ಸುರೇಶ ನಾಯಕ

ಸುರೇಶ ನಾಯಕ

Author - TV9 Kannada

suresh.naik@tv9.com

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ…

Read More
ಬೀದರ್​ ಜನತೆಯನ್ನು ರೋಮಾಂಚನಗೊಳಿಸಿದ ವಾಯುಸೇನೆ ಏರ್ ಶೋ, ಫೋಟೋಸ್​ ನೋಡಿ

ಬೀದರ್​ ಜನತೆಯನ್ನು ರೋಮಾಂಚನಗೊಳಿಸಿದ ವಾಯುಸೇನೆ ಏರ್ ಶೋ, ಫೋಟೋಸ್​ ನೋಡಿ

ಬೀದರ್ ಜಿಲ್ಲೆಯ ಜನರ ಆಸೆಯಂತೆ ವಾಯು ಸೇನೆಯ ಶಕ್ತಿಯನ್ನು ಜನರಿಗೆ, ಮಕ್ಕಳಿಗೆ ತೋರಿಸುವ ಉದ್ದೇಶದಿಂದ ಬೀದರ್ ಕೋಟೆ ಆವರಣದಲ್ಲಿ ಬೀದರ್​ನ ಏರ್ ಬೇಸ್ ವತಿಯಿಂದ ಎರಡು ದಿನಗಳ ಕಾಲ ಏರ್ ಶೋ ಆಯೋಜನೆ ಮಾಡಲಾಗಿದೆ. ಶನಿವಾರ ನಡೆದ ಏರ್ ಶೋ ರೋಮಜನಕಾರಿಯಾಗಿತ್ತು. ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು.

ಸ್ವಂತ ಹಣದಲ್ಲಿ ಸರಕಾರಿ ಶಾಲೆ ಅಭಿವೃದ್ಧಿ ಪಡಿಸಿದ ಶಿಕ್ಷಕರು; ಇಲ್ಲಿದೆ ಮಕ್ಕಳಿಗೆ ಹಲವು ಸೌಕರ್ಯ

ಸ್ವಂತ ಹಣದಲ್ಲಿ ಸರಕಾರಿ ಶಾಲೆ ಅಭಿವೃದ್ಧಿ ಪಡಿಸಿದ ಶಿಕ್ಷಕರು; ಇಲ್ಲಿದೆ ಮಕ್ಕಳಿಗೆ ಹಲವು ಸೌಕರ್ಯ

ಬೀದರ್​ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಜನರೇ ಜಾಸ್ತಿ. ಆದರೆ, ಆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾತ್ರ ಇತರ ಶಾಲೆಗಳಿಗೆ ಮಾದರಿಯಾಗುವಂತಿದೆ. ಅಲ್ಲಿನ ಶಿಕ್ಷಕರು ಕೂಡ ಸ್ವಂತ ಹಣವನ್ನ ಖರ್ಚು ಮಾಡಿ ಮಕ್ಕಳಿಗೆ ಬೇಕಾದ ಸುಂದರ ವಾತಾವರಣ ನಿರ್ಮಿಸಿದ್ದಾರೆ. ಖಾಸಗಿ ಶಾಲೆಯ ವಾತಾವರಣ ಆ ಸರಕಾರಿ ಶಾಲೆಯಲ್ಲಿ ನಿರ್ಮಾಣವಾಗಿದ್ದು ಎಲ್ಲರ ಮೆಚ್ಚುಗೆ ಘಳಿಸಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬಿಜೆಪಿ‌ ಶಾಸಕನ ವಿರುದ್ದ ನಾಲಿಗೆ ಹರಿಬಿಟ್ಟವನನ್ನ ರಸ್ತೆ ಮೇಲೆ ಓಡಾಡಲು ಬಿಡ್ಬೇಡಿ: ಕಿಡಿಹೊತ್ತಿಸಿದ ವಿಜಯೇಂದ್ರ

ಬಿಜೆಪಿ‌ ಶಾಸಕನ ವಿರುದ್ದ ನಾಲಿಗೆ ಹರಿಬಿಟ್ಟವನನ್ನ ರಸ್ತೆ ಮೇಲೆ ಓಡಾಡಲು ಬಿಡ್ಬೇಡಿ: ಕಿಡಿಹೊತ್ತಿಸಿದ ವಿಜಯೇಂದ್ರ

ಇತ್ತೀಚೆಗೆ ಹುಮನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ್ ನಾಲಿಗೆ ಹರಿಬಿಟ್ಟಿದ್ದರು. ಇದಕ್ಕೆ ಟಕ್ಕರ್ ಕೊಟ್ಟಿರುವ ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ‘ ಬಿಜೆಪಿ‌ ಶಾಸಕನ ವಿರುದ್ದ ನಾಲಿಗೆ ಹರಿಬಿಟ್ಟವನನ್ನಾ ರಸ್ತೆ ಮೇಲೆ ಓಡಾಡೋಕೆ ಬಿಡಬೇಡಿ ಎಂದು ಕಿಡಿಕಾರಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಬೀದರ್ ಗುಪ್ತಲಿಂಗೇಶ್ವರ ದೇವಾಲಯ: 5 ವರ್ಷದ ಬಳಿಕ ಜಲಪಾತಕ್ಕೆ ಸೃಷ್ಟಿ, ನಂದಿ ಬಾಯಿಂದ ಹರಿಯುವ ನೀರಿಗಿದೆ ಔಷಧಿ ಗುಣ

ಬೀದರ್ ಗುಪ್ತಲಿಂಗೇಶ್ವರ ದೇವಾಲಯ: 5 ವರ್ಷದ ಬಳಿಕ ಜಲಪಾತಕ್ಕೆ ಸೃಷ್ಟಿ, ನಂದಿ ಬಾಯಿಂದ ಹರಿಯುವ ನೀರಿಗಿದೆ ಔಷಧಿ ಗುಣ

ಐತಿಹಾಸಿಕ ಗಾಯಮುಖ ಗುಪ್ತಲಿಂಗ ದೇವಸ್ಥಾನ ತನ್ನದೆಯಾದ ಇತಿಹಾಸ ಹೊಂದಿದೆ. ಕಾಡಿನ ಅಂಚಿನಲ್ಲಿರುವ ಈ ದೇವಸ್ಥಾನ ಹತ್ತಾರು ಪವಾಡಗಳಿಗೂ ಸಾಕ್ಷಿಯಾಗಿದೆ. ಎಂಥಹ ಬೇಸಿಗೆಯಲ್ಲಿಯೂ ನಂದಿಯ ಬಾಯಿಂದ ನೀರು ಬಿಳುವುದು ಇಲ್ಲಿ ನಿಂತಿಲ್ಲ. ಈಗ ಮಳೆಯಿಂದಾಗಿ ಶಿವಲಿಂಗದ ಪಕ್ಕದಲ್ಲಿಯೇ ಮಿನಿ ಜೋಗ ಜಲಪಾತವೊಂದು ಸೃಷ್ಟಿಯಾಗಿದ್ದು ಭಕ್ತರನ್ನ ತನ್ನತ್ತ ಸೆಳೆಯುತ್ತಿದೆ. ಐವತ್ತು ಅಡಿ ಎತ್ತರದಿಂದ ಬೀಳುವ ನೀರಿನಲ್ಲಿ ಮಿಂದೆದ್ದು, ಪೋಟೋ ಕ್ಲಿಕ್ಕಿಸಿಕೊಂಡು ಖಷಿ ಪಡುತ್ತಿದ್ದಾರೆ.

ಭಾರೀ ಮಳೆಗೆ ಬೀದರ್​ ಜಿಲ್ಲೆಯ ಜನ ಕಂಗಾಲು; ಮನೆ ಕಳೆದುಕೊಂಡವರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ

ಭಾರೀ ಮಳೆಗೆ ಬೀದರ್​ ಜಿಲ್ಲೆಯ ಜನ ಕಂಗಾಲು; ಮನೆ ಕಳೆದುಕೊಂಡವರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ

ಬೀದರ್​ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನೂರಾರು ಹೇಕ್ಟರ್​ನಷ್ಟು ಬೆಳೆ ಹಾನಿಯಾಗಿದ್ದು, 360 ಮನೆಗಳು ಸಹ ಕುಸಿದಿವೆ. ಬೆಳೆ ಹಾನಿ ಹಾಗೂ ಮನೆ ಕುಸಿದ ಫಲಾನುಭವಿಗಳಿಗೆ ಪರಿಹಾರ ಹಾರ ಕೊಡುತ್ತೇವೆಂದು ಸರಕಾರ ಕಾಲಹರಣ ಮಾಡುತ್ತಿದೆ. ಇದು ಸಹಜವಾಗಿಯೇ ಬೆಳೆ ಹಾಗೂ ಮನೆಕಳೆದುಕೊಂಡವರ ಆಕ್ರೋಶ ಹೆಚ್ಚಿಸುವಂತೆ ಮಾಡಿದ್ದು, ಬೇಗ ಪರಿಹಾರ ಕೊಡಿ ಎಂದು ಮನವಿ ಮಾಡುತ್ತಿದ್ದಾರೆ.

ಮಾಂಜ್ರಾ ನದಿಗೆ 7 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಐತಿಹಾಸಿಕ ಶಿವನ ದೇವಾಲಯ ಮುಳುಗಡೆ

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಹಳ್ಳಿ ಬಳಿಯಿರುವ ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ 7 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತುಗಾಂವ ಬಳಿಯ ಶಿವನ ದೇವಸ್ಥಾನ ಮುಳುಗಡೆ ಆಗಿದೆ.

ಮೂರು ದಿನದಿಂದ ಸುರಿಯುತ್ತಿರೋ ಮಳೆಗೆ ಕಂಗಾಲಾದ ರೈತ; ಕಟಾವಿಗೆ ಬಂದಿದ್ದ ಉದ್ದು, ಸೋಯಾ ನೀರಲ್ಲಿ ಮುಳುಗಡೆ

ಮೂರು ದಿನದಿಂದ ಸುರಿಯುತ್ತಿರೋ ಮಳೆಗೆ ಕಂಗಾಲಾದ ರೈತ; ಕಟಾವಿಗೆ ಬಂದಿದ್ದ ಉದ್ದು, ಸೋಯಾ ನೀರಲ್ಲಿ ಮುಳುಗಡೆ

ಕಳೆದ ಮೂರು ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಆ ಭಾಗದ ರೈತರು ರೈತರು ನಲುಗಿಹೋಗಿದ್ದಾರೆ. ನಿರಂತರ ಮಳೆಯಿಂದಾಗಿ ಸೋಯಾ, ಉದ್ದು, ತೊಗರೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ಹಣ ನಷ್ಟವಾಗಿದೆ. ಸಾಲ ಸೋಲ ಮಾಡಿ ಬಿತ್ತಿದ ಬೆಳೆ ಕೈಗೆ ಬರುವಷ್ಟರಲ್ಲೇ ಮಣ್ಣುಪಾಲಾಗಿದ್ದು, ರೈತರನ್ನ ಸಂಕಷ್ಠಕ್ಕೆ ತಳ್ಳಿದೆ. ವರುಣನ ಆರ್ಭಟಕ್ಕೆ ಬೀದರ್​ ಜಿಲ್ಲೆಯ ರೈತರು ಕಂಗಾಲಾಗಿದ್ದು, ಸರಕಾರ ಕೊಡುವ ಪರಿಹಾರಕ್ಕಾಗಿ ಕಾಯುತ್ತಾ ಕುಳಿತಿದ್ದಾರೆ.

ಬೀದರ್: ಸರ್ಕಾರಿ ಶಾಲೆ ಸುತ್ತಮುತ್ತ ತುಂಬಿದ ನೀರು, ಒಳಗಡೆ ಹೋಗಲಾಗದ್ದಕ್ಕೆ ಐದು ದಿನ ರಜೆ!

ಬೀದರ್: ಸರ್ಕಾರಿ ಶಾಲೆ ಸುತ್ತಮುತ್ತ ತುಂಬಿದ ನೀರು, ಒಳಗಡೆ ಹೋಗಲಾಗದ್ದಕ್ಕೆ ಐದು ದಿನ ರಜೆ!

ಬೀದರ್, ಸೆಪ್ಟೆಂಬರ್ 3: ಭಾರಿ ಮಳೆಯಿಂದಾಗಿ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಸಿಂದಬಂದಗಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೀರು ನಿಂತುಕೊಂಡಿದ್ದು, ಮಕ್ಕಳು ಶಾಲೆಗೆ ಹೋಗಲು, ಬರಲು ಸಾಧ್ಯವಾಗುತ್ತಿಲ್ಲ. ಶಾಲೆಯ ಒಳಗಡೆ ಹೋಗಲಾಗದ್ದಕ್ಕೆ ಶಿಕ್ಷಕರು ಐದು ದಿನ ಶಾಲೆಗೆ ರಜೆ ಘೋಷಿಸಿದ್ದಾರೆ.

ಬೀದರ್​ನಲ್ಲಿ ರೋಮಾಂಚನಕಾರಿ ಏರ್ ಶೋ: ಲೋಹದ ಹಕ್ಕಿಗಳ ಹಾರಾಟಕ್ಕೆ ಜನರು ಫಿದಾ

ಬೀದರ್​ನಲ್ಲಿ ರೋಮಾಂಚನಕಾರಿ ಏರ್ ಶೋ: ಲೋಹದ ಹಕ್ಕಿಗಳ ಹಾರಾಟಕ್ಕೆ ಜನರು ಫಿದಾ

ಇಂದಿನಿಂದ ಬೀದರ್ ಕೋಟೆ ಆವರಣದಲ್ಲಿ ಎರಡು ದಿನಗಳ ಕಾಲ ಬೀದರ್​ನ ಏರ್ ಬೇಸ್ ವತಿಯಿಂದ ಏರ್ ಶೋ ಆಯೋಜನೆ ಮಾಡಲಾಗಿದೆ. ಜಿಲ್ಲೆಯ ಜನರ ಆಸೆಯಂತೆ ವಾಯು ಸೇನೆಯ ಶಕ್ತಿಯನ್ನ ಜನರಿಗೆ ಮತ್ತು ಮಕ್ಕಳಿಗೆ ತೋರಿಸುವ ಉದ್ದೇಶದಿಂದ ಏರ್ ಶೋ ಆಯೋಜಿಸಲಾಗಿದ್ದು, ಮೊದಲ ದಿನ ಲೋಹದ ಹಕ್ಕಿಗಳ ಹಾರಾಟ ಕಂಡು ಖುಷಿಪಟ್ಟರು. ಅದರ ಒಂದು ಝಲಕ್​ ಇಲ್ಲಿದೆ.

ಹೈಕೋರ್ಟ್ ಆದೇಶ ನೀಡಿದರೂ ರೈತರಿಗೆ ಪರಿಹಾರ ನೀಡದ ಸರ್ಕಾರ, ಕೋರ್ಟ್​ಗೆ ಬೆಲೆ ಇಲ್ವಾ?

ಹೈಕೋರ್ಟ್ ಆದೇಶ ನೀಡಿದರೂ ರೈತರಿಗೆ ಪರಿಹಾರ ನೀಡದ ಸರ್ಕಾರ, ಕೋರ್ಟ್​ಗೆ ಬೆಲೆ ಇಲ್ವಾ?

ವಿವಿಧ ಭಾಗ್ಯಗಳನ್ನು ನೀಡುವ ಸರ್ಕಾರ ದಿವಾಳಿಯಾಗಿದೆ. ಯಾವುದೇ ಯೋಜನೆಗಳಿಗೆ ಅಭಿವೃದ್ದಿಗಳಿಗೆ ನೀಡಲು ಹಣವೇ ಇಲ್ಲಾ ಎಂಬ ವಿರೋಧ ಪಕ್ಷಗಳ ಆರೋಪ ನಿಜವೆನ್ನಬಹುದು. ಕಾರಣ ವಿಜಯಪುರದ ರೈತರಿಗೆ ಸರ್ಕಾರದಿಂದ ರೈತರಿಗೆ ಬರಬೇಕಾದ ಪರಿಹಾರದ ಹಣವೇ ಬಂದಿಲ್ಲ. ಈ ಕುರಿತು ಹೈಕೋರ್ಟ್ ಆದೇಶ ನೀಡಿದ ಬಳಿಕವೂ ರೈತರಿಗೆ ನ್ಯಾಯಯುತವಾಗಿ ನೀಡಬೇಕಿರುವ ಪರಿಹಾರದ ಹಣ ನೀಡದೇ ಸತಾಯಿಸಲಾಗುತ್ತಿದೆ. ಈ ಕುರಿತು ಒಂದು ಸ್ಟೋರಿ ಓದಿ.

ಈ ಕಾಲದಲ್ಲಿ ಇಂತವರು ಇದ್ದಾರೆ: ಕಳಪೆ ಕಾಮಗಾರಿಗೆ ಬೇಸತ್ತು ಪಂಚಾಯ್ತಿ ಸದಸ್ಯತ್ವಕ್ಕೆ ರಾಜೀನಾಮೆ

ಈ ಕಾಲದಲ್ಲಿ ಇಂತವರು ಇದ್ದಾರೆ: ಕಳಪೆ ಕಾಮಗಾರಿಗೆ ಬೇಸತ್ತು ಪಂಚಾಯ್ತಿ ಸದಸ್ಯತ್ವಕ್ಕೆ ರಾಜೀನಾಮೆ

ಈಗಿನ ಜಮಾನದಲ್ಲಿ ಎಲ್ಲರೂ ಅಧಿಕಾರ ಬೇಕು ಅಂತಾರೆ. ಸಣ್ಣ ಗ್ರಾಮ ಪಂಚಾಯತಿಯಿಂದ ಹಿಡಿದು ಸಿಎಂ ಹುದ್ದೆಯ ಆಕಾಂಕ್ಷಿಗಳಿದ್ದಾರೆ. ಅದೆಷ್ಟೋ ಆರೋಪಗಳು ಬಂದರೂ ರಾಜೀನಾಮೆ ನೀಡಬೇಕಾದರೆ ಹಿಂದೆ ಮುಂದೆ ನೋಡುತ್ತಾರೆ. ಇದರ ಮಧ್ಯ ಕಳಪೆ ಕಾಮಗಾರಿಯಿಂದ ಬೇಸತ್ತು ತನ್ನ ಗ್ರಾಮ ಪಂಚಾಯತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು, ಅಚ್ಚರಿ ಎನ್ನಿಸಿದರೂ ಸತ್ಯ. ಕಳಪೆ ಕಾಮಗಾರಿ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸದ ಹಿನ್ನೆಲೆ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಪರೂಪದ ಘಟನೆ ಬೀದರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಬೀದರ್​ ಜಿಲ್ಲೆಯಲ್ಲಿ ಪಶು ವೈದ್ಯ, ಸಿಬ್ಬಂದಿ ಕೊರತೆ; 196 ಪ್ರಮುಖ ಹುದ್ದೆಗಳು ಖಾಲಿ, ಜಾನುವಾರ ಸಾಕಣೆದಾರರ ಆಕ್ರೋಶ

ಬೀದರ್​ ಜಿಲ್ಲೆಯಲ್ಲಿ ಪಶು ವೈದ್ಯ, ಸಿಬ್ಬಂದಿ ಕೊರತೆ; 196 ಪ್ರಮುಖ ಹುದ್ದೆಗಳು ಖಾಲಿ, ಜಾನುವಾರ ಸಾಕಣೆದಾರರ ಆಕ್ರೋಶ

ಮೂಕ ಪ್ರಾಣಿಗಳಿಗೆ ಗುಣಮಟ್ಟದ ಚಿಕಿತ್ಸೆ ಕೊಡುವ ಉದ್ದೇಶದಿಂದ ಸರ್ಕಾರ ಪಶು ಚಿಕಿತ್ಸಾಲಯಗಳನ್ನ ತೆರೆದಿದೆ. ಜೊತೆಗೆ ಆ ಆಸ್ಪತ್ರೆಗಳಿಗೆ ವೈದ್ಯರನ್ನ, ಸಿಬ್ಬಂದಿಗಳನ್ನ ನೇಮಕ ಕೂಡಾ ಮಾಡಿದೆ. ಆದರೆ ಗಡಿ ಜಿಲ್ಲೆ ಬೀದರ್​ನಲ್ಲಿ ಮಾತ್ರ ಪಶು ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆಯಿದ್ದು ಜಾನುವಾರುಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಇದು ಸಹಜವಾಗಿಯೇ ರೈತರ ಆಕ್ರೋಶ ಹೆಚ್ಚಿಸುವಂತೆ ಮಾಡಿದೆ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ