ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.
ವಿಪಕ್ಷ ನಾಯಕ ಆರ್. ಅಶೋಕ್ಗೆ ಚಾಮರಾಜನಗರದಲ್ಲಿ ರೈತರಿಂದ ಘೇರಾವ್
ಚಾಮರಾಜನಗರದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ರೈತರು ಸುತ್ತುವರಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದಲ್ಲಿ ಬರ ಅಧ್ಯಯನ ನಡೆಸದಿರುವುದಕ್ಕೆ ಮತ್ತು ರೈತರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಸರ್ಕಾರಕ್ಕೆ ತಲುಪಿಸದಿರುವುದಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಸೇರಿದಂತೆ ಹಲವು ರೈತರು ಅಶೋಕ್ ಅವರ ವಾಹನವನ್ನು ತಡೆದು, ಬರ ಘೋಷಣೆ ಮತ್ತು ಪ್ರತಿ ಎಕರೆಗೆ 50,000 ರೂಪಾಯಿ ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹಿಸಿದ್ದಾರೆ.
- Suraj Prasad SN
- Updated on: Jul 13, 2026
- 4:16 pm
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ಚಾಮರಾಜನಗರದಲ್ಲಿ ಅರಣ್ಯಾಧಿಕಾರಿಗಳಿಗೆ ರೈತರ ಖಡಕ್ ಎಚ್ಚರಿಕೆ
ಚಾಮರಾಜನಗರದಲ್ಲಿ ಹೆಚ್ಚುತ್ತಿರುವ ಹುಲಿ ಹಾಗೂ ಚಿರತೆ ಹಾವಳಿಯಿಂದ ಬೇಸತ್ತ ರೈತರು, ಡಿಸಿಎಫ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಕಾಡುಪ್ರಾಣಿಗಳ ಸೆರೆಗೆ ತಕ್ಷಣ ಕೂಂಬಿಂಗ್ ಕಾರ್ಯಾಚರಣೆ ನಡೆಸುವಂತೆ ಆಗ್ರಹಿಸಿದ ರೈತರು, ಅರಣ್ಯ ಇಲಾಖೆಯ ವೈಜ್ಞಾನಿಕ ನಿರ್ವಹಣೆಯ ಕೊರತೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯ ಸಿಗುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ.
- Suraj Prasad SN
- Updated on: Jul 13, 2026
- 2:49 pm
ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಕ್ಕೆ ಟಾರ್ಚರ್: ಕಾಡಿನ ಮಕ್ಕಳಿಗೆ ಮನೆ ಕಟ್ಟಲು ಬಿಡದೆ ಅರಣ್ಯ ಇಲಾಖೆಯಿಂದ ಕಿರುಕುಳ ಆರೋಪ
Chamarajanagar News: ಲೋಕಾಯುಕ್ತಕ್ಕೆ ದೂರು ನೀಡಿದ ದ್ವೇಷಕ್ಕಾಗಿ ಚಾಮರಾಜನಗರದ ಪಾಲಾರ್ ಹಾಡಿಯ ಆದಿವಾಸಿ ಸೋಲಿಗರಿಗೆ ಮನೆ ಕಟ್ಟಿಕೊಳ್ಳಲು ಬಿಡದೆ ಅರಣ್ಯ ಇಲಾಖೆ ಸಿಬ್ಬಂದಿ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಾಡಿ ಜನತೆಗೆ ತೊಂದರೆ ಕೊಡದಂತೆ ಸ್ವತಃ ಜಿಲ್ಲಾಧಿಕಾರಿ ಹಾಗೂ ಸಂಸದ ಸುನೀಲ್ ಬೋಸ್ ಸೂಚಿಸಿದ್ದು, ಮನೆ ಕಟ್ಟಿಕೊಳ್ಳಲು ಅವಕಾಶ ನೀಡುವಂತೆ ತಿಳಿಸಿದ್ದರು. ಹೀಗಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿಯ ಕಿರುಕುಳ ಮಾತ್ರ ತಪ್ಪಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
- Suraj Prasad SN
- Updated on: Jul 5, 2026
- 9:19 am
Chamarajanagar: ಮೂರ್ನಾಲ್ಕು ತಿಂಗಳಿನಿಂದ 400ಕ್ಕೂ ಹೆಚ್ಚು ಮಂದಿಗೆ ಸಿಗ್ತಿಲ್ಲ ವೃದ್ಧಾಪ್ಯ ವೇತನ
ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ 400ಕ್ಕೂ ಹೆಚ್ಚು ವಯೋವೃದ್ಧರು ನಾಲ್ಕು ತಿಂಗಳಿಂದ ವೃದ್ಧಾಪ್ಯ ವೇತನ, ವಿಧವಾ ವೇತನವಿಲ್ಲದೆ ಕಷ್ಟಪಡುತ್ತಿದ್ದಾರೆ. ಕಚೇರಿಗಳಿಗೆ ಅಲೆದರೂ ಪ್ರಯೋಜನವಾಗದೆ, ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಅಧಿಕಾರಿಗಳು ತಕ್ಷಣ ಸ್ಪಂದಿಸಿ ಪಿಂಚಣಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಸಂತ್ರಸ್ತರು ‘ಟಿವಿ9’ ಜತೆ ಅಳಲು ತೋಡಿಕೊಂಡಿದ್ದಾರೆ.
- Suraj Prasad SN
- Updated on: Jul 1, 2026
- 9:14 am
ಚಾಮರಾಜನಗರದಲ್ಲಿ ಭೀಕರ ಅಪಘಾತ: ಸಾರಿಗೆ ಬಸ್ ಪಲ್ಟಿಯಾಗಿ ಇಬ್ಬರು ಸಾವು; 67 ಪ್ರಯಾಣಿಕರಿಗೆ ಗಾಯ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿ ಸಂಭವಿಸಿದ ಭೀಕರ ಸಾರಿಗೆ ಬಸ್ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 67 ಮಂದಿ ಗಾಯಗೊಂಡಿರುವಂತಹ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.
- Suraj Prasad SN
- Updated on: Jun 29, 2026
- 7:33 pm
ಸಾಲು ಸಾಲು ರಜೆ ಎಫೆಕ್ಟ್: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭಕ್ತರು ಮತ್ತು ಪ್ರವಾಸಿಗರ ಸಾಗರವೇ ಹರಿದುಬಂದಿದೆ. ಶುಕ್ರವಾರವೇ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಪ್ರವಾಸಿಗರು ಗೋಪಾಲಸ್ವಾಮಿ ದೇವರ ದರ್ಶನ ಪಡೆದು, ಬೆಟ್ಟದ ಮೇಲಿನ ಆಹ್ಲಾದಕರ ಹವಾಮಾನ ಹಾಗೂ ಹಸಿರಿನ ಪ್ರಕೃತಿ ಸೌಂದರ್ಯವನ್ನು ಸವಿದು ಸಂಭ್ರಮಿಸಿದರು.
- Suraj Prasad SN
- Updated on: Jun 26, 2026
- 2:51 pm
ಏಕಾಏಕಿ ಚಿರತೆ ದಾಳಿ: ಕುರಿ ಮೇಯಿಸುತ್ತಿದ್ದ ಆದಿವಾಸಿ ಮಹಿಳೆ ಬದುಕಿದ್ದೇ ಪವಾಡ!
Chamarajanagara News: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಹಾಡಿಯಲ್ಲಿ ಚಿರತೆ ಏಕಾಏಕಿ ದಾಳಿ ನಡೆಸಿದ್ದು ಕುರಿ ಮೇಯಿಸುತ್ತಿದ್ದ ಆದಿವಾಸಿ ಮಹಿಳೆ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಜನವಸತಿ ಪ್ರದೇಶಗಳಿಗೆ ಮೇಲಿಂದ ಮೇಲೆ ವನ್ಯ ಜೀವಿಗಳು ಲಗ್ಗೆ ಇಡುತ್ತಿರವ ಕಾರಣಕ್ಕೆ ಜಿಲ್ಲೆಯ ಜನರು ಕಂಗಾಲಾಗಿರುವ ನಡುವೆಯೇ ನಡೆದ ಮತ್ತೊಂದು ಘಟನೆ ಆತಂಕ ಇಮ್ಮಡಿಗೊಳಿಸಿದೆ.
- Suraj Prasad SN
- Updated on: Jun 24, 2026
- 11:55 am
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ: ಹೋಮ್ ಗಾರ್ಡ್ ಕಾರು ಜಖಂ, ಅಂಗಡಿ ಪುಡಿ!
ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಬಿಳಿಗಿರಿರಂಗನಾಥಸ್ವಾಮಿ ದೇವಾಲಯದ ಆವರಣಕ್ಕೆ ರಾತ್ರಿ ವೇಳೆ ಲಗ್ಗೆ ಇಟ್ಟ ಒಂಟಿ ಸಲಗವೊಂದು ತೀವ್ರ ಆಟಾಟೋಪ ನಡೆಸಿದೆ. ಕರ್ತವ್ಯ ನಿರತ ಹೋಮ್ ಗಾರ್ಡ್ ಒಬ್ಬರ ಕಾರನ್ನು ಜಖಂ ಮಾಡುವುದರ ಜೊತೆಗೆ ಪೆಟ್ಟಿ ಅಂಗಡಿಯೊಂದರ ಶೆಟರ್ ಅನ್ನು ಪುಡಿಪುಡಿ ಮಾಡಿದ್ದು, ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದ ಭಕ್ತಾದಿಗಳಲ್ಲಿ ಆತಂಕ ಮೂಡಿಸಿದೆ.
- Suraj Prasad SN
- Updated on: Jun 23, 2026
- 10:54 am
ಚಾಮರಾಜನಗರದಲ್ಲಿ ಗಣಿ ಧಣಿಗಳದ್ದೇ ಕಾರುಬಾರು: ಜಿಲ್ಲಾಧಿಕಾರಿ ಆದೇಶಕ್ಕೂ ಡೊಂಟ್ ಕೇರ್
ಚಾಮರಾಜನಗರದಲ್ಲಿ ಟಿಪ್ಪರ್ ಲಾರಿಗಳ ಹಾವಳಿ ಮಿತಿ ಮೀರಿದೆ. ಶಾಲಾ-ಕಾಲೇಜು ಅವಧಿಯಲ್ಲಿ ಲಾರಿಗಳ ಸಂಚಾರ ನಿರ್ಬಂಧವನ್ನು ಗಣಿ ಮಾಲೀಕರು ಉಲ್ಲಂಘಿಸುತ್ತಿದ್ದಾರೆ. ಇದರಿಂದ ಗ್ರಾಮಗಳಲ್ಲಿ ಧೂಳು, ಮಕ್ಕಳ ಆರೋಗ್ಯಕ್ಕೆ ಹಾನಿ ಮತ್ತು ಅಪಘಾತಗಳು ಹೆಚ್ಚಿವೆ. ಗುಂಡ್ಲುಪೇಟೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
- Suraj Prasad SN
- Updated on: Jun 22, 2026
- 8:17 pm
ದಶಕ ಕಳೆದರೂ ಸಿಗದ ರೇಷನ್ ಕಾರ್ಡ್; ಹಸಿವಿನಿಂದ ಕಣ್ಣೀರು ಇಡುತ್ತಿದ್ದಾರೆ ಆನೆ ದಿಂಬ ಹಾಡಿಯ ಆದಿವಾಸಿಗಳು!
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಸಮೀಪವಿರುವ ಆನೆ ದಿಂಬ ಹಾಡಿಯ ಆದಿವಾಸಿ ಸೋಲಿಗ ಜನಾಂಗದವರು ಕಳೆದ ಹತ್ತು ವರ್ಷಗಳಿಂದ ರೇಷನ್ ಕಾರ್ಡ್ ಸಿಗದೆ ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಿದ್ದಾರೆ. ಸಮಾಜದ ಮುಖ್ಯವಾಹಿನಿಗೆ ಬಂದರೂ ಮೂಲಭೂತ ಸೌಕರ್ಯಗಳಿಲ್ಲದೆ ಹಸಿವಿನಿಂದ ಕಣ್ಣೀರು ಇಡುತ್ತಿರುವ ಬಡ ಕುಟುಂಬಗಳು ಕರುಣಾಜನಕ ಸ್ಥಿತಿ ತಲುಪಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯವಹಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
- Suraj Prasad SN
- Updated on: Jun 22, 2026
- 12:12 pm
ಮೈಸೂರು ಮೃಗಾಲಯಕ್ಕೆ ಕಳಿಸಿದ್ದೇವೆ ಎಂದಿದ್ದ ನರಭಕ್ಷಕ ಚಿರತೆ ಹನೂರು ಕಾಡಿನಲ್ಲಿ ಪತ್ತೆ; ಅಧಿಕಾರಿಗಳ ವಿರುದ್ಧ ಸೋಲಿಗರು ಗರಂ
ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆಯು ನರಭಕ್ಷಕ ಚಿರತೆಯೊಂದನ್ನು ಗುಟ್ಟಾಗಿ ಬಿಟ್ಟಿರುವುದು ಆದಿವಾಸಿ ಸೋಲಿಗರು ಮತ್ತು ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ. ಕಾಲರ್ ಐಡಿ ಇರುವ ಈ ಚಿರತೆಯನ್ನು ಮೈಸೂರಿಗೆ ರವಾನಿಸಲಾಗಿದೆ ಎಂದು ಹೇಳಿದ್ದ ಅರಣ್ಯಾಧಿಕಾರಿಗಳು, ಸೂಕ್ಷ್ಮ ಪ್ರದೇಶದಲ್ಲಿ ಬಿಟ್ಟು ಅಪಾಯ ತಂದಿದ್ದಾರೆ. ಇದರಿಂದ ಜಾನುವಾರುಗಳಿಗೆ ನಷ್ಟ, ಜೀವಕ್ಕೆ ಅಪಾಯ ಎದುರಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
- Suraj Prasad SN
- Updated on: Jun 20, 2026
- 10:05 am
ದಾಖಲೆ ಬರೆದ ಮಾದಪ್ಪನ ಹುಂಡಿ: ಕೇವಲ 27 ದಿನದಲ್ಲಿ ಬರೋಬ್ಬರಿ 2.73 ಕೋಟಿ ಸಂಗ್ರಹ!
ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿದೆ. ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ.
- Suraj Prasad SN
- Updated on: Jun 18, 2026
- 10:00 am