ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.
ಉತ್ತರ ಕನ್ನಡ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ಲಾನ್ ಮಾಡ್ತಿದ್ದೀರಾ? ಹಾಗಾದರೆ ಈ ವಿಚಾರ ಗಮನಿಸಿ
ಕಳೆದ ಹದಿನೈದು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾದ ಹಿನ್ನೆಲೆ, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ಕೊಡುವವರ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಪ್ರವಾಸಗರ ಸಂಖ್ಯೆ ಇಳಿಕೆಯಾದ ಕಾರಣ ಜಿಲ್ಲೆಯ ಬಹುತೇಕ ಪ್ರವಾಸಿ ತಾಣಗಳು ಜನರಿಲ್ಲದೆ ಖಾಲಿ ಖಾಲಿ ಹೊಡೆಯುತ್ತಿವೆ.
- Suraj Mahaveer Utture
- Updated on: Mar 21, 2025
- 7:33 am
ಕರ್ನಾಟಕದಲ್ಲೊಂದು ಹಿರೋಶಿಮಾ-ನಾಗಸಾಕಿ ಪ್ರದೇಶ: ಈ ಜಿಲ್ಲೆಯಲ್ಲಿ ಹುಟ್ಟುವ ಮಕ್ಕಳೆಲ್ಲಾ ಅಂಗವಿಕಲರು
ಉತ್ತರ ಕನ್ನಡದಲ್ಲಿ 40 ವರ್ಷಗಳ ಹಿಂದೆ ಎಂಡೋಸಲ್ಫಾನ್ ಸಿಂಪಡಣೆಯಿಂದಾಗಿ ಹುಟ್ಟಿದ ಅಂಗವಿಕಲ ಮಕ್ಕಳ ಸಮಸ್ಯೆ ಇನ್ನೂ ಮುಂದುವರಿದಿದೆ. ಇತ್ತೀಚಿನ ಸರ್ವೆಯಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿವೆ. ಎರಡನೇ ಪೀಳಿಗೆಯಲ್ಲಿಯೂ ಈ ಸಮಸ್ಯೆ ಮುಂದುವರೆಯುವ ಆತಂಕವಿದೆ. ಬಲಿಪಶುಗಳಿಗೆ ಸೂಕ್ತ ಪರಿಹಾರ ಮತ್ತು ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳುವ ಅಗತ್ಯವಾಗಿದೆ.
- Suraj Mahaveer Utture
- Updated on: Mar 20, 2025
- 2:33 pm
ಈ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನ: 10 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಉಷ್ಣಾಂಶ
ಕರ್ನಾಟಕದಲ್ಲಿ ಈ ಬಾರಿಯ ಬೇಸಿಗೆಯ ತಾಪಮಾನ ದಿನ ದಿನಕ್ಕೆ ಏರಿಕೆಯಾಗುತ್ತಿದೆ. ಪ್ರತಿ ವರ್ಷ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ರಣಬಿಸಿಲು ಜನರ ನೆತ್ತಿ ಸುಡುತ್ತಿತ್ತು. ಆದ್ರೆ, ಅಚ್ಚರಿ ಅಂದ್ರೆ ಈ ಬಾರಿ ಉತ್ತರ ಕರ್ನಾಟಕ ಜಿಲ್ಲೆ ಬದಲಿಗೆ ಕರಾವಳಿ ಭಾಗದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಕಳೆದ 10 ವರ್ಷಗಳಲ್ಲಿ ಈ ಜಿಲ್ಲೆಯಲ್ಲಿ ಇಷ್ಟೊಂದು ಪ್ರಮಾಣದಲ್ಲಿ ತಾಪಮಾನ ಏರಿಕೆ ಆಗಿರಲಿಲ್ಲ.
- Suraj Mahaveer Utture
- Updated on: Mar 13, 2025
- 7:55 pm
ಶಿರೂರು ಗುಡ್ಡ ದುರಂತದಲ್ಲಿ ಅನಾಥವಾಗಿದ್ದ ಶ್ವಾನ ಮ್ಯಾರಥಾನ್ನಲ್ಲಿ ಓಟ: ಬೆಳ್ಳಿ ಪದಕ
ಕೊಡಗು ಜಿಲ್ಲೆಯ ಕಾಪರ್ ಹೆಸರಿನ ಶ್ವಾನ ರಾಷ್ಟ್ರಮಟ್ಟದ ಪೊಲೀಸ್ ಮೀಟ್ ಸ್ಪರ್ಧೆಯಲ್ಲಿ ಘಟಾನುಘಟಿ ತಂಡಗಳನ್ನ ಸೋಲಿಸುವ ಮೂಲಕ ಬೆಳ್ಳಿ ಪದಕ ಗೆದ್ದು ಬೀಗಿದೆ. ಇದೇ ರೀತಿಯಾಗಿ ಇನ್ನೊಂದೆಡೆ ಶಿರೂರು ಗುಡ್ಡ ಕುಸಿತದಲ್ಲಿ ತನ್ನ ಮಾಲೀಕನನ್ನು ಕಳೆದುಕೊಂಡಿದ್ದ ಶ್ವಾನ ಇಂದು ಉತ್ತರ ಕನ್ನಡ ಪೊಲೀಸರ ಮ್ಯಾರಥಾನ್ನಲ್ಲಿ 5 ಕಿಮೀ ಓಡಿ ಬೆಳ್ಳಿ ಪದಕ ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದೆ.
- Suraj Mahaveer Utture
- Updated on: Mar 9, 2025
- 5:40 pm
‘ನಾನೂ ನಿಮ್ಮಂತೆ ಡಿಸಿ ಆಗಬೇಕು’: ವಿದ್ಯಾರ್ಥಿನಿ ಮಾತಿಗೆ ಉತ್ತರ ಕನ್ನಡ ಡಿಸಿ ಮಾಡಿದ್ದೇನು ಗೊತ್ತಾ?
ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ವಿದ್ಯಾರ್ಥಿನಿಯೊಬ್ಬಳು ಜಿಲ್ಲಾಧಿಕಾರಿಯಾಗುವ ತಮ್ಮ ಕನಸನ್ನು ಹಂಚಿಕೊಂಡಾಗ, ತಮ್ಮ ಕುರ್ಚಿಯಲ್ಲಿ ಕೂರಿಸಿ ಪ್ರೋತ್ಸಾಹಿಸಿದರು. ಇದು ವಿದ್ಯಾರ್ಥಿನಿಗೆ ಉನ್ನತ ಸಾಧನೆಗೆ ಪ್ರೇರಣೆ ನೀಡುವುದಲ್ಲದೆ, ಜಿಲ್ಲಾಧಿಕಾರಿಯ ಸಾಮಾಜಿಕ ಜವಾಬ್ದಾರಿಯನ್ನು ಸಾರುತ್ತದೆ. ಲಕ್ಷ್ಮೀಪ್ರಿಯಾ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
- Suraj Mahaveer Utture
- Updated on: Mar 7, 2025
- 10:35 pm
ಮರಿ ಹುಲಿಗಳ ರಾಜ ಗಾಂಭೀರ್ಯ ನಡಿಗೆ: ವಿಡಿಯೋ ನೋಡಿ
ಎರಡು ಮರಿ ಹುಲಿಗಳು ರಾಜ ಗಾಂಭೀರ್ಯದಿಂದ ರಸ್ತೆ ದಾಟಿದ ವಿಡಿಯೋ ಪ್ರವಾಸಿಗರ ಮೊಬೈಲ್ನಲ್ಲಿ ಸೆರೆಯಾಗಿದೆ. ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಬರ್ಚಿ ಕ್ರಾಸ್ ಬಳಿ ಗಣೇಶಗುಡಿಯಲ್ಲಿ ಯಾರ ಭಯವೂ ಇಲ್ಲದೇ ರಸ್ತೆ ಹುಲಿ ಮರಿಗಳು ರಸ್ತೆ ದಾಟುತ್ತಿರುವ ದೃಶ್ಯ ಅದ್ಭತ. ಪ್ರಯಾಣಿಕರು ತೆರಳುತ್ತಿದ್ದಾಗ ಏಕಾಏಕಿ ಕಾರಿಗೆ ಮರಿ ಹುಲಿಗಳು ಅಡ್ಡ ಬಂದಿದ್ದು, ಒಂದು ಕ್ಷಣ ಪ್ರಯಾಣಿಕರು ದಂಗಾಗಿದ್ದಾರೆ.
- Suraj Mahaveer Utture
- Updated on: Mar 7, 2025
- 9:00 pm
ಉತ್ತರ ಕನ್ನಡ ಜಿಲ್ಲೆಯಲ್ಲಿ 9 ಕಡೆ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಯಲ್ಲಿ 9 ಸ್ಥಳಗಳಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಮುಂದಿನ ಮೂರು ದಿನಗಳ ಕಾಲ ತೀವ್ರ ಬಿಸಿಲಿಗೆ ಎಚ್ಚರಿಕೆ ನೀಡಿದ್ದಾರೆ. ಮಧ್ಯಾಹ್ನದ ವೇಳೆ ಮನೆಯಿಂದ ಹೊರಗೆ ಹೋಗದಿರಲು, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಛತ್ರಿ ಮತ್ತು ಟೋಪಿ ಧರಿಸಲು ಮನವಿ ಮಾಡಿದ್ದಾರೆ. ಯಾವುದೇ ತೊಂದರೆ ಎದುರಾದರೆ 1077 ಗೆ ಕರೆ ಮಾಡಲು ಸೂಚಿಸಲಾಗಿದೆ.
- Suraj Mahaveer Utture
- Updated on: Mar 3, 2025
- 5:43 pm
ಸಚಿವರಿಂದಲೇ ಅರಣ್ಯ ಭೂಮಿ ಒತ್ತುವರಿ ಆರೋಪ: ಮಂಕಾಳು ವೈದ್ಯ ವಿರುದ್ಧ ರಾಜ್ಯಪಾಲರಿಗೆ ದೂರು
ಸಚಿವ ಮಂಕಾಳು ವೈದ್ಯ ವಿರುದ್ಧ ಭಟ್ಕಳದ ಆರ್ಟಿಐ ಕಾರ್ಯಕರ್ತರು ಅರಣ್ಯ ಭೂಮಿ ಒತ್ತುವರಿ ಆರೋಪ ಮಾಡಿದ್ದಾರೆ. ಬೈಲೂರಿನ ಸರ್ಕಾರಿ ಅರಣ್ಯ ಜಾಗವನ್ನು ತಮ್ಮ ಶಿಕ್ಷಣ ಸಂಸ್ಥೆಗಾಗಿ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತಾಗಿ ರಾಜ್ಯಪಾಲರು ಮತ್ತು ಮುಖ್ಯ ಅರಣ್ಯಾಧಿಕಾರಿಗಳಿಗೆ ದೂರು ನೀಡಲಾಗಿದೆ.
- Suraj Mahaveer Utture
- Updated on: Mar 1, 2025
- 2:54 pm
ಗೋಕರ್ಣ ಉತ್ಸವದಲ್ಲಿ ಎಸ್ಪಿ ನಾರಾಯಣ ಗಾಯನ
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ನಡೆದ ಮೂರು ದಿನಗಳ ಗೋಕರ್ಣ ಉತ್ಸವದಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಅವರು "ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು" ಎಂಬ ಜನಪ್ರಿಯ ಕನ್ನಡ ಗೀತೆಯನ್ನು ಹಾಡಿದರು. ಸರಿಗಮಪ ಸ್ಪರ್ಧಿಗಳೊಂದಿಗೆ ಅವರು ಧ್ವನಿಗೂಡಿಸಿದರು. ಶುಕ್ರವಾರ ಈ ಉತ್ಸವಕ್ಕೆ ತೆರೆ ಬಿದ್ದಿತು. ಈ ಕಾರ್ಯಕ್ರಮ ಜಿಲ್ಲಾಡಳಿತದಿಂದ ಆಯೋಜಿಸಲ್ಪಟ್ಟಿತ್ತು.
- Suraj Mahaveer Utture
- Updated on: Mar 1, 2025
- 2:24 pm
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ
ಲಂಚ ಸ್ವೀಕರಿಸುವಾಗ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ (ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಲಂಚ ಪಡೆದ ಆರೋಪದ ಮೇಲೆ ಇಬ್ಬರು ಪೊಲೀಸರು ಅನಾನತುಗೊಂಡಿದ್ದಾರೆ. ಐಪಿಎಸ್ ಅಧಿಕಾರಿ ಕಡೆಯವರು ಲಂಚದ ಪಡೆದ ಆರೋಪದ ಮೇಲೆ ಸಸ್ಪೆಂಡ್ ಆಗಿದ್ದಾರೆ. ಈ ಎರಡು ಪ್ರತ್ಯೇಕ ಪ್ರಕರಣ ಸಂಪೂರ್ಣ ವಿವರ ಇಲ್ಲಿದೆ.
- Suraj Mahaveer Utture
- Updated on: Feb 28, 2025
- 9:14 pm
ಬ್ರೇಕಪ್ ಆಗಿ ಮತ್ತೆ ಚಿಗುರೊಡೆದ ಪ್ರೀತಿ: ಹುಡುಗಿಯ ಗಂಡನ ಕಥೆಯನ್ನೇ ಮುಗಿಸಿದ ಕಿರಾತಕ ಪ್ರೇಮಿ
ಪ್ರೀತಿ ಮಾಡಿ ಆ ಪ್ರೀತಿ ಮುರಿದು ಬಿದ್ರೆ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಹುಚ್ಚರಾಗುತ್ತಾರೆ. ಇನ್ನು ಕೆಲವರು ಹೋದ್ರೆ ಹೋಗಲಿ ಬಿಡು ಎಂದು ಸುಮ್ನೆ ಆಗಿಬಿಡುತ್ತಾರೆ. ಆದ್ರೆ, ಇಲ್ಲೋರ್ವ ತನ್ನ ಪ್ರೇಯಸಿ ಗಂಡನನ್ನೇ ಭೀಕರ ಕೊಲೆಗೈದಿದ್ದಾನೆ. ಅವರಿಬ್ಬರ ನಡುವೆ ಹತ್ತು ವರ್ಷದಿಂದ ಪ್ರೀತಿ ಇತ್ತು. ಕ್ಷುಲ್ಲಕ ಕಾರಣಕ್ಕೆ ಇಬ್ಬರು ಪ್ರೇಮಿಗಳ ನಡುವೆ ಭಿನ್ನಾಭಿಪ್ರಾಯ ಬಂದಿದೆ. ಕೋಪದಲ್ಲಿದ್ದ ಪ್ರಿಯತಮೆ ಬೇರೆ ಹುಡುಗನನ್ನು ಮದುವೆ ಆಗಿದ್ದಾಳೆ. ಮದುವೆಯಾದ ಆರೇ ತಿಂಗಳಲ್ಲಿ ಹಳೆ ಲವರ್, ಮದುವೆ ಮಾಡಿಕೊಂಡಿದ್ದ ಹುಡುಗನಿಗೆ ಚಾಕುವಿನಿಂದ ಇರಿದು ಕೊಂದೆ ಬಿಟ್ಟಿದ್ದಾನೆ.
- Suraj Mahaveer Utture
- Updated on: Feb 23, 2025
- 5:24 pm
ಪ್ರವಾಸೋದ್ಯಮ ಕಚೇರಿಯಲ್ಲೇ ಅಧಿಕಾರಿಯ ಬೆಡ್ರೂಂ! ಮಂಚ, ಹಾಸಿಗೆ ನೋಡಿ ಬೆಚ್ಚಿಬಿದ್ದ ಎಸಿ
ಇದು ಸರ್ಕಾರಿ ಕಚೇರಿಯೋ ಅಲ್ಲಾ ಅಧಿಕಾರಿಯ ಬೆಡ್ ರೂಮೋ? ಪ್ರವಾಸೋದ್ಯಮ ಇಲಾಖೆಯ ಉತ್ತರ ಕನ್ನಡ ಜಿಲ್ಲಾ ಉಪನಿರ್ದೇಶಕರ ಕಚೇರಿ ನೋಡಿದ ಎಸಿಯೇ ಶಾಕ್ಗೆ ಒಳಗಾಗಿದ್ದರು. ಅಲ್ಲಿ ಕೆಲಸ ಮಾಡಲು ಸರಿಯಾಗಿ ಜಾಗ ಇತ್ತೋ ಇಲ್ಲವೋ, ಆದರೆ, ಮಂಚ, ಹಾಸಿಗೆ ಎಲ್ಲವೂ ಇತ್ತು! ಇದೇನಿದರು ಪ್ರಕರಣ? ವಿವರಗಳಿಗೆ ಮುಂದೆ ಓದಿ.
- Suraj Mahaveer Utture
- Updated on: Feb 20, 2025
- 9:15 am