ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ…
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಬೀದರ್ನ ಇಸ್ಲಾಂಪುರ ತಾಂಡಾದಲ್ಲಿ ನೀರಿಗಾಗಿ ತಪ್ಪದ ಪರದಾಟ
ಬೀದರ್ ಜಿಲ್ಲೆಯ ಇಸ್ಲಾಂಪುರ ತಾಂಡಾ ಕಳೆದ ಒಂದು ತಿಂಗಳಿಂದ ತೀವ್ರ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದೆ. ಮಾಂಜ್ರಾ ನದಿ ಅರ್ಧ ಕಿ.ಮೀ. ದೂರದಲ್ಲಿದ್ದರೂ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಜಲಜೀವನ್ ಮಿಷನ್ ಯೋಜನೆಯೂ ವಿಫಲವಾಗಿದ್ದು, ಬೋರ್ವೆಲ್ ಕೆಟ್ಟಿದ್ದರೂ ಪಿಡಿಓ ರಿಪೇರಿಗೆ ಸ್ಪಂದಿಸಿಲ್ಲ. ಇದರಿಂದ ತಾಂಡಾದ 200ಕ್ಕೂ ಹೆಚ್ಚು ನಿವಾಸಿಗಳು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ.
- Suresh Naik
- Updated on: Aug 28, 2026
- 3:16 pm
ಕುಡುಕರ ಅಡ್ಡೆಯಾಗಿ ಮಾರ್ಪಟ್ಟ ಕಾರಂಜಾ ಜಲಾಶಯ: ಇಲ್ಲಿ ಹೇಳೋರಿಲ್ಲ, ಕೇಳೋರೂ ಇಲ್ಲ!
ಬೀದರ್ನ ಜೀವನಾಡಿ ಕಾರಂಜಾ ಜಲಾಶಯವು ಅಧಿಕಾರಿಗಳ ನಿರ್ಲಕ್ಷ್ಯದಿಂದ ಕುಡುಕರ ಅಡ್ಡೆಯಾಗಿ ಮಾರ್ಪಟ್ಟಿದೆ. 8 ಜನ ಭದ್ರತಾ ಸಿಬ್ಬಂದಿಯಿದ್ದರೂ ಸೂಕ್ತ ಕಾವಲಿಲ್ಲದೆ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಸಂಬಂಧಿತ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರೂ ಅವರು ತಲೆಕೆಡಿಸಿಕೊಳ್ಳುತ್ತಿಲ್ಲ ಎಂಬುದು ಸ್ಥಳೀಯರ ಅಳಲು.
- Suresh Naik
- Updated on: Aug 27, 2026
- 7:11 pm
ಬೀದರ್ನಲ್ಲಿ ‘ಟಾಕ್ಸಿಕ್’ ಅಬ್ಬರ: ಥಿಯೇಟರ್ ಮುಂದೆ ರಾರಾಜಿಸುತ್ತಿದೆ ರಾಕಿ ಭಾಯ್ ಕಟೌಟ್ಗಳು!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರವು ವಿಶ್ವಾದ್ಯಂತ 12,000ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಕರ್ನಾಟಕದಲ್ಲಿ 1,500ಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ನಾಲ್ಕು ವರ್ಷಗಳ ಬಳಿಕ ಯಶ್ರನ್ನು ತೆರೆ ಮೇಲೆ ಕಾಣಲು ಅಭಿಮಾನಿಗಳು ಬೀದರ್ ಮತ್ತು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪಟಾಕಿ ಸಿಡಿಸಿ, ಕಟೌಟ್ಗಳಿಗೆ ಹೂವಿನ ಹಾರ ಹಾಕಿ ಸಂಭ್ರಮಿಸಿದ್ದಾರೆ.
- Suresh Naik
- Updated on: Aug 26, 2026
- 9:48 am
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮಲ್ಲಿನಾಥ ಮಹಾರಾಜರು ಕಲಬುರಗಿ ಜಿಲ್ಲೆಯ ನಿರುಗುಡಿ ಗ್ರಾಮದ ಮೌನಿ ಸಂತರು. ಸಮಾಜ ಸೇವೆ, ರಾಷ್ಟ್ರಭಕ್ತಿ ಮತ್ತು ಆಧ್ಯಾತ್ಮಿಕತೆಗೆ ಹೆಸರಾದ ಇವರು, ಮಾತನಾಡುವುದಿಲ್ಲ. ಹಸಿವಿನವರಿಗೆ ಅನ್ನದಾಸೋಹ, ಬಡ ವಿದ್ಯಾರ್ಥಿಗಳಿಗೆ ನೆರವು ನೀಡುತ್ತಾ, 5,000ಕ್ಕೂ ಹೆಚ್ಚು ಮಠಗಳನ್ನು ಸ್ಥಾಪಿಸಿದ್ದಾರೆ. ಭಕ್ತರ ಕಷ್ಟಗಳನ್ನು ಮೌನವಾಗಿಯೇ ಅರ್ಥಮಾಡಿಕೊಂಡು ಪರಿಹಾರ ಒದಗಿಸುವ ಇವರನ್ನು ಭಕ್ತರು ನಡೆದಾಡೋ ದೇವರು ಎಂದು ಪೂಜಿಸುತ್ತಾರೆ.
- Suresh Naik
- Updated on: Aug 20, 2026
- 5:39 pm
‘ವಂದೇ ಮಾತರಂ, ಭಾರತ್ ಮಾತಾಕಿ ಜೈ’ ಎಂದಿದ್ದಕ್ಕೆ ವಿದ್ಯಾರ್ಥಿಗೆ ಬೆದರಿಕೆ ಆರೋಪ: ಪ್ರಾಂಶುಪಾಲರ ವಿರುದ್ಧ ಎಫ್ಐಆರ್!
Bidar News: ಸ್ವಾತಂತ್ರ್ಯ ದಿನಾಚರಣೆ ದಿನದಂದು ಕಾಲೇಜು ಆವರಣದಲ್ಲಿ ದೇಶಭಕ್ತಿ ಘೋಷಣೆ ಕೂಗಿವುದೇ ತಪ್ಪಾ ಎಂಬ ಪ್ರಶ್ನೆ ಮೂಡುವಂತಹ ಆಘಾತಕಾರಿ ಘಟನೆಯೊಂದು ಬೀದರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 'ವಂದೇ ಮಾತರಂ' ಮತ್ತು 'ಭಾರತ್ ಮಾತಾಕಿ ಜೈ' ಎಂದ ವಿದ್ಯಾರ್ಥಿಗೆ ಪ್ರಾಂಶುಪಾಲರು ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಎಫ್ಐಆರ್ ದಾಖಲಾಗಿದೆ.
- Suresh Naik
- Updated on: Aug 20, 2026
- 4:14 pm
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ 3.14 ಕೋಟಿ ರೂ. ವೆಚ್ಚದ ಕಟ್ಟಡ
Bidar News: ಹುಮನಾಬಾದ್ನಲ್ಲಿ 3.14 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಹೈಟೆಕ್ ಪುರಭವನವು 7 ವರ್ಷ ಕಳೆದರೂ ಉದ್ಘಾಟನೆಯಾಗದೆ ಪಾಳು ಬಂಗಲೆಯಾಗಿದೆ. ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗಿದ್ದು, ಕಟ್ಟಡದೊಳಗಿನ ವಿದ್ಯುತ್ ಉಪಕರಣ, ಫ್ಯಾನ್ಗಳು, ಕುರ್ಚಿಗಳು ಕಳ್ಳರ ಪಾಲಾಗಿವೆ. ಕಾರ್ಯಕ್ರಮಗಳಿಗೆ ದುಬಾರಿ ಖಾಸಗಿ ಸಭಾಭವನಗಳಿಗೆ ಹೋಗಬೇಕಾದ ಅನಿವಾರ್ಯತೆ ಜನರಿಗಿದೆ.
- Suresh Naik
- Updated on: Aug 20, 2026
- 2:11 pm
ಟೊಮ್ಯಾಟೋ ಬೆಳೆಗಾರರಿಗೆ ಗಾಯದ ಮೇಲೆ ಬರೆ: ಕೆಜಿಗೆ 5ರೂ; ಕಟಾವು ಖರ್ಚಿಗೂ ಕಾಸಿಲ್ಲದೆ ಕಂಗಾಲಾದ ಅನ್ನದಾತ!
Tomato price crash: ಬೀದರ್ ಜಿಲ್ಲೆಯ ಟೊಮ್ಯಾಟೋ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ಒಂದು ಕಡೆ ಮಳೆ ಕೊರತೆ ಆದರೆ, ಇನ್ನೊಂದೆಡೆ ಮಾರುಕಟ್ಟೆಯಲ್ಲಿ ಕೆ.ಜಿ ಟೊಮ್ಯಾಟೋ ದರ ಕೇವಲ ಐದು ರೂಪಾಯಿಗೆ ಕುಸಿದಿರುವುದಕ್ಕೆ ರೈತರು ಕಂಗಾಲಾಗಿದ್ದಾರೆ. ಬೆಳೆ ಕಟಾವು ಮಾಡಬೇಕೋ ಅಥವಾ ಬಿಡಬೇಕೋ ಎಂಬ ಗೊಂದಲದಲ್ಲಿದ್ದಾರೆ.
- Suresh Naik
- Updated on: Aug 19, 2026
- 8:16 pm
ಬೀದರ್ನಲ್ಲಿ ಶೂಟೌಟ್ ಮಾಡಿ 83 ಲಕ್ಷ ಹಣ ದರೋಡೆ ಕೇಸ್: 19 ತಿಂಗಳ ಬಳಿಕ ಆರೋಪಿಗಳ ಬಂಧನ
Bidar 83 Lakh Robbery: ಬೀದರ್ ನಗರದ ಹೃದಯ ಭಾಗದಲ್ಲಿ ಹಾಡಹಗಲೇ ಎಟಿಎಂಗೆ ಹಣ ತುಂಬುವ ಸಿಎಂಎಸ್ ವಾಹನದ ಮೇಲೆ ಗುಂಡಿನ ದಾಳಿ ನಡೆಸಿ 83 ಲಕ್ಷ ರೂ ಹಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ದರೋಡೆಕೋರರನ್ನು ಅರೆಸ್ಟ್ ಮಾಡಲಾಗಿದೆ. ಆ ಮೂಲಕ ಸುದೀರ್ಘ 19 ತಿಂಗಳ ನಂತರ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ.
- Suresh Naik
- Updated on: Aug 12, 2026
- 7:18 pm
ಮಾಣಿಕ ಪ್ರಭು ದೇವಸ್ಥಾನಕ್ಕೆ ಮೂಗು ಮುಚ್ಚಿಕೊಂಡು ಬರ್ತಿದ್ದ ಭಕ್ತರು: ಫ್ಯಾಕ್ಟರಿ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಬೀದರ್ (Bidar) ಜಿಲ್ಲೆಯ ಹುಮನಾಬಾದ್ (Humnabad) ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು (Factory) ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಸಿದ್ಧ ಮಾಣಿಕ ಪ್ರಭು ದೇವಸ್ಥಾನಕ್ಕೆ ಬರೋ ಭಕ್ತರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಇದನೆಲ್ಲಾ ಅರಿತ ಸಚಿವ ಈಶ್ವರ್ ಖಂಡ್ರೆ, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಸೂಚನೆ ನೀಡಿದ್ದಾರೆ
- Suresh Naik
- Updated on: Aug 10, 2026
- 7:36 pm
2 ತಿಂಗಳ ಮಗು ಬಾವಿಯಲ್ಲಿ ಪತ್ತೆ: ತಾಯಿ ಮೇಲೆಯೇ ಡೌಟ್, ನಿಗೂಢ ಸಾವಿನ ರಹಸ್ಯ ಬೆನ್ನತ್ತಿದ ಪೊಲೀಸ್ರು
Bidar News: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ ಗ್ರಾಮದಲ್ಲಿ ಭಾನುವಾರ ಹಸುಗೂಸಿನ ಶವ ಪತ್ತೆಯಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಔರಾದ್ ತಾಲೂಕಿನ ಸಂತಪುರ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತಾಯಿಯೇ ಮಗುವನ್ನ ಕೊಂದು ಬಾವಿಗೆ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ.
- Suresh Naik
- Updated on: Aug 10, 2026
- 3:24 pm
ಬೀದರ್ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ: 2 ತಿಂಗಳ ಹಸುಗೂಸನ್ನ ಬಾವಿಗೆ ಬಿಸಾಡಿದ ಕಿರಾತಕರು
Bidar New: ಇಂದು ಅಮಾನವೀಯ ಕೃತ್ಯಕ್ಕೆ ಬೀದರ್ ಜಿಲ್ಲೆ ಸಾಕ್ಷಿಯಾಗಿದೆ. ಬಾವಿಯಲ್ಲಿ ಎರಡು ತಿಂಗಳ ಹಸುಗೂಸು ಪತ್ತೆಯಾದ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ನಡೆದಿದೆ. ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸದ್ಯ ಪೊಲೀಸರು ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ.
- Suresh Naik
- Updated on: Aug 9, 2026
- 10:37 pm
ಸಚಿವರ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ಟರು ಕಾರಣ!
ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಅನುಪಸ್ಥಿತಿ ಮತ್ತು ಅಸಮಾಧಾನದ ಬಗ್ಗೆ ಅವರ ಪುತ್ರ ಯತೀಂದ್ರ ಸ್ಪಷ್ಟನೆ ನೀಡಿದ್ದಾರೆ. ಹಿರಿಯರು, ಕಿರಿಯರನ್ನು ಸೇರಿಸಿ ಸಂಪುಟ ರಚನೆಯಾಗುತ್ತದೆ. ಕೆಲವರಿಗೆ ಸಚಿವ ಸ್ಥಾನ ಸಿಗದೇ ಇರುವುದು ಸಹಜ. ಹೈಕಮಾಂಡ್ ಎಲ್ಲವನ್ನೂ ಸರಿಪಡಿಸಲಿದೆ. ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನವಿಲ್ಲ ಎಂದು ಯತೀಂದ್ರ ತಿಳಿಸಿದ್ದಾರೆ.
- Suresh Naik
- Updated on: Aug 4, 2026
- 12:59 pm