ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.
ಡಿಜಿಟಲ್ ಅರೆಸ್ಟ್ ಬೆದರಿಕೆ: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ನಿವೃತ್ತ ಶಿಕ್ಷಕ
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಿವೃತ್ತ ಶಿಕ್ಷಕರೋರ್ವರು ಡಿಜಿಟಲ್ ಅರೆಸ್ಟ್ ವಂಚನೆಗೆ ಬಲಿಯಾಗಿ 1.6 ಕೋಟಿ ರೂ. ಕಳೆದುಕೊಂಡಿದ್ದಾರೆ. ವಂಚಕರು ಪೊಲೀಸರಂತೆ ನಟಿಸಿ ಮನಿ ಲಾಂಡ್ರಿಂಗ್ ಆರೋಪದ ಭೀತಿ ಹುಟ್ಟಿಸಿದ್ದಾರೆ. ಹಣವನ್ನು 'ನ್ಯಾಷನಲ್ ಫಂಡ್'ಗೆ ಜಮೆ ಮಾಡುವಂತೆ ನಂಬಿಸಿ ಸುಲಿಗೆ ಮಾಡಿದ್ದಾರೆ. ಈ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
- Suraj Mahaveer Utture
- Updated on: Jan 2, 2026
- 7:22 pm
Video: ಯಾಣ ಕಡೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಬಸ್ ಪಲ್ಟಿ, 12 ವಿದ್ಯಾರ್ಥಿಗಳಿಗೆ ಗಾಯ
ಉತ್ತರ ಕನ್ನಡದ ಕುಮಟಾ ತಾಲೂಕಿನ ಯಾಣ ಬಳಿ ದಾವಣಗೆರೆಯ ಜೈನ್ ಪಿಯು ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿಯಾಗಿದೆ. ಶಿರಸಿಯಿಂದ ಯಾಣಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಬಸ್ನಲ್ಲಿ 20 ವಿದ್ಯಾರ್ಥಿನಿಯರು, 27 ವಿದ್ಯಾರ್ಥಿಗಳು ಮತ್ತು ಮೂವರು ಶಿಕ್ಷಕರಿದ್ದು, 12 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಮಟಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Suraj Mahaveer Utture
- Updated on: Dec 30, 2025
- 8:56 pm
ಹೊಸ ವರ್ಷಾಚರಣೆಗೆ ಗೋಕರ್ಣ, ಹೊನ್ನಾವರ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡು, ಕಠಿಣ ರೂಲ್ಸ್ ಮಾಡಿದ ಜಿಲ್ಲಾಡಳಿತ
ಹೊಸ ವರ್ಷಕ್ಕೆ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸಿಗರ ದಂಡು ಹರಿದುಬರುತ್ತಿದೆ, ವಿಶೇಷವಾಗಿ ಗೋಕರ್ಣ ಮತ್ತು ಮುರುಡೇಶ್ವರ. ಇದೀಗ ಹೋಂ ಸ್ಟೇ, ರೆಸಾರ್ಟ್ಗಳು ತುಂಬಿ, ದರಗಳು ಏರಿಕೆ ಆಗಿದೆ. ಅಹಿತಕರ ಘಟನೆ ತಡೆಯಲು 1300ಕ್ಕೂ ಹೆಚ್ಚು ಪೊಲೀಸರು, 31 ಚೆಕ್ಪೋಸ್ಟ್ಗಳೊಂದಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ರಾತ್ರಿ ಸಮುದ್ರಕ್ಕಿಳಿಯುವುದನ್ನು ನಿಷೇಧಿಸಲಾಗಿದೆ, ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ಪೊಲೀಸರ ಹದ್ದಿನ ಕಣ್ಣಿದೆ.
- Suraj Mahaveer Utture
- Updated on: Dec 30, 2025
- 5:02 pm
Video: ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ಉದಯ್ ವಿದ್ಯಾರ್ಥಿಗಳಿಂದ ತನ್ನ ಕಾರು ತೊಳಸಿದ ಘಟನೆ ಬೆಳಕಿಗೆ ಬಂದಿದೆ. ಶಾಲಾ ಅವಧಿಯಲ್ಲೇ ಮಕ್ಕಳು ಕಾರು ತೊಳೆಯುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿಂದೆ ಇಂತಹ ಘಟನೆಗಳಿದ್ದ ಬಗ್ಗೆ ದೂರುಗಳಿದ್ದವು. ಶಿಕ್ಷಣ ಇಲಾಖೆ ಘಟನೆ ಬಗ್ಗೆ ವರದಿ ನೀಡುವಂತೆ ಸೂಚಿಸಿದೆ.
- Suraj Mahaveer Utture
- Updated on: Dec 30, 2025
- 2:51 pm
ಡಿಕೆ ಶಿವಕುಮಾರ್ಗೆ 16 ಲಕ್ಷ ರೂ. ಮೌಲ್ಯದ ಭರ್ಜರಿ ಗಿಫ್ಟ್: ಅಂಥದ್ದೇನಿದೆ ಇದರಲ್ಲಿ? ಇಲ್ಲಿದೆ ನೋಡಿ
ಕಾರವಾರದಲ್ಲಿ ನಡೆದ ‘ಕರಾವಳಿ ಉತ್ಸವ’ದಲ್ಲಿ ಭಾನುವಾರ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅಪರೂಪದ ಉಡುಗೊರೆಯೊಂದನ್ನು ನೀಡಿದ್ದಾರೆ. ವಿಷ್ಣುವಿನ ವಿಶ್ವರೂಪ ದರ್ಶನದ ಶ್ರೀಗಂಧದಿಂದ ತಯಾರಿಸಿದ ಕಲಾಕೃತಿ ನೀಡಿದ್ದಾರೆ. ಇದು 16 ಲಕ್ಷ ರೂ. ಮೌಲ್ಯದ್ದಾಗಿದೆ. ಕಲಾಕೃತಿಯ ವಿಡಿಯೋ ಇಲ್ಲಿದೆ ನೋಡಿ.
- Suraj Mahaveer Utture
- Updated on: Dec 29, 2025
- 8:59 am
ಉತ್ತರ ಕನ್ನಡಕ್ಕೆ ಸಿಹಿ ಸುದ್ದಿ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್: ಮೆಗಾ ಟೂರಿಸಂ ಪ್ಲಾನ್, ನದಿ ಜೋಡಣೆಗೆ ಗ್ರೀನ್ ಸಿಗ್ನಲ್
ಭಾನುವಾರ ಕಾರವಾರದ ಕರಾವಳಿ ಉತ್ಸವದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರಾವಳಿಯನ್ನು ಪ್ರವಾಸೋದ್ಯಮ ಹಬ್ ಆಗಿ ಅಭಿವೃದ್ಧಿಪಡಿಸುವುದು ಎಂದು ಭರವಸೆ ನೀಡಿದರು. ಅಲ್ಲದೆ, ಸೂಪರ್ ಸ್ಪೆಷಲಿಟಿ ಆಸ್ಪತ್ರೆ ನಿರ್ಮಾಣ ಮತ್ತು ನದಿ ಜೋಡಣೆಗೆ ಡಿಪಿಆರ್ ಘೋಷಣೆ ಮಾಡಿ ಉತ್ತರ ಕನ್ನಡಕ್ಕೆ ಹೊಸ ಭರವಸೆ ನೀಡಿದರು.
- Suraj Mahaveer Utture
- Updated on: Dec 29, 2025
- 7:03 am
ಸರ್ಕಾರಿ ಶಾಲೆ ಮಕ್ಕಳನ್ನ ಹೆಲಿಕಾಪ್ಟರ್ನಲ್ಲಿ ಕರೆದೊಯ್ದ MLA ಸತೀಶ್ ಸೈಲ್ ಪುತ್ರಿ
ಕರಾವಳಿ ಉತ್ಸವದ ಅಂಗವಾಗಿ ಶಾಸಕ ಸತೀಶ್ ಸೈಲ್ ಅವರ ಪುತ್ರಿ ಸಾಚಿ ಸೈಲ್ ಮಕ್ಕಳು, ವಿಶೇಷ ಚೇತನರು ಹಾಗೂ ಪೌರಕಾರ್ಮಿಕರಿಗೆ ಉಚಿತ ಹೆಲಿಕಾಪ್ಟರ್ ಸವಾರಿ ಆಯೋಜಿಸಿದ್ದಾರೆ. ಸುಮಾರು 7 ನಿಮಿಷಗಳ ಈ ರೈಡ್ನಲ್ಲಿ ಕಡಲತೀರ, ಕಾಳಿ ಸಂಗಮ ಮತ್ತು ಕಾರವಾರ ನಗರದ ವೈಮಾನಿಕ ನೋಟವನ್ನು ಸವಿಯುವ ಅವಕಾಶ ಕಲ್ಪಿಸಲಾಗಿದೆ.
- Suraj Mahaveer Utture
- Updated on: Dec 24, 2025
- 5:22 pm
ಗೋಕರ್ಣ ದೇಗುಲದಲ್ಲಿ ಡಿಕೆ ಶಿವಕುಮಾರ್ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟು ಆಶಿರ್ವದಿಸಿದ ಮಹಾಗಣಪತಿ
ಗೋಕರ್ಣದ ಮಹಾಗಣಪತಿ ಮತ್ತು ಆಂಡ್ಲೇ ಗ್ರಾಮದ ಜಗದೀಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶುಭ ಸೂಚನೆ ದೊರೆತಿದೆ. ಗೋಕರ್ಣದ ಮಹಾಗಣಪತಿ ಡಿಕೆ ಶಿವಕುಮಾರ್ಗೆ ಬಲಗಡೆಯಿಂದ ಹೂ ನೀಡಿದ್ದು, ಭಕ್ತರು ಮತ್ತು ಸ್ಥಳೀಯರಲ್ಲಿ ವಿಶೇಷ ಕುತೂಹಲ ಮೂಡಿಸಿದೆ. ವಿಡಿಯೋ ಇಲ್ಲಿದೆ.
- Suraj Mahaveer Utture
- Updated on: Dec 20, 2025
- 11:10 am
ಡಿಕೆ ಶಿವಕುಮಾರ್ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಆಂದ್ಲೆ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿ ಅವರಿಗೆ ಮುನ್ಸೂಚನೆಗಳನ್ನು ನೀಡಿದ್ದು, ಅವರ ಇಷ್ಟಾರ್ಥಗಳು ಈಡೇರಲಿವೆ ಎಂದು ಅರ್ಚಕ ಗಣೇಶ್ ನಾಯಕ್ ತಿಳಿಸಿದ್ದಾರೆ. ವಿಡಿಯೋ ನೋಡಿ.
- Suraj Mahaveer Utture
- Updated on: Dec 19, 2025
- 9:30 pm
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಸಿಎಂ ಡಿಕೆ ಶಿವಕುಮಾರ್
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉತ್ತರ ಕನ್ನಡ ಜಿಲ್ಲೆಯ ಆಂಡ್ಲೇ ಜಗದೀಶ್ವರಿ ಮತ್ತು ಗೋಕರ್ಣ ಮಹಾಬಲೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಎಂ ಕುರ್ಚಿ ಕಾಳಗದ ನಡುವೆ ಡಿಕೆಶಿ ಟೆಂಪಲ್ ರನ್ ನಡೆಸಿ ಶಕ್ತಿ ದೇವತೆ ಮೊರೆ ಹೋಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
- Suraj Mahaveer Utture
- Updated on: Dec 19, 2025
- 3:44 pm
ಕಾರವಾರ ನೌಕಾನೆಲೆಗೆ ಹಾರಿಬಂದ ಸೀಗಲ್ ಹಕ್ಕಿಯಲ್ಲಿ ಚೀನಾದ ಜಿಪಿಎಸ್ ಟ್ರ್ಯಾಕರ್ ಪತ್ತೆ
ಕಾರವಾದಲ್ಲಿ ಅದೊಂದು ವಲಸಿಗ ಸೀಗಲ್ ಹಕ್ಕಿಯಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕದಂಬ ನೌಕಾನೆಲೆ ಪ್ರದೇಶದಲ್ಲಿ ಮಂಗಳವಾರ ಕಾಣಿಸಿಕೊಂಡ ಸೀಗಲ್ ಹಕ್ಕಿ ಪೊಲೀಸರನ್ನು ದಂಗಾಗಿಸಿದೆ. ಸದ್ಯ ಪತ್ತೆಯಾದ ಈ ಸೀಗಲ್ ಹಕ್ಕಿ ಕುರಿತು ತನಿಖೆಗೆ ನೌಕಾದಳ ಪೊಲೀಸರು ಮುಂದಾಗಿದ್ದಾರೆ.
- Suraj Mahaveer Utture
- Updated on: Dec 17, 2025
- 4:13 pm
“ನಮಗೆ ಹೊಸ ಸೇತುವೆ ಬೇಕು”: 30 ವರ್ಷಗಳಿಂದ ಮನವಿ, ಕ್ಯಾರೆ ಎನ್ನದ ಅಧಿಕಾರಿಗಳು
ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಹುಲಿಮನೆ ಗ್ರಾಮಸ್ಥರು ಕಳೆದ 30 ವರ್ಷಗಳಿಂದ ಸೇತುವೆ ಸಮಸ್ಯೆಯಿಂದ ಕಷ್ಟಪಡುತ್ತಿದ್ದಾರೆ. ಹಳೆಯ ಸೇತುವೆ ಹಾಳಾಗಿದ್ದು, ಹೊಸ ಸೇತುವೆ ನಿರ್ಮಿಸುವಂತೆ ಪದೇ ಪದೇ ಮನವಿ ಮಾಡಿದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ. ಶಾಲೆಗೆ ಹೋಗುವ ಮಕ್ಕಳು ಮತ್ತು ಮಹಿಳೆಯರು ವಿದ್ಯುತ್ ಕಂಬದ ಮೇಲೆ ಅಪಾಯಕಾರಿ ರೀತಿಯಲ್ಲಿ ಹಳ್ಳ ದಾಟುವ ಪರಿಸ್ಥಿತಿ ಬಂದಿದೆ. ಈ ಸಂಕಷ್ಟಕ್ಕೆ ಸೂಕ್ತ ಪರಿಹಾರ ಸಿಗಬೇಕಿದೆ ಎಂದು ಅಲ್ಲಿನ ಜನ ಹೇಳಿದ್ದಾರೆ.
- Suraj Mahaveer Utture
- Updated on: Dec 16, 2025
- 3:26 pm