ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.
ಕರ್ನಾಟಕದಲ್ಲಿ ಮುಂದುವರೆದ ಹೃದಯಾಘಾತ: ಇಂದು ಒಂದೇ ದಿನ 8 ಜನ ಸಾವು
ಕರ್ನಾಟಕ ರಾಜ್ಯದಲ್ಲಿ ಹೃದಯಾಘಾತದಿಂದ ಸಾವಿನ ಪ್ರಮಾಣ ಹೆಚ್ಚುತ್ತಿದೆ. ರವಿವಾರ (ಜು.06) ಒಂದೇ ದಿನ ಎಂಟು ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನ, ಚಿಕ್ಕಮಗಳೂರು, ಯಾದಗಿರಿ, ಹುಬ್ಬಳ್ಳಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯದ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ.
- Suraj Prasad SN
- Updated on: Jul 6, 2025
- 7:14 pm
ಚಾಮರಾಜನಗರ: ಕೊಡಸೋಗೆ ರಸ್ತೆಯಲ್ಲಿ18 ಕೋತಿಗಳ ಶವ ಪತ್ತೆ, ವಿಷಪ್ರಾಶನ ಶಂಕೆ
ವ್ಯಾಘ್ರಗಳ ಹತ್ಯಾಕಾಂಡದ ಕಹಿ ನೆನಪು ಇನ್ನೂ ಮಾಸಿಲ್ಲ. ಅಷ್ಟರಲ್ಲಾಗಲೇ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ಬಳಿ 18 ಕೋತಿಗಳ ಮೃತದೇಹ ಪತ್ತೆಯಾಗಿದೆ. ವಿಷವಿಕ್ಕಿ ಮಂಗಗಳನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹುಲಿಗಳಿಗೆ ವಿಷವಿಕ್ಕಿ ಹತ್ಯೆ ಮಾಡಿದ್ದು ದೃಢಪಟ್ಟಿದೆ. ಮಂಗಗಳಿಗೆ ಏನಾಯಿತು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
- Suraj Prasad SN
- Updated on: Jul 2, 2025
- 12:59 pm
ಚಾಮರಾಜನಗರ ಹುಲಿ ಹತ್ಯೆ ಪ್ರಕರಣ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ರಾಜ್ಯ ಸರ್ಕಾರ
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂದ ಪಟ್ಟಂತೆ ಅರಣ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರ ತಕ್ಕ ಮಟ್ಟಿಗೆ ಬಿಸಿ ಮುಟ್ಟಿದೆ. ‘ಟಿವಿ9’ ವರದಿ ಬೆನ್ನಲ್ಲೇ ಡಿಸಿಎಫ್, ಎಸಿಎಫ್ ಹಾಗೂ ಆರ್ಫ್ಒಗೆ ಕಡ್ಡಾಯ ರಜೆಯಲ್ಲಿ ತೆರಳುವಂತೆ ಪಿಸಿಸಿಎಫ್ ಆದೇಶ ಹೊರಡಿಸಿದ್ದಾರೆ.
- Suraj Prasad SN
- Updated on: Jul 1, 2025
- 11:45 am
ಚಾಮರಾಜನಗರ: ಹುಲಿ ಹಂತಕರು 3 ದಿನ ಅರಣ್ಯಾಧಿಕಾರಿಗಳ ಕಸ್ಟಡಿಗೆ
ಮಲೆ ಮಹದೇಶ್ವರ ವನ್ಯಧಾಮದಲ್ಲಿ ಒಂದಲ್ಲ ಎರಡಲ್ಲ ಐದು ಹುಲಿಗಳಿಗೆ ವಿಷವಿಕ್ಕಿ ಕೊಂದಿರುವುದು ಈಗಾಗಲೇ ಬಯಲಾಗಿದೆ. 4 ಮರಿಗಳ ಜತೆ ಒಂದು ತಾಯಿ ಹುಲಿಗೆ ವಿಷವಿಕ್ಕಿದ್ದ ಘಟನೆ ರಾಜ್ಯಾದ್ಯಂತ ಆಘಾತ ಮೂಡಿಸಿತ್ತು. ವ್ಯಾಘ್ರಗಳಿಗೆ ವಿಷವಿಕ್ಕಿ ಕೊಂದಿದ್ದ ಮೂವರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇದೀಗ ಮೂವರನ್ನು 3 ದಿನ ಅರಣ್ಯಾಧಿಕಾರಿಗಳ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.
- Suraj Prasad SN
- Updated on: Jun 29, 2025
- 7:42 am
ಚಾಮರಾಜನಗರದಲ್ಲಿ ವ್ಯಾಘ್ರಗಳ ಸಾವು ಕೇಸ್: ಮೂವರ ಬಂಧನ, ಹುಲಿಗಳು ಸತ್ತಿದ್ದರಿಂದ ಸಂತಸ ಪಟ್ಟಿದ್ದ ಆರೋಪಿಗಳು
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಮೂವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಹಸುವನ್ನು ಹುಲಿ ಕೊಂದಿದ್ದಕ್ಕೆ ಪ್ರತೀಕಾರವಾಗಿ ವಿಷ ಹಾಕಿದ್ದಾಗಿ ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಸದ್ಯ ಪೊಲೀಸರು ಆರೋಪಿಗಳನ್ನು ದೃಢಪಡಿಸಿದ್ದು, ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣ ಸಾಕಷ್ಟು ಸಂಚಲನ ಮೂಡಿಸಿತ್ತು.
- Suraj Prasad SN
- Updated on: Jun 28, 2025
- 11:50 am
ಚಾಮರಾಜನಗರ: ಐದು ಹುಲಿಗಳ ನಿಗೂಢ ಸಾವು ಬೆನ್ನಲ್ಲೇ ಮತ್ತೊಂದು ಹುಲಿ ಸಾವು
ಚಾಮರಾಜನಗರದ ಮೀಣ್ಯಂ ಅರಣ್ಯದಲ್ಲಿ ಮೃತಪಟ್ಟಿರೋ 5 ಹುಲಿಗಳ ಸಾವಿಗೆ ಕಾರಣ ವಿಷ ಪ್ರಾಶನ ಕಾರಣ ಅನ್ನೋದು ಈಗಾಗಲೇ ಬಯಲಾಗಿದೆ. ಈ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊಂದು ಹೆಣ್ಣು ಹುಲಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬಂಡೀಪುರದ ಗುಂಡ್ರೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ನಡೆದಿದೆ.
- Suraj Prasad SN
- Updated on: Jun 28, 2025
- 8:59 am
5 ಹುಲಿಗಳ ಅಂತ್ಯಕ್ರಿಯೆ: ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಚಾಮರಾಜನಗರದ ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಅನುಮಾನಾಸ್ಪದ ಸಾವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಒಂದೇ ದಿನದಲ್ಲಿ ಐದು ಹುಲಿ ಸಾವನ್ನಪ್ಪಿರುವುದು ದೇಶದಲ್ಲೇ ಮೊದಲು. ಹೀಗಾಗಿ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಚುರುಕುಗೊಳಿಸಿದೆ. ಇನ್ನು ಸಾವನ್ನಪ್ಪಿರುವ ಐದು ಹುಲಿಗಳ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ.
- Suraj Prasad SN
- Updated on: Jun 27, 2025
- 7:41 pm
ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅಸಹಜ ಸಾವು ಪ್ರಕರಣ: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಹುಲಿಗಳ ಮೃತದೇಹಗಳ ಬಳಿ ವಿಷಪ್ರಾಶನಗೊಂಡ ಹಸುವಿನ ಶವ ಕಂಡುಬಂದಿದೆ. ಅರಣ್ಯ ಇಲಾಖೆ ಐದು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಉನ್ನತ ಮಟ್ಟದ ತಂಡವನ್ನು ರಚಿಸಿದೆ. ಮರಣೋತ್ತರ ಪರೀಕ್ಷೆಯ ವರದಿ ನಿರೀಕ್ಷಿಸಲಾಗುತ್ತಿದೆ.
- Suraj Prasad SN
- Updated on: Jun 27, 2025
- 10:54 am
ಅಡುಗೆ ಸಿಬ್ಬಂದಿ ದಲಿತ ಮಹಿಳೆ ಕಾರಣಕ್ಕೆ ಶಾಲೆ ತೊರೆದ ಮಕ್ಕಳು: ಅಧಿಕಾರಿ ಭೇಟಿ ವೇಳೆ ಅಸಲಿಯತ್ತು ಬಯಲು
ಚಾಮರಾಜನಗರ ಜಿಲ್ಲೆಯ ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಕ ಮಾಡಿದ್ದಕ್ಕೆ ಪೋಷಕರು ತಮ್ಮ ಮಕ್ಕಳನ್ನು ಶಾಲೆ ತೊರೆಸಿ ಬೇರೆ ಶಾಲೆಗೆ ದಾಖಲಿಸುತ್ತಿದ್ದಾರೆ. 22 ಮಂದಿ ಮಕ್ಕಳಿದ್ದ ಶಾಲೆಯಲ್ಲಿ ಒಬ್ಬೇ ಒಬ್ಬ ವಿದ್ಯಾರ್ಥಿ ಇದ್ದಾನೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವರದಿ ಟಿವಿ9 ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಶಾಲೆಯತ್ತ ದೌಡಾಯಿಸುತ್ತಿದ್ದಾರೆ.
- Suraj Prasad SN
- Updated on: Jun 25, 2025
- 3:50 pm
ಚಾಮರಾಜನಗರದಲ್ಲಿ ಸರ್ಕಾರಿ ಶಾಲೆಯಲ್ಲಿ ಒಬ್ಬನೇ ವಿದ್ಯಾರ್ಥಿ: ಏನಾಯ್ತು ಈ ಕನ್ನಡ ಶಾಲೆ..?
ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ತಾಲೂಕಿನ ಹೊಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಉಳಿದಿದ್ದಾನೆ.ಪೋಷಕರು ಮಕ್ಕಳನ್ನು ಬೇರೆ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ. ಇದರಿಂದ ಶಾಲೆ ಮುಚ್ಚುವ ಹಂತಕ್ಕೆ ತಲುಪಿದೆ. ಸರ್ಕಾರ ಎಚ್ಚೆತ್ತು ಮುಚ್ಚುವ ಹಂತದಲ್ಲಿರುವ ಶಾಲೆಯನ್ನು ಉಳಿಸಬೇಕೆಂದು ಆಗ್ರಹ ವ್ಯಕ್ತವಾಗಿದೆ.
- Suraj Prasad SN
- Updated on: Jun 24, 2025
- 10:42 pm
ಮಾದಪ್ಪನ ಸನ್ನಿಧಿಯಲ್ಲಿ ಹೆಚ್ಚಾಯ್ತು ಗಾಂಜಾ ಘಾಟು: ಎಲ್ಲೆಂದರಲ್ಲಿ ಬಿದ್ದಿವೆ ಮದ್ಯದ ಪೌಚ್
ಏಳು ಮಲೆಯ ಒಡೆಯ ‘ಮುದ್ದು ಮಾಯ್ಕಾರ’ ಭಕ್ತರ ಆರಾಧ್ಯ ದೈವ ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ಗಾಂಜಾ ಘಮಲು ಹೆಚ್ಚಾಗಿದೆ. ಪ್ರಾಧಿಕಾರದ ನಡೆಗೆ ಭಕ್ತರಿಂದ ಆಕ್ಷೇಪ ವ್ಯಕ್ತವಾಗಿದೆ. ಗಾಂಜಾ ಘಾಟು, ಮದ್ಯಪಾನ ಹೆಚ್ಚಾಗಿದೆ ಎಂಬ ಆರೋಪ ಕೇಳಿಬಂದಿದೆ. ಎಲ್ಲೆಂದರಲ್ಲಿ ಗಾಂಜಾ ತ್ಯಾಜ್ಯದ ಜತೆಗೆ, ಎಲ್ಲೆಂದರಲ್ಲಿ ಮದ್ಯದ ಪೌಚ್ ಬಿದ್ದಿರುವುದು ಕಾಣಿಸಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
- Suraj Prasad SN
- Updated on: Jun 23, 2025
- 10:14 am
ಚಾಮರಾಜನಗರದಲ್ಲಿ ವ್ಯಾಘ್ರ ಅಟ್ಟಹಾಸ: ಒಂದೇ ತಿಂಗಳಲ್ಲಿ 2 ಜೀವ ಬಲಿ ಪಡೆದ ನರಭಕ್ಷಕ ಹುಲಿ
ಕಾಡಂಚಿನ ಗ್ರಾಮಗಳಲ್ಲಿ ಮಾನವ ಮತ್ತು ವನ್ಯಜೀವಿಗಳ ಮಧ್ಯೆ ಸಂಘರ್ಷ ನಿಲ್ಲುತ್ತಿಲ್ಲ. ಚಾಮರಾಜನಗರದ ಹುಲಿ ಸಂರಕ್ಷಿತ ಪ್ರದೇಶದಲ್ಲಂತೂ ಇದು ತುಸು ಹೆಚ್ಚಾಗಿ ಕಂಡು ಬರುತ್ತಿದೆ. ಒಂದೇ ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಇಬ್ಬರನ್ನು ಹುಲಿ ತಿಂದು ಹಾಕಿದೆ. ಗುಂಡ್ಲುಪೇಟೆ ದೇಶಿಪುರ ಗ್ರಾಮದಲ್ಲಿ ದನಗಳು ಹಾಗೂ ಕುರಿಗಳನ್ನು ಮೇಯಸುತ್ತಿದ್ದ ಮಹಿಳೆ ಹುಲಿ ದಾಳಿಗೆ ಬಲಿಯಾಗಿದ್ದಾರೆ.
- Suraj Prasad SN
- Updated on: Jun 20, 2025
- 6:38 am