ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.
ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲೆ ನಡೆಸಿ ವಿಕೃತಿ: ಆರೋಪಿಗಳ ವಿರುದ್ಧ ಕೇಸ್ ದಾಖಲು
ಉತ್ತರ ಕನ್ನಡದ ಶಿರಸಿಯಲ್ಲಿ ಮಹಿಳೆಯರ ಮೇಲೆ ಗ್ಯಾಂಗ್ ಒಂದು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಕೊಟ್ಟ ಹಣ ಮರುಪಾವತಿಸುವಂತೆ ಕೇಳಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಲಾಗಿದೆ ಎಂದು ದೂರಲಾಗಿದೆ. ಈ ಬಗ್ಗೆ ಶಿರಸಿ ಹೊಸ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಹಣದ ವಿಷಯವಾಗಿ ಶುರುವಾದ ಮಾತುಕತೆ ಹಿಂಸೆಗೆ ತಿರುಗಿದೆ ಎನ್ನಲಾಗಿದೆ.
- Suraj Mahaveer Utture
- Updated on: Apr 4, 2026
- 4:18 pm
ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ಎಲ್ಪಿಜಿ ಬೆನ್ನಲ್ಲೇ ಈಗ ಡಾಂಬರು ಅಭಾವ, ಸ್ಥಗಿತಗೊಂಡ ರಸ್ತೆ ಕಾಮಗಾರಿಗಳು!
ಗಲ್ಫ್ ಯುದ್ಧದ ಹಿನ್ನೆಲೆಯಲ್ಲಿ ಕಾರವಾರ ಬಂದರಿಗೆ ಕಚ್ಚಾ ಡಾಂಬರು ಬಿಟುಮಿನ್ ಪೂರೈಕೆ ಸ್ಥಗಿತಗೊಂಡಿದೆ. ಟನ್ ಡಾಂಬರಿಗೆ 20 ಸಾವಿರ ರೂ. ದರ ಏರಿಕೆಯಾಗಿದ್ದರೂ ಸಿಗದಂತಾಗಿದ್ದು, ರಾಜ್ಯದಾದ್ಯಂತ ರಸ್ತೆ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಎಲ್ಪಿಜಿ ಅಭಾವದ ಬೆನ್ನಲ್ಲೇ ಈಗ ಬಿಟುಮಿನ್ ಕೊರತೆ ಗುತ್ತಿಗೆದಾರರನ್ನು ಹೈರಾಣಾಗಿಸಿದೆ.
- Suraj Mahaveer Utture
- Updated on: Apr 4, 2026
- 6:54 am
ಶಿರಸಿ ಬಳಿ ಎರಡು ಬಸ್ಗಳ ನಡುವೆ ಭೀಕರ ಅಪಘಾತ: ಹಲವು ಪ್ರಯಾಣಿಕರ ಸ್ಥಿತಿ ಗಂಭೀರ
ಎರಡು ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಸರ್ಕಾರಿ ಬಸ್, ಖಾಸಗಿ ಬಸ್ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಇನ್ನು ಎರಡು ಬಸ್ನಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
- Suraj Mahaveer Utture
- Updated on: Apr 3, 2026
- 5:50 pm
ಗ್ಯಾಸ್ ಟ್ರಬಲ್: ನಾಡಿನಿಂದ ಕಾಡಿಗೆ, ಅರಣ್ಯದಲ್ಲಿ ಸೌದೆಗಾಗಿ ಮುಗಿಬಿದ್ದ ಜನ
ಗಲ್ಫ್ ರಾಷ್ಟ್ರಗಳ ಕಾಳಗ ಕೊನೆ ಆಗುತ್ತಿಲ್ಲ. ಜನರ ಪರದಾಟ ಅಂತ್ಯವಾಗುತ್ತಿಲ್ಲ. ಗ್ಯಾಸ್ ಅಭಾವದಿಂದ ಹತ್ತಾರು ಸಮಸ್ಯೆ ಉದ್ಭವ ಆಗಿವೆ. ಗ್ಯಾಸ್ ಸಿಲಿಂಡರ್ ಸಿಗದಿದ್ದಕ್ಕೆ ಹಳ್ಳಿ ಕಡೆ ಜನರು ಸೌದೆ ಒಲೆ ಮೊರೆ ಹೋಗಿದ್ದು, ಸೌದೆಗಾಗಿ ಅರಣ್ಣದಲ್ಲಿ ಮುಗಿಬಿದ್ದಿದ್ದಾರೆ. ಹೌದು...ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಕೆಎಫ್ಡಿಸಿ ಅರಣ್ಯ ಪ್ರದೇಶದಲ್ಲಿ ಜನರು ಸೌದೆಗಾಗಿ ಮುಗಿದ್ದಿದ್ದಾರೆ.
- Suraj Mahaveer Utture
- Updated on: Mar 31, 2026
- 9:15 pm
ಗೃಹ ಸಚಿವ ಪರಮೇಶ್ವರ ಆಪ್ತನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಆಪ್ತರಾಗಿರುವ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ಅಂಕೋಲಾದಲ್ಲಿ ನಡೆದ ಹತ್ಯೆ ಯತ್ನ ಪ್ರಕರಣ ಜಿಲ್ಲೆಯಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಮಾರ್ಚ್ 25ರಂದು ಹಾಡಹಗಲೇ ನಡೆದ ಈ ದಾಳಿ ರಾಜಕೀಯ ವಲಯದಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಘಟನೆಯ ಇನ್ನೊಂದು ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು, ಆರೋಪಿಗಳು ಗೋಪಾಲ ಕೃಷ್ಣ ನಾಯಕ್ ಅವರ ತಲೆಗೆ ಹಲವು ಬಾರಿ ಚಾಕುವಿನಿಂದ ಚುಚ್ಚುವ ದೃಶ್ಯ ಸೆರೆಯಾಗಿದೆ.
- Suraj Mahaveer Utture
- Updated on: Mar 30, 2026
- 8:01 pm
ಕಾಂಗ್ರೆಸ್ ಮುಖಂಡನ ಕೊಲೆಗೆ ಯತ್ನ: ತನಿಖೆ ಚುರುಕು, ನಾಲ್ವರ ಬಂಧನ
ಅಂಕೋಲಾದಲ್ಲಿ ಕಾಂಗ್ರೆಸ್ ಮುಖಂಡ ಗೋಪಾಲ ನಾಯಕ ಹತ್ಯೆ ಯತ್ನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಗೋವಾ ಮೂಲದ ನಾಲ್ವರನ್ನ ಬಂಧಿಸಲಾಗಿದೆ. ಆರೋಪಿಗಳು ಅಟ್ಟಾಡಿಸಿ ಹೊಡೆದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಘಟನೆ ತೀವ್ರ ಆತಂಕಕ್ಕೆ ಕಾರಣವಾಗಿದೆ.
- Suraj Mahaveer Utture
- Updated on: Mar 26, 2026
- 8:41 pm
ಕಾಂಗ್ರೆಸ್ ಮುಖಂಡನ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ
ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ಕಾಂಗ್ರೆಸ್ ನಾಯಕ ಗೋಪಾಲಕೃಷ್ಣ ನಾಯ್ಕರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕು ಮತ್ತು ರಾಡ್ನಿಂದ ಮನಬಂದಂತೆ ಇರಿದು ಪರಾರಿಯಾಗಿದ್ದಾರೆ. ಗೋವಾ ನೋಂದಣಿಯ ಕಾರಿನಲ್ಲಿ ಬಂದಿದ್ದ ಹಂತಕರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ರಾಜಕೀಯ ದ್ವೇಷದ ದಾಳಿಯ ಶಂಕೆ ವ್ಯಕ್ತವಾಗಿದೆ. ಘಟನೆಯ ಸಂಪೂರ್ಣ ವಿವರ ಇಲ್ಲಿದೆ.
- Suraj Mahaveer Utture
- Updated on: Mar 25, 2026
- 2:22 pm
ಪ್ರವಾಸೋದ್ಯಮಕ್ಕೂ ತಟ್ಟಿದ LPG ಅಭಾವ: ಕರಾವಳಿ ಖಾದ್ಯಗಳಿಗೆ ಬ್ರೇಕ್; ಪ್ರವಾಸಿಗರಿಗೆ ನಿರಾಶೆ
ಕಾರವಾರದಲ್ಲಿ ತೀವ್ರ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ಎದುರಾಗಿದ್ದು, ಪ್ರವಾಸಿಗರ ಸ್ವರ್ಗ ಎಂದೇ ಕರೆಯುವ ಉತ್ತರ ಕನ್ನಡದ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಹೋಟೆಲ್ ಮತ್ತು ರೆಸಾರ್ಟ್ಗಳಿಗೆ ಕರಾವಳಿ ಖಾದ್ಯಗಳನ್ನು ತಯಾರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಪ್ರವಾಸಿಗರು ನಿರಾಶರಾಗಿದ್ದು, ಬುಕ್ಕಿಂಗ್ಗಳನ್ನು ರದ್ದುಗೊಳಿಸುತ್ತಿದ್ದಾರೆ. ಹೋಟೆಲ್ ಉದ್ಯಮಕ್ಕೆ ನಷ್ಟ ಉಂಟಾಗಿದೆ.
- Suraj Mahaveer Utture
- Updated on: Mar 22, 2026
- 5:59 pm
ಕಾರವಾರ: ಪ್ರವಾಸಿಗರು ಹೆಚ್ಚಳದ ಮಧ್ಯೆ ದರ ಸಮರ: ಏಜೆಂಟರು ಮತ್ತು ಕಂಪನಿಗಳ ನಡುವೆ ಬಿಗ್ ಫೈಟ್
ಸಾಲು ಸಾಲು ರಜೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಜಲಸಾಹಸ ಕ್ರೀಡೆಗಳಿಗಾಗಿ ಪ್ರವಾಸಿಗರ ದಂಡು ಹರಿದುಬರುತ್ತಿದೆ. ಆದರೆ, ಟ್ರಾವೆಲ್ ಏಜೆಂಟರು ಮತ್ತು ಜಲಸಾಹಸ ಕಂಪನಿಗಳ ನಡುವೆ ದರ ನಿಗದಿ ವಿಚಾರವಾಗಿ ಜಟಾಪಟಿ ಶುರುವಾಗಿದೆ. ಜಲಸಾಹಸ ಕಂಪನಿಗಳು ಜಾರಿಗೆ ತಂದ 'ಸಿಂಗಲ್ ವಿಂಡೋ ಸಿಸ್ಟಮ್' ನಿಂದ ಏಜೆಂಟರು ಪಡೆಯುತ್ತಿದ್ದ ದೊಡ್ಡ ಕಮಿಷನ್ಗೆ ಬ್ರೇಕ್ ಬಿದ್ದಿದ್ದು, ಭಾರೀ ನಷ್ಟ ಎದುರಿಸುತ್ತಿದ್ದಾರೆ.
- Suraj Mahaveer Utture
- Updated on: Mar 21, 2026
- 8:57 pm
ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೇನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಇಂದು ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ಶಾಸಕ ಆರ್ವಿ ದೇಶಪಾಂಡೆ ಗರಂ ಆದರು. ಇನ್ಮುಂದೆ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಹುಷಾರ್ ಎಂದು ಹೆರಿಗೆ ಆಸ್ಪತ್ರೆ ವೈದ್ಯರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
- Suraj Mahaveer Utture
- Updated on: Mar 20, 2026
- 9:15 pm
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಪವಾಡ ಸದೃಶ್ಯವಾಗಿ ಬದುಕುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರ ಬಾ ನಗರದಲ್ಲಿ ನಡೆದಿದೆ. ಕಸ್ತೂರ ಬಾ ನಗರದ ಬಾಲೆ ಭುವಿ(2) ಬದಕುಳಿದ ಮಗು. ಆಟವಾಡುತ್ತ ಭುವಿ ಏಕಾಏಕಿ ನಾಪತ್ತೆಯಾಗಿದ್ದ. ಇದರಿಂದ ಆತಂಕಗೊಂಡು ಮನೆ ಸುತ್ತಮುತ್ತ ಹುಡುಕಿದರೂ ಪತ್ತೆಯಾಗಿಲ್ಲ. ಕೊನೆಗೆ ಮನೆಯ ಮುಂದಿನ ಬಾವಿಯಲ್ಲಿ ನೋಡಿದಾಗ ಮಗು ಅಳುವ ಶಬ್ದ ಕೇಳಿದೆ.
- Suraj Mahaveer Utture
- Updated on: Mar 16, 2026
- 6:39 pm
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯ ಈ ಸಮಯದಲ್ಲೂ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾನುವಾರ ಭರ್ಜರಿ ಆಲಿಕಲ್ಲು ಮಳೆ ಸುರಿದಿದೆ. ಜತೆಗೆ, ಬಿರುಗಾಳಿಗೆ ಭಾರಿ ಗಾತ್ರದ ಮರವೊಂದು ಧರೆಗೆ ಉರುಳಿದ್ದು, ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಎಲ್ಪಿಜಿ ಕೊರತೆ ಹಿನ್ನೆಲೆ ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೆ ಜನ ಮರದ ತುಂಡುಗಳನ್ನು ಒಯ್ಯಲು ಮುಗಿಬಿದ್ದರು.
- Suraj Mahaveer Utture
- Updated on: Mar 16, 2026
- 11:36 am