ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ…
ಟಿವಿ9 ವರದಿಯ ಇಂಪ್ಯಾಕ್ಟ್: ಮಾವಿನ ಹಣ್ಣು ತಿಂದು ಮೃತಪಟ್ಟ ಅಕ್ಕ-ತಂಗಿಯ ಮೂವರು ಸಹೋದರಿಯರನ್ನು ದತ್ತು ಪಡೆದ ಶಾಸಕ ಪ್ರಭು ಚೌಹಾಣ್
ಮಾವಿನ ಹಣ್ಣು ಸೇವಿಸಿ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ಇಬ್ಬರು ಸಹೋದರಿಯರು ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ‘ಟಿವಿ9’ ಬಿತ್ತರಿಸಿದ ವಿಶೇಷ ವರದಿ ಪರಿಣಾಮ ಬೀರಿದೆ. ಮೃತ ಬಾಲಕಿಯರ ಕುಟುಂಬದ ದಯನೀಯ ಸ್ಥಿತಿಗೆ ಸ್ಪಂದಿಸಿರುವ ಔರಾದ್ ಶಾಸಕ ಪ್ರಭು ಚೌಹಾಣ್, ಸಂತ್ರಸ್ತ ಕುಟುಂಬದ ಉಳಿದ ಮೂರು ಹೆಣ್ಣು ಮಕ್ಕಳನ್ನು ದತ್ತು ಪಡೆದುಕೊಂಡಿದ್ದಾರೆ.
- Suresh Naik
- Updated on: Jun 16, 2026
- 10:36 am
ಅನುಮಾನಾಸ್ಪದ ರೀತಿಯಲ್ಲಿ ‘ಮಜಾ ಭಾರತ’ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ನಿಧನ
ಜನಪ್ರಿಯ ಟಿವಿ ಕಾರ್ಯಕ್ರಮಗಳಾದ ‘ಕಾಮಿಡಿ ಕಿಲಾಡಿಗಳು’ ಮತ್ತು ‘ಮಜಾ ಭಾರತ’ ಶೋನಲ್ಲಿ ಸಿದ್ದಾರ್ಥ ಪರಸನೂರು ಭಾಗವಹಿಸಿದ್ದರು. ತಮ್ಮ ಅಭಿನಯದ ಮೂಲಕ ಅವರು ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು. ಈಗ ಅವರು ಅನುಮಾನಾಸ್ಪದವಾಗಿ ನಿಧನರಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿದ್ದಾರ್ಥ ಪರಸನೂರು ಅವರಿಗೆ ಆಪ್ತರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
- Suresh Naik
- Updated on: Jun 15, 2026
- 10:48 pm
ಹಗಲು ದರೋಡೆ: ಬೀದರ್ನಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಕೆಂಪು ಕಲ್ಲು ಗಣಿಗಾರಿಕೆ
ಬೀದರ್ ಜಿಲ್ಲೆಯ ಗಡಿ ಭಾಗಗಳಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. 40ಕ್ಕೂ ಹೆಚ್ಚು ಕಡೆಗಳಲ್ಲಿ ಭೂಮಿಯ ಒಡಲನ್ನು ಬಗೆದು ಕಲ್ಲು ತೆಗೆಯಲಾಗುತ್ತಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಇತರ ಅಧಿಕಾರಿಗಳ ಮೌನ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇನ್ನು ಇದರಿಂದ ಪರಿಸರಕ್ಕೆ ಹಾನಿಯಾಗುತ್ತಿರುವ ಆರೋಪ ಕೇಳಿಬಂದಿದೆ.
- Suresh Naik
- Updated on: Jun 15, 2026
- 3:57 pm
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು: ತಾಯಿ ಸೇರಿ ಐವರು ಆಸ್ಪತ್ರೆಗೆ ದಾಖಲು
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಮಾವು ತಿಂದ ನಂತರ ಅಸ್ವಸ್ಥಗೊಂಡಿದ್ದ ಭವಾನಿ (17) ಮತ್ತು ಸಂಧ್ಯಾರಾಣಿ (14) ಎಂಬ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ವಿಜಯಶ್ರೀ ಎಂಬ ಮತ್ತೊಬ್ಬ ಬಾಲಕಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕುಟುಂಬವು ಆರ್ಥಿಕ ಸಂಕಷ್ಟದಲ್ಲಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ಮತ್ತು ಸಂತ್ರಸ್ತ ಕುಟುಂಬಕ್ಕೆ ನೆರವು ನೀಡುವಂತೆ ಮನವಿ ಮಾಡಲಾಗಿದೆ.
- Suresh Naik
- Updated on: Jun 12, 2026
- 2:26 pm
ಶಾಲಾ ಕಟ್ಟಡದಿಂದ ಬಿದ್ದು ಬೀದರ್ನಲ್ಲಿ 15 ವರ್ಷದ ಬಾಲಕ ಸಾವು: ಕಾರಣ ನಿಗೂಢ
ಬೀದರ್ನ ಜನಸೇವಾ ಖಾಸಗಿ ಶಾಲೆಯಲ್ಲಿ 15 ವರ್ಷದ ಸಮೀರ್ ಎಂಬ ಬಾಲಕ ಶಾಲಾ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾನೆ. ಶಾಲಾ ಸಿಬ್ಬಂದಿ ಕಿರುಕುಳ ನೀಡಿದ್ದರಿಂದಲೇ ಆತ ಈ ಕೃತ್ಯ ಎಸಗಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಆದರೆ ಶಾಲಾ ಆಡಳಿತ ಮಂಡಳಿ ಈ ಆರೋಪವನ್ನು ತಳ್ಳಿ ಹಾಕಿದ್ದು, ಬಾಲಕನ ಸಾವಿಗೆ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Suresh Naik
- Updated on: Jun 10, 2026
- 12:50 pm
ಮೃತ ಮಹಿಳೆಯ ಕುಟುಂಬದವರಿಗೆ ಪರಿಹಾರ ನೀಡದ್ದಕ್ಕೆ ಕೆಕೆಆರ್ಟಿಸಿ ಬಸ್ಸನ್ನೇ ಜಪ್ತಿ ಮಾಡಿದ್ರು!
ಅಪಘಾತದಲ್ಲಿ ಮೃತಪಟ್ಟಿದ್ದ ರೇಖಾ ಸುನೀಲ್ ಅವರ ಕುಟುಂಬಕ್ಕೆ 22.50 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶಿಸಿದ್ದರೂ 7 ತಿಂಗಳಿನಿಂದ ವಿಳಂಬ ಮಾಡಿದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸನ್ನು ಬೀದರ್ ಕೋರ್ಟ್ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ. ಸದ್ಯ ಬಸ್ಸನ್ನು ಕೋರ್ಟ್ ಆವರಣದಲ್ಲಿ ತಂದು ಇರಿಸಲಾಗಿದೆ.
- Suresh Naik
- Updated on: Jun 6, 2026
- 12:43 pm
ಹಾಸ್ಟೆಲ್ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ: ಕೊಳೆತ ತರಕಾರಿ ಸಮೇತ ಶಾಸಕರ ಮನೆಗೆ ಬಂದು ವಿದ್ಯಾರ್ಥಿಗಳಿಂದ ದೂರು
ಬೀದರ್ನ ಸರ್ಕಾರಿ ಹಾಸ್ಟೆಲ್ನಲ್ಲಿ ಕಳಪೆ ಆಹಾರ ನೀಡುತ್ತಿರುವುದನ್ನು ಪ್ರತಿಭಟಿಸಿ ವಿದ್ಯಾರ್ಥಿಗಳು ಕೊಳೆತ ತರಕಾರಿಗಳೊಂದಿಗೆ ಶಾಸಕರ ಮನೆಗೆ ಧಾವಿಸಿದ್ದಾರೆ. ಆ ಬೆನ್ನಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲೇ ಊಟ ಹಾಕಿಸಿದ್ದಾರೆ. ಬಳಿಕ ಇನ್ನುಮುಂದೆ ಈ ರೀತಿ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.
- Suresh Naik
- Updated on: Jun 4, 2026
- 11:16 am
ಜಿಲ್ಲಾ ಕೇಂದ್ರದ ಲೈಬ್ರರಿಗಳಿಗೂ ಟಕ್ಕರ್ ನೀಡುವಂತಿದೆ ಪುಟ್ಟ ಹಳ್ಳಿಯ ಹೈಟೆಕ್ ಗ್ರಂಥಾಲಯ: ಏನೇನಿದೆ ಗೊತ್ತಾ?
ಬೀದರ್ನ ಶ್ರೀಮಂಡಲ ಗ್ರಾಮದಲ್ಲಿ ಹೈಟೆಕ್ ಡಿಜಿಟಲ್ ಲೈಬ್ರರಿ ಒಂದು ತಲೆ ಎತ್ತಿದೆ. ಆ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿಯಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಜೊತೆಗೆ ಕಂಪ್ಯೂಟರ್ ಶಿಕ್ಷಣ ಹಾಗೂ ಆಧುನಿಕ ಸಂಪನ್ಮೂಲಗಳನ್ನು ಒದಗಿಸಲಾಗುತ್ತಿದೆ. ಸದ್ಯ ಈ ಹೈಟೆಕ್ ಡಿಜಿಟಲ್ ಲೈಬ್ರರಿ ಎಲ್ಲರ ಗಮನ ಸೆಳೆಯುತ್ತಿದೆ.
- Suresh Naik
- Updated on: Jun 1, 2026
- 7:47 pm
ಹರಿದ ಬಟ್ಟೆಯ ಗುಡಿಸಲೇ ಇವರ ಅರಮನೆ; ಕತ್ತಲ ಕೂಪದಲ್ಲಿ ಹಕ್ಕಿಪಿಕ್ಕಿ ಸಮುದಾಯ
ಬೀದರ್ನ ಹಕ್ಕಿ-ಪಿಕ್ಕಿ ಜನಾಂಗ ದಶಕಗಳಿಂದ ಗುಡಿಸಲಿನಲ್ಲಿಯೇ ಅತಂತ್ರ ಬದುಕು ಸಾಗಿಸುತ್ತಿವೆ. ಅವರಿಗೆ ಸೂರಿಲ್ಲ, ವಿದ್ಯುತ್, ನೀರು ಸೇರಿದಂತೆ ಮೂಲಭೂತ ಸೌಕರ್ಯಗಳೂ ಮರೀಚಿಕೆಯಾಗಿವೆ. ರಾಜಕಾರಣಿಗಳು ಮತಕ್ಕಾಗಿ ಬಳಸಿಕೊಂಡು ನಂತರ ನಿರ್ಲಕ್ಷಿಸಿದ್ದಾರೆ. ಸಾವಿರಾರು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಪ್ರಾಣಿಗಳಿಗಿಂತ ಕಡೆಯಾಗಿ ಈ ಸಮುದಾಯದವರು ಜೀವಿಸುತ್ತಿದ್ದಾರೆ.
- Suresh Naik
- Updated on: May 30, 2026
- 5:26 pm
ಬೀದರ್: ಗಾಳಿ ಸಹಿತ ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಬೀದರ್ ಜಿಲ್ಲೆಯ ಹುಲಸೂರು ಗ್ರಾಮದಲ್ಲಿ ಭಾರೀ ಮಳೆಯಿಂದ ದುರಂತ ಸಂಭವಿಸಿದೆ. ಮನೆ ಮೇಲ್ಚಾವಣಿಯಿಂದ ಕಲ್ಲು ಬಿದ್ದು ಆರು ವರ್ಷದ ಮಗು ಮೃತಪಟ್ಟಿದೆ. ಈ ಘಟನೆ ತೀವ್ರ ನೋವುಂಟು ಮಾಡಿದ್ದು, ಮಳೆಯ ಆರ್ಭಟಕ್ಕೆ ಮನೆಗಳ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ. ಹುಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Suresh Naik
- Updated on: May 26, 2026
- 10:56 pm
ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?: ಸ್ಕ್ಯಾನಿಂಗ್ ವರದಿ ಕಂಡು ರೋಗಿಗೆ ಶಾಕ್!
ಬೀದರ್ನ ಮನ್ನಾಖೇಳಿ ಆಸ್ಪತ್ರೆ ವೈದ್ಯರೊಬ್ಬರು ಅಪಘಾತಕ್ಕೀಡಾಗಿದ್ದ ರೋಗಿಗೆ ಆಪರೇಷನ್ ಮಾಡದೆಯೇ ರಾಡ್ ಹಾಕಲಾಗಿದೆ ಎಂದು ಸುಳ್ಳು ಹೇಳಿ, 37 ಸಾವಿರ ರೂಪಾಯಿ ಪಡೆದು ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಆಪರೇಷನ್ ಆದಮೇಲೂ ಬುಜ ನೋವಾಗುತ್ತಿದ್ದ ಹಿನ್ನೆಲೆ ಸ್ಕ್ಯಾನಿಂಗ್ ಮಾಡಿಸಿದಾಗ ಆಪರೇಷನ್ ಮಾಡದೆ ವೈದ್ಯರು ಸುಳ್ಳು ಹೆಳಿರುವುದು ಗೊತ್ತಾಗಿದೆ ಎನ್ನಲಾಗಿದೆ.
- Suresh Naik
- Updated on: May 26, 2026
- 2:18 pm
ತೈಲ ಬೆಲೆ ಏರಿಕೆ ಬಿಸಿ: ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಮರಳಿದ ರೈತರು; ಟ್ರ್ಯಾಕ್ಟರ್ ಬದಲಾಗಿ ಎತ್ತುಗಳಿಂದ ಉಳುಮೆ
ತೈಲ ಬೆಲೆ ಏರಿಕೆ ಕೃಷಿ ಕ್ಷೇತ್ರದ ಮೇಲೂ ಪರಿಣಾಮ ಬೀರಿದೆ. ಡೀಸೆಲ್ ದರ ಏರಿಕೆಯಿಂದ ಟ್ರ್ಯಾಕ್ಟರ್ ಬಾಡಿಗೆ ದುಬಾರಿಯಾಗಿದ್ದು, ರೈತರು ಕೃಷಿ ವೆಚ್ಚ ತಗ್ಗಿಸಲು ಮತ್ತೆ ಎತ್ತುಗಳ ಉಳುಮೆಯತ್ತ ಮುಖ ಮಾಡುತ್ತಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಈ ಬದಲಾವಣೆ ಸ್ಪಷ್ಟವಾಗಿದ್ದು, ಉಳುಮೆ ಎತ್ತುಗಳ ಖರೀದಿ ಜೋರಾಗಿದೆ.
- Suresh Naik
- Updated on: May 25, 2026
- 4:34 pm