AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರೇಶ್ ನಾಯಕ್

ಸುರೇಶ್ ನಾಯಕ್

ಜಿಲ್ಲಾ ವರದಿಗಾರ - TV9 Kannada

suresh.naik@tv9.com

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ…

Read More
ಬೀದರ್​ನಲ್ಲಿ ಶೂಟೌಟ್​ ಮಾಡಿ 83 ಲಕ್ಷ ಹಣ ದರೋಡೆ ಕೇಸ್: 19 ತಿಂಗಳ ಬಳಿಕ‌ ಆರೋಪಿಗಳ ಬಂಧನ

ಬೀದರ್​ನಲ್ಲಿ ಶೂಟೌಟ್​ ಮಾಡಿ 83 ಲಕ್ಷ ಹಣ ದರೋಡೆ ಕೇಸ್: 19 ತಿಂಗಳ ಬಳಿಕ‌ ಆರೋಪಿಗಳ ಬಂಧನ

Bidar 83 Lakh Robbery: ಬೀದರ್ ನಗರದ ಹೃದಯ ಭಾಗದಲ್ಲಿ ಹಾಡಹಗಲೇ ಎಟಿಎಂಗೆ ಹಣ ತುಂಬುವ ಸಿಎಂಎಸ್ ವಾಹನದ ಮೇಲೆ ಗುಂಡಿನ ದಾಳಿ ನಡೆಸಿ 83 ಲಕ್ಷ ರೂ ಹಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ದರೋಡೆಕೋರರನ್ನು ಅರೆಸ್ಟ್​ ಮಾಡಲಾಗಿದೆ. ಆ ಮೂಲಕ ಸುದೀರ್ಘ 19 ತಿಂಗಳ ನಂತರ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ.

ಮಾಣಿಕ ಪ್ರಭು ದೇವಸ್ಥಾನಕ್ಕೆ ಮೂಗು ಮುಚ್ಚಿಕೊಂಡು ಬರ್ತಿದ್ದ ಭಕ್ತರು: ಫ್ಯಾಕ್ಟರಿ ಮುಚ್ಚಲು ಈಶ್ವರ ಖಂಡ್ರೆ ಸೂಚನೆ

ಮಾಣಿಕ ಪ್ರಭು ದೇವಸ್ಥಾನಕ್ಕೆ ಮೂಗು ಮುಚ್ಚಿಕೊಂಡು ಬರ್ತಿದ್ದ ಭಕ್ತರು: ಫ್ಯಾಕ್ಟರಿ ಮುಚ್ಚಲು ಈಶ್ವರ ಖಂಡ್ರೆ ಸೂಚನೆ

ಬೀದರ್ (Bidar) ಜಿಲ್ಲೆಯ ಹುಮನಾಬಾದ್ (Humnabad) ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು (Factory) ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಸಿದ್ಧ ಮಾಣಿಕ ಪ್ರಭು ದೇವಸ್ಥಾನಕ್ಕೆ ಬರೋ ಭಕ್ತರು ಮೂಗು ಮುಚ್ಚಿಕೊಂಡು ‌ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಇದನೆಲ್ಲಾ ಅರಿತ ಸಚಿವ ಈಶ್ವರ್ ಖಂಡ್ರೆ, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಸೂಚನೆ ನೀಡಿದ್ದಾರೆ

2 ತಿಂಗಳ ಮಗು ಬಾವಿಯಲ್ಲಿ ಪತ್ತೆ: ತಾಯಿ ಮೇಲೆಯೇ ಡೌಟ್, ನಿಗೂಢ ಸಾವಿನ ರಹಸ್ಯ ಬೆನ್ನತ್ತಿದ ಪೊಲೀಸ್ರು

2 ತಿಂಗಳ ಮಗು ಬಾವಿಯಲ್ಲಿ ಪತ್ತೆ: ತಾಯಿ ಮೇಲೆಯೇ ಡೌಟ್, ನಿಗೂಢ ಸಾವಿನ ರಹಸ್ಯ ಬೆನ್ನತ್ತಿದ ಪೊಲೀಸ್ರು

Bidar News: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ ಗ್ರಾಮದಲ್ಲಿ ಭಾನುವಾರ ಹಸುಗೂಸಿನ‌ ಶವ ಪತ್ತೆಯಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಔರಾದ್ ತಾಲೂಕಿನ ಸಂತಪುರ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತಾಯಿಯೇ ಮಗುವನ್ನ ಕೊಂದು ಬಾವಿಗೆ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ.

ಬೀದರ್‌ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ: 2 ತಿಂಗಳ ಹಸುಗೂಸನ್ನ ಬಾವಿಗೆ ಬಿಸಾಡಿದ ಕಿರಾತಕರು

ಬೀದರ್‌ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ: 2 ತಿಂಗಳ ಹಸುಗೂಸನ್ನ ಬಾವಿಗೆ ಬಿಸಾಡಿದ ಕಿರಾತಕರು

Bidar New: ಇಂದು ಅಮಾನವೀಯ ಕೃತ್ಯಕ್ಕೆ ಬೀದರ್‌ ಜಿಲ್ಲೆ ಸಾಕ್ಷಿಯಾಗಿದೆ. ಬಾವಿಯಲ್ಲಿ ಎರಡು ತಿಂಗಳ ಹಸುಗೂಸು ಪತ್ತೆಯಾದ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ನಡೆದಿದೆ. ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸದ್ಯ ಪೊಲೀಸರು ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ.

ಸಚಿವರ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ಟರು ಕಾರಣ!

ಸಚಿವರ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ಟರು ಕಾರಣ!

ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಅನುಪಸ್ಥಿತಿ ಮತ್ತು ಅಸಮಾಧಾನದ ಬಗ್ಗೆ ಅವರ ಪುತ್ರ ಯತೀಂದ್ರ ಸ್ಪಷ್ಟನೆ ನೀಡಿದ್ದಾರೆ. ಹಿರಿಯರು, ಕಿರಿಯರನ್ನು ಸೇರಿಸಿ ಸಂಪುಟ ರಚನೆಯಾಗುತ್ತದೆ. ಕೆಲವರಿಗೆ ಸಚಿವ ಸ್ಥಾನ ಸಿಗದೇ ಇರುವುದು ಸಹಜ. ಹೈಕಮಾಂಡ್ ಎಲ್ಲವನ್ನೂ ಸರಿಪಡಿಸಲಿದೆ. ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನವಿಲ್ಲ ಎಂದು ಯತೀಂದ್ರ ತಿಳಿಸಿದ್ದಾರೆ.

ಕಾರಂಜಾ ಜಲಾಶಯದಲ್ಲಿ ಮೀನು ಉತ್ಪಾದನೆ ಕುಸಿತ, ಬೀದರ್​ನಲ್ಲಿ ಬರಿದಾಗುತ್ತಿದೆ ಮೀನುಗಾರರ ಬದುಕು

ಕಾರಂಜಾ ಜಲಾಶಯದಲ್ಲಿ ಮೀನು ಉತ್ಪಾದನೆ ಕುಸಿತ, ಬೀದರ್​ನಲ್ಲಿ ಬರಿದಾಗುತ್ತಿದೆ ಮೀನುಗಾರರ ಬದುಕು

Bidar News: ಬೀದರ್ ಜಿಲ್ಲೆಯ ಕಾರಂಜಾ ಜಲಾಶಯದಲ್ಲಿ ಮೀನು ಮರಿಗಳನ್ನು ಸಮರ್ಪಕವಾಗಿ ಬಿಡದಿರುವುದು ಹಾಗೂ ಅಕ್ರಮ ಮೀನುಗಾರಿಕೆಗೆ ಕಡಿವಾಣ ಬೀಳದ ಕಾರಣ ಸ್ಥಳೀಯ ಮೀನುಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಲಾಖೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ಮೀನುಗಾರರು, ಕೂಡಲೇ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

ಬೀದರ್​: ಕಾರಂಜಾ ಕಾಲುವೆ ದುರಸ್ತಿಗೆ 181 ಕೋಟಿ ರೂ ಬಿಡುಗಡೆಗೆ ಸಂಪುಟ ಅಸ್ತು; ಈಗಲಾದ್ರೂ ಸಿಗುತ್ತಾ ರೈತರಿಗೆ ನೀರು?

ಬೀದರ್​: ಕಾರಂಜಾ ಕಾಲುವೆ ದುರಸ್ತಿಗೆ 181 ಕೋಟಿ ರೂ ಬಿಡುಗಡೆಗೆ ಸಂಪುಟ ಅಸ್ತು; ಈಗಲಾದ್ರೂ ಸಿಗುತ್ತಾ ರೈತರಿಗೆ ನೀರು?

Bidar Karanga Canal: ಬೀದರ್‌ನ ಕಾರಂಜಾ ಬಲದಂಡೆ ಕಾಲುವೆ ಎರಡು ದಶಕಗಳಿಂದಲೂ ಕೊನೆಭಾಗದ ರೈತರಿಗೆ ನೀರು ತಲುಪಿಸದೆ ನಿರಾಸೆ ಮೂಡಿಸಿತ್ತು. ಪ್ರತಿ ವರ್ಷ ಲಕ್ಷಾಂತರ ರೂ. ದುರಸ್ತಿ ಮಾಡಿದರೂ ಸಮಸ್ಯೆಗೆ ಪರಿಹಾರ ಸಿಕ್ಕಿರಲಿಲ್ಲ. ಇದೀಗ ಕರ್ನಾಟಕ ಸಚಿವ ಸಂಪುಟ 181 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದ್ದು, ಸಾವಿರಾರು ರೈತರ ನೀರಾವರಿ ಕನಸಿಗೆ ಹೊಸ ಭರವಸೆ ಮೂಡಿಸಿದೆ. ಶಾಶ್ವತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಬೀದರ್: ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ

ಬೀದರ್: ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ

ಬೀದರ್‌ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಶಾಲೆ ಬಳಿ ದೇಶೀ ನಿರ್ಮಿತ ಪಿಸ್ತೂಲ್‌ಗಳನ್ನು ಮಾರಾಟ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಐದು ಕಂಟ್ರಿ ಪಿಸ್ತೂಲ್‌ಗಳು, 26 ಜೀವಂತ ಗುಂಡುಗಳು, ಐದು ತಲ್ವಾರ್‌ಗಳು ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪಿಸ್ತೂಲ್ ಮಾರಾಟ ಜಾಲದ ಬಗ್ಗೆ ತನಿಖೆ ಮುಂದುವರೆದಿದೆ.

ಅರೆಸ್ಟ್​​ ಆಗಿದ್ದ ಆರೋಪಿ 6 ಗಂಟೆಯಲ್ಲೇ ಪೊಲೀಸ್​ ಠಾಣೆಯಿಂದ ಎಸ್ಕೇಪ್! ನಿರ್ಲಕ್ಷ್ಯ ಆರೋಪ

ಅರೆಸ್ಟ್​​ ಆಗಿದ್ದ ಆರೋಪಿ 6 ಗಂಟೆಯಲ್ಲೇ ಪೊಲೀಸ್​ ಠಾಣೆಯಿಂದ ಎಸ್ಕೇಪ್! ನಿರ್ಲಕ್ಷ್ಯ ಆರೋಪ

Accused Escapes from police station: ಓರ್ವ ಆರೋಪಿ ಬಂಧನಕ್ಕೊಳಗಾಗಿ ಕೇವಲ 6 ಗಂಟೆಗಳಲ್ಲಿ ಮತ್ತೆ ಪೊಲೀಸ್​ ಠಾಣೆಯಿಂದ ಎಸ್ಕೇಪ್ ಆಗಿರುವ ಆಘಾತಕಾರಿ ಘಟನೆಯೊಂದು ಬೀದರ್​ ಜಿಲ್ಲೆಯ ಖಟಕಚಿಂಚೊಳಿ ಪೊಲೀಸ್​ ಠಾಣೆಯಲ್ಲಿ ನಡೆದಿದೆ. ಸದ್ಯ ಪೊಲೀಸರ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಬೈಕ್​​ಗೆ ಸಾರಿಗೆ ಬಸ್​​ ಡಿಕ್ಕಿ: ಹುಮನಾಬಾದ್​​ನಲ್ಲಿ ದುರಂತ ಅಂತ್ಯ ಕಂಡ ಮಗ, ಚಿಕ್ಕಮ್ಮ

ಬೈಕ್​​ಗೆ ಸಾರಿಗೆ ಬಸ್​​ ಡಿಕ್ಕಿ: ಹುಮನಾಬಾದ್​​ನಲ್ಲಿ ದುರಂತ ಅಂತ್ಯ ಕಂಡ ಮಗ, ಚಿಕ್ಕಮ್ಮ

ಬೀದರ್ ಜಿಲ್ಲೆಯ ಕಬಿರಾಬಾದ್ ವಾಡಿ ಕ್ರಾಸ್ ಬಳಿ ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಚಿಕ್ಕಮ್ಮ ಮತ್ತು ಮಗ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಇತ್ತ ಮುಂಡಗೋಡ ಬಳಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹುಬ್ಬಳ್ಳಿಯ ಕಿಮ್ಸ್​​ಗೆ ರವಾನಿಸಲಾಗಿದೆ.

ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ: ಭಗವತ್ ಖೂಬಾ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಲ್ಕಿತ್ತ BLO

ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ: ಭಗವತ್ ಖೂಬಾ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಲ್ಕಿತ್ತ BLO

Voter list revision: ಬೀದರ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಸಂಸದ ಭಗವಂತ ಖೂಬಾ ಭೇಟಿ ನೀಡಿ, ಮತಗಟ್ಟೆ ಅಧಿಕಾರಿಗಳ (ಬಿಎಲ್‌ಒ) ಕಾರ್ಯವೈಖರಿಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿಯಮಾನುಸಾರ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಮತದಾರರ ಪಟ್ಟಿಗೆ ಹೊಸ ಹೆಸರು ಸೇರಿಸುವ ಮತ್ತು ಪರಿಷ್ಕರಿಸುವ ಕೆಲಸ ಮಾಡಬೇಕಿತ್ತು. ಆದರೆ, ಸ್ಥಳದಲ್ಲಿ ಬಿಎಲ್‌ಒಗಳು ಜನರನ್ನು ಒಂದೆಡೆ ಸೇರಿಸಿ ಕೆಲಸ ಮಾಡುತ್ತಿರುವುದನ್ನು ಖೂಬಾ ಪ್ರಶ್ನಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಬೀದರ್​​ನಲ್ಲಿ BLO ಸಾವು

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಬೀದರ್​​ನಲ್ಲಿ BLO ಸಾವು

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಎಸ್‌ಐಆರ್ ಕರ್ತವ್ಯದ ವೇಳೆ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೀದರ್‌ನಲ್ಲಿ ನಡೆದಿದೆ. ಇತ್ತ ತುಮಕೂರಿನಲ್ಲಿ ವಿಎಒ ಭುವನಾ ಸಾವಿಗೆ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಕಂದಾಯ ನೌಕರರ ಪ್ರತಿಭಟನೆ ತೀವ್ರಗೊಂಡಿದೆ. ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲವೂ ವ್ಯಕ್ತವಾಗಿದೆ.

ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
'ವಂದೇ ಮಾತರಂ' ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ