ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ…
ಬರಡು ಭೂಮಿ ಬೀದರ್ನಲ್ಲಿ ನೇರಳೆ ಭರ್ಜರಿ ಫಸಲು: ಲಕ್ಷಾಂತರ ರೂ. ಆದಾಯದಲ್ಲಿ ರೈತ
ಬೀದರ್ ಜಿಲ್ಲೆಯಲ್ಲಿ, ಕಳೆದ ದಶಕದ ಬರಗಾಲ ಮತ್ತು ಅನಿರೀಕ್ಷಿತ ಮಳೆಯಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದರು. ಆದರೆ, ಈಗ ನೇರಳೆ ಬೆಳೆ ರೈತರ ಜೀವನದಲ್ಲಿ ಬದಲಾವಣೆ ತಂದಿದೆ. ಉತ್ತಮ ಬೆಲೆಗೆ ಮಾರಾಟವಾಗುತ್ತಿರುವ ಈ ಹಣ್ಣು, ರೈತರಿಗೆ ಲಕ್ಷಾಂತರ ರೂಪಾಯಿ ಆದಾಯ ಗಳಿಸಲು ಸಹಾಯ ಮಾಡುತ್ತಿದೆ. ಮನ್ನಳ್ಳಿಯ ರೈತ ರಾಮರಾಜು ಅವರ ಯಶಸ್ಸು ಇದಕ್ಕೊಂದು ಉದಾಹರಣೆ. ಆದರೂ, ಸಂರಕ್ಷಣಾ ಸೌಲಭ್ಯಗಳ ಕೊರತೆಯು ಕೆಲವು ರೈತರಿಗೆ ಸವಾಲಾಗಿದೆ.
- Suresh Naik
- Updated on: Jun 20, 2025
- 5:45 pm
ಬೀದರ: ರೋಗ ಗುಣಮುಖಕ್ಕೆ ಜೀವಂತ ಮೀನು ನುಂಗುವುದು, ಏನಿದರ ವಿಶೇಷ?
ಜೀವಂತ ಮೀನುಳನ್ನ ನುಂಗಲು ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ದವರೆಗೂ ಜನರು ಸೇಸಿದ್ದಾರೆ. ಕರ್ನಾಟಕ ಸೇರಿದಂತೆ ಹೈದರಾಬಾದ್, ತೆಲಂಗಾಣ, ಮಹರಾಷ್ಟ್ರದಿಂದ ಬಂದಿದ್ದ ಜನರು ಮುಗಿಬಿದ್ದು ಜೀವಂತ ಮೀನುಗಳನ್ನ ಪೈಪೋಟಿಗೆ ಬಿದ್ದವರಂತೆ ನುಂಗಿ ನೀರು ಕುಡಿದರು. ಅರೆ ಇದೇನಿದು ಜೀವಂತ ಮೀನುಗಳನ್ನು ನುಂಗಿತ್ತಿರುವುದು ಏಕೆ? ಏನು ಪ್ರಯೋಜನ? ಇಲ್ಲಿದೆ ವಿವರ
- Suresh Naik
- Updated on: Jun 8, 2025
- 4:23 pm
ಸ್ವಾವಲಂಬಿ ಬದುಕಿಗೆ ಆಸರೆಯಾದ ಕೈ ಕಸೂತಿ ಕೆಲಸ: ಇತರರಿಗೂ ಕಲಿಸುವ ಮೂಲಕ ಮಾದರಿಯಾದ ಪಶ್ಚಿಮ ಬಂಗಾಳ ಮಹಿಳೆ
ಬೀದರ್ ಜಿಲ್ಲೆಯ ಬಾಲ್ಕಿ ತಾಲ್ಲೂಕಿನ ಕೋಣಮೆಳಕುಂದಾ ಗ್ರಾಮದಲ್ಲಿ ಓರ್ವ ಮಹಿಳೆ ಕೋವಿಡ್ ಲಾಕ್ಡೌನ್ ಸಮಯದಲ್ಲಿ ಕಸೂತಿ ಕಲೆಯನ್ನು ಕಲಿತು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ ಗ್ರಾಮೀಣ ಮಹಿಳೆಯರಿಗೆ ಕಲೆಯನ್ನು ಕಲಿಸುತ್ತಿದ್ದಾರೆ. ಇವರ ತಯಾರಿಸುವ ವಿವಿಧ ಅಲಂಕಾರಿಕ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇದೆ.
- Suresh Naik
- Updated on: Jun 2, 2025
- 8:18 am
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್: ಕಾಂಗ್ರೆಸ್ಗೆ ಆಡಳಿತ ಮಾಡಲು ಬರುತ್ತಿಲ್ಲವೆಂದು ಕಿಡಿ
ದೇಶದ್ರೋಹಿಗಳು ಯಾವ ಪಕ್ಷದವರೇ ಆದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಂಥವರು ಯಾವತ್ತಿದ್ದರೂ ದೇಶದ್ರೋಹಿಗಳೇ. ಪಕ್ಷ, ಜಾತಿ, ಧರ್ಮ ಇತ್ಯಾದಿಗಳನ್ನು ನೋಡದೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಬೇಕು. ಆಗ ಮಂಗಳೂರಿನಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ.
- Suresh Naik
- Updated on: Jun 1, 2025
- 1:00 pm
ಬೀದರ್: ಬಂಜಾರ ಸಮುದಾಯದ ಟ್ರೈಬಲ್ ಪಾರ್ಕ್ಗೆ ಗ್ರಹಣ, ವರ್ಷಗಳೇ ಕಳೆದ್ರು ಮುಗಿಯದ ಕಾಮಗಾರಿ
ಬೀದರ್ನ ಹುಮನಾಬಾದ್ ತಾಲೂಕಿನಲ್ಲಿ ನಿರ್ಮಾಣವಾಗುತ್ತಿರುವ 200 ಕೋಟಿ ರೂಪಾಯಿ ವೆಚ್ಚದ ಬಂಜಾರ ಟ್ರೈಬಲ್ ಪಾರ್ಕ್ನ ಕಾಮಗಾರಿ ನಿಧಾನಗತಿಯಲ್ಲಿದೆ. ರಾಜಕಾರಣಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಮಹತ್ವಾಕಾಂಕ್ಷಿ ಯೋಜನೆ ಹಳ್ಳ ಹಿಡಿಯುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ.
- Suresh Naik
- Updated on: May 28, 2025
- 7:26 pm
ಬೀದರ್ನ ಐತಿಹಾಸಿಕ ಭಾತಂಬ್ರಾ ಕೋಟೆ ಜೀರ್ಣೋದ್ಧಾರ: ಶ್ಲಾಘನೆ
ಬೀದರ್ನ ಭಾತಂಬ್ರಾ ಕೋಟೆ ಅದ್ಭುತ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿದ್ದರೂ, ಅವಸಾನದ ಸ್ಥಿತಿಯಲ್ಲಿತ್ತು. ಗ್ರಾಮಸ್ಥರ ಒತ್ತಾಯದ ಮೇರೆಗೆ ಪುರಾತತ್ವ ಇಲಾಖೆ ಜೀರ್ಣೋದ್ಧಾರ ಕಾರ್ಯ ಆರಂಭಿಸಿದೆ. ಈಗ 90% ಕಾರ್ಯ ಪೂರ್ಣಗೊಂಡಿದ್ದು, ಕೋಟೆ ಮತ್ತೆ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಐತಿಹಾಸಿಕ ಕೋಟೆಯ ಪುನರುಜ್ಜೀವನ, ಬೀದರ್ನ ಇತಿಹಾಸವನ್ನು ಉಳಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ.
- Suresh Naik
- Updated on: May 18, 2025
- 7:44 pm
ಬರದ ನಾಡು ಬೀದರ್ನಲ್ಲಿ ಶ್ರೀಗಂಧದ ಘಮ: ಹೇರಳವಾಗಿ ಬೆಳೆದು ನಿಂತ ಮರಗಳು
ಕರ್ನಾಟಕ ಶ್ರೀಗಂಧದ ನಾಡು. ಕರ್ನಾಟಕದಲ್ಲಿ ಶ್ರೀಗಂಧ ಸಮೃದ್ಧವಾಗಿ ದೊರೆಯುತ್ತದೆ. ಬೀದರ್ ಜಿಲ್ಲೆಯಲ್ಲಿಯೂ ಸಹ ಶ್ರೀಗಂಧ ಮರಗಳು ಹೇರಳವಾಗಿ ಬೆಳೆದು ನಿಂತಿದೆ. 200 ಹೆಕ್ಟರ್ ಪ್ರದೇಶದಲ್ಲಿ ಲಕ್ಷಾಂತರ ಶ್ರೀಗಂಧದ ಮರಗಳು ಬೆಳೆದು ನಿಂತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಶ್ರೀಗಂಧ ಮರಗಳ ರಕ್ಷಣೆಗಾಗಿ ಹಗಲು-ರಾತ್ರಿ ಗಸ್ತು ತಿರುಗುತ್ತಿದ್ದಾರೆ.
- Suresh Naik
- Updated on: May 18, 2025
- 3:42 pm
ಈರುಳ್ಳಿ ಬೀಜ ಮಾರಾಟ ಮಾಡಿ ಕೋಟ್ಯಂತರ ರೂ ಆದಾಯ ಗಳಿಸಿದ ಬೀದರ್ನ ರೈತ
ಬೀದರ್ನ ಹುಮ್ನಾಬಾದ್ ತಾಲೂಕಿನ ರೈತ 40 ಎಕರೆಯಲ್ಲಿ ಈರುಳ್ಳಿ ಬೀಜೋತ್ಪಾದನೆ ಮಾಡಿ ಐದು ತಿಂಗಳಲ್ಲಿ ಕೋಟ್ಯಂತರ ರೂಪಾಯಿ ಲಾಭ ಗಳಿಸಿದ್ದಾರೆ. ಕಿಂಟಾಲ್ಗೆ 50 ಸಾವಿರ ರೂ ಗೆ ಮಾರಾಟ ಮಾಡುವ ಮೂಲಕ ಅವರು ಭರ್ಜರಿ ಲಾಭ ಗಳಿಸುತ್ತಿದ್ದಾರೆ. ಅವರ ಉತ್ತಮ ಗುಣಮಟ್ಟದ ಬೀಜಕ್ಕೆ ರಾಜ್ಯದಾದ್ಯಂತ ಬೇಡಿಕೆಯಿದೆ.
- Suresh Naik
- Updated on: May 14, 2025
- 3:12 pm
ಬಿಸಿಲು ನಾಡು ಬೀದರ್ನಲ್ಲಿ ಗೋಡಂಬಿ ಬಳೆದ ರೈತ: ಅಪಾರ ಆದಾಯ
ಮಲೆನಾಡಿನಿಂದ ಬಂದ ಗೋಡಂಬಿ ಬೆಳೆ ಬೀದರ್ ರೈತರ ಜೀವನವನ್ನು ಬದಲಾಯಿಸಿದೆ. ಅತೀವೃಷ್ಠಿ ಮತ್ತು ಅನಾವೃಷ್ಠಿಯಿಂದ ಬಳಲುತ್ತಿದ್ದ ಈ ಪ್ರದೇಶದಲ್ಲಿ, ಗೋಡಂಬಿ ಬೆಳೆ ಲಕ್ಷಾಂತರ ರೂಪಾಯಿ ಆದಾಯವನ್ನು ನೀಡುತ್ತಿದೆ. ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಈ ಬೆಳೆ, 400 ಹೆಕ್ಟೇರ್ಗೂ ಅಧಿಕ ಪ್ರದೇಶದಲ್ಲಿ ಬೆಳೆಯುತ್ತಿದ್ದು, ರೈತರ ಮುಖದಲ್ಲಿ ಸಂತೋಷ ತಂದಿದೆ. ತೋಟಗಾರಿಕೆ ಇಲಾಖೆಯ ಮಾರ್ಗದರ್ಶನ ಈ ಯಶಸ್ಸಿಗೆ ಕಾರಣವಾಗಿದೆ.
- Suresh Naik
- Updated on: Apr 21, 2025
- 9:05 pm
ಬೀದರ್ನಲ್ಲಿ ನಾಯಿಕೊಡೆಯಂತೆ ತಲೆ ಎತ್ತುತ್ತಿವೆ ಅಕ್ರಮ ಮೊಬೈಲ್ ಟವರ್ಗಳು: ತೆರಿಗೆ ಕಟ್ಟದೆ ಸರ್ಕಾರಕ್ಕೂ ವಂಚನೆ
ಬೀದರ್ ನಗರದಲ್ಲಿ 110ಕ್ಕೂ ಹೆಚ್ಚು ಮೊಬೈಲ್ ಟವರ್ಗಳು ಅನುಮತಿಯಿಲ್ಲದೆ ತಲೆ ಎತ್ತಿವೆ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಜೊತೆಗೆ ಲಕ್ಷಾಂತರ ರೂ ತೆರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅನಧಿಕೃತ ಟವರ್ ನಿರ್ಮಾಣವಾಗುತ್ತಿದ್ದರೂ ನಗರಸಭೆ ಅಧಿಕಾರಿಗಳು ಮಾತ್ರ ಕಂಡುಕಾಣದಂತೆ ಕುಳಿತಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ.
- Suresh Naik
- Updated on: Apr 18, 2025
- 2:58 pm
Bidar Bangalore Flight: ಬೀದರ್ ಬೆಂಗಳೂರು ವಿಮಾನ ಹಾರಾಟ ಇಂದಿನಿಂದ ಶುರು: ಇಲ್ಲಿದೆ ವೇಳಾಪಟ್ಟಿ
ಬೆಂಗಳೂರು ಬೀದರ್ ವಿಮಾನ ಸಂಚಾರ: ಬೀದರ್ನಿಂದ ರಾಜ್ಯದ ರಾಜ್ಯಧಾನಿ ಬೆಂಗಳೂರಿಗೆ ವಿಮಾನ ಹಾರಾಟ ಮತ್ತೆ ಆರಂಭವಾಗಬೇಕೆಂಬ ಕನಸು ನನಸಾಗುತ್ತಿದೆ. ಕಳೆದ ಒಂದೂವರೆ ವರ್ಷದಿಂದ ಬೀದರ್ ವಿಮಾನ ನಿಲ್ದಾಣದಿಂದ ಸ್ಥಗಿತಗೊಂಡಿದ್ದ ಸಂಚಾರ, ಜನರ ಹೋರಾಟದ ಫಲವಾಗಿ ಇದೀಗ ಮತ್ತೆ ಆರಂಭವಾಗುತ್ತಿದೆ. ವಿಮಾನ ಸಂಚಾರಕ್ಕೆ ಇಂದು ಮರು ಚಾಲನೆ ದೊರೆಯುತ್ತಿದೆ.
- Suresh Naik
- Updated on: Apr 16, 2025
- 10:21 am
ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಬೀದರ್ನಲ್ಲಿ ಸೋಮವಾರ ನಡೆದ ಡಾ. ಬಿಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲೇ ಸಚಿವ ಈಶ್ವರ್ ಖಂಡ್ರೆ ಹಾಗೂ ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ ನಡೆಸಿದ್ದಾರೆ. ಖಂಡ್ರೆ ಚುನಾವಣಾ ಭಾಷಣ ಮಾಡಿದ್ದಾರೆ ಎಂದು ಬೆಲ್ದಾಳೆ ಆರೋಪಿಸಿದರೆ, ನಂತರ ಮಾತನಾಡಿದ ಖಂಡ್ರೆ, ಇನ್ನೂ ಕೆಲವು ವಿಷಯ ಹೇಳಿದರೆ ಇವರು ವೇದಿಕೆಯಿಂದಲೇ ನಿರ್ಗಮಿಸಬೇಕಾಗುತ್ತದೆ ಎಂದರು.
- Suresh Naik
- Updated on: Apr 15, 2025
- 12:54 pm