ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.
ಇರಾನ್- ಇಸ್ರೇಲ್ ಯುದ್ಧದಿಂದ ತೈಲ ಬೆಲೆ ಏರಿಕೆ ಸುದ್ದಿ: ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್ಗೆ ಮುಗಿಬಿದ್ದ ಜನ
ಭಟ್ಕಳದಲ್ಲಿ ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ವದಂತಿಯಿಂದ ಪೆಟ್ರೋಲ್ ಸಂಗ್ರಹಿಸಲು ಜನ ಮುಗಿಬಿದ್ದಿದ್ದಾರೆ. ಬೆಲೆ ಏರಿಕೆ ಅಥವಾ ಪೂರೈಕೆ ಸ್ಥಗಿತ ಭೀತಿಯಿಂದ ಪೆಟ್ರೋಲ್ ಬಂಕ್ಗಳಲ್ಲಿ ಭಾರಿ ನೂಕುನುಗ್ಗಲು ಉಂಟಾಗಿ, ಕೆಲವೆಡೆ ಖಾಲಿಯಾಗಿದೆ. ಅಧಿಕಾರಿಗಳು ಇದು ಕೇವಲ ವದಂತಿ ಎಂದು ಸ್ಪಷ್ಟಪಡಿಸಿದ್ದಾರೆ. ಅನಗತ್ಯ ಆತಂಕದಿಂದ ಕೃತಕ ಅಭಾವ ಸೃಷ್ಟಿಸಬೇಡಿ ಎಂದು ಮನವಿ ಮಾಡಿದ್ದಾರೆ. ಸದ್ಯ ತೈಲ ಪೂರೈಕೆ ಅಥವಾ ಬೆಲೆ ಏರಿಕೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.
- Suraj Mahaveer Utture
- Updated on: Mar 4, 2026
- 7:09 pm
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಕಾಂಗ್ರೆಸ್ ಶಾಸಕರು ಹಾಗೂ ಸಚಿವ ನಡುವೆ ಹೊಂದಾಣಿಕೆ ಇಲ್ಲ. ಈ ಸಂಬಂಧ ಶಾಸಕರೇ ಕೆಲ ಸಚಿವರ ಮೇಲೆ ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದರು. ಸಚಿವರು ಕೈಗೆ ಸಿಗಲ್ಲ. ಫೋನ್ ಮಾಡಿದ್ರೆ ರಿಸಿವ್ ಮಾಡಲ್ಲ ಅಂತೆಲ್ಲಾ ಆರೋಪಗಳನ್ನು ಮಾಡಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಚಿವ ಮಾಂಕಾಳ್ ವೈದ್ಯ ವಿರುದ್ಧದವೇ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗರಂ ಆಗಿದ್ದು, ಕೋಪಗೊಂಡು ಕೆಡಿಪಿ ಸಭೆಯಿಂದಲೇ ಹೊರ ನಡೆದಿದ್ದಾರೆ.
- Suraj Mahaveer Utture
- Updated on: Mar 2, 2026
- 7:03 pm
ರಾಜಕೀಯದ 2ನೇ ಇನ್ನಿಂಗ್ಸ್ ಆರಂಭಿಸುವ ಮುನ್ನ ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಭಟ್ಕಳದಲ್ಲಿ ಮಾರ್ಚ್ 8 ರಂದು ನಡೆಯುವ ಹಿಂದೂ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡುವ ಮೂಲಕ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕಾರಣದ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎನ್ನಲಾಗಿದೆ. ಅದರ ಪೂರ್ವಭಾವಿಯಾಗಿ ಅವರು ಸೋಮವಾರ ಶಿರಸಿಯ ಮಾರಿಕಾಂಬಾ ದೇವಿಯ ದರ್ಶನ ಪಡೆದರು. ಹೆಗಡೆ ಅವರ ಈ ನಡೆ ಜಿಲ್ಲೆ ಹಾಗೂ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
- Suraj Mahaveer Utture
- Updated on: Mar 2, 2026
- 9:40 am
ಮತ್ತೆ ಕಾಡಾನೆ ಕಿರಿಕ್: ರಸ್ತೆ ಮಧ್ಯೆ ಸಾರಿಗೆ ಬಸ್ಗಳನ್ನ ತಡೆದು ನಿಲ್ಲಿಸಿದ ಒಂಟಿ ಸಲಗ
ಚಾಮರಾಜನಗರ ಮಾತ್ರವಲ್ಲ ಉತ್ತರ ಕನ್ನಡ ಜಿಲ್ಲೆಯಲ್ಲೂ ಕಾಡಾನೆ ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಾಡಾನೆವೊಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಹೋಗುವ ವಾಹನಗಳನ್ನು ತಡೆದ ನಿಲ್ಲಿಸಿದೆ. ಹೌದು..ಉತ್ತರ ಕನ್ನಡ ಜಿಲ್ಲೆಯ ಅಂಬಿಕಾನಗರ–ಬೊಮ್ಮನಹಳ್ಳಿ ಮಾರ್ಗದಲ್ಲಿ ಒಂಟಿ ಸಲಗ ರಸ್ತೆಯಲ್ಲಿ ನಿಂತು ಸಾರಿಗೆ ಬಸ್ ಅನ್ನ ಅಡ್ಡಹಾಕಿ ತಡೆದು ನಿಲ್ಲಿಸಿದೆ. ಇದರಿಂದ ಬಸ್ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಬಳಿಕ ಬಸ್ ಚಾಲಕ ಮೇಲಿಂದ ಮೇಲೆ ಹಾರ್ನ್ ಮಾಡಿದ್ದರಿಮದ ಕಾಡಾನೆ ರಸ್ತೆ ಬಿಟ್ಟು ಸೈಡಿಗೆ ತೆರಳಿದ್ದು, ಬಳಿಕ ಬಸ್ಗಳು ಅಲ್ಲಿಂದ ತೆರಳಿವೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.
- Suraj Mahaveer Utture
- Updated on: Feb 26, 2026
- 4:36 pm
Sirsi Marikamba Jatre: ಇಂದಿನಿಂದ ಶಿರಸಿ ಜಾತ್ರೆ ಶುಭಾರಂಭ; ಗದ್ದುಗೆ ಏರಿ ಕುಳಿತ ಮಾರಿಕಾಂಬಾ
ಶಿರಸಿ ಮಾರಿಕಾಂಬಾ ಜಾತ್ರೆಗೆ ಇಂದು ಅದ್ದೂರಿಯಾಗಿ ಚಾಲನೆ ದೊರೆತಿದೆ. ಉತ್ತರ ಕನ್ನಡದ ಪ್ರಸಿದ್ಧ ಶಕ್ತಿ ಪೀಠದಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಈ ಮಹೋತ್ಸವಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಆಗಮಿಸಿದ್ದಾರೆ. 9 ದಿನಗಳ ಕಾಲ ನಡೆಯುವ ಈ ಧಾರ್ಮಿಕ ಸಂಭ್ರಮದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇಲ್ಲಿವೆ ಫೋಟೋಸ್
- Suraj Mahaveer Utture
- Updated on: Feb 25, 2026
- 9:16 pm
ಕಾರವಾರದ ಕಠಿಣಕೋಣ ಗ್ರಾಮದಲ್ಲಿ ಒಂದೇ ಕಡೆ 6 ಹೆಬ್ಬಾವು ಪತ್ತೆ! ಬೆಚ್ಚಿಬಿದ್ದ ಗ್ರಾಮಸ್ಥರು
ಕಾರವಾರದ ಕಠಿಣಕೋಣ ಗ್ರಾಮದಲ್ಲಿ ಒಂದೇ ಕಡೆ ಏಕಾಏಕಿ 6 ಹೆಬ್ಬಾವುಗಳು ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಯಿತು. ಸದ್ಯ ಅವುಗಳನ್ನು ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮ ಕೈಗೊಳ್ಳಲಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದ್ದು, ಮನೆ ಆವರಣ ಹಾಗೂ ದಾಸ್ತಾನು ಸ್ಥಳಗಳನ್ನು ಸ್ವಚ್ಛವಾಗಿಡುವಂತೆ ಸಲಹೆ ನೀಡಲಾಗಿದೆ.
- Suraj Mahaveer Utture
- Updated on: Feb 23, 2026
- 11:24 am
ಸಿಎಂ ಸಿದ್ದರಾಮಯ್ಯ ಬಂಪರ್ ಘೋಷಣೆ: ಉತ್ತರ ಕನ್ನಡ ಜನರ ದಶಕಗಳ ಕನಸು ನನಸು
ಬಹು ವರ್ಷಗಳ ಬೇಡಿಕೆಯಾಗಿರುವ ಉತ್ತರ ಕನ್ನಡ ಭಾಗದ ಜನರಿಗೆ ಕೊನೆಗೂ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಭಾಗ್ಯ ಸಿಕ್ಕಿದೆ. ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಸಿರು ನಿಶಾನೆ ತೋರಿದ್ದಾರೆ. ಹೀಗಾಗಿ ಈ ಭಾಗದ ಜನರು ನಿಟ್ಟುಸಿರು ಬಿಡುವಂತಾಗಿದೆ. ಇನ್ನೂ ಹೊಸ ಆಸ್ಪತ್ರೆ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಎನ್ನುವುದು ಈ ಕೆಳಗಿನಂತಿದೆ.
- Suraj Mahaveer Utture
- Updated on: Feb 22, 2026
- 7:15 pm
ಜೈಲಿಂದ ಹೊರ ಬರುವ ಆಸೆಯಲ್ಲಿದ್ದ ಕಮಲಾಕರ ಭಟ್ಗೆ ನಿರಾಸೆ: ಇನ್ನೊಂದು ಕೇಸ್ ದಾಖಲು
ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಜ್ಯೋತಿಷಿ ಕಮಲಾಕರ್ ಭಟ್, ಇನ್ನೇನು ಜೈಲಿನಿಂದ ಹೊರ ಬರುತ್ತೇನೆ ಎಂಬ ಆಸೆ ಇದೀಗ ಮಣ್ಣುಪಾಲಾಗಿದೆ. ಏಕೆಂದರೆ ಕಮಲಾಕರ್ ಭಟ್ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಫೋಕ್ಸೊ ಕೇಸ್ ದಾಖಲಾಗಿದೆ.
- Suraj Mahaveer Utture
- Updated on: Feb 21, 2026
- 7:25 pm
ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆ, ಬೆಚ್ಚಿಬಿದ್ದ ಸ್ಥಳೀಯರು
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಅರಣ್ಯದಲ್ಲಿ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದೆ. ಅಚ್ಚರಿ ಅಂದ್ರೆ ಮೃತದೇಹಕ್ಕೆ ರುಂಡವೇ ಇಲ್ಲ. ಮೃತದೇಹ ಬೆತ್ತಲೆಯಲ್ಲಿ ಪತ್ತೆಯಾಗಿರುವುದರಿಂದ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- Suraj Mahaveer Utture
- Updated on: Feb 20, 2026
- 8:07 pm
ಕಮಲಾಕರ್ ಭಟ್-ಸುಚಿತ್ರಾ ರಂಗಿನಾಟಕ್ಕೆ ಅಮಾಯಕ ಬಲಿ: ಜೋಡಿ ಹಕ್ಕಿಗೆ ಕೋರ್ಟ್ ಶಾಕ್
ಕಿಲಾಡಿ ಲೇಡಿ ಸುಚಿತ್ರಾ ಹಾಗೂ ಜ್ಯೋತಿಷಿ ಕಮಲಾಕರ್ ಭಟ್ ಲವ್ವಿಡವ್ವಿಗೆ ಅಮಾಯಕ ವಸಂತ ನಾಯ್ಕ ಬಲಿಯಾಗಿದ್ದು, ಈ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿದೆ. ಇನ್ನು ಘಟನೆ ಬಳಿಕ ಸುಚಿತ್ರಾ ಹಾಗೂ ಕಮಲಾಕರನ ರಾಸಲೀಲೆಗಳು ಒಂದೊಂದಾಗಿಯೇ ಬಯಲಿಗೆ ಬರುತ್ತಿದ್ದು, ಇದೀಗ ಈ ಜೋಡಿ ಹಕ್ಕಿಗೆ ಜೈಲೇ ಗತಿಯಾಗಿದೆ. ಹಾಗಾದ್ರೆ, ಕೋರ್ಟ್ ಹೇಳಿದ್ದೇನು? ಎನ್ನುವ ವಿವರ ಇಲ್ಲಿದೆ.
- Suraj Mahaveer Utture
- Updated on: Feb 11, 2026
- 6:32 pm
ಲಾಟರಿ ಹೊಡೆಯುತ್ತಿದ್ದ ಸುಚಿತ್ರಾ ಜೀವನವನ್ನೇ ಬದಲಾಯಿಸಿದ್ದೇಗೆ ಕಮಲಾಕರ್ ಭಟ್ ಪರಿಚಯ? ಸತ್ಯ ಬಿಚ್ಚಿಟ್ಟ ಸ್ನೇಹಿತೆ
ಒಂದು ಕಾಲದಲ್ಲಿ 10 ರೂ. ಲಾಟರಿ ಹೊಡೆಯುತ್ತಿದ್ದ ಸುಚಿತ್ರಾ ಜೀವನ ಜ್ಯೋತಿಷಿ ಕಮಲಾಕರ ಭಟ್ ಪರಿಚಯದಿಂದ ಸಂಪೂರ್ಣ ಬದಲಾಗಿತ್ತು. ಹಣದ ಮೇಲಿನ ವ್ಯಾಮೋಹಕ್ಕೆ ಒಳಗಾಗಿದ್ದ ಈಕೆ ಪ್ರೀತಿಸಿ ಮದುವೆಯಾದವನಿಗೇ ಕೈಕೊಟ್ಟು ಬಂದಿದ್ದಳು. ಹೆತ್ತ ಮಕ್ಕಳ ಮೇಲೆಯೇ ದೌರ್ಜನ್ಯ ನಡೆಸುತ್ತಿದ್ದ ಸುಚಿತ್ರಾ, ಕಮಲಾಕರ್ ಭಟ್ನಿಂದ ಬೈಕ್ ಮತ್ತು ಕಾರುಗಳನ್ನು ಉಡುಗೊರೆಯಾಗಿ ಪಡೆದಿದ್ದಳು. ಆತನ ಆಶ್ರಮವನ್ನೂ ಈಕೆಯೇ ನೋಡಿಕೊಳ್ಳುತ್ತಿದ್ದಳು ಎಂಬ ವಿಚಾರವೀಗ ಬಯಲಾಗಿದೆ.
- Suraj Mahaveer Utture
- Updated on: Feb 10, 2026
- 6:29 pm
ಕಮಲಾಕರ ಭಟ್ಗೆ ಮತ್ತೋರ್ವ ಮಹಿಳೆ, ಪಡ್ಡೆ ಹುಡುಗರ ಜತೆ ಸುಚಿತ್ರಾ: ಇಬ್ಬರ ಕಾಮದಾಟ, ಕಳ್ಳಾಟ ಬಯಲಿಗೆ
ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಕಮಲಕರ್ ಭಟ್ ಗುರೂಜಿ ಹಾಗೂ ಪ್ರೇಯಿಸಿ ಸುಚಿತ್ರಾಳ ವಿಚಿತ್ರ ಕಥೆಗಳು ಒಂದೊಂದಾಗಿಯೇ ಬಹಿರಂಗವಾಗುತ್ತಿವೆ. ಸುಚಿತ್ರಾಳಿಗೆ ಕಮಲಾಕರ ಭಟ್ ಒಬ್ಬನೇ ಅಲ್ಲ, ಪಡ್ಡೆ ಹುಡುಗರ ಜೊತೆಯೂ ನಂಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ಕಮಲಾಕರ ಭಟ್ ಸಹ ಬೇರೊಬ್ಬ ಮಹಿಳೆ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದ ಎನ್ನಲಾಗಿದೆ. ಇವರಿಬ್ಬರ ಕಾಮಪುರಾಣದ ಡಿಟೇಲ್ಸ್ ಇಲ್ಲಿದೆ.
- Suraj Mahaveer Utture
- Updated on: Feb 9, 2026
- 7:43 pm