Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್

Author - TV9 Kannada

surajprasad.narendra@tv9.com

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ತಲೆಗೆ ತೆಂಗಿನಕಾಯಿ ಒಡೆಸಿಕೊಳ್ಳುವ ವಿಶಿಷ್ಟ ರೀತಿ ಹಬ್ಬ ನೋಡಿದ್ದೀರಾ?

ತಲೆಗೆ ತೆಂಗಿನಕಾಯಿ ಒಡೆಸಿಕೊಳ್ಳುವ ವಿಶಿಷ್ಟ ರೀತಿ ಹಬ್ಬ ನೋಡಿದ್ದೀರಾ?

ಚಾಮರಾಜನಗರದ ಕಮರವಾಡಿ ಗ್ರಾಮದ ಮೂಗುಮಾರಮ್ಮ ಹಬ್ಬದಲ್ಲಿ, ಹರಕೆ ಹೊತ್ತ ಭಕ್ತರು ತಮ್ಮ ತಲೆ ಮೇಲೆ ತೆಂಗಿನಕಾಯಿ ಒಡೆಸಿಕೊಳ್ಳುವ ವಿಶಿಷ್ಟ ಪದ್ಧತಿ ಇದೆ. ಯಾವುದೇ ಗಾಯವಾಗದೆ ತೆಂಗಿನಕಾಯಿ ಎರಡು ಭಾಗಗಳಾಗುತ್ತದೆ. ಈ ಪದ್ಧತಿಯು ತಲೆತಲಾಂತರಗಳಿಂದ ನಡೆದುಬಂದಿದ್ದು, ಭಕ್ತಿಯ ಪ್ರತೀಕವಾಗಿದೆ. ಮೂರು ದಿನಗಳ ಈ ಹಬ್ಬದಲ್ಲಿ ವಿವಿಧ ಪೂಜೆಗಳು ಮತ್ತು ಪಡಿತರ ಸಂಗ್ರಹಣೆ ನಡೆಯುತ್ತದೆ.

ಮದುವೆಗೆ ಹೆಣ್ಣು ಸಿಗ್ತಿಲ್ಲವೆಂದು ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ: ಆಮೇಲೇನಾಯ್ತು ನೋಡಿ

ಮದುವೆಗೆ ಹೆಣ್ಣು ಸಿಗ್ತಿಲ್ಲವೆಂದು ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ: ಆಮೇಲೇನಾಯ್ತು ನೋಡಿ

ಮದ್ಯಪಾನಿಗಳು ಕುಡಿದ ಮತ್ತಿನಲ್ಲಿ ಚರಂಡಿಯಲ್ಲಿ ಬೀಳುವುದು, ರಸ್ತೆಯಲ್ಲಿ ಮಲಗುವುದನ್ನು ನೋಡಿದ್ದೇವೆ. ಆದರೆ, ಇಲ್ಲೊಬ್ಬ ವ್ಯಕ್ತಿ ಕುಡಿದು ಹೈಟೆನ್ಷನ್ ವಿದ್ಯುತ್ ಕಂಬ ಏರಿದ್ದಾನೆ. ಇಳಿಯಲು ಯತ್ನಿಸುವಾಗ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾನೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಟಿ.ಸಿ.ಹುಂಡಿ ಎಂಬಲ್ಲ ಘಟನೆ ಸಂಭವಿಸಿದೆ.

ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಅಪಹಾಸ್ಯ: ಆತ್ಮಹತ್ಯೆಗೆ ಶರಣಾದ ಪತಿ ಪರಶಿವಮೂರ್ತಿ

ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಅಪಹಾಸ್ಯ: ಆತ್ಮಹತ್ಯೆಗೆ ಶರಣಾದ ಪತಿ ಪರಶಿವಮೂರ್ತಿ

ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿ ಕಿರುಕುಳಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಮದುವೆ ಬಳಿಕ ಕೂದಲು ಉದುರಿದ್ದಕ್ಕೆ ಪತ್ನಿ ಗಂಡನನ್ನು ಪದೇ ಪದೇ ನಿಂದಿಸಿದ್ದಾರೆ. ಇದರಿಂದ ಬೇಸತ್ತ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಕೂಡ ಬರೆದಿಟ್ಟಿದ್ದಾರೆ.

ಬಂಡೀಪುರ ಸಫಾರಿ: ಪ್ರವಾಸಿಗರ ಕಣ್ಣಿಗೆ ಬಿತ್ತು ಹುಲಿ ಮರಿ ತುಂಟಾಟದ ದೃಶ್ಯ

ಬಂಡೀಪುರ ಸಫಾರಿ: ಪ್ರವಾಸಿಗರ ಕಣ್ಣಿಗೆ ಬಿತ್ತು ಹುಲಿ ಮರಿ ತುಂಟಾಟದ ದೃಶ್ಯ

ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಫಾರಿಯಲ್ಲಿ ಪ್ರವಾಸಿಗರಿಗೆ ಹುಲಿ ಹಾಗೂ ಹುಲಿ ಮರಿಯ ದರ್ಶನವಾಗಿದೆ. ಹುಲಿ ಹಾಗೂ ಮರಿಯ ತುಂಟಾಟವನ್ನು ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಕಂಡುಬಂದ ಈ ದೃಶ್ಯವನ್ನು ವನ್ಯಜೀವಿ ಛಯಾಗ್ರಹಾಕ ಕಿರಣ್ ಕೊಳ್ಳೇಗಾಲ ಸೆರೆಹಿಡಿದಿದ್ದಾರೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿನ ನೀರಿನ ಸಮಸ್ಯೆಗೆ ಬಿತ್ತು ಬ್ರೇಕ್​

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿನ ನೀರಿನ ಸಮಸ್ಯೆಗೆ ಬಿತ್ತು ಬ್ರೇಕ್​

ಬಂಡೀಪುರ ರಾಷ್ಟ್ರೀಯ ಉದ್ಯಾನವನ ದೇಶದಲ್ಲಿ ಪ್ರಸಿದ್ದಿ ಪಡೆದ ಹುಲಿ ಸಂರಕ್ಷಿತಾರಣ್ಯವಾಗಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆ ನೀರಿನ ಸಮಸ್ಯೆ ತಲೆದೋರುತ್ತಿತ್ತು. ಈ ಬಾರಿ ಬಂಡೀಪುರದಲ್ಲಿ ಉತ್ತಮ ಮಳೆಯಾಗಿದ್ದ ಪರಿಣಾಮ ಕೆರೆಗಳಲ್ಲಿ ಇನ್ನೂ ಜೀವ ಜಲವಿದೆ. ಅಲ್ಲದೇ ಪ್ರಾಣಿಗಳಿಗೆ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದಾರೆ.

ಶಿರೂರು ಗುಡ್ಡ ಕುಸಿತದಲ್ಲಿ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಶ್ವಾನ ಉತ್ತರ ಕನ್ನಡ ಪೊಲೀಸ್ ಇಲಾಖೆಯ ನೆಚ್ಚಿನ ನಾಯಿ

ಶಿರೂರು ಗುಡ್ಡ ಕುಸಿತದಲ್ಲಿ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಶ್ವಾನ ಉತ್ತರ ಕನ್ನಡ ಪೊಲೀಸ್ ಇಲಾಖೆಯ ನೆಚ್ಚಿನ ನಾಯಿ

ಕಳೆದ ವರ್ಷ ಮಳೆಗಾಲದಲ್ಲಿ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡ ಕುಸಿತದಲ್ಲಿ 11 ಜನ ಮೃತಪಟ್ಟಿದ್ದರು. ಇದೇ ಗುಡ್ಡ ಕುಸಿತದಲ್ಲಿ ಲಕ್ಷ್ಮಣ್ ನಾಯ್ಕ್​ ಎನ್ನುವ ಹೋಟೆಲ್ ಮಾಲೀಕನ ಕುಟುಂಬ ಮೃತಪಟ್ಟಿತ್ತು. ಲಕ್ಷ್ಮಣ್ ನಾಯ್ಕ್​ ಕುಟುಂಬದವರು ಪ್ರೀತಿಯಿಂದ ಸಾಕಿದ್ದ ಶ್ವಾನ ಅಂದು ಅನಾಥವಾಗಿತ್ತು. ಇದೀಗ, ಆ ಶ್ವಾನ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗಿದೆ.

77 ಮಲೆಯ ಒಡೆಯ ಮಹದೇಶ್ವರನ ಬೆಟ್ಟದಲ್ಲಿ 300 ಲೀಟರ್ ಮದ್ಯ ಜಪ್ತಿ

77 ಮಲೆಯ ಒಡೆಯ ಮಹದೇಶ್ವರನ ಬೆಟ್ಟದಲ್ಲಿ 300 ಲೀಟರ್ ಮದ್ಯ ಜಪ್ತಿ

ಕಾನನದ ದಟ್ಟಾರಣ್ಯದ ನಡುವೆ ಇರುವ ದೇವಾಲಯವದು. ಪವಾಡ ಪುರಷನ ಪವಾಡಕ್ಕೆ ಬೆರಗಾಗಿ ಕೋಟ್ಯಾಂತರ ಭಕ್ತ ವೃಂದ ಹೊಂದಿರುವ ಪ್ರದೇಶವದು. 77 ಮಲೆಯ ಒಡೆಯನಾದ ಮಾದಪ್ಪನ ಪುಣ್ಯ ಸನ್ನಿಧಾನದಲ್ಲಿಗ ಕುಡುಟರದ್ದೇ ಹಾವಳಿಯಾಗಿದೆ. ಅಕ್ರಮ ಮದ್ಯ ಮಾರಾಟದಿಂದ ಮಾದಪ್ಪನ ಬೆಟ್ಟದ ಪವಿತ್ರ್ಯಕ್ಕೆ ಧಕ್ಕೆಯಾಗಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ಆಗುತ್ತಿದ್ದು, ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಚಾಮರಾಜನಗರ: ಬಂಡೀಪುರಕ್ಕೆ ತೆರಳಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ

ಚಾಮರಾಜನಗರ: ಬಂಡೀಪುರಕ್ಕೆ ತೆರಳಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ

ಬೆಂಗಳೂರಿನ ಜೆ. ನಿಶಾಂತ್, ಅವರ ಪತ್ನಿ ಚಂದನಾ ಮತ್ತು 10 ವರ್ಷದ ಮಗು ಬಂಡೀಪುರದ ಬಳಿ ನಾಪತ್ತೆಯಾಗಿದ್ದಾರೆ. ಕಂಟ್ರಿ ಕ್ಲಬ್ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ನಿಶಾಂತ್ ಬಿಬಿಎಂಪಿ ನೌಕರ ಎಂದು ನಕಲಿ ಐಡಿಯಿಂದ ರೂಮ್ ಬುಕ್ ಮಾಡಿದ್ದರು. ಪೊಲೀಸರು ತಮಿಳುನಾಡು, ಕೇರಳ ಮತ್ತು ಮೈಸೂರಿನಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ಮೋದಿ ಹಾಡಿ ಹೊಗಳಿದ ಸೋಲಿಗರ ಗ್ರಾಮಕ್ಕೆ ಸ್ವಾತಂತ್ರ್ಯ ದೊರೆತು 76 ವರ್ಷಗಳ ನಂತರ ವಿದ್ಯತ್ ಸಂಪರ್ಕ

ಮೋದಿ ಹಾಡಿ ಹೊಗಳಿದ ಸೋಲಿಗರ ಗ್ರಾಮಕ್ಕೆ ಸ್ವಾತಂತ್ರ್ಯ ದೊರೆತು 76 ವರ್ಷಗಳ ನಂತರ ವಿದ್ಯತ್ ಸಂಪರ್ಕ

ಚಾಮರಾಜನಗರ ಜಿಲ್ಲೆಯ ಪಾಲಾರ್ ಗ್ರಾಮದ ಜನರು ರಾತ್ರಿಯಾಗುತ್ತಿದ್ದಂತೆ ಮನೆ ಸೇರಿಕೊಳ್ಳಬೇಕಿತ್ತು. ರಾತ್ರಿ ಅಡುಗೆ, ಊಟ, ಮಕ್ಕಳ ಓದು ಎಲ್ಲವು ಬೆಂಕಿಯ ಬೆಳಕಲ್ಲೇ ನಡೆಸಬೇಕಿತ್ತು. ಹೊರಗೆ ಬಂದರೆ ಕಾಡು ಪ್ರಾಣಿಗಳ ಕಾಟ ಬೇರೆಯಿತ್ತು. ಇದೀಗ ಈ ಎಲ್ಲ ಸಮಸ್ಯೆಗಳಿಗೆ ಮುಕ್ತಿ ಸಿಕ್ಕಿದೆ. ಟಿವಿ9 ವರದಿ ಫಲ ಕೊಟ್ಟಿದ್ದು,ಹಾಡಿ ಜನರ ಬದುಕಲ್ಲಿ ಬೆಳಕು ಹರಿದಿದೆ.ಈ ಕುರಿತು ಒಂದು ಸ್ಟೋರಿ ಇಲ್ಲಿದೆ ನೋಡಿ.

ಹಣಕಾಸಿನ ಕೊರತೆಯಿಂದ ಕೆಲಸ ಮಾಡಲು ಕಷ್ಟ: ಆರ್ಥಿಕ ಕೊರತೆ ಬಗ್ಗೆ ಒಪ್ಪಿಕೊಂಡ್ರಾ ಕಾಂಗ್ರೆಸ್ ಶಾಸಕ?

ಹಣಕಾಸಿನ ಕೊರತೆಯಿಂದ ಕೆಲಸ ಮಾಡಲು ಕಷ್ಟ: ಆರ್ಥಿಕ ಕೊರತೆ ಬಗ್ಗೆ ಒಪ್ಪಿಕೊಂಡ್ರಾ ಕಾಂಗ್ರೆಸ್ ಶಾಸಕ?

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸದ ಮೇಲೆ ಒತ್ತಡ ಉಂಟಾಗಿದೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಹೇಳಿದ್ದಾರೆ. ಆ ಮೂಲಕ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದಲ್ಲಿ ತೀವ್ರ ಹಣಕಾಸಿನ ಕೊರತೆ ಬಗ್ಗೆ ಒಪ್ಪಿಕೊಂಡಿದ್ರಾ ಎಂಬ ಅನುಮಾನಕ್ಕೆ ಕಾರಣವಾಗಿದೆ.

ಚಾಮರಾಜನಗರ: ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಅಪಘಾತ, 5 ಸಾವು

ಚಾಮರಾಜನಗರ: ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಅಪಘಾತ, 5 ಸಾವು

ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮಂಡ್ಯ ಮೂಲದ ಐದು ಮಂದಿ ಕಾರಿನಲ್ಲಿದ್ದವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಟಿಪ್ಪರ್ ಡಿಕ್ಕಿಯಾಗಿ ರಸ್ತೆ ಪಕ್ಕಕ್ಕೆ ಉರುಳಿಬಿದ್ದಿದೆ. ಪೊಲೀಸರು ಅಪಘಾತದ ತನಿಖೆ ನಡೆಸುತ್ತಿದ್ದಾರೆ.

ಮಹಾ ಶಿವರಾತ್ರಿ: ಹೂ, ಹಣ್ಣು, ತರಕಾರಿಗಳಿಂದ ಮಾದಪ್ಪನ ದೇಗುಲ ಅಲಂಕಾರ

ಮಹಾ ಶಿವರಾತ್ರಿ: ಹೂ, ಹಣ್ಣು, ತರಕಾರಿಗಳಿಂದ ಮಾದಪ್ಪನ ದೇಗುಲ ಅಲಂಕಾರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ವಿಜೃಂಭಣೆಯ ಜಾತ್ರೆ ನಡೆಯುತ್ತಿದೆ. ಲಕ್ಷಾಂತರ ಭಕ್ತರು ದೇವರ ದರ್ಶನ ಪಡೆಯಲು ಆಗಮಿಸಿದ್ದಾರೆ. ಮಾದಪ್ಪನ ದೇಗುಲವನ್ನು ಅಲಂಕರಿಸಲಾಗಿದ್ದು, ವಿವಿಧ ಪೂಜೆಗಳು ನಡೆಯುತ್ತಿವೆ. ಉರುಳು ಸೇವೆ, ಪಂಜಿನ ಸೇವೆ, ಹುಲಿ ವಾಹನ, ಬಸವ ವಾಹನ ಮುಂತಾದ ಉತ್ಸವಗಳು ಜರುಗುತ್ತಿವೆ. ಚಾಮರಾಜನಗರ ಜಿಲ್ಲೆಯಲ್ಲಿ ಈ ಜಾತ್ರೆ ಮಹತ್ವದ ಧಾರ್ಮಿಕ ಕಾರ್ಯಕ್ರಮವಾಗಿದೆ.

ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್