AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರಜ್​, ಮಹಾವೀರ್​ ಉತ್ತರೆ

ಸೂರಜ್​, ಮಹಾವೀರ್​ ಉತ್ತರೆ

Author - TV9 Kannada

surajmahaveer.utture@tv9.com

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ: ತಪ್ಪಿದ ಅನಾಹುತ

ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ: ತಪ್ಪಿದ ಅನಾಹುತ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಟುಗಾ ಗ್ರಾಮದ ಬಳಿ ಕೈಗಾ ಅಣುಸ್ಥಾವರಕ್ಕೆ ಬರುತ್ತಿದ್ದ 140 ಟನ್ ತೂಕದ ವಿಕಿರಣ ರಕ್ಷಾ ಕವಚ ಹೊತ್ತ ವಾಹನ ಪಲ್ಟಿಯಾಗಿದೆ. ಸೂರತ್‌ನಿಂದ ಮೂರು ತಿಂಗಳು ಪ್ರಯಾಣಿಸಿ, ಕೈಗಾ ಅಣುಸ್ಥಾವರ ತಲುಪಲು ಕೇವಲ 4 ಕಿ.ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದೆ.

ದರ್ಗಾವಾಲೆ ಕೊಲೆ ಬೆನ್ನಲ್ಲೇ ಮೀಟರ್ ಬಡ್ಡಿ ದಂಧೆ ಮತ್ತೆ ಆ್ಯಕ್ಟೀವ್: ಬುಡ ಸಮೇತ ಕಿತ್ತೊಗೆಯಲು ಎಸ್ಪಿ ಪ್ಲಾನ್

ದರ್ಗಾವಾಲೆ ಕೊಲೆ ಬೆನ್ನಲ್ಲೇ ಮೀಟರ್ ಬಡ್ಡಿ ದಂಧೆ ಮತ್ತೆ ಆ್ಯಕ್ಟೀವ್: ಬುಡ ಸಮೇತ ಕಿತ್ತೊಗೆಯಲು ಎಸ್ಪಿ ಪ್ಲಾನ್

ಜಮೀರ್ ಹತ್ಯೆ ಬಳಿಕವೂ ಮುಂಡಗೋಡಿನಲ್ಲಿ ಮೀಟರ್ ಬಡ್ಡಿ ದಂಧೆ ಸಕ್ರಿಯವಾಗಿದೆ ಎಂಬ ಟಿವಿ9 ವರದಿ ಗಂಭೀರವಾಗಿ ಪರಿಗಣಿಸಿದ ಎಸ್ಪಿ ದೀಪನ್, ಉತ್ತರ ಕನ್ನಡದಲ್ಲಿ ಈ ದಂಧೆ ಬುಡಮೇಲು ಮಾಡಲು ಯೋಜನೆ ರೂಪಿಸಿದ್ದಾರೆ. ಹತ್ಯೆ ಪ್ರಕರಣದ ತನಿಖೆ ಜೊತೆಗೆ ದಂಧೆಕೋರರ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಇದು ಅನೇಕರಿಗೆ ನಡುಕ ಹುಟ್ಟಿಸಿದೆ.

ಅನುದಾನ ಕೊರತೆ ಮಧ್ಯೆ ಕಾರವಾರದಲ್ಲಿ ಕಾಂಕ್ರೀಟ್ ರಸ್ತೆ ಮೇಲೆ ಡಾಂಬರೀಕರಣ: ಏನಿದು ವಿವಾದ?

ಅನುದಾನ ಕೊರತೆ ಮಧ್ಯೆ ಕಾರವಾರದಲ್ಲಿ ಕಾಂಕ್ರೀಟ್ ರಸ್ತೆ ಮೇಲೆ ಡಾಂಬರೀಕರಣ: ಏನಿದು ವಿವಾದ?

ರಾಜ್ಯದಾದ್ಯಂತ ಬಿಟುಮಿನ್ ಮತ್ತು ಅನುದಾನ ಕೊರತೆಯಿಂದ ರಸ್ತೆ ಕಾಮಗಾರಿಗಳು ಸ್ಥಗಿತಗೊಂಡಿವೆ. ಆದರೆ ಕಾರವಾರದಲ್ಲಿ ಸುಸಜ್ಜಿತ ಕಾಂಕ್ರೀಟ್ ರಸ್ತೆಯ ಮೇಲೆ ಡಾಂಬರೀಕರಣ ಮಾಡಿ, ಒಂದೇ ದಿನದಲ್ಲಿ ಕಿತ್ತು ಹಾಕುವ ಮೂಲಕ ರಸ್ತೆಯನ್ನು ಹಾಳು ಮಾಡಲಾಗಿದೆ. ಕೆಶಿಪ್ ಅನುದಾನ ದುರ್ಬಳಕೆಯ ಈ ವಿವಾದ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನೂರಾರು ಜೀವ ಉಳಿಸಿದ್ದ ವೈದ್ಯನಿಗೆ ಸಿಗಲಿಲ್ಲ ಚಿಕಿತ್ಸೆ; ಡಾಕ್ಟರ್ ದುರಂತ ಸಾವು

ನೂರಾರು ಜೀವ ಉಳಿಸಿದ್ದ ವೈದ್ಯನಿಗೆ ಸಿಗಲಿಲ್ಲ ಚಿಕಿತ್ಸೆ; ಡಾಕ್ಟರ್ ದುರಂತ ಸಾವು

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಡಿಗ್ಗಿ ಕೂಗ್ರಾಮದಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ಓರ್ವ ವೈದ್ಯ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಚಿಕಿತ್ಸೆಗಾಗಿ ತೆರಳುತ್ತಿದ್ದಾಗ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ. ತಮ್ಮ ಕೆಲಸದಿಂದ ಇಡೀ ಡಿಗ್ಗಿ ಗ್ರಾಮದಲ್ಲಿ ವೈದ್ಯ ಸಾಕಷ್ಟು ಪ್ರಶಂಸೆ ಗಳಿಸಿದ್ದರು.

ದಾಂಡೇಲಿ: ಶೌಚಕ್ಕೆ ಕುಳಿತಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ; ಸ್ಥಳೀಯರ ಸಮಯಪ್ರಜ್ಞೆಯಿಂದ ಬಚಾವ್!

ದಾಂಡೇಲಿ: ಶೌಚಕ್ಕೆ ಕುಳಿತಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ; ಸ್ಥಳೀಯರ ಸಮಯಪ್ರಜ್ಞೆಯಿಂದ ಬಚಾವ್!

ಉತ್ತರ ಕನ್ನಡದ ದಾಂಡೇಲಿಯಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಇಲ್ಲದ ಕಾರಣ ನದಿ ದಡಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮೊಸಳೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಳಿ ನದಿ ತೀರದಲ್ಲಿ ನಡೆದ ಈ ಘಟನೆ ಸ್ಥಳೀಯ ಆಡಳಿತದ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಗ್ರಾಮಸ್ಥರು ಶೌಚಾಲಯಗಳ ಸುಧಾರಣೆಗೆ ಆಗ್ರಹಿಸಿದ್ದು, ಇಂತಹ ದುರಂತಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಒತ್ತಾಯಿಸಿದ್ದಾರೆ.

ನಗರಸಭೆ ಅಧಿಕಾರಿಗಳ ಸುಳ್ಳು ಹೇಳಿಕೆ ಡಿಸಿ ಎದುರೇ ಬಯಲು: ಕಳ್ಳಾಟ ತಿಳಿಯುತ್ತಿದ್ದಂತೆ TV9 ಕ್ಯಾಮರಾಮ್ಯಾನ್ ಮೇಲೆ ಅಧಿಕಾರಿ ದರ್ಪ

ನಗರಸಭೆ ಅಧಿಕಾರಿಗಳ ಸುಳ್ಳು ಹೇಳಿಕೆ ಡಿಸಿ ಎದುರೇ ಬಯಲು: ಕಳ್ಳಾಟ ತಿಳಿಯುತ್ತಿದ್ದಂತೆ TV9 ಕ್ಯಾಮರಾಮ್ಯಾನ್ ಮೇಲೆ ಅಧಿಕಾರಿ ದರ್ಪ

ಚಾಮರಾಜನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗೆ ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳನ್ನು ನಿವಾಸಿಗಳು ಬಯಲು ಮಾಡಿದ್ದು, ಸಭೆಯಲ್ಲಿ ವಾಗ್ವಾದ ಏರ್ಪಟ್ಟಿತ್ತು. 15 ದಿನಗಳಿಂದ ನೀರು ಪೂರೈಕೆಯಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಡಿಸಿ ಕೆಂಡಾಮಂಡಲರಾದರು. ಘಟನೆ ಚಿತ್ರೀಕರಿಸುತ್ತಿದ್ದ ಮಾಧ್ಯಮದವರ ಮೇಲೆ ಅಧಿಕಾರಿಯೊಬ್ಬರು ದರ್ಪ ತೋರಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಗುಂಡ್ಲುಪೇಟೆಯಲ್ಲಿ ಫ್ಯಾಮಿಲಿ ಜೊತೆ ಯೂನಿಫಾರ್ಮ್‌ನಲ್ಲಿ ಶೋಕಿ; ಇನ್ಸ್‌ಪೆಕ್ಟರ್ ಜೈ ಕುಮಾರ್ ವಿಡಿಯೋ ವೈರಲ್

ಗುಂಡ್ಲುಪೇಟೆಯಲ್ಲಿ ಫ್ಯಾಮಿಲಿ ಜೊತೆ ಯೂನಿಫಾರ್ಮ್‌ನಲ್ಲಿ ಶೋಕಿ; ಇನ್ಸ್‌ಪೆಕ್ಟರ್ ಜೈ ಕುಮಾರ್ ವಿಡಿಯೋ ವೈರಲ್

ಚಾಮರಾಜನಗರದ ಗುಂಡ್ಲುಪೇಟೆ ಸಿಪಿಐ ಜೈ ಕುಮಾರ್ ಸಮವಸ್ತ್ರ ಹಾಗೂ ಇಲಾಖಾ ವಾಹನವನ್ನು ಕುಟುಂಬದೊಂದಿಗೆ ಕಾಡಂಚಿನ ಬಫರ್ ಝೋನ್‌ನಲ್ಲಿ ವೈಯಕ್ತಿಕ ಸವಾರಿಗಾಗಿ ದುರ್ಬಳಕೆ ಮಾಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಮವಸ್ತ್ರದ ಘನತೆಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕ್ರಮದ ನಿರೀಕ್ಷೆಯಿದೆ.

ಪ್ರವಾಸಿಗರೇ ಎಚ್ಚರ! ಗೋಕರ್ಣದ ಕುಡ್ಲೆ ಬೀಚ್ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ

ಪ್ರವಾಸಿಗರೇ ಎಚ್ಚರ! ಗೋಕರ್ಣದ ಕುಡ್ಲೆ ಬೀಚ್ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ

ಇತ್ತೀಚೆಗೆ ರಾಜ್ಯದಲ್ಲಿ ವನ್ಯ ಜೀವಿಗಳ ಹಾವಳಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ಕೆಲವೊಮ್ಮೆ ಮನೆಯೊಳಗೆ ಚಿರತೆ ಅಡಗಿ ಕುಳಿತ ಉದಾಹರಣೆಗಳೂ ಇವೆ. ಅಂತೆಯೇ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಗೋಕರ್ಣದ ಕುಡ್ಲೆ ಕಡಲ ತೀರದ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಆತಂಕಕ್ಕೊಳಗಾಗಿದ್ದಾರೆ. ಕಾಡಿನಿಂದ ನಾಡಿನತ್ತ ಬರುತ್ತಿರುವ ಕಾಡುಪ್ರಾಣಿಗಳ ಹಾವಳಿಯಿಂದ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಜಮೀರ್ ದರ್ಗಾವಾಲೆ ಕೊಲೆ ಕೇಸ್: ಪ್ರಮುಖ ಆರೋಪಿ ಸೇರಿ ಐವರು ಅರೆಸ್ಟ್​; ಹತ್ಯೆಗೆ ಅದೇ ಕಾರಣ

ಜಮೀರ್ ದರ್ಗಾವಾಲೆ ಕೊಲೆ ಕೇಸ್: ಪ್ರಮುಖ ಆರೋಪಿ ಸೇರಿ ಐವರು ಅರೆಸ್ಟ್​; ಹತ್ಯೆಗೆ ಅದೇ ಕಾರಣ

ಮುಂಡಗೋಡಿನಲ್ಲಿ ಮೀಟರ್ ಬಡ್ಡಿ ಕಿಂಗ್‌ಪಿನ್ ಜಮೀರ್ ದರ್ಗಾವಾಲೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಇನ್ನು ಕೊಲೆಗೆ ಮೀಟರ್ ಬಡ್ಡಿ ದಂಧೆಯೇ ಕಾರಣ ಎಂದು ಮುಂಡಗೋಡ ಪೊಲೀಸ್​ ತನಿಖೆಯಲ್ಲಿ ಬಯಲಾಗಿದೆ. ಸದ್ಯ ಬಂಧಿತರಿಂದ 2 ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮದ್ವೆಗೆ ಕೆಲವೇ ಗಂಟೆಗಳಿರುವಾಗಲೇ ವಧು ನಾಪತ್ತೆ: ಪೋಷಕರಲ್ಲಿ ಅದೊಂದು ಅನುಮಾನ

ಮದ್ವೆಗೆ ಕೆಲವೇ ಗಂಟೆಗಳಿರುವಾಗಲೇ ವಧು ನಾಪತ್ತೆ: ಪೋಷಕರಲ್ಲಿ ಅದೊಂದು ಅನುಮಾನ

ಇತ್ತೀಚೆಗೆ ರಾಯಚೂರಿನಲ್ಲಿ ಮದುವೆ ಒಂದು ತಿಂಗಳಿರುವಾಗಲೇ ಯುವಕ ನಾಪತ್ತೆ ಆಗಿದ್ದ. ಇದೀಗ ಇಂತಹದೊಂದು ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಮದುವೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ಯುವತಿ ನಾಪತ್ತೆ ಆಗಿದ್ದಾಳೆ. ಘಟನೆಯಿಂದ ಪೋಷಕರು ಮತ್ತು ಕುಟುಂಬಸ್ಥರು ತೀವ್ರ ಆತಂಕಗೊಂಡಿದ್ದು, ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ನಿನ್ನೆ ಫೇಲ್​​, ಇಂದು ಶಾಲೆಗೆ ಟಾಪರ್​​? ಅಂಧ ವಿದ್ಯಾರ್ಥಿನಿಯ SSLC ರಿಸಲ್ಟ್ ಗೊಂದಲ

ನಿನ್ನೆ ಫೇಲ್​​, ಇಂದು ಶಾಲೆಗೆ ಟಾಪರ್​​? ಅಂಧ ವಿದ್ಯಾರ್ಥಿನಿಯ SSLC ರಿಸಲ್ಟ್ ಗೊಂದಲ

ಶಿರಸಿಯ ಅಂಧ ವಿದ್ಯಾರ್ಥಿನಿಯ SSLC ಫಲಿತಾಂಶದ ಬಗ್ಗೆ ಕ್ಲ್ಯಾರಿಟಿ‌ ಸಿಗುತ್ತಿಲ್ಲ. ನಿನ್ನೆ ಫೇಲ್​​ ಅಂತ ಬಂದಿದ್ದು, ಇಂದು ಶಾಲೆಗೆ ಟಾಪರ್ ಎನ್ನಲಾಗುತ್ತಿದೆ. ಆದರೆ ಶಿರಸಿ ಡಿಡಿಪಿಐ ಅಧಿಕಾರಿ ರಿಸಲ್ಟ್ ಬರುವುದಕ್ಕೆ ಇನ್ನು ಎರಡು ದಿನ ಬೇಕು ಎಂದಿದ್ದಾರೆ. ಹೀಗಾಗಿ ವಿದ್ಯಾರ್ಥಿನಿಯ ರಿಸಲ್ಟ್ ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ.

SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್

SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್

ಶಿರಸಿಯ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್, ಕರ್ನಾಟಕ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಎಡವಟ್ಟು ಎದುರಿಸಿದ್ದಾರೆ. ಆರು ವಿಷಯಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ್ದರೂ, ಸಮಾಜ ವಿಜ್ಞಾನ ಪರೀಕ್ಷೆಗೆ ಗೈರುಹಾಜರಾಗಿದ್ದಾಳೆ ಎಂದು ನಮೂದಿಸಲಾಗಿದೆ. ಆಡಿಯೋ ರೆಕಾರ್ಡಿಂಗ್‌ಗಳ ಮೂಲಕ ಶ್ರಮವಹಿಸಿ ಓದಿದ್ದ ಲೀಸಾ, ಶಿಕ್ಷಣ ಇಲಾಖೆಯ ಈ ತಪ್ಪಿನ ವಿರುದ್ಧ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.