ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.
Tv9 ವರದಿ ಇಂಪ್ಯಾಕ್ಟ್: ಮಲೆಮಹದೇಶ್ವರ ಬೆಟ್ಟದ ವ್ಯಾಪ್ತಿಯ ಗ್ರಾಮಗಳಿಗೆ ಆ್ಯಂಬುಲೆನ್ಸ್ ಸೇವೆ
ಹನೂರು ತಾಲ್ಲೂಕಿನ ತುಳಸಿಕೆರೆ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಜನರು ಡೋಲಿಯಲ್ಲಿ ಆಸ್ಪತ್ರೆಗೆ ಸಾಗಿಸಿದ್ದರು. ಈ ಬಗ್ಗೆ ಏಪ್ರಿಲ್ 2ನೇ ತಾರೀಕಿನಂದು ಟಿವಿ9 ವರದಿ ಪ್ರಸಾರ ಮಾಡಿತ್ತು. ವರದಿ ಬಳಿಕ ಚಾಮರಾಜನಗರ ಜಿಲ್ಲಾಡಳಿತ ಮತ್ತು ಮಲೆ ಮಹಾದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಎಚ್ಚೆತ್ತಿವೆ.
- Suraj Prasad SN
- Updated on: Apr 19, 2025
- 4:59 pm
ಇತಿಹಾಸದಲ್ಲಿ ಮೊದಲ ಬಾರಿಗೆ ಮಾದಪ್ಪನ ಬೆಟ್ಟದಲ್ಲಿ ಸಂಪುಟ ಸಭೆ: ಹಲವು ನಿರೀಕ್ಷೆ
ಏಪ್ರಿಲ್ 24 ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಮೈಸೂರು ವಿಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವನೆಗಳು ಚರ್ಚೆಗೆ ಬರಲಿವೆ. ಜಿಲ್ಲೆಯ ಪ್ರವಾಸೋದ್ಯಮ, ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನಿರೀಕ್ಷಿಸಲಾಗಿದೆ. ಸಭೆಗೆ ಸಂಪೂರ್ಣ ತಯಾರಿ ನಡೆದಿದೆ.
- Suraj Prasad SN
- Updated on: Apr 18, 2025
- 7:19 pm
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: 35 ದಿನಗಳಲ್ಲಿ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಇದೇ ವರ್ಷದ ಫೆಬ್ರವರಿಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಲೆ ಮಹದೇಶ್ವರ ದೇಗುಲದ ಹುಂಡಿ ಎಣಿಕೆ ನಡೆದ್ದು, 1.94 ಕೋಟಿ ರೂ. ದೊರೆತಿತ್ತು. ಇದೀಗ ಮತ್ತೆ ಹುಂಡಿ ಎಣಿಕೆ ನಡೆದಿದ್ದು, ಕೇವಲ 35 ದಿನಗಳಲ್ಲಿ ಮಾದಪ್ಪ ಕೋಟ್ಯಧಿಪತಿಯಾಗಿದ್ದಾನೆ. ವಿಡಿಯೋ ಇಲ್ಲಿದೆ.
- Suraj Prasad SN
- Updated on: Apr 17, 2025
- 7:54 am
ನಿಮ್ಮ ಜಾಗ ಏನೂ ಆಗಲ್ಲ, ಭಯ ಬೇಡ: ಸಿದ್ದಯ್ಯನಪುರ ಗ್ರಾಮಸ್ಥರಿಗೆ ರಾಜಮಾತೆ ಪ್ರಮೋದಾ ದೇವಿ ಅಭಯ
ಚಾಮರಾಜನಗರ ಜಿಲ್ಲೆಯ ಸಿದ್ದಯ್ಯನಪುರ ಗ್ರಾಮದ ಭೂಮಿ ವಿಚಾರವಾಗಿ ರಾಜಮಾತೆ ಪ್ರಮೋದದೇವಿ ಅವರು ಬರೆದ ಪತ್ರ ಸಾಕಷ್ಟು ಸಂಚಲನ ಮೂಡಿಸಿತ್ತು. ಸಿದ್ದಯ್ಯನಪುರ ಗ್ರಾಮಸ್ಥರು ರಾಜಮಾತೆಯ ಪತ್ರಕ್ಕೆ ಬೆದರಿ ಜಿಲ್ಲಾಧಿಕಾರಿ ಮೊರೆ ಹೋಗಿದ್ದರು. ಈ ಬೆನ್ನಲ್ಲೇ ಪ್ರಮೋದದೇವಿ ಪತ್ರಿಕಾಗೋಷ್ಠಿ ನಡೆಸಿ ಅಭಯ ನೀಡಿದ್ದರೇ, ಇದಕ್ಕೆ ಗ್ರಾಮಸ್ಥರು ತಮ್ಮದೆಯಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
- Suraj Prasad SN
- Updated on: Apr 15, 2025
- 5:56 pm
ಕೌಟುಂಬಿಕ ಕಲಹ: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಕೌಟುಂಬಿಕ ಕಲಹದಿಂದ ಬೇಸತ್ತು ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಡುಹೊಲ ಗ್ರಾಮದಲ್ಲಿ ನಡೆದಿದೆ. ಸದ್ಯ ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ವಿದ್ಯುತ್ ತಂತಿ ತುಳಿದು ರೈತರಿಬ್ಬರು ಸಾವನ್ನಪ್ಪಿದ್ದಾರೆ.
- Suraj Prasad SN
- Updated on: Apr 14, 2025
- 9:31 pm
ಮಲೆಮಹದೇಶ್ವರ ದೇವಸ್ಥಾನದ ಗೋಪುರವೇರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪ ದೇವಸ್ಥಾನದ ಗೋಪುರವೇರಿ ಮೃತ್ಯುಂಜಯ ಎಂಬವರು ಆತ್ಮಹತ್ಯೆಗೆ ಯತ್ನಿಸಿದ್ದರು. "ಉಘೇ ಮಾದಪ್ಪ" ಎಂದು ಕೂಗುತ್ತಾ ಜಿಗಿಯಲು ಯತ್ನಿಸುತ್ತಿದ್ದ ಅವರನ್ನು ದೇವಸ್ಥಾನದ ಸಿಬ್ಬಂದಿ ರಕ್ಷಿಸಿದ್ದಾರೆ. ಮೃತ್ಯುಂಜಯ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಈ ಘಟನೆಯ ದೃಶ್ಯ ಭಕ್ತರೊಬ್ಬರ ಮೊಬೈಲ್ನಲ್ಲಿ ಸೆರೆಯಾಗಿದೆ.
- Suraj Prasad SN
- Updated on: Apr 12, 2025
- 8:39 pm
ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು: ಹಣದ ಆಸೆಗಾಗಿ ನಿಷೇಧದ ಬಳಿಕವೂ ಬೆಟ್ಟಕ್ಕೆ ಕರೆದೊಯ್ದ ಸಿಬ್ಬಂದಿ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಂಜೆ 4.30ರ ಬಳಿಕ ನಿಷೇಧವಿದ್ದರೂ ಬಂಡೀಪುರ ಅರಣ್ಯ ಸಿಬ್ಬಂದಿಗಳು ಹಣದ ಆಸೆಗಾಗಿ ತಮ್ಮ ವಾಹನದಲ್ಲೇ ಜನರು ಕರೆದುಕೊಂಡು ಹೋಗಿರುವಂತಹ ಘಟನೆ ನಡೆದಿದೆ. ಆ ಮೂಲಕ ಬಂಡೀಪುರ ಅರಣ್ಯ ಸಿಬ್ಬಂದಿಗಳು ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಈ ಘಟನೆ ಮೊಬೈಲ್ ಕ್ಯಾಮರದಲ್ಲಿ ಸೆರೆಯಾಗಿದೆ.
- Suraj Prasad SN
- Updated on: Apr 12, 2025
- 8:58 am
ಸಿದ್ದಯ್ಯನಪುರ: ಊರೇ ಖಾಲಿ ಮಾಡಬೇಕಾದ ಭೀತಿಯಲ್ಲಿ ಗ್ರಾಮಸ್ಥರು, ಆಸ್ತಿ ಖಾತೆ ಮಾಡುವಂತೆ ಪ್ರಮೋದಾದೇವಿ ಪತ್ರದ ಬೆನ್ನಲ್ಲೇ ಆತಂಕ
ಚಾಮರಾಜನಗರ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದ 4000ಕ್ಕೂ ಹೆಚ್ಚು ಜನರು ರಾಜಮಾತೆ ಪ್ರಮೋದಾದೇವಿ ಅವರ ಪತ್ರದಿಂದ ಆತಂಕಕ್ಕೀಡಾಗಿದ್ದಾರೆ. ಜಯಚಾಮರಾಜೇಂದ್ರ ಒಡೆಯರ್ ಅವರು ದಾನ ಮಾಡಿದ ಭೂಮಿಯಲ್ಲಿ ವಾಸಿಸುತ್ತಿರುವ ಗ್ರಾಮಸ್ಥರು, ಸರ್ಕಾರದಿಂದ ಸಾಗುವಳಿ ಚೀಟಿ ಪಡೆದಿದ್ದಾರೆ. ಆದರೆ ರಾಜಮಾತೆಯವರು ಭೂಮಿಯನ್ನು ವಾಪಸ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ, ತಮ್ಮ ಗ್ರಾಮವನ್ನು ಉಳಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
- Suraj Prasad SN
- Updated on: Apr 11, 2025
- 4:05 pm
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟ್; ವಿವಾದದ ಬಳಿಕ ಉಲ್ಟಾ ಹೊಡೆದ ಅರಣ್ಯ ಇಲಾಖೆ
ಬಂಡೀಪುರ ಅರಣ್ಯದಲ್ಲಿ ಮಲಯಾಳಂ ಚಿತ್ರದ ಶೂಟಿಂಗ್ ನಡೆದಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿತ್ರೀಕರಣಕ್ಕೆ ಅನುಮತಿ ನೀಡಿದ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯಿಂದ ಅರಣ್ಯ ಇಲಾಖೆಯ ದ್ವಂದ್ವ ನೀತಿ ಬಯಲಾಗಿದೆ .
- Suraj Prasad SN
- Updated on: Apr 10, 2025
- 8:56 am
ನಿಷೇಧ ನಡುವೆಯೂ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಖಾಸಗಿ ವಾಹನಗಳ ಪ್ರವೇಶ ನಿಷೇಧವಿದ್ದರೂ, ಮಲಯಾಳಂ ಚಿತ್ರತಂಡವು ಚಿತ್ರೀಕರಣಕ್ಕಾಗಿ ವಾಹನ ಸಮೇತ ಬೆಟ್ಟದ ಮೇಲೆ ಬಂದಿದೆ. ಸ್ಥಳೀಯರಿಗೆ ವಾಹನ ಪ್ರವೇಶ ನಿರ್ಬಂಧಿಸಿರುವ ಅರಣ್ಯ ಇಲಾಖೆ ಚಿತ್ರತಂಡಕ್ಕೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದೆ.
- Suraj Prasad SN
- Updated on: Apr 9, 2025
- 1:00 pm
ಚಾಮರಾಜನಗರದ 4500 ಎಕರೆ ಭೂಮಿ ನಮ್ಮ ಸ್ವತ್ತು: ಪ್ರಮೋದಾದೇವಿ ಪತ್ರಕ್ಕೆ ಡಿಸಿ ಹೇಳಿದ್ದಿಷ್ಟು
ಪ್ರಮೋದಾದೇವಿ ಒಡೆಯರ್ ಅವರು ಚಾಮರಾಜನಗರದ ೪೫೦೦ ಎಕರೆ ಭೂಮಿ ಮೈಸೂರು ಮಹಾರಾಜರ ಖಾಸಗಿ ಆಸ್ತಿ ಎಂದು ಹೇಳಿ ಅದನ್ನು ತಮ್ಮ ಹೆಸರಿಗೆ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಆದರೆ, ಅವರು ಯಾವುದೇ ಅಧಿಕೃತ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ತಹಶೀಲ್ದಾರ್ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
- Suraj Prasad SN
- Updated on: Apr 9, 2025
- 1:01 pm
Save Bandipur: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವು ವಿರೋಧಿಸಿ ಸಾವಿರಾರು ಜನರಿಂದ ಪಾದಯಾತ್ರೆ
ಸೇವ್ ಬಂಡೀಪುರ: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವುಗೊಳಿಸುವ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಂಡೀಪುರ ಉಳಿಸಿ ಅಭಿಯಾನಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದ್ದು, ಭಾನುವಾರ ನಡೆದ ‘‘ನಮ್ಮ ನಡಿಗೆ ಬಂಡೀಪುರದ ಕಡೆಗೆ’’ ಪಾದಯಾತ್ರೆಗೆ ಅಪಾರ ಪ್ರಮಾಣದಲ್ಲಿ ಜನ ಸೇರಿದ್ದರು. ಸಾವಿರಾರು ಜನರಿಂದ 5 ಕಿಲೋ ಮೀಟರ್ ಪಾದಯಾತ್ರೆ ನೆರವೇರಿತು.
- Suraj Prasad SN
- Updated on: Apr 7, 2025
- 1:52 pm