ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿಯವರು ವಿವೇಕ ಸ್ಮಾರಕ ಉದ್ಘಾಟನೆಗಾಗಿ ಮೈಸೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಓವಲ್ ಮೈದಾನ, ರಾಮಕೃಷ್ಣ ಆಶ್ರಮ ಸುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ 1000ಕ್ಕೂ ಹೆಚ್ಚು ಪೊಲೀಸರು ಮತ್ತು 250 ಹೋಮ್ ಗಾರ್ಡ್ಗಳನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
- Suraj Prasad SN
- Updated on: Aug 1, 2026
- 10:29 am
Cauvery Water Dispute: ಚಾಮರಾಜನಗರದಲ್ಲಿ ವಿಜಯ್ ಅಭಿನಯದ ‘ಜನನಾಯಗನ್’ ಸಿನಿಮಾ ಎತ್ತಂಗಡಿ!
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಕಾವೇರಿ ವಿವಾದದ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದ್ದ ತಮಿಳುನಾಡು ಸಿಎಂ ಆಕಾಂಕ್ಷಿ, ನಟ ಜೋಸೆಫ್ ವಿಜಯ್ ಅಭಿನಯದ 'ಜನನಾಯಗನ್' (Jananayagan) ಸಿನಿಮಾವನ್ನು ಪ್ರದರ್ಶನದಿಂದ ರದ್ದುಗೊಳಿಸಿ ಎತ್ತಂಗಡಿ ಮಾಡಲಾಗಿದೆ.
- Suraj Prasad SN
- Updated on: Jul 31, 2026
- 12:34 pm
Male Mahadeswara Hundi: ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ದೇವಸ್ಥಾನದ ಹುಂಡಿಯಲ್ಲಿ ಭಕ್ತರು ಅರ್ಪಿಸಿದ ಕಾಣಿಕೆಯ ಮೊತ್ತವು 3 ಕೋಟಿ 37 ಲಕ್ಷ ರೂಪಾಯಿಗಳನ್ನು ದಾಟಿದೆ. ಜೂನ್ 17 ರಿಂದ ಜುಲೈ 27 ರವರೆಗಿನ 41 ದಿನಗಳ ಅವಧಿಯಲ್ಲಿ ಸಂಗ್ರಹವಾದ ಕಾಣಿಕೆ ಇದಾಗಿದೆ. ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗಳ ನೇತೃತ್ವದಲ್ಲಿ ಈ ಹುಂಡಿ ಎಣಿಕೆ ಕಾರ್ಯವು ನಿನ್ನೆ ಬೆಳಿಗ್ಗೆಯಿಂದ ತಡರಾತ್ರಿಯವರೆಗೂ ನಡೆಯಿತು. ನಗದು ಕಾಣಿಕೆ ಜೊತೆಗೆ ಭಕ್ತರು 58 ಗ್ರಾಂ ಚಿನ್ನ ಮತ್ತು 1 ಕೆ.ಜಿ 250 ಗ್ರಾಂ ಬೆಳ್ಳಿ ಆಭರಣಗಳನ್ನು ಸಹ ಹುಂಡಿಯಲ್ಲಿ ಸಮರ್ಪಿಸಿದ್ದಾರೆ.
- Suraj Prasad SN
- Updated on: Jul 29, 2026
- 9:07 am
Bandipur Safari: ಬಂಡೀಪುರ ಸಫಾರಿ ದರ ಬಹುತೇಕ ಡಬಲ್, ಸೆಪ್ಟೆಂಬರ್ 1ರಿಂದ ಪ್ರವಾಸಿಗರಿಗೆ ಹೊಸ ಶುಲ್ಕ
Bandipur Safari Becomes Costlier: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಮಾಡಲು ಬಯಸುವ ಪ್ರವಾಸಿಗರಿಗೆ ಅರಣ್ಯ ಇಲಾಖೆ ಹೊಸ ದರಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 1ರಿಂದ ಬಸ್, ಜೀಪ್ ಸಫಾರಿ, ಖಾಸಗಿ ವಾಹನ ಹಾಗೂ ಕ್ಯಾಮೆರಾ ಬಳಕೆಗೆ ಪರಿಷ್ಕೃತ ಶುಲ್ಕ ಜಾರಿಯಾಗಲಿದೆ. ಪರಿಷ್ಕೃತ ದರ ವಿವರ ಇಲ್ಲಿದೆ.
- Suraj Prasad SN
- Updated on: Jul 27, 2026
- 10:33 am
ಮುಂಗಾರು ಮಳೆ ಕೊರತೆ: ಭರಚುಕ್ಕಿ ಜಲಪಾತ ಭಣಭಣ, ಪ್ರವಾಸಿಗರ ಸಂಖ್ಯೆಯಲ್ಲೂ ಇಳಿಮುಖ
ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಚಾಮರಾಜನಗರದ ವಿಶ್ವವಿಖ್ಯಾತ ಭರಚುಕ್ಕಿ ಜಲಪಾತ ಭಣಗುಡುತ್ತಿದೆ. ಜುಲೈ ತಿಂಗಳಲ್ಲಿ ಎಂದಿನಂತೆ ತುಂಬಿ ಹರಿಯಬೇಕಿದ್ದ ಜಲಪಾತ ಈಗ ಬರಿದಾಗಿದ್ದು, ಬಂಡೆಗಳು ಮಾತ್ರ ಕಾಣುತ್ತಿವೆ. ಮಳೆ ಕೊರತೆಯಿಂದ ಕಾವೇರಿ ಕೊಳ್ಳ ಬತ್ತಿ, ಕೆ.ಆರ್.ಎಸ್. ಡ್ಯಾಂನಲ್ಲಿ ನೀರಿಲ್ಲದೆ ಜಲಪಾತ ಜೀವಕಳೆ ಕಳೆದುಕೊಂಡಿರುವ ಕಾತಣ ಪ್ರವಾಸೊಗರ ಸಂಖ್ಯೆಯೂ ಭಾರೀ ಇಳಿಕೆ ಕಂಡಿದೆ.
- Suraj Prasad SN
- Updated on: Jul 26, 2026
- 12:15 pm
ಮಾನವ ಕಾಡು ಪ್ರಾಣಿ ಸಂಘರ್ಷಕ್ಕೆ ಬ್ರೇಕ್: ಅರಣ್ಯ ಇಲಾಖೆಯ ಮೆಗಾ ಪ್ಲ್ಯಾನ್ ಏನು ಗೊತ್ತಾ?
Chamarajanagar Wildlife Conflict: ಚಾಮರಾಜನಗರದಲ್ಲಿ ಹೆಚ್ಚಿರುವ ಮಾನವ ಮತ್ತು ಆನೆ ಸಂಘರ್ಷಕ್ಕೆ ಕಡಿವಾಣ ಹಾಕಲು ಅರಣ್ಯ ಇಲಾಖೆ ಹೊಸ ಯೋಜನೆ ರೂಪಿಸಿದೆ. ಕಾಡಾನೆಗಳಿಂದ ಬೆಳೆ ಹಾನಿ ಮತ್ತು ಪ್ರಾಣಾಪಾಯ ತಪ್ಪಿಸಲು ರೈಲ್ವೆ ಬ್ಯಾರಿಕೇಡ್ಗಳನ್ನು ಅಳವಡಿಸಲು ಮುಂದಾಗಿದೆ. ಸದ್ಯ ಈ ವಿಚಾರ ರೈತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
- Suraj Prasad SN
- Updated on: Jul 25, 2026
- 6:32 pm
ಕಾರಿನಲ್ಲಿ ಹೋಗುತ್ತಿದ್ದಾಗ ಎದುರಾಯ್ತು ಹುಲಿ: ಗುಂಡ್ಲುಪೇಟೆಯಲ್ಲಿ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಚಾಮರಾಜನಗರ ಜಿಲ್ಲೆಯ ರಂಗನಾಥಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಸಂಚರಿಸುತ್ತಿದ್ದು, ಗ್ರಾಮಸ್ಥರು ಹಾಗೂ ರೈತರಲ್ಲಿ ತೀವ್ರ ಭೀತಿ ಸೃಷ್ಟಿಸಿದೆ. ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಬಫರ್ ವಲಯಕ್ಕೆ ಹೊಂದಿಕೊಂಡಿರುವ ಜಮೀನುಗಳಲ್ಲಿ ಹುಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗಿದ್ದು, ಗ್ರಾಮಸ್ಥರು ಹುಲಿಯನ್ನು ಸೆರೆಹಿಡಿದು ಕಾಡಿಗೆ ಬಿಡುವಂತೆ ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.
- Suraj Prasad SN
- Updated on: Jul 24, 2026
- 10:04 am
ಬಂಡೀಪುರದಲ್ಲಿ ಏಕಾಏಕಿ ಕಾರುಗಳ ಮೇಲೆ ಕಾಡಾನೆ ದಾಳಿ, ಬೆಚ್ಚಿಬಿದ್ದ ಪ್ರಯಾಣಿಕರು: ವಿಡಿಯೋ ವೈರಲ್
Chamarajanagara News: ಬಂಡೀಪುರ-ಕೆಕ್ಕನಹಳ್ಳ ರಸ್ತೆಯಲ್ಲಿ ‘ತರಕಾರಿ ರಾಜ’ ಎಂದೇ ಪ್ರಸಿದ್ಧಿಯಾಗಿರುವ ಕಾಡಾನೆ ಮತ್ತೆ ರಸ್ತೆಗೆ ಇಳಿದು ಕಾರುಗಳ ಮೇಲೆ ದಾಳಿ ನಡೆಸಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಪ್ರಯಾಣಿಕರಲ್ಲಿ ಆತಂಕ ಮನೆಮಾಡಿದೆ. ಇತ್ತೀಚೆಗಷ್ಟೇ ಕೆಲವು ದಿನಗಳ ಹಿಂದೆ ಈ ಕಾಡಾನೆ ಲಾರಿಯೊಂದರ ಮೇಲೆ ದಾಳಿ ಮಾಡಿತ್ತು.
- Suraj Prasad SN
- Updated on: Jul 20, 2026
- 12:47 pm
ವಿಪಕ್ಷ ನಾಯಕ ಆರ್. ಅಶೋಕ್ಗೆ ಚಾಮರಾಜನಗರದಲ್ಲಿ ರೈತರಿಂದ ಘೇರಾವ್
ಚಾಮರಾಜನಗರದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ರೈತರು ಸುತ್ತುವರಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದಲ್ಲಿ ಬರ ಅಧ್ಯಯನ ನಡೆಸದಿರುವುದಕ್ಕೆ ಮತ್ತು ರೈತರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಸರ್ಕಾರಕ್ಕೆ ತಲುಪಿಸದಿರುವುದಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಸೇರಿದಂತೆ ಹಲವು ರೈತರು ಅಶೋಕ್ ಅವರ ವಾಹನವನ್ನು ತಡೆದು, ಬರ ಘೋಷಣೆ ಮತ್ತು ಪ್ರತಿ ಎಕರೆಗೆ 50,000 ರೂಪಾಯಿ ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹಿಸಿದ್ದಾರೆ.
- Suraj Prasad SN
- Updated on: Jul 13, 2026
- 4:16 pm
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ಚಾಮರಾಜನಗರದಲ್ಲಿ ಅರಣ್ಯಾಧಿಕಾರಿಗಳಿಗೆ ರೈತರ ಖಡಕ್ ಎಚ್ಚರಿಕೆ
ಚಾಮರಾಜನಗರದಲ್ಲಿ ಹೆಚ್ಚುತ್ತಿರುವ ಹುಲಿ ಹಾಗೂ ಚಿರತೆ ಹಾವಳಿಯಿಂದ ಬೇಸತ್ತ ರೈತರು, ಡಿಸಿಎಫ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಕಾಡುಪ್ರಾಣಿಗಳ ಸೆರೆಗೆ ತಕ್ಷಣ ಕೂಂಬಿಂಗ್ ಕಾರ್ಯಾಚರಣೆ ನಡೆಸುವಂತೆ ಆಗ್ರಹಿಸಿದ ರೈತರು, ಅರಣ್ಯ ಇಲಾಖೆಯ ವೈಜ್ಞಾನಿಕ ನಿರ್ವಹಣೆಯ ಕೊರತೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯ ಸಿಗುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ.
- Suraj Prasad SN
- Updated on: Jul 13, 2026
- 2:49 pm
ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಕ್ಕೆ ಟಾರ್ಚರ್: ಕಾಡಿನ ಮಕ್ಕಳಿಗೆ ಮನೆ ಕಟ್ಟಲು ಬಿಡದೆ ಅರಣ್ಯ ಇಲಾಖೆಯಿಂದ ಕಿರುಕುಳ ಆರೋಪ
Chamarajanagar News: ಲೋಕಾಯುಕ್ತಕ್ಕೆ ದೂರು ನೀಡಿದ ದ್ವೇಷಕ್ಕಾಗಿ ಚಾಮರಾಜನಗರದ ಪಾಲಾರ್ ಹಾಡಿಯ ಆದಿವಾಸಿ ಸೋಲಿಗರಿಗೆ ಮನೆ ಕಟ್ಟಿಕೊಳ್ಳಲು ಬಿಡದೆ ಅರಣ್ಯ ಇಲಾಖೆ ಸಿಬ್ಬಂದಿ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಾಡಿ ಜನತೆಗೆ ತೊಂದರೆ ಕೊಡದಂತೆ ಸ್ವತಃ ಜಿಲ್ಲಾಧಿಕಾರಿ ಹಾಗೂ ಸಂಸದ ಸುನೀಲ್ ಬೋಸ್ ಸೂಚಿಸಿದ್ದು, ಮನೆ ಕಟ್ಟಿಕೊಳ್ಳಲು ಅವಕಾಶ ನೀಡುವಂತೆ ತಿಳಿಸಿದ್ದರು. ಹೀಗಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿಯ ಕಿರುಕುಳ ಮಾತ್ರ ತಪ್ಪಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
- Suraj Prasad SN
- Updated on: Jul 5, 2026
- 9:19 am
Chamarajanagar: ಮೂರ್ನಾಲ್ಕು ತಿಂಗಳಿನಿಂದ 400ಕ್ಕೂ ಹೆಚ್ಚು ಮಂದಿಗೆ ಸಿಗ್ತಿಲ್ಲ ವೃದ್ಧಾಪ್ಯ ವೇತನ
ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ 400ಕ್ಕೂ ಹೆಚ್ಚು ವಯೋವೃದ್ಧರು ನಾಲ್ಕು ತಿಂಗಳಿಂದ ವೃದ್ಧಾಪ್ಯ ವೇತನ, ವಿಧವಾ ವೇತನವಿಲ್ಲದೆ ಕಷ್ಟಪಡುತ್ತಿದ್ದಾರೆ. ಕಚೇರಿಗಳಿಗೆ ಅಲೆದರೂ ಪ್ರಯೋಜನವಾಗದೆ, ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಅಧಿಕಾರಿಗಳು ತಕ್ಷಣ ಸ್ಪಂದಿಸಿ ಪಿಂಚಣಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಸಂತ್ರಸ್ತರು ‘ಟಿವಿ9’ ಜತೆ ಅಳಲು ತೋಡಿಕೊಂಡಿದ್ದಾರೆ.
- Suraj Prasad SN
- Updated on: Jul 1, 2026
- 9:14 am