AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರೇಶ್ ನಾಯಕ್

ಸುರೇಶ್ ನಾಯಕ್

ಜಿಲ್ಲಾ ವರದಿಗಾರ - TV9 Kannada

suresh.naik@tv9.com

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ…

Read More
ಕಾರಂಜಾ ಜಲಾಶಯದಲ್ಲಿ ಮೀನು ಉತ್ಪಾದನೆ ಕುಸಿತ, ಬೀದರ್​ನಲ್ಲಿ ಬರಿದಾಗುತ್ತಿದೆ ಮೀನುಗಾರರ ಬದುಕು

ಕಾರಂಜಾ ಜಲಾಶಯದಲ್ಲಿ ಮೀನು ಉತ್ಪಾದನೆ ಕುಸಿತ, ಬೀದರ್​ನಲ್ಲಿ ಬರಿದಾಗುತ್ತಿದೆ ಮೀನುಗಾರರ ಬದುಕು

Bidar News: ಬೀದರ್ ಜಿಲ್ಲೆಯ ಕಾರಂಜಾ ಜಲಾಶಯದಲ್ಲಿ ಮೀನು ಮರಿಗಳನ್ನು ಸಮರ್ಪಕವಾಗಿ ಬಿಡದಿರುವುದು ಹಾಗೂ ಅಕ್ರಮ ಮೀನುಗಾರಿಕೆಗೆ ಕಡಿವಾಣ ಬೀಳದ ಕಾರಣ ಸ್ಥಳೀಯ ಮೀನುಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಲಾಖೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ಮೀನುಗಾರರು, ಕೂಡಲೇ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

ಬೀದರ್​: ಕಾರಂಜಾ ಕಾಲುವೆ ದುರಸ್ತಿಗೆ 181 ಕೋಟಿ ರೂ ಬಿಡುಗಡೆಗೆ ಸಂಪುಟ ಅಸ್ತು; ಈಗಲಾದ್ರೂ ಸಿಗುತ್ತಾ ರೈತರಿಗೆ ನೀರು?

ಬೀದರ್​: ಕಾರಂಜಾ ಕಾಲುವೆ ದುರಸ್ತಿಗೆ 181 ಕೋಟಿ ರೂ ಬಿಡುಗಡೆಗೆ ಸಂಪುಟ ಅಸ್ತು; ಈಗಲಾದ್ರೂ ಸಿಗುತ್ತಾ ರೈತರಿಗೆ ನೀರು?

Bidar Karanga Canal: ಬೀದರ್‌ನ ಕಾರಂಜಾ ಬಲದಂಡೆ ಕಾಲುವೆ ಎರಡು ದಶಕಗಳಿಂದಲೂ ಕೊನೆಭಾಗದ ರೈತರಿಗೆ ನೀರು ತಲುಪಿಸದೆ ನಿರಾಸೆ ಮೂಡಿಸಿತ್ತು. ಪ್ರತಿ ವರ್ಷ ಲಕ್ಷಾಂತರ ರೂ. ದುರಸ್ತಿ ಮಾಡಿದರೂ ಸಮಸ್ಯೆಗೆ ಪರಿಹಾರ ಸಿಕ್ಕಿರಲಿಲ್ಲ. ಇದೀಗ ಕರ್ನಾಟಕ ಸಚಿವ ಸಂಪುಟ 181 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದ್ದು, ಸಾವಿರಾರು ರೈತರ ನೀರಾವರಿ ಕನಸಿಗೆ ಹೊಸ ಭರವಸೆ ಮೂಡಿಸಿದೆ. ಶಾಶ್ವತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಬೀದರ್: ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ

ಬೀದರ್: ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ

ಬೀದರ್‌ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಶಾಲೆ ಬಳಿ ದೇಶೀ ನಿರ್ಮಿತ ಪಿಸ್ತೂಲ್‌ಗಳನ್ನು ಮಾರಾಟ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಐದು ಕಂಟ್ರಿ ಪಿಸ್ತೂಲ್‌ಗಳು, 26 ಜೀವಂತ ಗುಂಡುಗಳು, ಐದು ತಲ್ವಾರ್‌ಗಳು ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪಿಸ್ತೂಲ್ ಮಾರಾಟ ಜಾಲದ ಬಗ್ಗೆ ತನಿಖೆ ಮುಂದುವರೆದಿದೆ.

ಅರೆಸ್ಟ್​​ ಆಗಿದ್ದ ಆರೋಪಿ 6 ಗಂಟೆಯಲ್ಲೇ ಪೊಲೀಸ್​ ಠಾಣೆಯಿಂದ ಎಸ್ಕೇಪ್! ನಿರ್ಲಕ್ಷ್ಯ ಆರೋಪ

ಅರೆಸ್ಟ್​​ ಆಗಿದ್ದ ಆರೋಪಿ 6 ಗಂಟೆಯಲ್ಲೇ ಪೊಲೀಸ್​ ಠಾಣೆಯಿಂದ ಎಸ್ಕೇಪ್! ನಿರ್ಲಕ್ಷ್ಯ ಆರೋಪ

Accused Escapes from police station: ಓರ್ವ ಆರೋಪಿ ಬಂಧನಕ್ಕೊಳಗಾಗಿ ಕೇವಲ 6 ಗಂಟೆಗಳಲ್ಲಿ ಮತ್ತೆ ಪೊಲೀಸ್​ ಠಾಣೆಯಿಂದ ಎಸ್ಕೇಪ್ ಆಗಿರುವ ಆಘಾತಕಾರಿ ಘಟನೆಯೊಂದು ಬೀದರ್​ ಜಿಲ್ಲೆಯ ಖಟಕಚಿಂಚೊಳಿ ಪೊಲೀಸ್​ ಠಾಣೆಯಲ್ಲಿ ನಡೆದಿದೆ. ಸದ್ಯ ಪೊಲೀಸರ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಬೈಕ್​​ಗೆ ಸಾರಿಗೆ ಬಸ್​​ ಡಿಕ್ಕಿ: ಹುಮನಾಬಾದ್​​ನಲ್ಲಿ ದುರಂತ ಅಂತ್ಯ ಕಂಡ ಮಗ, ಚಿಕ್ಕಮ್ಮ

ಬೈಕ್​​ಗೆ ಸಾರಿಗೆ ಬಸ್​​ ಡಿಕ್ಕಿ: ಹುಮನಾಬಾದ್​​ನಲ್ಲಿ ದುರಂತ ಅಂತ್ಯ ಕಂಡ ಮಗ, ಚಿಕ್ಕಮ್ಮ

ಬೀದರ್ ಜಿಲ್ಲೆಯ ಕಬಿರಾಬಾದ್ ವಾಡಿ ಕ್ರಾಸ್ ಬಳಿ ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಚಿಕ್ಕಮ್ಮ ಮತ್ತು ಮಗ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಇತ್ತ ಮುಂಡಗೋಡ ಬಳಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹುಬ್ಬಳ್ಳಿಯ ಕಿಮ್ಸ್​​ಗೆ ರವಾನಿಸಲಾಗಿದೆ.

ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ: ಭಗವತ್ ಖೂಬಾ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಲ್ಕಿತ್ತ BLO

ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ: ಭಗವತ್ ಖೂಬಾ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಲ್ಕಿತ್ತ BLO

Voter list revision: ಬೀದರ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಸಂಸದ ಭಗವಂತ ಖೂಬಾ ಭೇಟಿ ನೀಡಿ, ಮತಗಟ್ಟೆ ಅಧಿಕಾರಿಗಳ (ಬಿಎಲ್‌ಒ) ಕಾರ್ಯವೈಖರಿಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿಯಮಾನುಸಾರ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಮತದಾರರ ಪಟ್ಟಿಗೆ ಹೊಸ ಹೆಸರು ಸೇರಿಸುವ ಮತ್ತು ಪರಿಷ್ಕರಿಸುವ ಕೆಲಸ ಮಾಡಬೇಕಿತ್ತು. ಆದರೆ, ಸ್ಥಳದಲ್ಲಿ ಬಿಎಲ್‌ಒಗಳು ಜನರನ್ನು ಒಂದೆಡೆ ಸೇರಿಸಿ ಕೆಲಸ ಮಾಡುತ್ತಿರುವುದನ್ನು ಖೂಬಾ ಪ್ರಶ್ನಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಬೀದರ್​​ನಲ್ಲಿ BLO ಸಾವು

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಬೀದರ್​​ನಲ್ಲಿ BLO ಸಾವು

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಎಸ್‌ಐಆರ್ ಕರ್ತವ್ಯದ ವೇಳೆ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೀದರ್‌ನಲ್ಲಿ ನಡೆದಿದೆ. ಇತ್ತ ತುಮಕೂರಿನಲ್ಲಿ ವಿಎಒ ಭುವನಾ ಸಾವಿಗೆ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಕಂದಾಯ ನೌಕರರ ಪ್ರತಿಭಟನೆ ತೀವ್ರಗೊಂಡಿದೆ. ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲವೂ ವ್ಯಕ್ತವಾಗಿದೆ.

ಫೇಸ್‌ಬುಕ್‌ನಲ್ಲಿ ಶ್ರೀರಾಮನಿಗೆ ಅಪಮಾನ: ಕನ್ನೇರಿ ಶ್ರೀಗಳ ಸಮಾವೇಶದ ಬೆನ್ನಲ್ಲೇ ಪ್ರಚೋದನಕಾರಿ ಪೋಸ್ಟ್, ಭುಗಿಲೆದ್ದ ಆಕ್ರೋಶ!

ಫೇಸ್‌ಬುಕ್‌ನಲ್ಲಿ ಶ್ರೀರಾಮನಿಗೆ ಅಪಮಾನ: ಕನ್ನೇರಿ ಶ್ರೀಗಳ ಸಮಾವೇಶದ ಬೆನ್ನಲ್ಲೇ ಪ್ರಚೋದನಕಾರಿ ಪೋಸ್ಟ್, ಭುಗಿಲೆದ್ದ ಆಕ್ರೋಶ!

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕನ್ನೇರಿ ಶ್ರೀಗಳ ಬೃಹತ್ ಹಿಂದೂ ಸಮಾವೇಶಕ್ಕೆ ಅನುಮತಿ ದೊರೆತ ಬೆನ್ನಲ್ಲೇ, 'ಬಸವಪರ ಸಂಘಟನೆಗಳ ಒಕ್ಕೂಟ' ಎಂಬ ಫೇಸ್‌ಬುಕ್ ಖಾತೆಯಿಂದ ಪ್ರಭು ಶ್ರೀರಾಮ ಹಾಗೂ ಜಗದ್ಗುರು ರೇಣುಕಾಚಾರ್ಯರ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಹಾಕಿ ಅವಮಾನಿಸಲಾಗಿದೆ. ಈ ಕುರಿತು ಹಿಂದೂ ಮುಖಂಡ ಕೃಷ್ಣ ಗೋಣೆ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಳೆಗಾಲದಲ್ಲಿ ಬರದ ಛಾಯೆ: ಕುರಿಗಳಿಗೆ ಮೇವು, ನೀರು ಸಿಗದೇ ಕುರಿಗಾಹಿಗಳು ಕಂಗಾಲು

ಮಳೆಗಾಲದಲ್ಲಿ ಬರದ ಛಾಯೆ: ಕುರಿಗಳಿಗೆ ಮೇವು, ನೀರು ಸಿಗದೇ ಕುರಿಗಾಹಿಗಳು ಕಂಗಾಲು

Bidar News: ಬೀದರ್ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಬರದ ಛಾಯೆ ಆವರಿಸಿದೆ. ಮುಂಗಾರು ಮಳೆ ಕೊರತೆಯಿಂದ ರೈತರು ಹಾಗೂ ಕುರಿಗಾಹಿಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಪಶುಸಂಗೋಪನೆಗೆ ಭಾರೀ ಹೊಡೆತ ಬಿದ್ದಿದೆ. ಕುರಿಗಳಿಗೆ ಹುಲ್ಲು ಮತ್ತು ಕುಡಿಯುವ ನೀರು ಸಿಗದೆ ಕುರಿಗಾಹಿಗಳು ಪ್ರತಿದಿನ ಹತ್ತಾರು ಕಿ.ಮೀ ಅಲೆದಾಡುತ್ತಿದ್ದು, ಕಂಗಾಲಾಗಿದ್ದಾರೆ.

ಬೀದರ್ ಬ್ರಿಮ್ಸ್ ಆಸ್ಪತ್ರೆ ಅವ್ಯವಸ್ಥೆ: ಕಂತೆ-ಕಂತೆ ಹಣ ನೋಡಿ ಉಪ ಲೋಕಾಯುಕ್ತರು ಶಾಕ್

ಬೀದರ್ ಬ್ರಿಮ್ಸ್ ಆಸ್ಪತ್ರೆ ಅವ್ಯವಸ್ಥೆ: ಕಂತೆ-ಕಂತೆ ಹಣ ನೋಡಿ ಉಪ ಲೋಕಾಯುಕ್ತರು ಶಾಕ್

ಇಂದು ಬೆಳ್ಳಂಬೆಳಗ್ಗೆ ಬೀದರ್​​ ವಿವಿಧ ಸ್ಥಳಗಳಿಗೆ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ನೇತೃತ್ವದ ತಂಡ ಭೇಟಿ ಮಾಡಿ ಪರಿಶೀಲನೆ ಮಾಡಿದರು. ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ವೇಳೆ ಅಲ್ಲಿನ ಅವ್ಯವಸ್ಥೆ ಹಾಗೂ ಸ್ವಚ್ಛತೆಯ ಕೊರತೆಯನ್ನು ಕಂಡು ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇನ್ನು ಈ ವೇಳೆ ಲ್ಯಾಬ್ ಟೆಕ್ನಿಷಿಯನ್ ಬಳಿ ಕಂತೆ ಕಂತೆ ನೋಟು ಪತ್ತೆ ಆಗಿದೆ.

ಟಿವಿ9 ವರದಿಯ ಇಂಪ್ಯಾಕ್ಟ್: ಮಾವಿನ ಹಣ್ಣು ತಿಂದು ಮೃತಪಟ್ಟ ಅಕ್ಕ-ತಂಗಿಯ ಮೂವರು ಸಹೋದರಿಯರನ್ನು ದತ್ತು ಪಡೆದ ಶಾಸಕ ಪ್ರಭು ಚೌಹಾಣ್

ಟಿವಿ9 ವರದಿಯ ಇಂಪ್ಯಾಕ್ಟ್: ಮಾವಿನ ಹಣ್ಣು ತಿಂದು ಮೃತಪಟ್ಟ ಅಕ್ಕ-ತಂಗಿಯ ಮೂವರು ಸಹೋದರಿಯರನ್ನು ದತ್ತು ಪಡೆದ ಶಾಸಕ ಪ್ರಭು ಚೌಹಾಣ್

ಮಾವಿನ ಹಣ್ಣು ಸೇವಿಸಿ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ಇಬ್ಬರು ಸಹೋದರಿಯರು ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ‘ಟಿವಿ9’ ಬಿತ್ತರಿಸಿದ ವಿಶೇಷ ವರದಿ ಪರಿಣಾಮ ಬೀರಿದೆ. ಮೃತ ಬಾಲಕಿಯರ ಕುಟುಂಬದ ದಯನೀಯ ಸ್ಥಿತಿಗೆ ಸ್ಪಂದಿಸಿರುವ ಔರಾದ್ ಶಾಸಕ ಪ್ರಭು ಚೌಹಾಣ್, ಸಂತ್ರಸ್ತ ಕುಟುಂಬದ ಉಳಿದ ಮೂರು ಹೆಣ್ಣು ಮಕ್ಕಳನ್ನು ದತ್ತು ಪಡೆದುಕೊಂಡಿದ್ದಾರೆ.

ಅನುಮಾನಾಸ್ಪದ ರೀತಿಯಲ್ಲಿ ‘ಮಜಾ ಭಾರತ’ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ನಿಧನ

ಅನುಮಾನಾಸ್ಪದ ರೀತಿಯಲ್ಲಿ ‘ಮಜಾ ಭಾರತ’ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ನಿಧನ

ಜನಪ್ರಿಯ ಟಿವಿ ಕಾರ್ಯಕ್ರಮಗಳಾದ ‘ಕಾಮಿಡಿ ಕಿಲಾಡಿಗಳು’ ಮತ್ತು ‘ಮಜಾ ಭಾರತ’ ಶೋನಲ್ಲಿ ಸಿದ್ದಾರ್ಥ ಪರಸನೂರು ಭಾಗವಹಿಸಿದ್ದರು. ತಮ್ಮ ಅಭಿನಯದ ಮೂಲಕ ಅವರು ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು. ಈಗ ಅವರು ಅನುಮಾನಾಸ್ಪದವಾಗಿ ನಿಧನರಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿದ್ದಾರ್ಥ ಪರಸನೂರು ಅವರಿಗೆ ಆಪ್ತರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!