ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.
ಅಂಕೋಲಾದ ಕಡಲ ತೀರದಲ್ಲಿ ವಿದೇಶಿ ಹಕ್ಕಿಗಳ ಕಲರವ: ವಲಸೆ ಬಂದಿರೋ ಬಾನಾಡಿಗಳನ್ನೊಮ್ಮೆ ನೋಡಿ
ಕರ್ನಾಟಕದಲ್ಲಿ ಚಳಿ ಆರ್ಭಟ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಕೊರೆಯುವ ಚಳಿ ಇದ್ದರೆ, ಇತ್ತ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಾತ್ರ ಬೆಚ್ಚಗಿನ ವಾತಾವರಣವಿದೆ. ಹೀಗಾಗಿ ತೀರ ಪ್ರದೇಶಗಳಿಗೆ ವಿದೇಶಿ ಹಕ್ಕಿಗಳು ಹಾರಿ ಬರುತ್ತಿವೆ. ಸದ್ಯ ಕಡಲ ತೀರದಲ್ಲಿ ಸೀಗಲ್ಗಳ ಕಲರವ ಮನೆ ಮಾಡಿದೆ. ಇಲ್ಲಿವೆ ಫೋಟೋಸ್.
- Suraj Mahaveer Utture
- Updated on: Dec 3, 2025
- 4:18 pm
ಮುಂಡಗೋಡ: ಶಾಲಾ ಬಿಸಿಯೂಟ ಸೇವಿಸಿ 22ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಉತ್ತರ ಕನ್ನಡದ ಮುಂಡಗೋಡ ಶಾಲೆಯ ಬಿಸಿಯೂಟ ಸೇವಿಸಿ 22ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅಕ್ಷರ ದಾಸೋಹದಡಿ ಪೂರೈಕೆಯಾದ ಕಳಪೆ ಆಹಾರದಲ್ಲಿ ಇಲಿ ಹಿಕ್ಕೆ ಪತ್ತೆಯಾಗಿದೆ. 12 ಮಕ್ಕಳು ಗಂಭೀರ ಸ್ಥಿತಿಯಲ್ಲಿದ್ದು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಮಕ್ಕಳ ಆರೋಗ್ಯಕ್ಕೆ ಮಾರಕವಾಗಿದೆ. ಆಹಾರ ಗುಣಮಟ್ಟ ಪರೀಕ್ಷೆ ಮತ್ತು ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ.
- Suraj Mahaveer Utture
- Updated on: Nov 29, 2025
- 3:23 pm
ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗ್ತಿದ್ದ ಶಿಕ್ಷಕ ಸೇರಿ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ
ಉತ್ತರ ಕನ್ನಡದ ಕುಮಟಾ ತಾಲೂಕಿನ ಗೋಕರ್ಣ ಕಡಲತೀರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆಯ ಶಿಕ್ಷಕ ಹಾಗೂ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಲೈಫ್ ಗಾರ್ಡ್ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ರಕ್ಷಣೆ ಮಾಡಿದ್ದಾರೆ. ಸದ್ಯ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
- Suraj Mahaveer Utture
- Updated on: Nov 29, 2025
- 3:01 pm
ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಎನ್ನುವಂತೆ ತಂದೆ ಮಾಡಿದ ತಪ್ಪಿಗೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ
ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಒಂದು ಹೇಯ ಕೃತ್ಯ ನಡೆದಿದೆ. ತಂದೆ ಸಾಲ ಮರುಪಾವತಿಸದಿದ್ದಕ್ಕೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವಂತಹ ಘಟನೆ ಬೆಳಕಿಗೆ ಬಂದಿದೆ. ಸದ್ಯ ಶಿರಸಿ ಗ್ರಾಮಾಂತರ ಠಾಣೆಗೆ ದೂರು ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
- Suraj Mahaveer Utture
- Updated on: Nov 20, 2025
- 4:17 pm
ಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಸಿಎಂಗೆ ರಕ್ತದಲ್ಲಿ ಪತ್ರ ಅಭಿಯಾನ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕೊರತೆಯಿಂದ ತುರ್ತು ಚಿಕಿತ್ಸೆಗೆ ಜನ ದೂರದ ಜಿಲ್ಲೆಗಳಿಗೆ ಅಲೆಯಬೇಕಿದೆ. ಅದೆಷ್ಟೋ ಜೀವಗಳು ದಾರಿ ಮಧ್ಯೆಯೇ ಅಸುನೀಗಿವೆ. ಹೀಗಾಗಿ ರಾಜ್ಯ ಸರ್ಕಾರದ ಗಮನ ಸೆಳೆಯಲು ಜಿಲ್ಲೆಯ ಯುವಕರು ಮುಂದಾಗಿದ್ದು'ಆಸ್ಪತ್ರೆ ನೀಡಿ ಇಲ್ಲವೇ ದಯಾಮರಣ ಕರುಣಿಸಿ' ಎಂದು ಸಿಎಂಗೆ ರಕ್ತದಲ್ಲಿ ಪತ್ರ ಬರೆಯುವ ಅಭಿಯಾನ ಆರಂಭಿಸಿದ್ದಾರೆ.
- Suraj Mahaveer Utture
- Updated on: Nov 13, 2025
- 3:10 pm
ಅರ್ಧ ಬೆಲೆಗೆ ಗೃಹೋಪಯೋಗಿ ವಸ್ತು ಆಮಿಷ: ನೂರಾರು ಮಂದಿಗೆ ಮಕ್ಮಲ್ ಟೋಪಿ; ಕೋಟಿ ರೂ. ವಂಚನೆ
ಉತ್ತರ ಕನ್ನಡದ ಭಟ್ಕಳದಲ್ಲಿ ಗ್ಲೋಬಲ್ ಎಂಟರ್ಪ್ರೈಸಸ್ ಹೆಸರಿನಲ್ಲಿ ಭಾರಿ ವಂಚನೆ ಬೆಳಕಿಗೆ ಬಂದಿದೆ. ಅರ್ಧ ಬೆಲೆಗೆ ಗೃಹೋಪಯೋಗಿ ವಸ್ತುಗಳ ಆಮಿಷವೊಡ್ಡಿ ನೂರಾರು ಗ್ರಾಹಕರಿಂದ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ ತಮಿಳುನಾಡು ಮೂಲದ ವಂಚಕರು ರಾತ್ರೋರಾತ್ರಿ ಎಸ್ಕೇಪ್ ಆಗಿದ್ದಾರೆ. ವಂಚನೆ ಬಯಲಾಗುತ್ತಿದ್ದಂತೆ ಗ್ರಾಹಕರು ಅಂಗಡಿಗೆ ನುಗ್ಗಿ ಸಿಕ್ಕ ಸಿಕ್ಕ ವಸ್ತು ದೋಚಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
- Suraj Mahaveer Utture
- Updated on: Nov 5, 2025
- 6:15 pm
ಸ್ವೀಟ್ ಬಾಕ್ಸ್ ಮಾದರಿಯಲ್ಲಿ ಬಸ್ಸಿನಲ್ಲಿ ಹಣ, ಚಿನ್ನ ಸಾಗಾಟ: 32 ಚಿನ್ನದ ಬಳೆ, 50 ಲಕ್ಷ ರೂ ಜಪ್ತಿ
ಉತ್ತರ ಕನ್ನಡದ ಜಿಲ್ಲೆಯ ಭಟ್ಕಳದಲ್ಲಿ ಬಸ್ ಚಾಲಕನಿಂದ 50 ಲಕ್ಷ ರೂ ನಗದು ಹಾಗೂ 401 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕನ ಕೈಗೆ ಅನಾಮಿಕ ವ್ಯಕ್ತಿ ಸೂಟ್ಕೇಸ್ ನೀಡಿದ್ದ. ಭಟ್ಕಳ ಪೊಲೀಸರು ತಪಾಸಣೆ ವೇಳೆ ಪತ್ತೆ ಆಗದ್ದು, ಜಪ್ತಿ ಮಾಡಿದ್ದಾರೆ.
- Suraj Mahaveer Utture
- Updated on: Nov 4, 2025
- 9:12 pm
ಉತ್ತರ ಕನ್ನಡ ಪ್ರವಾಸೋದ್ಯಮಕ್ಕೆ ಹೊಡೆತ ಕೊಟ್ಟ ಮಳೆ: ಪ್ರವಾಸಿಗರಿಲ್ಲದೆ ಕಡಲತೀರ ಬಿಕೋ, ಇಲ್ಲಿವೆ ಫೋಟೋಸ್
ಈ ವರ್ಷ ನಿರಂತರ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಗೋಕರ್ಣ, ಮುರುಡೇಶ್ವರ ಸೇರಿದಂತೆ ಕಡಲತೀರಗಳು ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿವೆ. ಕಳೆದ ವರ್ಷ ಅಕ್ಟೋಬರ್ನಲ್ಲಿ 4.61 ಲಕ್ಷ ಪ್ರವಾಸಿಗರಿದ್ದರೆ, ಈ ವರ್ಷ ಒಂದೂವರೆ ಲಕ್ಷಕ್ಕಿಂತ ಕಡಿಮೆ ಆಗಿದೆ.
- Suraj Mahaveer Utture
- Updated on: Oct 31, 2025
- 6:40 pm
ಲಕ್ಷಾಂತರ ರೂ ವಿದ್ಯುತ್ ಬಿಲ್ ಬಾಕಿ: 5 ಸರ್ಕಾರಿ ಕಚೇರಿಗಳ ಪವರ್ ಕಟ್, ಕತ್ತಲ್ಲೇ ಕುಳಿತ ಸಿಬ್ಬಂದಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರಿ ಕಚೇರಿಗಳಿಗೆ ಹೆಸ್ಕಾಂ ಶಾಕ್ ನೀಡಿದೆ. ಕಾರವಾರ ತಹಶೀಲ್ದಾರ್ ಕಚೇರಿ ಸೇರಿ ಐದು ಪ್ರಮುಖ ಕಚೇರಿಗಳ ವಿದ್ಯುತ್ ಕಡಿತಗೊಳಿಸಲಾಗಿದೆ. ಲಕ್ಷಾಂತರ ರೂ. ಬಿಲ್ ಪಾವತಿಸದ ಕಾರಣ ಸಿಬ್ಬಂದಿ ಕತ್ತಲಲ್ಲೇ ಕಾರ್ಯನಿರ್ವಹಿಸುವಂತಾಗಿದೆ. ವಿಡಿಯೋ ನೋಡಿ.
- Suraj Mahaveer Utture
- Updated on: Oct 30, 2025
- 6:17 pm
ಅಡಿಕೆ ತೋಟದಲ್ಲಿನ ತ್ಯಾಜ್ಯಕ್ಕೂ ಬಂಗಾರದ ಬೆಲೆ ಇದೆ ಎಂದು ತೋರಿಸಿಕೊಟ್ಟ ಶಿರಸಿಯ ರೈತ ದಂಪತಿ
ಅಡಿಕೆ ಬೆಳೆಗೆ ಬೆಲೆ ಸಿಗದೆ ಕಂಗಾಲಾಗುವವರ ಮಧ್ಯೆ ಶಿರಸಿಯ ರೈತ ದಂಪತಿ ತೋಟದ ತ್ಯಾಜ್ಯವನ್ನು ಸಂಪನ್ಮೂಲವಾಗಿ ಪರಿವರ್ತಿಸಿ ಯಶಸ್ಸು ಕಂಡಿದ್ದಾರೆ. ಅಡಿಕೆ ತೋಟದ ತ್ಯಾಜ್ಯವನ್ನು ಬಳಸಿಕೊಂಡು ಸುಂದರ ಅಲಂಕಾರಿಕ ವಸ್ತುಗಳನ್ನು ತಯಾರಿಸಿ, ಕೇವಲ ನಾಲ್ಕು ತಿಂಗಳಲ್ಲಿ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಗಳಿಸಿದ್ದಾರೆ.
- Suraj Mahaveer Utture
- Updated on: Oct 30, 2025
- 5:43 pm
ಖಾಸಗಿ ಬಸ್ನಲ್ಲಿ ದಾಖಲೆ ಇಲ್ಲದ ಸಾಗಿಸುತ್ತಿದ್ದ ಕಂತೆ ಕಂತೆ ಹಣ ಕಾರವಾರದಲ್ಲಿ ಜಪ್ತಿ
ಯಾವುದೇ ದಾಖಲೆ ಇಲ್ಲದೆ ಖಾಸಗಿ ಬಸ್ನಲ್ಲಿ ಸಾಗಾಟ ನಡೆಸುತ್ತಿದ್ದ ಕಂತೆ ಕಂತೆ ಹಣವನ್ನು ಕಾರವಾರದಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ. ದುಡ್ಡನ್ನು ಗೋವಾದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು ಎಂಬುದು ಗೊತ್ತಾಗಿದ್ದು, ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ ಮಾಡಿರುವ ಹಣವನ್ನ ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.
- Suraj Mahaveer Utture
- Updated on: Oct 28, 2025
- 11:49 am
ಮೀನುಗಾರನೇ ಮೀನಿಗೆ ಬೇಟೆಯಾದ: ಮೀನು ಚುಚ್ಚಿದ ಏಟಿಗೆ ಯುವಕನ ಪ್ರಾಣ ಹೊಯ್ತು
ಅರಬ್ಬಿ ಸಮುದ್ರದಲ್ಲಿ ಮತ್ಸ್ಯ ಬೇಟೆಗೆ ತೆರಳಿದ್ದ ಮೀನುಗಾರನೇ ಮೀನಿಗೆ ಬೇಟೆಯಾಗಿದ್ದಾನೆ. ಸಮುದ್ರದಿಂದ ಜಿಗಿದು ಮೀನೊಂದು ಫಿಷರ್ಮ್ಯಾನ್ಗೆ ಚುಚ್ಚಿ ಆತನನ್ನೇ ಬಲಿ ಪಡೆದಿದೆ. ಮೀನಿನಿಂದಲೇ ಹೊಟ್ಟೆ ತುಂಬಿಸಿಕೊಂಡು ಜೀವನ ಮಾಡುತ್ತಿದ್ದ ಯುವಕ ಇದೀಗ ಇದೇ ಮೀನಿನಿಂದ್ಲೇ ಮೀನುಗಾರ ಪ್ರಾಣಬಿಟ್ಟಿದ್ದಾನೆ. ಮೀನು ಚುಚ್ಚಿ ಯುವಕ ಸಾವನ್ನಪ್ಪಿದ್ದಾನೆ ಎನ್ನುವುದು ಅಚ್ಚರಿ ಅನ್ನಿಸಿದರೂ ಸತ್ಯ.
- Suraj Mahaveer Utture
- Updated on: Oct 16, 2025
- 8:58 pm