AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರೇಶ್ ನಾಯಕ್

ಸುರೇಶ್ ನಾಯಕ್

ಜಿಲ್ಲಾ ವರದಿಗಾರ - TV9 Kannada

suresh.naik@tv9.com

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ…

Read More
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ: ಭಗವತ್ ಖೂಬಾ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಲ್ಕಿತ್ತ BLO

ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ: ಭಗವತ್ ಖೂಬಾ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಲ್ಕಿತ್ತ BLO

Voter list revision: ಬೀದರ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಸಂಸದ ಭಗವಂತ ಖೂಬಾ ಭೇಟಿ ನೀಡಿ, ಮತಗಟ್ಟೆ ಅಧಿಕಾರಿಗಳ (ಬಿಎಲ್‌ಒ) ಕಾರ್ಯವೈಖರಿಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿಯಮಾನುಸಾರ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಮತದಾರರ ಪಟ್ಟಿಗೆ ಹೊಸ ಹೆಸರು ಸೇರಿಸುವ ಮತ್ತು ಪರಿಷ್ಕರಿಸುವ ಕೆಲಸ ಮಾಡಬೇಕಿತ್ತು. ಆದರೆ, ಸ್ಥಳದಲ್ಲಿ ಬಿಎಲ್‌ಒಗಳು ಜನರನ್ನು ಒಂದೆಡೆ ಸೇರಿಸಿ ಕೆಲಸ ಮಾಡುತ್ತಿರುವುದನ್ನು ಖೂಬಾ ಪ್ರಶ್ನಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಬೀದರ್​​ನಲ್ಲಿ BLO ಸಾವು

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಬೀದರ್​​ನಲ್ಲಿ BLO ಸಾವು

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಎಸ್‌ಐಆರ್ ಕರ್ತವ್ಯದ ವೇಳೆ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೀದರ್‌ನಲ್ಲಿ ನಡೆದಿದೆ. ಇತ್ತ ತುಮಕೂರಿನಲ್ಲಿ ವಿಎಒ ಭುವನಾ ಸಾವಿಗೆ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಕಂದಾಯ ನೌಕರರ ಪ್ರತಿಭಟನೆ ತೀವ್ರಗೊಂಡಿದೆ. ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲವೂ ವ್ಯಕ್ತವಾಗಿದೆ.

ಫೇಸ್‌ಬುಕ್‌ನಲ್ಲಿ ಶ್ರೀರಾಮನಿಗೆ ಅಪಮಾನ: ಕನ್ನೇರಿ ಶ್ರೀಗಳ ಸಮಾವೇಶದ ಬೆನ್ನಲ್ಲೇ ಪ್ರಚೋದನಕಾರಿ ಪೋಸ್ಟ್, ಭುಗಿಲೆದ್ದ ಆಕ್ರೋಶ!

ಫೇಸ್‌ಬುಕ್‌ನಲ್ಲಿ ಶ್ರೀರಾಮನಿಗೆ ಅಪಮಾನ: ಕನ್ನೇರಿ ಶ್ರೀಗಳ ಸಮಾವೇಶದ ಬೆನ್ನಲ್ಲೇ ಪ್ರಚೋದನಕಾರಿ ಪೋಸ್ಟ್, ಭುಗಿಲೆದ್ದ ಆಕ್ರೋಶ!

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕನ್ನೇರಿ ಶ್ರೀಗಳ ಬೃಹತ್ ಹಿಂದೂ ಸಮಾವೇಶಕ್ಕೆ ಅನುಮತಿ ದೊರೆತ ಬೆನ್ನಲ್ಲೇ, 'ಬಸವಪರ ಸಂಘಟನೆಗಳ ಒಕ್ಕೂಟ' ಎಂಬ ಫೇಸ್‌ಬುಕ್ ಖಾತೆಯಿಂದ ಪ್ರಭು ಶ್ರೀರಾಮ ಹಾಗೂ ಜಗದ್ಗುರು ರೇಣುಕಾಚಾರ್ಯರ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಹಾಕಿ ಅವಮಾನಿಸಲಾಗಿದೆ. ಈ ಕುರಿತು ಹಿಂದೂ ಮುಖಂಡ ಕೃಷ್ಣ ಗೋಣೆ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಳೆಗಾಲದಲ್ಲಿ ಬರದ ಛಾಯೆ: ಕುರಿಗಳಿಗೆ ಮೇವು, ನೀರು ಸಿಗದೇ ಕುರಿಗಾಹಿಗಳು ಕಂಗಾಲು

ಮಳೆಗಾಲದಲ್ಲಿ ಬರದ ಛಾಯೆ: ಕುರಿಗಳಿಗೆ ಮೇವು, ನೀರು ಸಿಗದೇ ಕುರಿಗಾಹಿಗಳು ಕಂಗಾಲು

Bidar News: ಬೀದರ್ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಬರದ ಛಾಯೆ ಆವರಿಸಿದೆ. ಮುಂಗಾರು ಮಳೆ ಕೊರತೆಯಿಂದ ರೈತರು ಹಾಗೂ ಕುರಿಗಾಹಿಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಪಶುಸಂಗೋಪನೆಗೆ ಭಾರೀ ಹೊಡೆತ ಬಿದ್ದಿದೆ. ಕುರಿಗಳಿಗೆ ಹುಲ್ಲು ಮತ್ತು ಕುಡಿಯುವ ನೀರು ಸಿಗದೆ ಕುರಿಗಾಹಿಗಳು ಪ್ರತಿದಿನ ಹತ್ತಾರು ಕಿ.ಮೀ ಅಲೆದಾಡುತ್ತಿದ್ದು, ಕಂಗಾಲಾಗಿದ್ದಾರೆ.

ಬೀದರ್ ಬ್ರಿಮ್ಸ್ ಆಸ್ಪತ್ರೆ ಅವ್ಯವಸ್ಥೆ: ಕಂತೆ-ಕಂತೆ ಹಣ ನೋಡಿ ಉಪ ಲೋಕಾಯುಕ್ತರು ಶಾಕ್

ಬೀದರ್ ಬ್ರಿಮ್ಸ್ ಆಸ್ಪತ್ರೆ ಅವ್ಯವಸ್ಥೆ: ಕಂತೆ-ಕಂತೆ ಹಣ ನೋಡಿ ಉಪ ಲೋಕಾಯುಕ್ತರು ಶಾಕ್

ಇಂದು ಬೆಳ್ಳಂಬೆಳಗ್ಗೆ ಬೀದರ್​​ ವಿವಿಧ ಸ್ಥಳಗಳಿಗೆ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ನೇತೃತ್ವದ ತಂಡ ಭೇಟಿ ಮಾಡಿ ಪರಿಶೀಲನೆ ಮಾಡಿದರು. ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ವೇಳೆ ಅಲ್ಲಿನ ಅವ್ಯವಸ್ಥೆ ಹಾಗೂ ಸ್ವಚ್ಛತೆಯ ಕೊರತೆಯನ್ನು ಕಂಡು ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇನ್ನು ಈ ವೇಳೆ ಲ್ಯಾಬ್ ಟೆಕ್ನಿಷಿಯನ್ ಬಳಿ ಕಂತೆ ಕಂತೆ ನೋಟು ಪತ್ತೆ ಆಗಿದೆ.

ಟಿವಿ9 ವರದಿಯ ಇಂಪ್ಯಾಕ್ಟ್: ಮಾವಿನ ಹಣ್ಣು ತಿಂದು ಮೃತಪಟ್ಟ ಅಕ್ಕ-ತಂಗಿಯ ಮೂವರು ಸಹೋದರಿಯರನ್ನು ದತ್ತು ಪಡೆದ ಶಾಸಕ ಪ್ರಭು ಚೌಹಾಣ್

ಟಿವಿ9 ವರದಿಯ ಇಂಪ್ಯಾಕ್ಟ್: ಮಾವಿನ ಹಣ್ಣು ತಿಂದು ಮೃತಪಟ್ಟ ಅಕ್ಕ-ತಂಗಿಯ ಮೂವರು ಸಹೋದರಿಯರನ್ನು ದತ್ತು ಪಡೆದ ಶಾಸಕ ಪ್ರಭು ಚೌಹಾಣ್

ಮಾವಿನ ಹಣ್ಣು ಸೇವಿಸಿ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ಇಬ್ಬರು ಸಹೋದರಿಯರು ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ‘ಟಿವಿ9’ ಬಿತ್ತರಿಸಿದ ವಿಶೇಷ ವರದಿ ಪರಿಣಾಮ ಬೀರಿದೆ. ಮೃತ ಬಾಲಕಿಯರ ಕುಟುಂಬದ ದಯನೀಯ ಸ್ಥಿತಿಗೆ ಸ್ಪಂದಿಸಿರುವ ಔರಾದ್ ಶಾಸಕ ಪ್ರಭು ಚೌಹಾಣ್, ಸಂತ್ರಸ್ತ ಕುಟುಂಬದ ಉಳಿದ ಮೂರು ಹೆಣ್ಣು ಮಕ್ಕಳನ್ನು ದತ್ತು ಪಡೆದುಕೊಂಡಿದ್ದಾರೆ.

ಅನುಮಾನಾಸ್ಪದ ರೀತಿಯಲ್ಲಿ ‘ಮಜಾ ಭಾರತ’ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ನಿಧನ

ಅನುಮಾನಾಸ್ಪದ ರೀತಿಯಲ್ಲಿ ‘ಮಜಾ ಭಾರತ’ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ನಿಧನ

ಜನಪ್ರಿಯ ಟಿವಿ ಕಾರ್ಯಕ್ರಮಗಳಾದ ‘ಕಾಮಿಡಿ ಕಿಲಾಡಿಗಳು’ ಮತ್ತು ‘ಮಜಾ ಭಾರತ’ ಶೋನಲ್ಲಿ ಸಿದ್ದಾರ್ಥ ಪರಸನೂರು ಭಾಗವಹಿಸಿದ್ದರು. ತಮ್ಮ ಅಭಿನಯದ ಮೂಲಕ ಅವರು ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು. ಈಗ ಅವರು ಅನುಮಾನಾಸ್ಪದವಾಗಿ ನಿಧನರಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿದ್ದಾರ್ಥ ಪರಸನೂರು ಅವರಿಗೆ ಆಪ್ತರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಹಗಲು ದರೋಡೆ: ಬೀದರ್​ನಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಕೆಂಪು ಕಲ್ಲು ಗಣಿಗಾರಿಕೆ

ಹಗಲು ದರೋಡೆ: ಬೀದರ್​ನಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಕೆಂಪು ಕಲ್ಲು ಗಣಿಗಾರಿಕೆ

ಬೀದರ್ ಜಿಲ್ಲೆಯ ಗಡಿ ಭಾಗಗಳಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. 40ಕ್ಕೂ ಹೆಚ್ಚು ಕಡೆಗಳಲ್ಲಿ ಭೂಮಿಯ ಒಡಲನ್ನು ಬಗೆದು ಕಲ್ಲು ತೆಗೆಯಲಾಗುತ್ತಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಇತರ ಅಧಿಕಾರಿಗಳ ಮೌನ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇನ್ನು ಇದರಿಂದ ಪರಿಸರಕ್ಕೆ ಹಾನಿಯಾಗುತ್ತಿರುವ ಆರೋಪ ಕೇಳಿಬಂದಿದೆ.

ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು: ತಾಯಿ ಸೇರಿ ಐವರು ಆಸ್ಪತ್ರೆಗೆ ದಾಖಲು

ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು: ತಾಯಿ ಸೇರಿ ಐವರು ಆಸ್ಪತ್ರೆಗೆ ದಾಖಲು

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಮಾವು ತಿಂದ ನಂತರ ಅಸ್ವಸ್ಥಗೊಂಡಿದ್ದ ಭವಾನಿ (17) ಮತ್ತು ಸಂಧ್ಯಾರಾಣಿ (14) ಎಂಬ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ವಿಜಯಶ್ರೀ ಎಂಬ ಮತ್ತೊಬ್ಬ ಬಾಲಕಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕುಟುಂಬವು ಆರ್ಥಿಕ ಸಂಕಷ್ಟದಲ್ಲಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ಮತ್ತು ಸಂತ್ರಸ್ತ ಕುಟುಂಬಕ್ಕೆ ನೆರವು ನೀಡುವಂತೆ ಮನವಿ ಮಾಡಲಾಗಿದೆ.

ಶಾಲಾ ಕಟ್ಟಡದಿಂದ ಬಿದ್ದು ಬೀದರ್​​ನಲ್ಲಿ 15 ವರ್ಷದ ಬಾಲಕ ಸಾವು: ಕಾರಣ ನಿಗೂಢ

ಶಾಲಾ ಕಟ್ಟಡದಿಂದ ಬಿದ್ದು ಬೀದರ್​​ನಲ್ಲಿ 15 ವರ್ಷದ ಬಾಲಕ ಸಾವು: ಕಾರಣ ನಿಗೂಢ

ಬೀದರ್‌ನ ಜನಸೇವಾ ಖಾಸಗಿ ಶಾಲೆಯಲ್ಲಿ 15 ವರ್ಷದ ಸಮೀರ್ ಎಂಬ ಬಾಲಕ ಶಾಲಾ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾನೆ. ಶಾಲಾ ಸಿಬ್ಬಂದಿ ಕಿರುಕುಳ ನೀಡಿದ್ದರಿಂದಲೇ ಆತ ಈ ಕೃತ್ಯ ಎಸಗಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಆದರೆ ಶಾಲಾ ಆಡಳಿತ ಮಂಡಳಿ ಈ ಆರೋಪವನ್ನು ತಳ್ಳಿ ಹಾಕಿದ್ದು, ಬಾಲಕನ ಸಾವಿಗೆ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತ ಮಹಿಳೆಯ ಕುಟುಂಬದವರಿಗೆ ಪರಿಹಾರ ನೀಡದ್ದಕ್ಕೆ ಕೆಕೆಆರ್​ಟಿಸಿ ಬಸ್ಸನ್ನೇ ಜಪ್ತಿ ಮಾಡಿದ್ರು!

ಮೃತ ಮಹಿಳೆಯ ಕುಟುಂಬದವರಿಗೆ ಪರಿಹಾರ ನೀಡದ್ದಕ್ಕೆ ಕೆಕೆಆರ್​ಟಿಸಿ ಬಸ್ಸನ್ನೇ ಜಪ್ತಿ ಮಾಡಿದ್ರು!

ಅಪಘಾತದಲ್ಲಿ ಮೃತಪಟ್ಟಿದ್ದ ರೇಖಾ ಸುನೀಲ್ ಅವರ ಕುಟುಂಬಕ್ಕೆ 22.50 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶಿಸಿದ್ದರೂ 7 ತಿಂಗಳಿನಿಂದ ವಿಳಂಬ ಮಾಡಿದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸನ್ನು ಬೀದರ್ ಕೋರ್ಟ್ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ. ಸದ್ಯ ಬಸ್ಸನ್ನು ಕೋರ್ಟ್ ಆವರಣದಲ್ಲಿ ತಂದು ಇರಿಸಲಾಗಿದೆ.

ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ: ಕೊಳೆತ ತರಕಾರಿ ಸಮೇತ ಶಾಸಕರ ಮನೆಗೆ ಬಂದು ವಿದ್ಯಾರ್ಥಿಗಳಿಂದ ದೂರು

ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ: ಕೊಳೆತ ತರಕಾರಿ ಸಮೇತ ಶಾಸಕರ ಮನೆಗೆ ಬಂದು ವಿದ್ಯಾರ್ಥಿಗಳಿಂದ ದೂರು

ಬೀದರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ನೀಡುತ್ತಿರುವುದನ್ನು ಪ್ರತಿಭಟಿಸಿ ವಿದ್ಯಾರ್ಥಿಗಳು ಕೊಳೆತ ತರಕಾರಿಗಳೊಂದಿಗೆ ಶಾಸಕರ ಮನೆಗೆ ಧಾವಿಸಿದ್ದಾರೆ. ಆ ಬೆನ್ನಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲೇ ಊಟ ಹಾಕಿಸಿದ್ದಾರೆ. ಬಳಿಕ ಇನ್ನುಮುಂದೆ ಈ ರೀತಿ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.

ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​