AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರಜ್​, ಮಹಾವೀರ್​ ಉತ್ತರೆ

ಸೂರಜ್​, ಮಹಾವೀರ್​ ಉತ್ತರೆ

Author - TV9 Kannada

surajmahaveer.utture@tv9.com

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಬಾತ್​ರೂಮ್​ನಲ್ಲಿ ಮಗನನ್ನು ಕೂಡಿ ಹಾಕಿ, ಖಾರದ ಪುಡಿ ಎರಚಿ ತಂದೆಯಿಂದ ಚಿತ್ರಹಿಂಸೆ

ಬಾತ್​ರೂಮ್​ನಲ್ಲಿ ಮಗನನ್ನು ಕೂಡಿ ಹಾಕಿ, ಖಾರದ ಪುಡಿ ಎರಚಿ ತಂದೆಯಿಂದ ಚಿತ್ರಹಿಂಸೆ

ಉತ್ತರ ಕನ್ನಡದ ಕುಮಟಾ ತಾಲೂಕಿನ ಹೆಗಡೆ ಗ್ರಾಮದಲ್ಲಿ 7 ವರ್ಷದ ಬಾಲಕನಿಗೆ ತಂದೆ ವಿಜಯ್ ನಾಯ್ಕನಿಂದ ಭೀಕರ ಚಿತ್ರಹಿಂಸೆ ನೀಡಲಾಗಿದೆ. ಬಾಲಕನ ಅಂಗೈ ಸುಟ್ಟು, ಕಣ್ಣಿಗೆ ಖಾರದಪುಡಿ ಎರಚಿ, ಬಾತ್‌ರೂಮ್‌ನಲ್ಲಿ ಕೂಡಿಹಾಕಿರುವ ಕೃತ್ಯ ಬೆಳಕಿಗೆ ಬಂದಿದೆ. ವಿಚ್ಛೇದಿತ ಪತ್ನಿಯ ಮೇಲಿನ ಸಿಟ್ಟಿಗೆ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ವರ್ಷ ಕಳೆದರೂ ಮುಗಿದಿಲ್ಲ ಶಿರಸಿ-ಕುಮಟಾ ರಸ್ತೆ ಕಾಮಗಾರಿ: ಆಮೆಗತಿ ಕೆಲಸಕ್ಕೆ ಜನಾಕ್ರೋಶ

ವರ್ಷ ಕಳೆದರೂ ಮುಗಿದಿಲ್ಲ ಶಿರಸಿ-ಕುಮಟಾ ರಸ್ತೆ ಕಾಮಗಾರಿ: ಆಮೆಗತಿ ಕೆಲಸಕ್ಕೆ ಜನಾಕ್ರೋಶ

ಉತ್ತರ ಕನ್ನಡದ ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ 766(ಇ) ಕಾಮಗಾರಿ ಒಂದು ವರ್ಷ ಕಳೆದರೂ ಮುಗಿದಿಲ್ಲ. ಆರು ತಿಂಗಳಲ್ಲಿ ಪೂರ್ಣಗೊಳಿಸುವ ಭರವಸೆ ನೀಡಿದ್ದ RNS ಕಂಪನಿ ಅದನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಭಾರೀ ವಾಹನ ಸಂಚಾರ ನಿರ್ಬಂಧಿಸಿರುವ ಕಾರಣ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತೆ ಕೈದಿಗಳ ಗಲಾಟೆ: ಮಾದಕವಸ್ತು ಕೊಟ್ಟಿಲ್ಲವೆಂದು ಟಿವಿ ಒಡೆದು ದಾಂಧಲೆ

ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತೆ ಕೈದಿಗಳ ಗಲಾಟೆ: ಮಾದಕವಸ್ತು ಕೊಟ್ಟಿಲ್ಲವೆಂದು ಟಿವಿ ಒಡೆದು ದಾಂಧಲೆ

ಉತ್ತರ ಕನ್ನಡದ ಕಾರವಾರ ಜೈಲಿನಲ್ಲಿ ಮಾದಕವಸ್ತು ಸಿಗಲಿಲ್ಲವೆಂದು ಕೈದಿಗಳು ಟಿವಿ ಒಡೆದು, ಇತರ ವಸ್ತುಗಳಿಗೆ ಹಾನಿ ಮಾಡಿದ್ದಾರೆ. ಮಂಗಳೂರಿನಿಂದ ವರ್ಗಾವಣೆಯಾಗಿದ್ದ ಈ ರೌಡಿ ಕೈದಿಗಳು ಹಲವು ಗಂಭೀರ ಪ್ರಕರಣಗಳಲ್ಲಿ ಶಾಮೀಲಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಜೈಲು ಭದ್ರತೆ ಹೆಚ್ಚಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಈ ಊರಿನ ಮಕ್ಕಳು ಶಾಲೆಗೆ 14 ಕಿಮೀ ನಡೆದೇ ಹೋಗಬೇಕು! ಕಾಡು ಪ್ರಾಣಿಗಳಿಂದ ಸುರಕ್ಷತೆ ಕೋರಿ ಸಿಎಂಗೆ ಪತ್ರ ಬರೆದ ವಿದ್ಯಾರ್ಥಿಗಳು

ಈ ಊರಿನ ಮಕ್ಕಳು ಶಾಲೆಗೆ 14 ಕಿಮೀ ನಡೆದೇ ಹೋಗಬೇಕು! ಕಾಡು ಪ್ರಾಣಿಗಳಿಂದ ಸುರಕ್ಷತೆ ಕೋರಿ ಸಿಎಂಗೆ ಪತ್ರ ಬರೆದ ವಿದ್ಯಾರ್ಥಿಗಳು

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ವಿದ್ಯಾರ್ಥಿಗಳುಪ್ರತಿನಿತ್ಯ ಶಾಲೆಗೆ 14 ಕಿ.ಮೀ ನಡೆದೇ ಹೋಗಬೇಕಿದ್ದು, ರಸ್ತೆಯಲ್ಲಿ ಕಾಡಾನೆ, ಚಿರತೆ, ಹುಲಿಗಳ ಕಾಟದಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಭಯಪಡುತ್ತಿದ್ದಾರೆ. ಈ ಕುರಿತು ವಿದ್ಯರ್ಥಿಗಳು ರಸ್ತೆ, ವಾಹನ ಸೌಲಭ್ಯದ ಕೊರತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಶಾಸಕರಿಗೆ ಪತ್ರ ಬರೆದು ಸುರಕ್ಷತೆ ಮತ್ತು ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಅಂಕೋಲಾದ ಕಡಲ ತೀರದಲ್ಲಿ ವಿದೇಶಿ ಹಕ್ಕಿಗಳ ಕಲರವ: ವಲಸೆ ಬಂದಿರೋ ಬಾನಾಡಿಗಳನ್ನೊಮ್ಮೆ ನೋಡಿ

ಅಂಕೋಲಾದ ಕಡಲ ತೀರದಲ್ಲಿ ವಿದೇಶಿ ಹಕ್ಕಿಗಳ ಕಲರವ: ವಲಸೆ ಬಂದಿರೋ ಬಾನಾಡಿಗಳನ್ನೊಮ್ಮೆ ನೋಡಿ

ಕರ್ನಾಟಕದಲ್ಲಿ ಚಳಿ ಆರ್ಭಟ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಕೊರೆಯುವ ಚಳಿ ಇದ್ದರೆ, ಇತ್ತ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಾತ್ರ ಬೆಚ್ಚಗಿನ ವಾತಾವರಣವಿದೆ. ಹೀಗಾಗಿ ತೀರ ಪ್ರದೇಶಗಳಿಗೆ ವಿದೇಶಿ ಹಕ್ಕಿಗಳು ಹಾರಿ ಬರುತ್ತಿವೆ. ಸದ್ಯ ಕಡಲ ತೀರದಲ್ಲಿ ಸೀಗಲ್​​ಗಳ ಕಲರವ ಮನೆ ಮಾಡಿದೆ. ಇಲ್ಲಿವೆ ಫೋಟೋಸ್​​.

ಮುಂಡಗೋಡ: ಶಾಲಾ ಬಿಸಿಯೂಟ ಸೇವಿಸಿ 22ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಮುಂಡಗೋಡ: ಶಾಲಾ ಬಿಸಿಯೂಟ ಸೇವಿಸಿ 22ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಉತ್ತರ ಕನ್ನಡದ ಮುಂಡಗೋಡ ಶಾಲೆಯ ಬಿಸಿಯೂಟ ಸೇವಿಸಿ 22ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅಕ್ಷರ ದಾಸೋಹದಡಿ ಪೂರೈಕೆಯಾದ ಕಳಪೆ ಆಹಾರದಲ್ಲಿ ಇಲಿ ಹಿಕ್ಕೆ ಪತ್ತೆಯಾಗಿದೆ. 12 ಮಕ್ಕಳು ಗಂಭೀರ ಸ್ಥಿತಿಯಲ್ಲಿದ್ದು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಮಕ್ಕಳ ಆರೋಗ್ಯಕ್ಕೆ ಮಾರಕವಾಗಿದೆ. ಆಹಾರ ಗುಣಮಟ್ಟ ಪರೀಕ್ಷೆ ಮತ್ತು ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ.

ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗ್ತಿದ್ದ ಶಿಕ್ಷಕ ಸೇರಿ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗ್ತಿದ್ದ ಶಿಕ್ಷಕ ಸೇರಿ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ

ಉತ್ತರ ಕನ್ನಡದ ಕುಮಟಾ ತಾಲೂಕಿನ ಗೋಕರ್ಣ ಕಡಲತೀರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆಯ ಶಿಕ್ಷಕ ಹಾಗೂ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಲೈಫ್‌ ಗಾರ್ಡ್‌ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ರಕ್ಷಣೆ ಮಾಡಿದ್ದಾರೆ. ಸದ್ಯ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಎನ್ನುವಂತೆ ತಂದೆ ಮಾಡಿದ ತಪ್ಪಿಗೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಎನ್ನುವಂತೆ ತಂದೆ ಮಾಡಿದ ತಪ್ಪಿಗೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಒಂದು ಹೇಯ ಕೃತ್ಯ ನಡೆದಿದೆ. ತಂದೆ ಸಾಲ ಮರುಪಾವತಿಸದಿದ್ದಕ್ಕೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವಂತಹ ಘಟನೆ ಬೆಳಕಿಗೆ ಬಂದಿದೆ. ಸದ್ಯ ಶಿರಸಿ ಗ್ರಾಮಾಂತರ ಠಾಣೆಗೆ ದೂರು ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಸಿಎಂಗೆ ರಕ್ತದಲ್ಲಿ ಪತ್ರ ಅಭಿಯಾನ

ಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಸಿಎಂಗೆ ರಕ್ತದಲ್ಲಿ ಪತ್ರ ಅಭಿಯಾನ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕೊರತೆಯಿಂದ ತುರ್ತು ಚಿಕಿತ್ಸೆಗೆ ಜನ ದೂರದ ಜಿಲ್ಲೆಗಳಿಗೆ ಅಲೆಯಬೇಕಿದೆ. ಅದೆಷ್ಟೋ ಜೀವಗಳು ದಾರಿ ಮಧ್ಯೆಯೇ ಅಸುನೀಗಿವೆ. ಹೀಗಾಗಿ ರಾಜ್ಯ ಸರ್ಕಾರದ ಗಮನ ಸೆಳೆಯಲು ಜಿಲ್ಲೆಯ ಯುವಕರು ಮುಂದಾಗಿದ್ದು'ಆಸ್ಪತ್ರೆ ನೀಡಿ ಇಲ್ಲವೇ ದಯಾಮರಣ ಕರುಣಿಸಿ' ಎಂದು ಸಿಎಂಗೆ ರಕ್ತದಲ್ಲಿ ಪತ್ರ ಬರೆಯುವ ಅಭಿಯಾನ ಆರಂಭಿಸಿದ್ದಾರೆ.

ಅರ್ಧ ಬೆಲೆಗೆ ಗೃಹೋಪಯೋಗಿ ವಸ್ತು ಆಮಿಷ: ನೂರಾರು ಮಂದಿಗೆ ಮಕ್ಮಲ್​ ಟೋಪಿ; ಕೋಟಿ ರೂ. ವಂಚನೆ

ಅರ್ಧ ಬೆಲೆಗೆ ಗೃಹೋಪಯೋಗಿ ವಸ್ತು ಆಮಿಷ: ನೂರಾರು ಮಂದಿಗೆ ಮಕ್ಮಲ್​ ಟೋಪಿ; ಕೋಟಿ ರೂ. ವಂಚನೆ

ಉತ್ತರ ಕನ್ನಡದ ಭಟ್ಕಳದಲ್ಲಿ ಗ್ಲೋಬಲ್ ಎಂಟರ್‌ಪ್ರೈಸಸ್ ಹೆಸರಿನಲ್ಲಿ ಭಾರಿ ವಂಚನೆ ಬೆಳಕಿಗೆ ಬಂದಿದೆ. ಅರ್ಧ ಬೆಲೆಗೆ ಗೃಹೋಪಯೋಗಿ ವಸ್ತುಗಳ ಆಮಿಷವೊಡ್ಡಿ ನೂರಾರು ಗ್ರಾಹಕರಿಂದ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ ತಮಿಳುನಾಡು ಮೂಲದ ವಂಚಕರು ರಾತ್ರೋರಾತ್ರಿ ಎಸ್ಕೇಪ್ ಆಗಿದ್ದಾರೆ. ವಂಚನೆ ಬಯಲಾಗುತ್ತಿದ್ದಂತೆ ಗ್ರಾಹಕರು ಅಂಗಡಿಗೆ ನುಗ್ಗಿ ಸಿಕ್ಕ ಸಿಕ್ಕ ವಸ್ತು ದೋಚಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಸ್ವೀಟ್ ಬಾಕ್ಸ್ ಮಾದರಿಯಲ್ಲಿ ಬಸ್ಸಿನಲ್ಲಿ ಹಣ, ಚಿನ್ನ ಸಾಗಾಟ: 32 ಚಿನ್ನದ ಬಳೆ, 50 ಲಕ್ಷ ರೂ ಜಪ್ತಿ

ಸ್ವೀಟ್ ಬಾಕ್ಸ್ ಮಾದರಿಯಲ್ಲಿ ಬಸ್ಸಿನಲ್ಲಿ ಹಣ, ಚಿನ್ನ ಸಾಗಾಟ: 32 ಚಿನ್ನದ ಬಳೆ, 50 ಲಕ್ಷ ರೂ ಜಪ್ತಿ

ಉತ್ತರ ಕನ್ನಡದ ಜಿಲ್ಲೆಯ ಭಟ್ಕಳದಲ್ಲಿ ಬಸ್ ಚಾಲಕನಿಂದ 50 ಲಕ್ಷ ರೂ ನಗದು ಹಾಗೂ 401 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್​​ ಚಾಲಕನ ಕೈಗೆ ಅನಾಮಿಕ ವ್ಯಕ್ತಿ ಸೂಟ್‌ಕೇಸ್ ನೀಡಿದ್ದ. ಭಟ್ಕಳ ಪೊಲೀಸರು ತಪಾಸಣೆ ವೇಳೆ ಪತ್ತೆ ಆಗದ್ದು, ಜಪ್ತಿ ಮಾಡಿದ್ದಾರೆ.

ಉತ್ತರ ಕನ್ನಡ ಪ್ರವಾಸೋದ್ಯಮಕ್ಕೆ ಹೊಡೆತ ಕೊಟ್ಟ ಮಳೆ: ಪ್ರವಾಸಿಗರಿಲ್ಲದೆ ಕಡಲತೀರ ಬಿಕೋ, ಇಲ್ಲಿವೆ ಫೋಟೋಸ್​​

ಉತ್ತರ ಕನ್ನಡ ಪ್ರವಾಸೋದ್ಯಮಕ್ಕೆ ಹೊಡೆತ ಕೊಟ್ಟ ಮಳೆ: ಪ್ರವಾಸಿಗರಿಲ್ಲದೆ ಕಡಲತೀರ ಬಿಕೋ, ಇಲ್ಲಿವೆ ಫೋಟೋಸ್​​

ಈ ವರ್ಷ ನಿರಂತರ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಗೋಕರ್ಣ, ಮುರುಡೇಶ್ವರ ಸೇರಿದಂತೆ ಕಡಲತೀರಗಳು ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿವೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ 4.61 ಲಕ್ಷ ಪ್ರವಾಸಿಗರಿದ್ದರೆ, ಈ ವರ್ಷ ಒಂದೂವರೆ ಲಕ್ಷಕ್ಕಿಂತ ಕಡಿಮೆ ಆಗಿದೆ.