ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.
ಚಾಮರಾಜನಗರ ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಬೇಟೆಗಾರರು ಇನ್ನು ಸಕ್ರೀಯ: ಸ್ಫೋಟಕ ವಿಚಾರ ಬೆಳಕಿಗೆ
ಚಾಮರಾಜನಗರ ಜಿಲ್ಲೆಯಲ್ಲಿ, ವಿಶೇಷವಾಗಿ ಹನೂರು ತಾಲ್ಲೂಕು ಹಾಗೂ ತಮಿಳುನಾಡು ಗಡಿಭಾಗದಲ್ಲಿ, 40ಕ್ಕೂ ಹೆಚ್ಚು ಸಕ್ರಿಯ ಬೇಟೆಗಾರರು ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಆತಂಕಕಾರಿ ಮಾಹಿತಿ ಟಿವಿ9 ಡಿಜಿಟಲ್ಗೆ ಲಭ್ಯವಾಗಿದೆ. ಅಕ್ರಮ ನಾಡಬಂದೂಕುಗಳನ್ನು ಬಳಸಿ ಜಿಂಕೆ, ಕಡವೆಗಳಂತಹ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಎಚ್ಚರಿಕೆಯ ನಂತರವೂ ಶಸ್ತ್ರಾಸ್ತ್ರಗಳನ್ನು ಒಪ್ಪಿಸದಿದ್ದರೆ, ಬೃಹತ್ ಕಾರ್ಯಾಚರಣೆ ಅನಿವಾರ್ಯ.
- Suraj Prasad SN
- Updated on: Sep 13, 2026
- 5:24 pm
ಬೇಟೆಗಾರರಿಗೆ ಸಿಎಂ ಡೆಡ್ಲೈನ್: ಚಾಮರಾಜನಗರವನ್ನು ‘ಕಾಡುಗಳ್ಳ ಮುಕ್ತ’ ಮಾಡಲು ಸರ್ಕಾರದ ಬಿಗ್ ಪ್ಲಾನ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ರಮ ಬಂದೂಕುಗಳ ಸಲ್ಲಿಕೆಗೆ ನವೆಂಬರ್ 1ರವರೆಗೆ ಗಡುವು ನೀಡಿದ್ದಾರೆ. ಈ ನಂತರ ದಾಳಿ ನಡೆಸಿ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ಈ ನಿರ್ಧಾರ ಚಾಮರಾಜನಗರದ ಬೇಟೆಗಾರರು ಮತ್ತು ಕಾಡುಗಳ್ಳರಿಗೆ ಮರಣಶಾಸನವಾಗಿದ್ದು, ಜಿಲ್ಲೆಯನ್ನು ಕಾಡುಗಳ್ಳ ಮುಕ್ತಗೊಳಿಸುವ ಗುರಿ ಹೊಂದಿದೆ.
- Suraj Prasad SN
- Updated on: Sep 12, 2026
- 5:18 pm
ಮರಿ ವೀರಪ್ಪನ್ನ ಕರಾಳ ಕಥೆಗಳು: ಬಗೆದಷ್ಟೂ ಬಯಲಾಗ್ತಿದೆ ಗೋವಿಂದನ ಅಪರಾಧ ಚಟುವಟಿಕೆಗಳು
ಚಾಮರಾಜನಗರದ ಮರಿ ವೀರಪ್ಪನ್ ಅಲಿಯಾಸ್ ಗೋವಿಂದನ ಕರಾಳ ಕಥೆಗಳು ಒಂದೊಂದಾಗಿ ಬಯಲಾಗುತ್ತಿವೆ. ಹುಲಿ ಬೇಟೆ, ಜಿಂಕೆ ಹತ್ಯೆ, ಬೆದರಿಕೆ, ಸುಲಿಗೆ ಮತ್ತು ಪ್ರತಿಭಟನೆ ಪ್ರಚೋದನೆಯಂತಹ ಹಲವು ಅಪರಾಧ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದಾನೆ. ನ್ಯಾಯಾಂಗ ಬಂಧನದಿಂದ ಜಾಮೀನಿನ ಮೇಲೆ ಹೊರಬಂದ ನಂತರವೂ ತನ್ನ ಅಪರಾಧ ಚಟುವಟಿಕೆಗಳನ್ನು ಮುಂದುವರೆಸಿದ್ದಾನೆ. ಈತನ ವಿರುದ್ಧ ರೌಡಿ ಶೀಟ್ ಸಹ ತೆರೆಯಲಾಗಿದೆ.
- Suraj Prasad SN
- Updated on: Sep 11, 2026
- 6:40 pm
ಹನೂರು ಬಳಿ ರಸ್ತೆ ಅಪಘಾತ: ಕಾರು ಡಿಕ್ಕಿಯಾಗಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಆರ್.ಎಸ್. ದೊಡ್ಡಿ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಪ್ಪ ಗ್ರಾಮದ ರಮೇಶ್, ಸುರೇಶ್ ಹಾಗೂ ಮುನಿಯಪ್ಪ ಮೃತ ದುರದೃಷ್ಟಕರ ವ್ಯಕ್ತಿಗಳು. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
- Suraj Prasad SN
- Updated on: Sep 11, 2026
- 7:47 am
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಕಡೆ ಕಡವೆ, ಜಿಂಕೆ ಶಿಕಾರಿ
ಕಾವೇರಿ ವನ್ಯಜೀವಿಧಾಮದ ಹೂಗ್ಯ ಶಾಖೆಯ ಹೊಳೆಮುರಿದಟ್ಟಿ ಅರಣ್ಯದಲ್ಲಿ ಇತ್ತೀಚಿಗೆ ನಡೆದ ಶೂಟೌಟ್ ಪ್ರಕರಣ ತನಿಖೆ ನಡೆಯುತ್ತಿದೆ. ಇದರ ಮಧ್ಯೆ ಇದೀಗ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೆ ಕಾಡುಗಳ್ಳರು ಮತ್ತೆ ಆ್ಯಕ್ಟಿವ್ ಆಗಿದ್ದಾರೆ. ಅರಣ್ಯ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯನ್ನ ಟಾರ್ಗೆಟ್ ಮಾಡಿರುವ ಕಾಡುಗಳ್ಳರು, ಮೊದಲು ಎಪಿಸಿ ಕ್ಯಾಂಪ್ ಗಳಿಗೆ ಬೆಂಕಿ ಹಚ್ಚಿ ಜಿಲೆಟಿನ್ ಕಡ್ಡಿಯಿಟ್ಟು ಬ್ಲಾಸ್ಟ್ ಮಾಡಿದ್ರು.
- Suraj Prasad SN
- Updated on: Sep 9, 2026
- 7:33 pm
ಚಾಮರಾಜನಗರ: ಅಸನೂರು ಬಳಿ ಕಬ್ಬು ತುಂಬಿದ ಲಾರಿಯ ಅಡ್ಡಗಟ್ಟಿದ ಕಾಡಾನೆಗಳು, ಸಂಚಾರ ಅಸ್ತವ್ಯಸ್ತ
ಚಾಮರಾಜನಗರದ ಅಸನೂರು ಬಳಿ ಕಬ್ಬು ತುಂಬಿದ ಲಾರಿಯನ್ನು ಕಾಡಾನೆಗಳ ಹಿಂಡು ತಡೆದಿದ್ದು, ಸಂಚಾರ ಅಸ್ತವ್ಯಸ್ತವಾಯಿತು. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಇದೇ ರೀತಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಗಂಗಾವರ ಸೇರಿದಂತೆ ಹಲವೆಡೆ ಕಾಡಾನೆಗಳಿಂದ ಬೆಳೆ ನಾಶವಾಗಿದ್ದು, ಆನೆ-ಮಾನವ ಸಂಘರ್ಷ ತೀವ್ರಗೊಂಡಿದೆ.
- Suraj Prasad SN
- Updated on: Sep 8, 2026
- 2:02 pm
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ?
ಚಾಮರಾಜನಗರ ಜಿಲ್ಲೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಡಗರದಿಂದ ಜರುಗಿದೆ. ಬಂಡೀಪುರ ಅಭಯಾರಣ್ಯದಲ್ಲಿರುವ ಈ ದೇವಾಲಯ, ಸದಾ ಮಂಜಿನಿಂದ ಕೂಡಿರುವ ಕಾರಣಕ್ಕೆ "ದಕ್ಷಿಣ ಗೋವರ್ಧನಗಿರಿ" ಎಂದೂ ಪ್ರಸಿದ್ಧವಾಗಿದೆ. ಖಾಸಗಿ ವಾಹನಗಳಿಗೆ ಪ್ರವೇಶವಿಲ್ಲದೆ, ಕೆಎಸ್ಆರ್ಟಿಸಿ ಬಸ್ಗಳ ಮೂಲಕ ಭಕ್ತರು ಬೆಟ್ಟ ಹತ್ತಿ ದೇವರ ದರ್ಶನ ಪಡೆಯುತ್ತಾರೆ.
- Suraj Prasad SN
- Updated on: Sep 4, 2026
- 10:34 pm
ಮೂವರು ಬೇಟೆಗಾರರ ಎನ್ಕೌಂಟರ್ ಬಳಿಕವೂ ನಿಲ್ಲದ ಕಳ್ಳಬೇಟೆ: ಹನೂರು ಅರಣ್ಯದಲ್ಲಿ ಕಡವೆ ಬೇಟೆ
ಹನೂರು ಅರಣ್ಯದಲ್ಲಿ ಶೂಟೌಟ್ ನಂತರವೂ ಕಳ್ಳಬೇಟೆ ನಿಂತಿಲ್ಲ ಎಂಬ ಆರೋಪ ಕೇಳಿಬಂದಿದೆ. ಅದಕ್ಕೆ ಈಗ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ಉಡುತೊರೆಹಳ್ಳ ಡ್ಯಾಂ ಬಳಿ ಕಡವೆಯನ್ನು ಬೇಟೆಯಾಡಿ ಮೂರು ಭಾಗಗಳಾಗಿ ಕತ್ತರಿಸಿ ಮಾಂಸವನ್ನು ಚೀಲಗಳಲ್ಲಿ ತುಂಬಿದ್ದ ನಾಲ್ವರು, ಅರಣ್ಯ ಸಿಬ್ಬಂದಿ ಕಂಡು ಪರಾರಿಯಾಗಿದ್ದಾರೆ. ಸದ್ಯ ಕೇಸ್ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ನಡೆಯತ್ತಿದೆ.
- Suraj Prasad SN
- Updated on: Sep 3, 2026
- 1:24 pm
ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ಮತ್ತೆ ರೀ ಆ್ಯಕ್ಟೀವ್? ಚಾಮರಾಜನಗರ ಬಾಂಬ್ ಬ್ಲಾಸ್ಟ್ ಪ್ರಕರಣ ಎಎನ್ಎಫ್ನಿಂದ ತನಿಖೆ?
ಚಾಮರಾಜನಗರ ಜಿಲ್ಲೆಯ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿಗೆ ಪ್ರತೀಕಾರವಾಗಿ ಕಳ್ಳ ಬೇಟೆ ಶಿಬಿರಗಳನ್ನು ಸ್ಫೋಟಿಸಿದ್ದ ಪ್ರಕರಣದ ಬೆನ್ನಲ್ಲೇ ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆ (ANF) ಮತ್ತೆ ಸಕ್ರಿಯಗೊಳ್ಳುವ ಮುನ್ಸೂಚನೆ ಸಿಕ್ಕಿದ್ದು, ಪ್ರಕರಣದ ತನಿಖೆಯನ್ನು ಎಎನ್ಎಫ್ಗೆ ನೀಡಲು ಚಿಂತನೆ ನಡೆದಿದೆ ಎನ್ನಲಾಗಿದೆ. ಮತ್ತೊಂದೆಡೆ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಸಿಐಡಿ, ಚಾಮರಾಜನಗರ SP ಮುತ್ತುರಾಜ್ ಅವರನ್ನೂ ಭೇಟಿ ಮಾಡಿ ತನಿಖೆಗೆ ಬೇಕಾಗುವ ಸಹಕಾರ ಕೇಳಿದೆ.
- Suraj Prasad SN
- Updated on: Aug 30, 2026
- 2:09 pm
ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ ಹುಚ್ಚಾಟ!
ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಆಸನೂರು ಬಳಿ ಬೈಕ್ ಸವಾರರ ಆತಂಕಕಾರಿ ಹುಚ್ಚಾಟ ಬೆಳಕಿಗೆ ಬಂದಿದೆ. ಆಹಾರಕ್ಕಾಗಿ ಕಾಡಿನಿಂದ ರಸ್ತೆಗೆ ಬಂದಿದ್ದ ಒಂಟಿ ಸಲಗದ ತೀರ ಸಮೀಪ ಬೈಕ್ ನಿಲ್ಲಿಸಿ ಫೋಟೋ ಹಾಗೂ ಸೆಲ್ಫಿ ತೆಗೆಯಲು ಮುಂದಾಗಿದ್ದಾರೆ. ಪ್ರಾಣವನ್ನೇ ಪಣಕ್ಕಿಟ್ಟು ಸವಾರರು ನಡೆಸಿದ ಈ ಅಪಾಯಕಾರಿ ಸಾಹಸದ ಸಂಪೂರ್ಣ ವಿವರ ಮತ್ತು ವೀಡಿಯೊ ಇಲ್ಲಿದೆ.
- Suraj Prasad SN
- Updated on: Aug 28, 2026
- 1:34 pm
ಶೂಟೌಟ್ ಬೆನ್ನಲ್ಲೇ ಚಾಮರಾಜನಗರದ ಜಮೀನಿನಲ್ಲಿ ಹುಲಿ ಕಳೇಬರ ಪತ್ತೆ
Bommalapura Tiger Carcass: ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಪುರ ಗ್ರಾಮದ ಸೂರ್ಯಕಾಂತಿ ತೋಟದಲ್ಲಿ ಹುಲಿಯ ಕಳೇಬರ ಪತ್ತೆಯಾಗಿದೆ. ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಕುಂದಕೆರೆ ವಲಯದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
- Suraj Prasad SN
- Updated on: Aug 27, 2026
- 4:05 pm
ಹನೂರು ಎನ್ ಕೌಂಟರ್ ಬೆನ್ನಲ್ಲೇ ಬಯಲಾಯ್ತು ಅಂತರರಾಷ್ಟ್ರೀಯ ಜಾಲ: ಚಾಮರಾಜನಗರದಿಂದ ಚೀನಾ, ಮಲೇಷಿಯಾಗೆ ಚಿಪ್ಪುಹಂದಿ ಸ್ಮಗ್ಲಿಂಗ್
ಚಾಮರಾಜನಗರದಲ್ಲಿ ಅಂತರರಾಷ್ಟ್ರೀಯ ಚಿಪ್ಪುಹಂದಿ ಕಳ್ಳಸಾಗಣೆ ಜಾಲ ಬಯಲಾಗಿದೆ. ಹನೂರು ಅರಣ್ಯದ ಬೇಟೆಗಾರರ ಎನ್ಕೌಂಟರ್ನಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಕಿಂಗ್ಪಿನ್ ಮುನಿಯಾಂಡಿ ನೇತೃತ್ವದಲ್ಲಿ ಚೀನಾ, ಮಲೇಷ್ಯಾ ಸೇರಿದಂತೆ ವಿದೇಶಗಳಿಗೆ ಚಿಪ್ಪುಹಂದಿ ಚಿಪ್ಪು ಸಾಗಿಸಲಾಗುತ್ತಿತ್ತು. ರಾಬರ್ಟ್ ಪಿಂಟೋ ಎಂಬಾತನೂ ಇದರಲ್ಲಿ ಭಾಗಿಯಾಗಿದ್ದಾನೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿಪ್ಪುಹಂದಿಗೆ ಭಾರಿ ಬೇಡಿಕೆ ಇರುವುದರಿಂದ ಈ ಕಳ್ಳಸಾಗಣೆ ನಡೆಯುತ್ತಿದೆ.
- Suraj Prasad SN
- Updated on: Aug 27, 2026
- 8:16 am