲೆ ಚಿನ್ನ ದರೋಡೆ
ಚಾಮರಾಜನಗರದ ಬಂಡೀಪುರದಲ್ಲಿ ನ. 20ರಂದು ಆಭರಣ ತಯಾರಕ ವಿನು ಅವರ ಕಾರನ್ನು ಅಡ್ಡಗಟ್ಟಿ, 1.3 ಕೆಜಿಗೂ ಹೆಚ್ಚು ಚಿನ್ನ ದರೋಡೆ ಮಾಡಲಾಗಿದೆ. ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಕಾರನ್ನು ತಡೆದು ಚಿನ್ನದೊಂದಿಗೆ ಆರೋಪಿಗಳು ಪರಾರಿಯಾಗಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕೇರಳದ ಗ್ಯಾಂಗ್ವೊಂದು ಪೂರ್ವನಿಯೋಜಿತ ಕೃತ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
- Suraj Prasad SN
- Updated on: Nov 23, 2025
- 8:56 am
ಚಾಮರಾಜನಗರ: ಸಾಲ ವಾಪಸ್ ಕೇಳಿದ್ದಕ್ಕೆ ವೃದ್ಧನ ಕೊಲೆ ಮಾಡಿದ ಆರೋಪ, ಮೂವರ ಬಂಧನ
ಚಾಮರಾಜನಗರದ ಗುಂಡ್ಲುಪೇಟೆ ಹೆದ್ದಾರಿ ಬಳಿ ವೃದ್ಧ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಲ ಮರುಪಾವತಿಸುವಂತೆ ಕೇಳಿದ್ದಕ್ಕಾಗಿ ಸಾಲಗಾರ ವೃದ್ಧನನ್ನು ಹತ್ಯೆಗೈದಿದ್ದು, ಚಿನ್ನಾಭರಣವನ್ನೂ ದೋಚಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಪೊಲೀಸರು ಬಂಧಿತರಿಂದ ಚಿನ್ನ ವಶಪಡಿಸಿಕೊಂಡಿದ್ದು, ಕೊಲೆಗಾರರ ವಿಚಾರಣೆ ಮುಂದುವರೆದಿದೆ.
- Suraj Prasad SN
- Updated on: Nov 14, 2025
- 12:42 pm
‘ಎಐ’ ಹುಲಿ ಹಾವಳಿಗೆ ಜನ ಹೈರಾಣ: ಕಿಡಿಗೇಡಿಗಳಿಗೆ ಅರಣ್ಯ ಇಲಾಖೆ ಖಡಕ್ ವಾರ್ನಿಂಗ್
ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿ ಆತಂಕದ ನಡುವೆ, ಎಐ ನಿರ್ಮಿತ ಸುಳ್ಳು ಹುಲಿ ವಿಡಿಯೋಗಳು ಸಾರ್ವಜನಿಕರಲ್ಲಿ ಅನಗತ್ಯ ಭೀತಿ ಹುಟ್ಟಿಸುತ್ತಿವೆ. ಇಂತಹ ವಿಡಿಯೋಗಳನ್ನು ಹಂಚುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ. ಇದರಿಂದ ಇಲಾಖೆಯ ಕಾರ್ಯನಿರ್ವಹಣೆಗೂ ತೊಂದರೆಯಾಗುತ್ತಿದ್ದು, ಜನ ಸಾಮಾನ್ಯರು ಆತಂಕಗೊಳ್ಳುತ್ತಿದ್ದಾರೆ. ಹೀಗಾಗಿ ಕಿಡಿಗೇಡಿಗಳ ವಿರುದ್ಧ ಕ್ರಮ ಅಗತ್ಯ ಎಂದು ಇಲಾಖೆ ಹೇಳಿದೆ.
- Suraj Prasad SN
- Updated on: Nov 13, 2025
- 12:03 pm
ಕರ್ನಾಟಕದಲ್ಲಿ ಮತ್ತೊಂದು ಅಮಾನವೀಯ ಕೃತ್ಯ: ಮಾತು ಬಾರದ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ
ಕರ್ನಾಟಕದಲ್ಲಿ ಮತ್ತೊಂದು ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ಮಾತು ಬಾರದ, ಕಿವಿ ಕೇಳಿಸದ ವಿಶೇಷ ಚೇತನ ವಿದ್ಯಾರ್ಥಿನಿಗೆ ಶಿಕ್ಷಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಗೆ ಮಾತು ಬರದಿದ್ದನ್ನೇ ಬಂಡವಾಳ ಮಾಡಿಕೊಂಡೇ ಶಿಕ್ಷಕ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- Suraj Prasad SN
- Updated on: Nov 4, 2025
- 8:56 pm
ಚಾಮರಾಜನಗರ: ಅಂಬೇಡ್ಕರ್ ಭಾವಚಿತ್ರ ಹರಿದುಹಾಕಿ ಬುದ್ಧನ ಪ್ರತಿಮೆ ಧ್ವಂಸ, ಪೆಂಡಾಲ್ ಮಂಜ ಅರೆಸ್ಟ್
ಚಾಮರಾಜನಗರ ತಾಲ್ಲೂಕಿನ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಇತ್ತೀಚೆಗೆ ಅಂಬೇಡ್ಕರ್ ಭಾವಚಿತ್ರ ಹರಿದುಹಾಕಿ ಮತ್ತು ಬುದ್ಧನ ಪ್ರತಿಮೆ ಧ್ವಂಸ ಮಾಡಿದ್ದ ಪ್ರಕರಣ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಸದ್ಯ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಅಕ್ಟೋಬರ್ 23ರಂದು ಘಟನೆ ನಡೆದಿತ್ತು. ಸದ್ಯ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ.
- Suraj Prasad SN
- Updated on: Nov 4, 2025
- 5:27 pm
ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟ ತೀವ್ರ, ಪ್ರಮುಖ ಭಾಗದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
ಬೆಳಗಾವಿ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಕಬ್ಬಿಗೆ ಉತ್ತಮ ದರ ನಿಗದಿ ಹಾಗೂ ಬಾಕಿ ಪಾವತಿಗೆ ಆಗ್ರಹಿಸಿ ಅಥಣಿ, ಗೋಕಾಕ್ ಸೇರಿ ಹಲವೆಡೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಂದ್ಗೆ ಕರೆ ನೀಡಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಚಿವರು ರೈತರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ.
- Suraj Prasad SN
- Updated on: Nov 4, 2025
- 12:38 pm