ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್, ಸಮುದ್ರ ತೀರದಲ್ಲೂ ಕಟ್ಟೆಚ್ಚರ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರ ಸಾವು ಹಿನ್ನೆಲೆಯಲ್ಲಿ ಭಾರತದ ವಿವಿಧ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ಸ್ಥಳಗಳ ಮೇಲೆ ಪೊಲೀಸರ ಹದ್ದಿನಕಣ್ಣಿಟ್ಟಿದ್ದಾರೆ. ಹೆಚ್ಚಾಗಿ ಪ್ರವಾಸಿಗರು ಭೇಟಿ ನೀಡುವ ಗೋಕರ್ಣ ಹಾಗೂ ಮುರುಡೇಶ್ವರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ
- Suraj Mahaveer Utture
- Updated on: Apr 30, 2025
- 3:57 pm
ಪುತ್ರನಿಗೆ ತಿಂಡಿ ಕೊಡಿಸಲು ಹೋಗಿ ಬಚಾವ್! ಪಹಲ್ಗಾಮ್ ದಾಳಿ ವೇಳೆ ಸ್ವಲ್ಪದರಲ್ಲೇ ಪಾರಾದ ಶಿರಸಿ ಕುಟುಂಬ
ಪಹಲ್ಗಾಮ್ನಲ್ಲಿ ಉಗ್ರರ ದಾಳಿಯಿಂದ ಕರ್ನಾಟಕದ ಶಿರಸಿ ತಾಲ್ಲೂಕಿನ ಗುಬ್ಬಿಗದ್ದೆಯ ಪ್ರದೀಪ್ ಹೆಗಡೆ ಕುಟುಂಬ ಪವಾಡವೆಂಬಂತೆ ಪಾರಾಗಿ ಬಂದಿದೆ. ಬೈಸರನ್ ಕಣಿವೆ ಬಳಿ ಉಗ್ರರ ದಾಳಿಗೆ ಎದುರಲ್ಲೇ ಶವಗಳು ಬಿದ್ದಿರೋದನ್ನ ಕಂಡು ಭಯಪಟ್ಟಿದ್ದರು. ಹೇಗೋ ಹೊಂಡದಲ್ಲಿ ಬಚ್ಚಿಟ್ಟುಕೊಂಡು ಬಚಾವ್ ಆಗಿ ತಾಯ್ನಾಡಿಗೆ ವಾಪಸ್ಸ್ ಆಗಿದ್ದು ಮಾತ್ರ ಅಚ್ಚರಿ.
- Suraj Mahaveer Utture
- Updated on: Apr 28, 2025
- 12:49 pm
ಉಗ್ರರಿಂದ ತರಬೇತಿ ಪಡೆದಿದ್ದ, ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಅರೆಸ್ಟ್
2020ರಲ್ಲಿ ಬೆಂಗಳೂರಿನ ಕೆಜಿ ಹಳ್ಳಿ-ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ದೇಶಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ಬಂಧಿಸಿದ್ದರು. ಇದೀಗ, ಪಕ್ರರಣದ ಮೋಸ್ಟ್ ವಾಂಟೆಡ್ ಆರೋಪಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಅನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಆರೋಪಿ 302 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.
- Suraj Mahaveer Utture
- Updated on: Apr 26, 2025
- 11:08 pm
ಪಾಕ್-ಭಟ್ಕಳ ನಡುವೆ ವೈವಾಹಿಕ ಸಂಬಂಧ: ಕರ್ನಾಟಕದ 88 ಪಾಕಿಸ್ತಾನಿಗಳು ಸೇಫ್
ಪೆಹಲ್ಗಾಮ್ದಲ್ಲಿನ ಭಯೋತ್ಪಾದನಾ ದಾಳಿ ಬೆನ್ನಲ್ಲೇ, ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲು ಕೇಂದ್ರ ಸರ್ಕಾರ ಆದೇಶಿಸಿದೆ. ಸದ್ಯ ಎಲ್ಲರ ಚಿತ್ತ ಕಡಲ ನಗರಿ ಭಟ್ಕಳ ದತ್ತ ಮುಖ ಮಾಡಿದೆ. ಭಟ್ಕಳ ಮತ್ತು ಪಾಕಿಸ್ತಾನಿ ನಡುವಿನ ವೈವಾಹಿಕ ಸಂಬಂಧ ಹಾಗೂ ಭಟ್ಕಳದಲ್ಲಿನ ಪಾಕಿಸ್ತಾನಿ ಮಹಿಳೆಯರ ಕುರಿತ ಡಿಟೇಲ್ ವರದಿ ಇಲ್ಲಿದೆ.
- Suraj Mahaveer Utture
- Updated on: Apr 25, 2025
- 9:54 pm
ಕಾರವಾರ: ವಾಯು ವಿಹಾರಕ್ಕೆ ಹೋಗಿದ್ದ ನಗರಸಭೆ ಮಾಜಿ ಸದಸ್ಯನ ಬರ್ಬರ ಹತ್ಯೆ
ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಮಾಜಿ ನಗರಸಭೆ ಸದಸ್ಯನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿ ಆಗಿರುವಂತಹ ಘಟನೆ ಉತ್ತರ ಕನ್ನಡದ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ವೈಯಕ್ತಿಕ ದ್ವೇಷ ಹಿನ್ನೆಲೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- Suraj Mahaveer Utture
- Updated on: Apr 20, 2025
- 11:44 am
ಅಂಡಮಾನ್, ನಿಕೋಬಾರ್ ಮಾದರಿಯಲ್ಲಿ ಕರಾವಳಿ ಕರ್ನಾಟಕದಕಲ್ಲೂ ದ್ವೀಪ ಪ್ರವಾಸೋದ್ಯಮ ಆರಂಭಿಸಲು ಸಿದ್ದತೆ
ಕರ್ನಾಟಕ ಬಂದರು ಇಲಾಖೆ ರಾಜ್ಯದ 15 ದ್ವೀಪಗಳಲ್ಲಿ ಪ್ರವಾಸೋದ್ಯಮ ಆರಂಭಿಸಲು ಯೋಜಿಸಿದೆ. ಉತ್ತರ ಕನ್ನಡದ 7 ದ್ವೀಪಗಳು ಮೊದಲ ಹಂತದಲ್ಲಿ ಅಭಿವೃದ್ಧಿಗೊಳ್ಳಲಿವೆ. ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಯಾಗಲಿದ್ದು, ಒಂದು ಏಕರೆಗೆ 60 ಲಕ್ಷದಿಂದ 2 ಕೋಟಿ ರೂಪಾಯಿವರೆಗೆ ದರ ನಿಗದಿಯಾಗಿದೆ. ಈ ಮೂಲಕ ಉತ್ತರ ಕನ್ನಡದ ನೈಸರ್ಗಿಕ ಸೌಂದರ್ಯವನ್ನು ಪ್ರವಾಸೋದ್ಯಮಕ್ಕೆ ಬಳಸಿಕೊಳ್ಳಲಾಗುವುದು.
- Suraj Mahaveer Utture
- Updated on: Apr 19, 2025
- 2:47 pm
ಭಟ್ಕಳದಲ್ಲಿ ಅಮಾನವೀಯ ಘಟನೆ: ಮಾಂಸಕ್ಕಾಗಿ ಗರ್ಭಧರಿಸಿದ್ದ ಗೋವನ್ನು ಕೊಂದು ಭ್ರೂಣ ಬಿಸಾಡಿ ಹೋದ ರಾಕ್ಷಸರು!
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದಲ್ಲಿ ಗರ್ಭ ಧರಿಸಿದ್ದ ಹಸುವಿನ (cow) ತಲೆ ಕಡಿದು ದುರುಳರು ಮಾಂಸ ಸಾಗಣೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆದ್ರೆ, ಈ ಘಟನೆ ಮಾಸುವ ಮುನ್ನವೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಗರ್ಭಧರಿಸಿದ್ದ ಗೋವಿನ ಮಾಂಸ ಕದ್ದು ಹೊಟ್ಟೆಯಲ್ಲಿದ್ದ ಕರುವಿನ ಬ್ರೂಣವನ್ನು ಎಸೆದು ವಿಕೃತಿ ಮೆರೆದಿದ್ದಾರೆ.
- Suraj Mahaveer Utture
- Updated on: Apr 18, 2025
- 2:24 pm
ದಾಂಡೇಲಿ ಮನೆಯಲ್ಲಿ ಕಂತೆ ಕಂತೆ ನಕಲಿ ನೋಟು ಪತ್ತೆ ಪ್ರಕರಣ: ಉತ್ತರ ಪ್ರದೇಶದ ಲಖನೌನಲ್ಲಿ ಆರೋಪಿಯ ಬಂಧನ
ದಾಂಡೇಲಿಯ ಗಾಂಧಿನಗರದಲ್ಲಿ ಪತ್ತೆಯಾದ 14 ಕೋಟಿ ರೂಪಾಯಿಗಳ ನಕಲಿ ನೋಟುಗಳ ಪ್ರಕರಣದ ಆರೋಪಿಯನ್ನು ಉತ್ತರ ಪ್ರದೇಶದ ಲಖನೌನಲ್ಲಿ ಬಂಧಿಸಲಾಗಿದೆ. ಆರೋಪಿ ಅರ್ಷದ್ ಅಂಜುಂ ಖಾನ್ ಗೋವಾ ಮತ್ತು ಹೈದರಾಬಾದ್ನಲ್ಲಿದ್ದೇನೆ ಎಂದು ಪೊಲೀಸರನ್ನು ಯಾಮಾರಿಸಿದ್ದ. ಆದರೆ ಮೊಬೈಲ್ ಟವರ್ ಲೊಕೇಶನ್ ಮೂಲಕ ಆತನನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಪೊಲೀಸರು ಸದ್ಯ ಆರೋಪಿಯನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.
- Suraj Mahaveer Utture
- Updated on: Apr 18, 2025
- 10:28 am
ಶಿರಸಿ ನಗರಕ್ಕೆ ನೀರು ಪೂರೈಸುತ್ತಿದ್ದ ಪೈಪ್ಗಳು ಕಳ್ಳತನ: ಮೂವರು ಅಧಿಕಾರಿಗಳು ಪರಾರಿ
ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರಕ್ಕೆ ನೀರು ಪೂರೈಸುತ್ತಿದ್ದ ಸುಮಾರು 60 ವರ್ಷಗಳ ಹಳೆಯ ಪೈಪ್ಪಗಳನ್ನೆ ಕಳ್ಳತನ ಮಾಡಲಾಗಿದೆ. ಪ್ರಕರಣ ಹೊರಬರುತ್ತಿದ್ದಂತೆ ನಗರಸಭೆ ಆಯುಕ್ತರು ಸೇರಿ ಮೂವರು ಅಧಿಕಾರಿಗಳು ತಲೆಮರಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Suraj Mahaveer Utture
- Updated on: Apr 15, 2025
- 7:22 pm
ಚಾರಣಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿವೆ ಹೊಸ 32 ಸುಂದರ ತಾಣಗಳು!
ಉತ್ತರ ಕನ್ನಡ ಜಿಲ್ಲಾಡಳಿತವು ಪ್ರವಾಸಿಗರಿಗೆ ಸಿಹಿಸುದ್ದಿ ನೀಡಿದೆ. ಅರಣ್ಯ ಇಲಾಖೆಯ ಸರ್ವೆ ಪ್ರಕಾರ, ಜಿಲ್ಲೆಯಲ್ಲಿ 32 ಹೊಸ ಟ್ರೆಕ್ಕಿಂಗ್ ಮಾರ್ಗಗಳನ್ನು ಗುರುತಿಸಲಾಗಿದೆ. ಈ ಮಾರ್ಗಗಳಿಗೆ ಅನುಮತಿ ಪಡೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮತಿ ದೊರೆತ ನಂತರ, ಅನುಭವಿ ಮಾರ್ಗದರ್ಶಿಗಳೊಂದಿಗೆ ಈ ಮಾರ್ಗಗಳಲ್ಲಿ ಟ್ರೆಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗುವುದು. ಇದುವರೆಗೂ ನಿಷೇಧಿತವಾಗಿದ್ದ ಅನೇಕ ಪ್ರದೇಶಗಳನ್ನು ಈ ಮೂಲಕ ಅನ್ವೇಷಿಸಲು ಸಾಧ್ಯವಾಗಲಿದೆ.
- Suraj Mahaveer Utture
- Updated on: Apr 9, 2025
- 4:00 pm
ದಾಂಡೇಲಿ ಮನೆಯಲ್ಲಿತ್ತು 14 ಕೋಟಿ ರೂ. ನಕಲಿ ನೋಟು: ರಾಶಿ ರಾಶಿ ಕರೆನ್ಸಿ ನೋಡಿ ಪೊಲೀಸರೇ ಶಾಕ್
ಗೋವಾ ಮೂಲದ ವ್ಯಕ್ತಿಯೊಬ್ಬ ದಾಂಡೇಲಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ. ಕಳೆದ ಒಂದು ತಿಂಗಳಿನಿಂದ ಆತ ಯಾರ ಕಣ್ಣಿಗೂ ಕಾಣಿಸಿರಲಿಲ್ಲ. ಮನೆಯ ಹಿಂದಿನ ಬಾಗಿಲು ಓಪನ್ ಆಗಿದ್ದನ್ನು ಕಂಡ ಸ್ಥಳಿಯರು ವಿಷಯ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ತೆರೆಯುತ್ತಿದ್ದಂತೆಯೇ ಕಂತೆ ಕಂತೆ ನೋಟುಗಳು ಕಾಣಿಸಿವೆ.
- Suraj Mahaveer Utture
- Updated on: Apr 18, 2025
- 10:26 am
ಐತಿಹಾಸಿಕ ಕಾರ್ಯಕ್ಕೆ ಕಾರವಾರ ಸಾಕ್ಷಿ: ಹಿಂದೂ ಮಹಾಸಾಗರದಲ್ಲಿ 9 ರಾಷ್ಟ್ರಗಳೊಂದಿಗೆ IOS ಸಾಗರ ಕಾರ್ಯಾಚರಣೆ
ಭಾರತವು ಹಿಂದೂ ಮಹಾಸಾಗರದಲ್ಲಿ 9 ದೇಶಗಳ ಜೊತೆಗೂಡಿ ಐಓಎಸ್ ಕಾರ್ಯಾಚರಣೆಯನ್ನು ಆರಂಭಿಸಿದೆ. ಕಾರವಾರದ ಕದಂಬ ನೌಕಾನೆಲೆಯಿಂದ INS ಸುನೈನಾ ನೌಕೆಯನ್ನು ನಿಯೋಜಿಸಲಾಗಿದೆ. ಈ ಕಾರ್ಯಾಚರಣೆಯು ಪ್ರಾದೇಶಿಕ ಭದ್ರತೆ ಹಾಗೂ ಸಹಕಾರವನ್ನು ಹೆಚ್ಚಿಸುವ ಗುರಿ ಹೊಂದಿದೆ. ನಿನ್ನೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಕಾರ್ಯಾಚರಣೆಗೆ ಚಾಲನೆ ನೀಡಿದ್ದಾರೆ.
- Suraj Mahaveer Utture
- Updated on: Apr 6, 2025
- 1:14 pm