ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.
ಪ್ರವಾಸೋದ್ಯಮಕ್ಕೂ ತಟ್ಟಿದ LPG ಅಭಾವ: ಕರಾವಳಿ ಖಾದ್ಯಗಳಿಗೆ ಬ್ರೇಕ್; ಪ್ರವಾಸಿಗರಿಗೆ ನಿರಾಶೆ
ಕಾರವಾರದಲ್ಲಿ ತೀವ್ರ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ಎದುರಾಗಿದ್ದು, ಪ್ರವಾಸಿಗರ ಸ್ವರ್ಗ ಎಂದೇ ಕರೆಯುವ ಉತ್ತರ ಕನ್ನಡದ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಹೋಟೆಲ್ ಮತ್ತು ರೆಸಾರ್ಟ್ಗಳಿಗೆ ಕರಾವಳಿ ಖಾದ್ಯಗಳನ್ನು ತಯಾರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಪ್ರವಾಸಿಗರು ನಿರಾಶರಾಗಿದ್ದು, ಬುಕ್ಕಿಂಗ್ಗಳನ್ನು ರದ್ದುಗೊಳಿಸುತ್ತಿದ್ದಾರೆ. ಹೋಟೆಲ್ ಉದ್ಯಮಕ್ಕೆ ನಷ್ಟ ಉಂಟಾಗಿದೆ.
- Suraj Mahaveer Utture
- Updated on: Mar 22, 2026
- 5:59 pm
ಕಾರವಾರ: ಪ್ರವಾಸಿಗರು ಹೆಚ್ಚಳದ ಮಧ್ಯೆ ದರ ಸಮರ: ಏಜೆಂಟರು ಮತ್ತು ಕಂಪನಿಗಳ ನಡುವೆ ಬಿಗ್ ಫೈಟ್
ಸಾಲು ಸಾಲು ರಜೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಜಲಸಾಹಸ ಕ್ರೀಡೆಗಳಿಗಾಗಿ ಪ್ರವಾಸಿಗರ ದಂಡು ಹರಿದುಬರುತ್ತಿದೆ. ಆದರೆ, ಟ್ರಾವೆಲ್ ಏಜೆಂಟರು ಮತ್ತು ಜಲಸಾಹಸ ಕಂಪನಿಗಳ ನಡುವೆ ದರ ನಿಗದಿ ವಿಚಾರವಾಗಿ ಜಟಾಪಟಿ ಶುರುವಾಗಿದೆ. ಜಲಸಾಹಸ ಕಂಪನಿಗಳು ಜಾರಿಗೆ ತಂದ 'ಸಿಂಗಲ್ ವಿಂಡೋ ಸಿಸ್ಟಮ್' ನಿಂದ ಏಜೆಂಟರು ಪಡೆಯುತ್ತಿದ್ದ ದೊಡ್ಡ ಕಮಿಷನ್ಗೆ ಬ್ರೇಕ್ ಬಿದ್ದಿದ್ದು, ಭಾರೀ ನಷ್ಟ ಎದುರಿಸುತ್ತಿದ್ದಾರೆ.
- Suraj Mahaveer Utture
- Updated on: Mar 21, 2026
- 8:57 pm
ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೇನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಇಂದು ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ಶಾಸಕ ಆರ್ವಿ ದೇಶಪಾಂಡೆ ಗರಂ ಆದರು. ಇನ್ಮುಂದೆ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಹುಷಾರ್ ಎಂದು ಹೆರಿಗೆ ಆಸ್ಪತ್ರೆ ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
- Suraj Mahaveer Utture
- Updated on: Mar 20, 2026
- 9:15 pm
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಪವಾಡ ಸದೃಶ್ಯವಾಗಿ ಬದುಕುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರ ಬಾ ನಗರದಲ್ಲಿ ನಡೆದಿದೆ. ಕಸ್ತೂರ ಬಾ ನಗರದ ಬಾಲೆ ಭುವಿ(2) ಬದಕುಳಿದ ಮಗು. ಆಟವಾಡುತ್ತ ಭುವಿ ಏಕಾಏಕಿ ನಾಪತ್ತೆಯಾಗಿದ್ದ. ಇದರಿಂದ ಆತಂಕಗೊಂಡು ಮನೆ ಸುತ್ತಮುತ್ತ ಹುಡುಕಿದರೂ ಪತ್ತೆಯಾಗಿಲ್ಲ. ಕೊನೆಗೆ ಮನೆಯ ಮುಂದಿನ ಬಾವಿಯಲ್ಲಿ ನೋಡಿದಾಗ ಮಗು ಅಳುವ ಶಬ್ದ ಕೇಳಿದೆ.
- Suraj Mahaveer Utture
- Updated on: Mar 16, 2026
- 6:39 pm
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯ ಈ ಸಮಯದಲ್ಲೂ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾನುವಾರ ಭರ್ಜರಿ ಆಲಿಕಲ್ಲು ಮಳೆ ಸುರಿದಿದೆ. ಜತೆಗೆ, ಬಿರುಗಾಳಿಗೆ ಭಾರಿ ಗಾತ್ರದ ಮರವೊಂದು ಧರೆಗೆ ಉರುಳಿದ್ದು, ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಎಲ್ಪಿಜಿ ಕೊರತೆ ಹಿನ್ನೆಲೆ ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೆ ಜನ ಮರದ ತುಂಡುಗಳನ್ನು ಒಯ್ಯಲು ಮುಗಿಬಿದ್ದರು.
- Suraj Mahaveer Utture
- Updated on: Mar 16, 2026
- 11:36 am
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯ ನಡುವೆ, ಯುಎಇಯಿಂದ ಹೊರಟ ಡಾಂಬರು ಹೊತ್ತ ಚೆಂಗ್ ಎಕ್ಸ್ ಹಡಗು ಕಾರವಾರ ಬಂದರನ್ನು ತಲುಪಿದೆ. ಹರ್ಮುಜ್ ಜಲಸಂಧಿಯ ನಿರ್ಬಂಧಗಳನ್ನು ತಪ್ಪಿಸಿ ಮತ್ತೊಂದು ಮಾರ್ಗದಲ್ಲಿ ಬಂದ ಈ ಹಡಗು 3,100 ಟನ್ ಡಾಂಬರನ್ನು ಹೊತ್ತು ಬಂದಿದೆ. ವಿಡಿಯೋ ಇಲ್ಲಿದೆ ನೋಡಿ.
- Suraj Mahaveer Utture
- Updated on: Mar 13, 2026
- 5:42 pm
ಈಡೇರಲಿಲ್ಲ ಚಂಗಡಿ ಗ್ರಾಮಸ್ಥರ ಕನಸು: ಕಲ್ಲು-ಮುಳ್ಳಿನ ಹಾದಿ, 23 ಕಿಮೀ ಕಾಡಿನಲ್ಲಿ ಜನರ ನಿತ್ಯ ದರ್ಶನ
ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮ ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಸ್ವಯಂಪ್ರೇರಿತರಾಗಿ ಸ್ಥಳಾಂತರಗೊಳ್ಳಲು ಸಿದ್ಧವಿದ್ದಾರೆ. ಆದರೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅವರ ಪುನರ್ವಸತಿ ಪ್ರಸ್ತಾವನೆ ಚರ್ಚೆಯಾಗದೆ ನಿರೀಕ್ಷೆ ಹುಸಿಯಾಗಿದೆ. ಸರ್ಕಾರದ ನಿರ್ಲಕ್ಷ್ಯದಿಂದ ಗ್ರಾಮಸ್ಥರಲ್ಲಿ ಭ್ರಮನಿರಸನ ಮೂಡಿದೆ.
- Suraj Mahaveer Utture
- Updated on: Mar 10, 2026
- 8:28 pm
Iran Israel War: ಯುದ್ಧದ ಪರಿಣಾಮ ಕಾರವಾರ ಬಂದರಿಗೆ ಡಾಂಬರ್ ಸರಬರಾಜು ಬಂದ್; ತಿಂಗಳಿಗೆ 80 ಲಕ್ಷ ರೂ. ನಷ್ಟ!
ಮಧ್ಯಪ್ರಾಚ್ಯ ಯುದ್ಧ ಸಂಘರ್ಷದಿಂದ ಕಾರವಾರದ ವಾಣಿಜ್ಯ ಬಂದರಿಗೆ ಭಾರಿ ಹೊಡೆತ ಬಿದ್ದಿದೆ. ಇರಾನ್ನಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸರಬರಾಜು ಸಂಪೂರ್ಣ ನಿಂತಿದ್ದು, ಪ್ರತಿ ತಿಂಗಳು ಸುಮಾರು 80 ಲಕ್ಷ ರೂ. ಆದಾಯ ನಷ್ಟವಾಗುತ್ತಿದೆ. ಗಲ್ಫ್ ರಾಷ್ಟ್ರಗಳಿಂದ ಡೀಸೆಲ್ ಪೂರೈಕೆಯೂ ಕಷ್ಟವಾಗಿದೆ. ಇದರಿಂದ ಬಂದರು ಅವಲಂಬಿತ ಲಾರಿ ಮಾಲೀಕರು ಮತ್ತು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಯುದ್ಧದ ಪರಿಣಾಮ ವಾಣಿಜ್ಯ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಿದೆ.
- Suraj Mahaveer Utture
- Updated on: Mar 9, 2026
- 1:43 pm
ಗೋಕರ್ಣ ಸಮೀಪದ 44 ರೆಸಾರ್ಟ್ಗಳ ತೆರವಿಗೆ ಆದೇಶ! ಕಾರಣ ಇಲ್ಲಿದೆ
ಉತ್ತರ ಕನ್ನಡದ ಗೋಕರ್ಣ ಸಮೀಪ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ (CRZ) ನಿಯಮ ಉಲ್ಲಂಘಿಸಿದ 44 ಅನಧಿಕೃತ ರೆಸಾರ್ಟ್ಗಳನ್ನು ತೆರವುಗೊಳಿಸಲು ಕುಮಟಾ ತಹಶೀಲ್ದಾರ್ ಆದೇಶಿಸಿದ್ದಾರೆ. 16 ರೆಸಾರ್ಟ್ಗಳಿಗೆ ಹೈಕೋರ್ಟ್ ತಡೆಯಾಜ್ಞೆ ಇದ್ದರೆ, 7 ಸ್ವಯಂಪ್ರೇರಿತವಾಗಿ ತೆರವಾಗುತ್ತಿವೆ, ಉಳಿದ 21 ಸೀಜ್ ಆಗಲಿವೆ. ಸ್ಥಳದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.
- Suraj Mahaveer Utture
- Updated on: Mar 9, 2026
- 11:17 am
“ನಮ್ಮನ್ನು ಮುಸ್ಲಿಂ, ಕ್ರಿಶ್ಚಿಯನ್ನರು ಸೋಲಿಸಿಲ್ಲ ಹಿಂದೂಗಳು ಸೋಲಿಸಿದ್ದು”: ಭಟ್ಕಳದಲ್ಲಿ ಅಬ್ಬರಿಸಿದ ಅನಂತಕುಮಾರ್ ಹೆಗಡೆ
ಮಾಜಿ ಸಂಸದ ಅನಂತಕುಮಾರ್ ಹೆಗಡೆ ಭಟ್ಕಳದ ಹಿಂದೂ ಸಂಗಮದಲ್ಲಿ ಎರಡು ವರ್ಷಗಳ ನಂತರ ಘರ್ಜಿಸಿದರು. ಜಾತಿಗಿಂತ ಯೋಗ್ಯತೆ ಮುಖ್ಯ, ಜಾತ್ಯತೀತತೆ ಎಂದರೆ ಹಿಂದುತ್ವ ಎಂದು ಪ್ರತಿಪಾದಿಸಿದರು. ಹಿಂದೂ ಐಕ್ಯತೆ ಇಲ್ಲದಿದ್ದರೆ ವಿನಾಶ ಖಂಡಿತ ಎಂದ ಹೆಗಡೆ, RSS ಮುಗಿಸಲು ಯಾರಿಗೂ ಸಾಧ್ಯವಿಲ್ಲ, ಭಾರತೀಯ ಸಂಸ್ಕೃತಿ ಜಗತ್ತನ್ನು ಆಕರ್ಷಿಸುತ್ತಿದೆ ಎಂದು ಹೇಳಿದರು. ಸಂಸ್ಕಾರಯುತ ಬದುಕಿಗೆ ಒತ್ತು ನೀಡುವಂತೆ ಕರೆ ನೀಡಿದರು.
- Suraj Mahaveer Utture
- Updated on: Mar 8, 2026
- 7:30 pm
ಸಿಎಂ, ಡಿಸಿಎಂ ಹೆಸರಿನಲ್ಲಿ JDS ಶಾಸಕನಿಂದ ಮಾದಪ್ಪನಿಗೆ ಪೂಜೆ: ವಿಡಿಯೋ ನೋಡಿ
ಹನೂರು ಜೆಡಿಎಸ್ ಶಾಸಕ ಮಂಜುನಾಥ್ ಅವರು 490 ಕೋಟಿ ರೂಪಾಯಿ ನೀರಾವರಿ ಯೋಜನೆಗೆ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶವಕುಮಾರ್ ಹಾಗೂ ಸಚಿವರ ಹೆಸರಿನಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
- Suraj Mahaveer Utture
- Updated on: Mar 8, 2026
- 7:15 pm
ಇರಾನ್- ಇಸ್ರೇಲ್ ಯುದ್ಧದಿಂದ ತೈಲ ಬೆಲೆ ಏರಿಕೆ ಸುದ್ದಿ: ಭಟ್ಕಳದಲ್ಲಿ ಡೀಸೆಲ್, ಪೆಟ್ರೋಲ್ಗೆ ಮುಗಿಬಿದ್ದ ಜನ
ಭಟ್ಕಳದಲ್ಲಿ ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ವದಂತಿಯಿಂದ ಪೆಟ್ರೋಲ್ ಸಂಗ್ರಹಿಸಲು ಜನ ಮುಗಿಬಿದ್ದಿದ್ದಾರೆ. ಬೆಲೆ ಏರಿಕೆ ಅಥವಾ ಪೂರೈಕೆ ಸ್ಥಗಿತ ಭೀತಿಯಿಂದ ಪೆಟ್ರೋಲ್ ಬಂಕ್ಗಳಲ್ಲಿ ಭಾರಿ ನೂಕುನುಗ್ಗಲು ಉಂಟಾಗಿ, ಕೆಲವೆಡೆ ಖಾಲಿಯಾಗಿದೆ. ಅಧಿಕಾರಿಗಳು ಇದು ಕೇವಲ ವದಂತಿ ಎಂದು ಸ್ಪಷ್ಟಪಡಿಸಿದ್ದಾರೆ. ಅನಗತ್ಯ ಆತಂಕದಿಂದ ಕೃತಕ ಅಭಾವ ಸೃಷ್ಟಿಸಬೇಡಿ ಎಂದು ಮನವಿ ಮಾಡಿದ್ದಾರೆ. ಸದ್ಯ ತೈಲ ಪೂರೈಕೆ ಅಥವಾ ಬೆಲೆ ಏರಿಕೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.
- Suraj Mahaveer Utture
- Updated on: Mar 4, 2026
- 7:09 pm