ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ…
ಬೀದರ್: ಹೈವೇನಲ್ಲಿ ಸಿನಿಮೀಯ ಶೈಲಿಯಲ್ಲಿ ದರೋಡೆ; 23 ಲಕ್ಷ ರೂ ಮೌಲ್ಯದ ಚಿನ್ನಾಭರಣ ಲೂಟಿ
ಬೀದರ್ ಜಿಲ್ಲೆಯ ಬಸವಕಲ್ಯಾಣದ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಸಿನಿಮೀಯ ಶೈಲಿಯಲ್ಲಿ ದರೋಡೆಯೊಂದು ನಡೆದಿದ್ದು, 23 ಲಕ್ಷ ರೂ ಮೌಲ್ಯದ ಚಿನ್ನಾಭರಣ ಸೇರಿದಂತೆ ನಗದು ದೋಚಿ ದರೋಡೆಕೋರರು ಪರಾರಿ ಆಗಿದ್ದಾರೆ. ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರೋಡೆಕೋರರ ಪತ್ತೆಗೆ ಶೋಧ ನಡೆದಿದೆ.
- Suresh Naik
- Updated on: Nov 20, 2025
- 3:19 pm
ಭಾಲ್ಕಿ ಬಳಿ ಭೀಕರ ಅಪಘಾತ: ಗಾಣಗಾಪುರಕ್ಕೆ ತೆರಳುತ್ತಿದ್ದ ತೆಲಂಗಾಣದ ಮೂವರು ಭಕ್ತರ ದುರ್ಮರಣ
ಬುಧವಾರ ಬೆಳ್ಳಂಬೆಳಗ್ಗೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಕಾರು ಮತ್ತು ಕೊರಿಯರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.
- Suresh Naik
- Updated on: Nov 5, 2025
- 9:45 am
ಬೀದರ್ ಬ್ರಿಮ್ಸ್ ಆಸ್ಪತ್ರೆಗೇ ತಗುಲಿದೆ ದೊಡ್ಡ ರೋಗ! ಹೆಚ್ಚಿದ ಭ್ರಷ್ಟಾಚಾರ, 4 ತಿಂಗಳಿಂದ ಗುತ್ತಿಗೆ ನೌಕರರಿಗಿಲ್ಲ ವೇತನ
ಬೀದರ್ನಲ್ಲಿ ಸರ್ಕಾರ ಹೈಟೆಕ್ ಆಸ್ಪತ್ರೆ ಕಟ್ಟಿಸಿದೆ. 2ಡಿ ಎಕೋ, ಸಿಟಿ ಸ್ಯ್ಕಾನ್, ಅಲ್ಟ್ರಾ ಸೌಂಡ್ ಯಂತ್ರಗಳಿವೆ. ಆದರೆ, ಬಡವರಿಗೆ ಮಾತ್ರ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಭ್ರಷ್ಟಾಚಾರ ಮಿತಿಮೀರಿರುವ ಆರೋಪ ಕೇಳಿಬಂದಿದೆ. ಇದೀಗ, ಜಡ್ಡುಗಟ್ಟಿರುವ ಆಸ್ಪತ್ರೆಗೇ ಚಿಕಿತ್ಸೆ ಕೊಡಲು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮುಂದಾಗಿದ್ದು, ತಕ್ಷಣದ ಕ್ರಮಕ್ಕೆ ಮನವಿ ಮಾಡಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ಗೆ ಪತ್ರ ಬರೆದಿದ್ದಾರೆ.
- Suresh Naik
- Updated on: Nov 3, 2025
- 8:01 am
ಬೀದರ್ನಲ್ಲಿ ಹೃದಯವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ಹಿರಿ ಜೀವಗಳು
ಹಿರಿ ಜೀವಗಳು ಸಾವಿನಲ್ಲೂ ಒಂದಾದ ಹೃದಯವಿದ್ರಾವಕ ಘಟನೆ ಗ್ರಾಮಸ್ಥರ ಕಣ್ಣಲ್ಲಿ ನೀರು ತರಿಸಿದೆ. ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ(ಬಿ) ಗ್ರಾಮ ಇಂತಹದೊಂದು ಮನಕಲುಕುವ ಘಟನೆಗೆ ಸಾಕ್ಷಿಯಾಗಿದೆ. ಹೆಂಡತಿ ಸಾವಿನ ಸುದ್ದಿ ತಿಳಿದ ಬೆನ್ನಲ್ಲೇ ಗಂಡ ಕೂಡ ಕೊನೆಯುಸಿರೆಳೆದಿದ್ದಾರೆ. ಸದ್ಯ ಅಕ್ಕ-ಪಕ್ಕ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
- Suresh Naik
- Updated on: Oct 26, 2025
- 5:39 pm
ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ದೇವರ ದರ್ಶನಕ್ಕೆ ಹೋಗಿದ್ದ ಕರ್ನಾಟಕದ ನಾಲ್ವರು ಸ್ನೇಹಿತರು ದುರ್ಮರಣ
ಮಹಾರಾಷ್ಟ್ರದ ಉಮ್ಮರ್ಗಾ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಮೂಲದ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ದೀಪಾವಳಿ ಹಿನ್ನೆಲೆ ಸ್ವಾಮೀಜಿ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಅವರಿದ್ದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Suresh Naik
- Updated on: Oct 21, 2025
- 2:48 pm
ಬೀದರ್: ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಹೆಸರಿನಲ್ಲಿ ರೈತರಿಗೆ ಭಾರೀ ಮೋಸ
ಬೀದರ್ ಜಿಲ್ಲೆಯ ಸಾವಿರಾರು ರೈತರು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಕಂತುಗಳನ್ನು ನಿಯಮಿತವಾಗಿ ಪಾವತಿಸಿದ್ದರೂ, ಬೆಳೆ ಹಾನಿಗೊಳಗಾದಾಗ ವಿಮೆ ಹಣ ಕೈ ಸೇರಿಲ್ಲ. ಕೃಷಿ ಇಲಾಖೆ ಅಧಿಕಾರಿಗಳ ನಿರ್ದೇಶನದಂತೆ ಹಣ ಕಟ್ಟಿದ್ದ ರೈತರು, ಈಗ ವಿಮೆ ಪಾವತಿಗಾಗಿ ಅಲೆದು ಅಲೆದು ಕಂಗಾಲಾಗಿದ್ದಾರೆ. ಸದ್ಯ ಇದು ರೈತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
- Suresh Naik
- Updated on: Oct 5, 2025
- 6:34 pm
Bidar: ಮನ್ನಾಖೇಳಿಯಲ್ಲಿ ಚಾಲಕನ ಬರ್ಬರ ಕೊಲೆ; ಕಾರಣ ನಿಗೂಢ
ಚಾಲಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮನ್ನಾಖೇಳಿ ಗ್ರಾಮದಲ್ಲಿ ನಡೆದಿದೆ. ಚಾಕುವಿನಿಂದ ಇರಿದು, ಕಲ್ಲಿನಿಂದ ತಲೆಗೆ ಜಜ್ಜಿ ಗಣಪತಿ ವಗ್ಗೇರಿ (32) ಎಂಬಾತನನ್ನು ಮರ್ಡರ್ ಮಾಡಲಾಗಿದ್ದು, ಕೊಂದಿದ್ದು ಯಾರು? ಮತ್ತೆ ಯಾಕೆ? ಎಂಬ ಪ್ರಶ್ನೆ ಇನ್ನೂ ನಿಗೂಢವಾಗಿಯೇ ಉಳಿದಿದೆ.
- Suresh Naik
- Updated on: Oct 2, 2025
- 8:39 pm
ಬೀದರ್: ಜಾತಿಗಣತಿಗೆ ಮೊಬೈಲ್ ನೆಟ್ವರ್ಕ್ ಸಮಸ್ಯೆ; ನೀರಿನ ಟ್ಯಾಂಕ್, ಮರವೇರಿದ ಶಿಕ್ಷಕರು
ಕರ್ನಾಟಕದಲ್ಲಿ ಈಗಾಗಲೇ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಂಡಿದೆ. ಆದರೆ ಶುರುವಿನಲ್ಲೇ ಕೆಲ ಸಮಸ್ಯೆಗಳು ಕಾಣಿಸಿಕೊಂಡಿವೆ. ಅದರಲ್ಲೂ ನೆಟ್ವರ್ಕ್ ಸಮಸ್ಯೆಯಿಂದ ಸಮೀಕ್ಷಗೆ ಅಡಚಣೆ ಉಂಟಾಗುತ್ತಿದೆ. ಬೀದರ್ ಜಿಲ್ಲೆಯಲ್ಲಿ ಗಣತಿಗೆ ಬಂದ ಶಿಕ್ಷಕರು ನೆಟ್ವರ್ಕ್ಗಾಗಿ ಮರ ಮತ್ತು ನೀರಿನ ಟ್ಯಾಂಕ್ ಹತ್ತಿರುವಂತಹ ಘಟನೆ ನಡೆದಿವೆ.
- Suresh Naik
- Updated on: Sep 25, 2025
- 8:44 am
ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿಗೆ ಸಿಎಂ ಭೇಟಿ, ಸರ್ದಾರ್ ಪಟೇಲರ ಪುತ್ಥಳಿಗೆ ಮಾಲಾರ್ಪಣೆ
Kalyana Karnataka Festival: ಇಂದು ಹೈದ್ರಾಬಾದ್- ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಕಲ್ಯಾಣ ಕರ್ನಾಟಕ ಉತ್ಸವ ಮಾಡಲಾಗುತ್ತಿದೆ. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ ಕಲಬುರಗಿಗೆ ಭೇಟಿ ನೀಡಿದ್ದು, ನಗರದ ಎಸ್ವಿಪಿ ವೃತ್ತದಲ್ಲಿರುವ ಸರ್ದಾರ್ ಪಟೇಲ್ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಸಾಥ್ ಕೊಟ್ಟಿರು.
- Suresh Naik
- Updated on: Sep 17, 2025
- 9:48 am
ಮನೆ ಮೇಲಿಂದ ಮಗುವನ್ನು ತಳ್ಳಿದ ಮಲತಾಯಿ: ಬಿದ್ದು ಒದ್ದಾಡಿ ಪ್ರಾಣ ಬಿಟ್ಟ ಸಾನ್ವಿ, ವಿಡಿಯೋ ಕರುಳು ಚುರುಕ್ ಅನ್ನುತ್ತೆ
ತಂದೆಗೆ ಎರಡನೇ ಹೆಂಡ್ತಿಯಾದವಳು, ಪುಟ್ಟ ಬಾಲಕಿಗೆ ತಾಯಿ ಆಗ್ತೀನಿ ಎಂದು ಬಂದಿದ್ದ ಮಲತಾಯಿ ರಾಕ್ಷಸಿಯಾಗ್ಬಿಟ್ಟಿದ್ದಾಳೆ. ಬಿಲ್ಡಿಂಗ್ನಿಂದ ಬಿದ್ದು ಮೊಮ್ಮಗಳು ಜೀವ ಬಿಟ್ಟಳು ಅಂದುಕೊಂಡಿದ್ದ ಅಜ್ಜಿಗೆ ಮಲತಾಯಿಯ ಕ್ರೌರ್ಯವನ್ನ ಸಿಸಿಟಿವಿ ಬಿಚ್ಚಿಟ್ಟಿದೆ. ಹೌದು..ತಾಯಿ ಸ್ಥಾನ ತುಂಬುತ್ತೀನಿ ಅಂತ ಬಂದಿದ್ದ ಮಲತಾಯಿಯೇ ಬಾಲಕಿ ಜೀವವನ್ನ ಬಲಿ ಪಡೆದಿದ್ದಾಳೆ. 3ನೇ ಮಹಡಿಯಿಂದ 7 ವರ್ಷದ ಶಾನವಿಯನ್ನ ತಳ್ಳಿ ಮಲತಾಯಿ ರಾಧಾ ಹತ್ಯೆಗೈದಿರುವ ಘಟನೆ ಬೀದರ್ನ ಆದರ್ಶ ಕಾಲೋನಿಯಲ್ಲಿ ನಡೆದಿದೆ. ಮಲತಾಯಿ ತಳ್ಳಿದ್ದರಿಂದ ಕೆಳಗೆ ಬಿದ್ದ ಸಾನ್ವಿ, ಅಲ್ಲಿಂದ ನಡೆದುಕೊಂಡು ರಸ್ತೆಗೆ ಬಂದು ಒದ್ದಾಡಿ ಜೀವಬಿಟ್ಟಿದ್ದಾಳೆ.
- Suresh Naik
- Updated on: Sep 16, 2025
- 6:24 pm
ಬೀದರ್ ನಲ್ಲೊಂದು ಅಮಾನವೀಯ ಘಟನೆ: ಮಲತಾಯಿಯಿಂದ ದಾರುಣ ಅಂತ್ಯ ಕಂಡ ಪುಟ್ಟ ಕಂದಮ್ಮ
ಬೀದರ್ ನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಮಲತಾಯಿಯೇ ಪಟ್ಟಕಂದಮ್ಮನನ್ನ ಮೂರನೇ ಮಹಡಿ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾಳೆ. ನಂತರ ಮಗು ತಾನೇ ಮೂರನೇ ಮಹಡಿಯಿಂದ ಬಿದ್ದಿದೆ ಎಂದು ನಾಟಕಮಾಡಿ ಅಮಾಯಕಿಯಂತೆ ತಿರುಗಾಡುತ್ತಿದ್ದಳು. ಆದರೆ ಪಕ್ಕದ ಮನೆಯ ಸಿಸಿ ಕ್ಯಾಮೆರಾದಲ್ಲಿ ಮಲತಾಯಿಯ ಕ್ರೂರತೆ ಬಯಲಾಗಿದೆ.
- Suresh Naik
- Updated on: Sep 15, 2025
- 10:30 pm
ಬೀದರ್ ಪಶುವೈದ್ಯಕೀಯ ವಿವಿ ಭ್ರಷ್ಟಾಚಾರ ಪ್ರಕರಣ: ಕರ್ನಾಟಕದ 69 ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ
Lokayukta Raid: ಬುಧವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ. ಬೀದರ್ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿವಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಸಂಬಂಧ ಕರ್ನಾಟಕದ 69 ಕಡೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ದಾಳಿಯ ಕುರಿತ ಮಾಹಿತಿ ಇಲ್ಲಿದೆ.
- Suresh Naik
- Updated on: Sep 10, 2025
- 9:47 am