ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ…
ಕೋಟ್ಯಾಂತರ ರೂಪಾಯಿ ವಿದ್ಯುತ್ ಬಿಲ್, ನೀರು ಮತ್ತು ಆಸ್ತಿ ಕರ ಬಾಕಿ ಉಳಿಸಿಕೊಂಡ ಬ್ರಿಮ್ಸ್
ಬೀದರ್ನ ಬ್ರಿಮ್ಸ್ ಆಸ್ಪತ್ರೆ 15 ವರ್ಷಗಳಿಂದ ನೀರಿನ, ಆಸ್ತಿ ಮತ್ತು ವಿದ್ಯುತ್ ಬಿಲ್ಗಳನ್ನು ಪಾವತಿಸದೆ 10.98 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ನಗರಸಭೆ ಹಲವು ನೋಟೀಸ್ ನೀಡಿದ್ದರೂ ಪ್ರಯೋಜನವಾಗಿಲ್ಲ. ನೀರಿನ ಸರಬರಾಜು . ನಿಲ್ಲಿಸುವ ಎಚ್ಚರಿಕೆ ನೀಡಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಗರ ಅಭಿವೃದ್ಧಿಗೆ ಅಡ್ಡಿಯಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Suresh Naik
- Updated on: Feb 5, 2025
- 11:48 am
ವರ್ಷದಿಂದ ಹಾರಾಡದ ವಿಮಾನ: ಮುಚ್ಚುವ ಭೀತಿಯಲ್ಲಿ ಬೀದರ್ ಏರ್ಪೋರ್ಟ್!
ಬೀದರ್ನಿಂದ ಬೆಂಗಳೂರಿಗೆ ಆರಂಭವಾದ ವಿಮಾನ ಸೇವೆಗಳು ಟ್ರೂ ಜೆಟ್ ಮತ್ತು ಸ್ಟಾರ್ ಏರ್ ಕಂಪನಿಗಳಿಂದ ನಿಲ್ಲಿಸಲ್ಪಟ್ಟಿವೆ. ಪ್ರಯಾಣಿಕರ ಕೊರತೆ ಮತ್ತು ಆರ್ಥಿಕ ನಷ್ಟ ಇದಕ್ಕೆ ಕಾರಣ ಎನ್ನಲಾಗಿದೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದು, ಬೀದರ್ ವಿಮಾನ ನಿಲ್ದಾಣ ಮುಚ್ಚುವ ಭೀತಿ ಎದುರಾಗಿದೆ. ಜಿಲ್ಲಾಧಿಕಾರಿಗಳು ಮತ್ತೆ ವಿಮಾನ ಸೇವೆ ಆರಂಭಿಸುವ ಭರವಸೆ ನೀಡಿದ್ದಾರೆ.
- Suresh Naik
- Updated on: Jan 30, 2025
- 7:10 pm
ಬ್ರಿಮ್ಸ್ ವೈದ್ಯರ ಎಡವಟ್ಟಿಂದ ಹೆರಿಗೆ ವೇಳೆ ನವಜಾತ ಶಿಶುಗಳ ಮೂಳೆ ಮುರಿತ: ಸಂಕಷ್ಟದಲ್ಲಿ ಪೋಷಕರು
ಸದಾ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿರುವ ಬೀದರ್ ಬ್ರಿಮ್ಸ್ ಆಸ್ಪತ್ರೆ ಇದೀಗ ಮತ್ತೆ ಸುದ್ದಿಯಾಗಿದೆ. ಹೆರಿಗೆ ವೇಳೆ ಎರಡು ಹಸುಗೂಸುಗಳ ಕಾಲಿನ ಮೂಳೆ ಮುರಿದ ವಿಚಾರ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನರ್ಸ್ಗಳು ಮತ್ತು ಟ್ರೈನಿ ವೈದ್ಯರು ಹೆರಿಗೆ ಮಾಡಿಸಿದ್ದರಿಂದ ಯಡವಟ್ಟಾಗಿರುವುದು ಗೊತ್ತಾಗಿದೆ.
- Suresh Naik
- Updated on: Jan 22, 2025
- 2:15 pm
ಸಚಿನ್ ಆತ್ಮಹತ್ಯೆ ಕೇಸ್: ಇಬ್ಬರಿಗೆ ಜಾಮೀನು, ಐವರಿಗೆ 14 ದಿನ ನ್ಯಾಯಾಂಗ ಬಂಧನ
ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಾರಾಷ್ಟ್ರದ ರೌಡಿಶೀಟರ್ ಪ್ರತಾಪ್ ಧೀರ್ ಪಾಟೀಲ್ ಮತ್ತು ಸೊಲ್ಲಾಪುರ ಜಿಲ್ಲಾ ಶಿವಸೇನಾ ಅಧ್ಯಕ್ಷ ಮನೋಜ್ ಸೇಜವಾಲ್ಗೆ ಬೀದರ್ JMFC ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜೊತೆಗೆ ಆರೋಪಿ ರಾಜು ಕಪನೂರ್ ಮತ್ತು ಗ್ಯಾಂಗ್ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
- Suresh Naik
- Updated on: Jan 18, 2025
- 7:32 pm
ಬೀದರ್ ಶೂಟೌಟ್ ಆರೋಪಿಗಳಿಗಾಗಿ ತೀವ್ರ ಶೋಧ: ದರೋಡೆಕೋರರು ಹೈದರಾಬಾದ್ನಲ್ಲೇ ಇರುವ ಶಂಕೆ
ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೀದರ್ ಶೂಟೌಟ್ ಪ್ರಕರಣದ ತನಿಖೆ ಚುರುಕುಗೊಂಡಿದೆ. ಹೈದರಾಬಾದ್ನಲ್ಲಿ ಆರೋಪಿಗಳಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ಚೆಕ್ ಪೋಸ್ಟ್ ನಿರ್ಮಿಸಿ, ಟೆಕ್ನಿಕಲ್ ಎವಿಡೆನ್ಸ್ಗಳೊಂದಿಗೆ ಖಾಕಿ ಅಖಾಡಕ್ಕೆ ಧುಮುಕಿದೆ. ಆದರೆ, ಕೃತ್ಯ ನಡೆದು 24 ಗಂಟೆ ಕಳೆದರೂ ಆರೋಪಿಗಳ ಸುಳಿವು ಮಾತ್ರ ಇನ್ನೂ ದೊರೆತಿಲ್ಲ.
- Suresh Naik
- Updated on: Jan 17, 2025
- 1:59 pm
ಬೆನ್ನಟ್ಟಿದ್ದ ಪೊಲೀಸರ ಮೇಲೆಯೇ ಫೈರಿಂಗ್ ಮಾಡಿ ಬೀದರ್ ದರೋಡೆಕೋರರು ಎಸ್ಕೇಪ್
ಬೀದರ್ನಲ್ಲಿ ಇಬ್ಬರ ಮೇಲೆ ಫೈರಿಂಗ್ ಮಾರಿ ಎಟಿಎಂ ಹಣ ಕದ್ದೊಯ್ದ ದುಷ್ಕರ್ಮಿಗಳು ಹೈದರಾಬಾದ್ನಲ್ಲಿ ಪತ್ತೆಯಾಗಿದ್ದಾರೆ. ದರೋಡೆಕೋರರು ಹೈದರಾಬಾದ್ನತ್ತ ಎಸ್ಕೇಪ್ ಆಗಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಬೆನ್ನಟ್ಟಿ ಹೋಗಿದ್ದ ಬೀದರ್ ಪೊಲೀಸರಿಗೆ ದರೋಡೆಕೋರರು ಪತ್ತೆಯಾಗಿದ್ದಾರೆ. ಆದರೆ ಹಿಡಿಯಲು ಹೋದಾಗ ಬೀದರ್ ಪೊಲೀಸರ ಮೇಲೆಯೇ ಗುಂಡಿನ ದಾಳಿ ಮಾಡಿ ಪರಾರಿಯಾಗಿದ್ದಾರೆ.
- Suresh Naik
- Updated on: Jan 16, 2025
- 9:44 pm
ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು
ಬೀದರ್ನ ಹೃದಯ ಭಾಗದಲ್ಲಿ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದಿದ್ದ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಸಿನಿಮೀಯ ರೀತಿಯಲ್ಲಿ ಗುಂಡಿನ ದಾಳಿ ನಡೆಸಿದ ಆರೋಪಿಗಳು ಹಣದ ಚೀಲದೊಂದಿಗೆ ಪರಾರಿಯಾಗಿದ್ದಾರೆ. ಆರೋಪಿಗಳನ್ನು ತಡೆಯಲು ಸ್ಥಳೀಯರು ಮಾಡಿದ ಸಾಹಸ ವ್ಯರ್ಥವಾಗಿದೆ. ಸದ್ಯ ಆರೋಪಿಗಳ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.
- Suresh Naik
- Updated on: Jan 17, 2025
- 2:38 pm
ಜಗತ್ತಿನಾದ್ಯಂತ ಪ್ರಸಿದ್ಧಿ ಪಡೆದಿರುವ ಬಿದರಿ ಕಲೆ ಅವಸಾನದತ್ತ!
ಶತಮಾನಗಳ ಇತಿಹಾಸ ಹೊಂದಿರುವ ಬಿದರಿ ಕಲೆ ಅಳಿವಿನಂಚಿನಲ್ಲಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ ಮತ್ತು ಮಾರುಕಟ್ಟೆಯ ಕೊರತೆಯಿಂದ ಕುಶಲಕರ್ಮಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಬಿದರಿ ಕಲೆಗಾರರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿದ್ದರೂ ರಾಜ್ಯ ಸರ್ಕಾರದಿಂದ ಸೂಕ್ತ ಬೆಂಬಲವಿಲ್ಲದಿರುವುದು ಚಿಂತಾಜನಕ. ಬಿದರಿ ಕಲೆಯನ್ನು ಉಳಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು.
- Suresh Naik
- Updated on: Jan 13, 2025
- 12:39 pm
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಪ್ರಿಯಾಂಕ್ ಖರ್ಗೆ ಆಪ್ತ 5 ದಿನ ಸಿಐಡಿ ಕಸ್ಟಡಿಗೆ
ಬೀದರ್ನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ್ ಸೇರಿದಂತೆ ಐವರನ್ನು ಬೀದರ್ ಜೆಎಂಎಫ್ಸಿ ನ್ಯಾಯಾಲಯ 5 ದಿನಗಳ ಸಿಐಡಿ ಕಸ್ಟಡಿಗೆ ನೀಡಿದೆ.ಸಿಐಡಿ ತನಿಖೆ ಭರದಿಂದ ಸಾಗಿದ್ದು, ಡೆತ್ ನೋಟ್ನಲ್ಲಿ ಹೆಸರಿಸಲಾದ ಎಂಟು ಜನರ ಪೈಕಿ ಐವರನ್ನು ಬಂಧಿಸಲಾಗಿದೆ. ಉಳಿದ ಮೂವರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ.
- Suresh Naik
- Updated on: Jan 11, 2025
- 10:12 am
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಪ್ರಿಯಾಂಕ್ ಖರ್ಗೆ ಆಪ್ತ ಸೇರಿ ಐವರ ಬಂಧನ
ರಾಜಕೀಯ ಸ್ವರೂಪ ಪಡೆದುಕೊಂಡಿರುವ ಬೀದರ್ನ ಯುವ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಇಂದು (ಜನವರಿ 10) ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿದಂತೆ ಒಟ್ಟು ಐವರನ್ನು ಬಂಧಿಸಿದ್ದಾರೆ. ಡೆತ್ನೋಟ್ನಲ್ಲಿ ಉಲ್ಲೇಖವಾಗಿದ್ದ 8 ಜನರ ಪೈಕಿ ಇದೀಗ ಸಿಐಡಿ ಅಧಿಕಾರಿಗಳು ಐವರನ್ನು ಬಂಧಿಸಿದ್ದಾರೆ.
- Suresh Naik
- Updated on: Jan 10, 2025
- 6:28 pm
ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಬೀದರ್ ಬಂದ್: ಶಾಲೆಗಳಿಗೆ ರಜೆ ಘೋಷಣೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ವಿರುದ್ಧದ ಹೇಳಿಕೆಗೆ ಬೀದರ್ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ವಿವಿಧ ದಲಿತ ಸಂಘಟನೆಗಳು ನಾಳೆ ಬೀದರ್ ಬಂದ್ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಬೀದರ್ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಡಿಡಿಪಿಐ ಎಸ್.ಎಲ್. ಪ್ರಸನ್ನ ಕುಮಾರ್ ಅವರು ರಜೆ ಆದೇಶ ಹೊರಡಿಸಿದ್ದಾರೆ.
- Suresh Naik
- Updated on: Jan 8, 2025
- 8:12 pm
ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ಕೇಸ್ ಮುಚ್ಚಿ ಹಾಕಲು ಸರ್ಕಾರದ ಯತ್ನ, ಸಹೋದರಿ ಗಂಭೀರ ಆರೋಪ
ಬೀದರ್ನ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದೆ. ಸಚಿನ್ ಗುತ್ತಿಗೆದಾರರ ಪರವಾನಗಿ ಹೊಂದಿರಲಿಲ್ಲ ಎಂದು ಗುತ್ತಿಗೆದಾರರ ಸಂಘ ಹೇಳಿದೆ. ಆದರೆ, ಸಚಿನ್ನ ಸಹೋದರಿ ಸುರೇಖಾ, ರಾಜ್ಯ ಸರ್ಕಾರ ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಆರೋಪಿಸಿ, ಪ್ರಧಾನಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ. ಸಿಬಿಐ ತನಿಖೆಗೆ ಅವರು ಆಗ್ರಹಿಸಿದ್ದಾರೆ.
- Suresh Naik
- Updated on: Jan 2, 2025
- 11:43 am