ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ…
ಬೀದರ್: ಭಾಲ್ಕಿಯಲ್ಲಿ ಭೀಕರ ಅಪಘಾತ, ಬೈಕ್-ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಯುವಕರ ದುರ್ಮರಣ
ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಏಪ್ರಿಲ್ 29 ರ ತಡರಾತ್ರಿ ನಡೆದ ಕಾರು-ಬೈಕ್ ಅಪಘಾತದಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ. ಇತ್ತ ಜಿಲ್ಲೆಯ ಹಾಲಹಳ್ಳಿ ಬಳಿ ವಿದ್ಯುತ್ ತಂತಿ ತಗುಲಿ ಮೇವಿನ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಜೆಸಿಬಿ ಮೂಲಕ ಮೇವು ತೆರವುಗೊಳಿಸಿ ಲಾರಿಯನ್ನು ರಕ್ಷಿಸಲಾಗಿದೆ.
- Suresh Naik
- Updated on: Apr 30, 2026
- 2:31 pm
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ ಬಿಜೆಪಿ ಶಾಸಕ ಶರಣು ಸಲಗರ
ಬೀದರ್ ಜಿಲ್ಲೆಯ ಬಸವಕಲ್ಯಾಣ ಸಮೀಪ ಅಕ್ರಮ ಗೋ ಸಾಗಾಟ ವಾಹನ ತಡೆದು ಬಿಜೆಪಿ ಶಾಸಕ ಶರಣು ಸಲಗರ 23 ಗೋವುಗಳನ್ನು ರಕ್ಷಿಸಿದ್ದಾರೆ. ಮಂಠಾಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೇಕಾಬಿಟ್ಟಿಯಾಗಿ ವಾಹನಗಳಲ್ಲಿ ಗೋವುಗಳನ್ನು ತುಂಬಿಕೊಂಡು ಆರೋಪಿಗಳು ಸಾಗಾಟ ಮಾಡುತ್ತಿರೋದು ಈ ವೇಳೆ ಪತ್ತೆಯಾಗಿದೆ.
- Suresh Naik
- Updated on: Apr 26, 2026
- 9:51 am
ಮೋದಿ ಬಗ್ಗೆ ಆಕ್ಷೇಪಾರ್ಹವಾಗಿ ಮಾತಾಡಿದ್ದ ಖರ್ಗೆಗೆ ಟಾಂಗ್ ಕೊಟ್ಟ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್
ಬೀದರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಭಯೋತ್ಪಾದಕರು ಹಾಗೂ ಭಯೋತ್ಪಾದಕರಿಗೆ ಭಯ ಹುಟ್ಟಿಸುವವರ ಮಧ್ಯೆ ಖರ್ಗೆಗೆ ವ್ಯತ್ಯಾಸ ತಿಳಿಯುತ್ತಿಲ್ಲ ಎಂದು ಅವರು ಹೇಳಿದ್ದಾರೆ.
- Suresh Naik
- Updated on: Apr 22, 2026
- 4:17 pm
ದೇಗುಲಕ್ಕೆ ಬರುವ ಭಕ್ತರನ್ನ ಬಿಸಿಲಿನಿಂದ ರಕ್ಷಿಸಲು ಗ್ರೀನ್ ಮ್ಯಾಟ್ ಅಳವಡಿಕೆ
ಬೀದರ್ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನರು ಮನೆಯಿಂದ ಹೊರಗಡೆ ಬರುತ್ತಿಲ್ಲ. ಅಷ್ಟೇ ಅಲ್ಲದೆ ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಕೂಡ ಇಳಿಕೆ ಆಗುತ್ತಿದೆ. ಬಿಸಿಲಿನಿಂದ ಕಾದ ದೇವಸ್ಥಾನದ ನೆಲದಿಂದ ಭಕ್ತರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ದೇವಸ್ಥಾನ ಆಡಳಿತ ಮಂಡಳಿ, ಗ್ರೀನ್ ಮ್ಯಾಟ್ ಅಳವಡಿಸುವ ಮೂಲಕ ಭಕ್ತರಿಗೆ ಅನುಕೂಲ ಮಾಡಿಕೊಡಲಾಗಿದೆ.
- Suresh Naik
- Updated on: Apr 20, 2026
- 3:15 pm
ಗಾಂಧಿ ಗ್ರಾಮ ಪುರಸ್ಕೃತ ಪಂಚಾಯತ್ ವ್ಯಾಪ್ತಿಯಲ್ಲಿಲ್ಲ ಕನಿಷ್ಠ ಮೂಲಸೌಕರ್ಯ: ಹನಿ ನೀರಿಗೂ ಜನರ ಪರದಾಟ!
ಬೀದರ್ನ ಜಂಬಗಿ ಗ್ರಾಮ ಪಂಚಾಯತ್ಗೆ ಗಾಂಧಿ ಗ್ರಾಮ ಪುರಸ್ಕಾರ ದೊರೆತಿದ್ದರೂ, ಕನಿಷ್ಠ ಮೂಲಸೌಕರ್ಯ, ವಿಶೇಷವಾಗಿ ಕುಡಿಯುವ ನೀರಿನ ಕೊರತೆಯಿಂದ ಜನರು ತೀವ್ರವಾಗಿ ಪರದಾಡುತ್ತಿದ್ದಾರೆ. ಜಲ ಜೀವನ ಮಿಷನ್ ಯೋಜನೆ ವಿಫಲವಾಗಿದ್ದು, ಗ್ರಾಮಸ್ಥರು ಬೋರ್ವೆಲ್ ನೀರನ್ನೇ ಅವಲಂಬಿಸಿದ್ದಾರೆ. ಈ ಪ್ರಶಸ್ತಿ ಮಾನದಂಡಗಳ ಬಗ್ಗೆ ಗ್ರಾಮಸ್ಥರು ಪ್ರಶ್ನಿಸಿದ್ದು, ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕೋರಿದ್ದಾರೆ.
- Suresh Naik
- Updated on: Apr 16, 2026
- 5:27 pm
ಬೀದರ್: ಈರುಳ್ಳಿ ಬೀಜದ ದರ ಅರ್ಧದಷ್ಟು ಇಳಿಕೆ; ರೈತರಲ್ಲಿ ಕಣ್ಣೀರು ತರಿಸಿದ ಈರುಳ್ಳಿ
ಗಲ್ಫ್ ರಾಷ್ಟ್ರದಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಸದ್ಯ ಕದನ ವಿರಾಮ ನೀಡಲಾಗಿದೆ. ಆದರೆ ಇತ್ತ ಈರುಳ್ಳಿ ಬೀಜ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯುದ್ಧದಿಂದ ರಫ್ತು ಸಮಸ್ಯೆ ಉಂಟಾಗಿ, ಈರುಳ್ಳಿ ಬೀಜದ ದರ ಕ್ವಿಂಟಾಲ್ಗೆ 1.2 ಲಕ್ಷದಿಂದ 80 ಸಾವಿರಕ್ಕೆ ಕುಸಿದಿದೆ. ಬೀದರ್ ಜಿಲ್ಲೆಯ ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುತ್ತಿದ್ದು, ಕೃಷಿ ಮಾಡುವುದೇ ಕಷ್ಟವಾಗಿದೆ.
- Suresh Naik
- Updated on: Apr 8, 2026
- 8:13 pm
ಇಬ್ಬರು ಮಕ್ಕಳು ಸೇರಿ ಐವರಿಗೆ ಕಚ್ಚಿದ ಬೀದಿನಾಯಿ; ಬಾಲಕಿಯ ಮುಖಕ್ಕೇ ಐದಾರು ಬಾರಿ ಕಚ್ಚಿದ ಶ್ವಾನ
ಬೀದರ್ನ ಲಾಲವಾಡಿ ಬಡಾವಣೆಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದೆ. ಕಳೆದ 48 ಗಂಟೆಗಳಲ್ಲಿ ಐವರ ಮೇಲೆ, ಇಬ್ಬರು ಮಕ್ಕಳೂ ಸೇರಿದಂತೆ, ದಾಳಿ ನಡೆಸಿವೆ. ನಾಯಿಗಳ ಸಂತಾನಶಕ್ತಿ ಹರಣ ಚಿಕಿತ್ಸೆ (ABC) ಸರಿಯಾಗಿ ನಡೆಯದಿರುವುದು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ಕ್ರಮ ಕೈಗೊಂಡು ನಾಯಿಗಳನ್ನು ಹಿಡಿದು ಸುರಕ್ಷತೆ ಒದಗಿಸುವಂತೆ ನಿವಾಸಿಗಳು ಒತ್ತಾಯಿಸಿದ್ದಾರೆ.
- Suresh Naik
- Updated on: Apr 7, 2026
- 5:49 pm
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್ಟೇಬಲ್ ಕಾರು: ಭೀಕರ ದೃಶ್ಯ ಸೆರೆ
ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ರಸ್ತೆ ಗುಡಿಸುತ್ತಿದ್ದ ಜ್ಞಾನಬಾಯಿ ಎಂಬ ಮಹಿಳೆಯ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಕಾರು ಹರಿದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು, ಅಪಘಾತದ ಮತ್ತು ಸ್ಥಳದಲ್ಲಿದ್ದ ಬಾಲಕನ ಆಕ್ರಂದನದ ಕರುಳು ಹಿಂಡುವಂತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
- Suresh Naik
- Updated on: Apr 3, 2026
- 1:52 pm
ಚಿಯಾ, ಕಲ್ಲಂಗಡಿ ಬೆನ್ನಲ್ಲೇ ಕರಬೂಜಕ್ಕೂ ತಟ್ಟಿದ ಯುದ್ಧದ ಬಿಸಿ: ದರ ಕುಸಿತ, ಹೊಲದಲ್ಲೇ ಕೊಳೆಯುತ್ತಿರುವ ಹಣ್ಣು
ಬೀದರ್ನ ಕರಬೂಜ ಬೆಳೆಗಾರರು ಗಲ್ಫ್ ಯುದ್ಧದಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಫ್ತು ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದರಿಂದ ಕರಬೂಜ ಬೆಲೆ ಕುಸಿದಿದೆ. ಹಣ್ಣುಗಳು ಹೊಲದಲ್ಲೇ ಕೊಳೆಯುತ್ತಿದ್ದು, ಕಟಾವು ಮತ್ತು ಸಾಗಾಟ ವೆಚ್ಚವನ್ನೂ ಭರಿಸಲಾಗದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಸದ್ಯ ಬೆಳೆಗಾರರು ಸರ್ಕಾರದಿಂದ ನೆರವು ನಿರೀಕ್ಷೆಯಲ್ಲಿದ್ದಾರೆ.
- Suresh Naik
- Updated on: Apr 1, 2026
- 6:15 pm
ಇರಾನ್ ಯುದ್ಧದ ಪರಿಣಾಮ ಬೀದರ್ ಕಲ್ಲಂಗಡಿಗೂ ಇಲ್ಲ ಬೆಲೆ!
ಜಿಲ್ಲೆಯಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಕಲ್ಲಂಗಡಿ ಬೆಳೆಗಾರರಿಗೆ ಭಾರೀ ಹೊಡೆತ ಬಿದ್ದಿದೆ. ರಫ್ತು ವ್ಯವಹಾರದಲ್ಲಿ ವ್ಯತ್ಯಯ ಉಂಟಾಗಿ ಕಲ್ಲಂಗಡಿ ದರ ಪಾತಾಳಕ್ಕೆ ಕುಸಿದಿದ್ದು, ಕೆಜಿಗೆ ಕೇವಲ 4 ರಿಂದ 5 ರೂಪಾಯಿಗೆ ಮಾರಾಟವಾಗುತ್ತಿದೆ. ಕಟಾವು ಮತ್ತು ಸಾಗಾಟ ವೆಚ್ಚವೂ ಮರಳದ ಸ್ಥಿತಿ ನಿರ್ಮಾಣವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತಮ ಗುಣಮಟ್ಟದ ಕಲ್ಲಂಗಡಿ ಇದ್ದರೂ ಖರೀದಿದಾರರ ಕೊರತೆಯಿಂದ ಬೆಳೆ ಹೊಲದಲ್ಲಿಯೇ ಕೊಳೆಯುತ್ತಿದ್ದು, ಜಿಲ್ಲೆಯ ಬಹುತೇಕ ರೈತರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ.
- Suresh Naik
- Updated on: Mar 30, 2026
- 11:35 am
ಚಿಯಾ ಬೆಳೆಗಾರರಿಗೆ ತಟ್ಟಿದ ಯುದ್ಧದ ಬಿಸಿ: ಸರ್ರನೆ ಕುಸಿದ ದರ; ಬೀದರ್ ರೈತರು ಕಂಗಾಲು
ಗಲ್ಫ್ ಯುದ್ಧವೂ 30ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ರಾಜ್ಯದಲ್ಲಿ ಪ್ರತಿಯೊಂದು ಕ್ಷೇತ್ರದ ಮೇಲೆ ಅದರ ಎಫೆಕ್ಟ್ ಬೀರಿದೆ. ಈರುಳ್ಳಿ, ಟೊಮೆಟೊ ರೈತರು ಮಾತ್ರವಲ್ಲದೆ ಇದೀಗ ಚಿಯಾ ಬೆಳೆಗಾರರು ಸಂಕಷ್ಟ ಎದುರಿಸುವಂತಾಗಿದೆ. ಕಾರಣ ಭಾರೀ ದರ ಇಳಿಕೆಯಾಗಿದೆ. ಇದು ಸಾಮಾನ್ಯವಾಗಿ ಬೀದರ್ ರೈತರನ್ನ ಸಂಕಷ್ಟಕ್ಕೆ ಸಿಲುಕಿಸಿದೆ.
- Suresh Naik
- Updated on: Mar 29, 2026
- 6:53 pm
ಮಧ್ಯಪ್ರಾಚ್ಯದ ವಾರ್ ಎಫೆಕ್ಟ್: ರೈತರ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ; ಪಾತಾಳಕ್ಕಿಳಿದ ಬೆಲೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಗಲ್ಫ್ ರಾಷ್ಟ್ರಗಳಿಗೆ ಈರುಳ್ಳಿ ರಫ್ತು ಸ್ಥಗಿತಗೊಂಡಿದೆ. ಇದರಿಂದ ಬೀದರ್ ಜಿಲ್ಲೆಯಲ್ಲಿ ಈರುಳ್ಳಿ ಬೆಲೆ ಪಾತಾಳಕ್ಕಿಳಿದಿದೆ. ಭಾಲ್ಕಿ ತಾಲೂಕಿನ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದು, ಎಕರೆಗೆ 50-55 ಸಾವಿರ ಖರ್ಚು ಮಾಡಿ ಬೆಳೆದ ಈರುಳ್ಳಿಗೆ ಕೆ.ಜಿ.ಗೆ ಕೇವಲ 4-6 ರೂ. ಸಿಗುತ್ತಿದೆ. ಕೃಷಿ ಬಿಕ್ಕಟ್ಟು ಎದುರಿಸುತ್ತಿರುವ ರೈತರು ಕಟಾವು ವೆಚ್ಚವೂ ಸಿಗದೆ ಕಂಗಾಲಾಗಿದ್ದಾರೆ.
- Suresh Naik
- Updated on: Mar 27, 2026
- 4:19 pm