Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ

ಹಿರಿಯ ಉಪಸಂಪಾದಕಿ - TV9 Kannada

sushma.chakre@tv9.com

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow On:
ಭಾರತದಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ; ಹೆಮ್ಮೆಯ ಕ್ಷಣವೆಂದ ಪ್ರಧಾನಿ ಮೋದಿ

ಭಾರತದಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ; ಹೆಮ್ಮೆಯ ಕ್ಷಣವೆಂದ ಪ್ರಧಾನಿ ಮೋದಿ

ಭಾರತ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯನ್ನು ತಲುಪಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕಲ್ಲಿದ್ದಲು ಸಚಿವಾಲಯವನ್ನು ಅಭಿನಂದಿಸಿದ್ದಾರೆ. ಭಾರತದಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯಾಗಿರುವುದು ದೇಶಕ್ಕೆ ಹೆಮ್ಮೆಯ ಮತ್ತು ಐತಿಹಾಸಿಕ ಕ್ಷಣ ಎಂದು ಮೋದಿ ಬಣ್ಣಿಸಿದ್ದಾರೆ. 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯ ಮೈಲಿಗಲ್ಲನ್ನು ದಾಟುವುದು ಗಮನಾರ್ಹ ಸಾಧನೆಯಾಗಿದೆ. ಇದು ಇಂಧನ ಭದ್ರತೆ, ಆರ್ಥಿಕ ಬೆಳವಣಿಗೆ ಮತ್ತು ಸ್ವಾವಲಂಬನೆಗೆ ನಮ್ಮ ಬದ್ಧತೆಯನ್ನು ಎತ್ತಿ ತೋರಿಸುತ್ತದೆ" ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್​ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಯಿಂದ ಉಂಟಾಗುವ ಸಾವು ಶೇ. 70 ಕಡಿಮೆಯಾಗಿದೆ; ರಾಜ್ಯಸಭೆಯಲ್ಲಿ ಅಮಿತ್ ಶಾ

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಯಿಂದ ಉಂಟಾಗುವ ಸಾವು ಶೇ. 70 ಕಡಿಮೆಯಾಗಿದೆ; ರಾಜ್ಯಸಭೆಯಲ್ಲಿ ಅಮಿತ್ ಶಾ

ನಾವು ಕಾಶ್ಮೀರವನ್ನು ಪರಿವರ್ತಿಸಿದ್ದೇವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯಲ್ಲಿ ಶೇ. 70ರಷ್ಟು ಇಳಿಕೆಯಾಗಿದೆ. ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಭಯೋತ್ಪಾದಕ ಘಟನೆಗಳು ಮೋದಿ ಸರ್ಕಾರದಡಿ ಗಮನಾರ್ಹವಾಗಿ ಕಡಿಮೆಯಾಗಿದೆ. 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಮೋದಿ ಸರ್ಕಾರವು ಸಂವಿಧಾನ ರಚನಾಕಾರ ಅಂಬೇಡ್ಕರ್ ಅವರ 'ಒಂದು ಸಂವಿಧಾನ, ಒಂದು ಧ್ವಜ'ದ ಕನಸನ್ನು ನನಸಾಗಿಸಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮನೆಗೆ ಬೆಂಕಿ ಬಿದ್ದಿದ್ದರಿಂದ ಬಯಲಾಯ್ತು ದೆಹಲಿ ಹೈಕೋರ್ಟ್ ಜಡ್ಜ್ ಅಕ್ರಮ

ಮನೆಗೆ ಬೆಂಕಿ ಬಿದ್ದಿದ್ದರಿಂದ ಬಯಲಾಯ್ತು ದೆಹಲಿ ಹೈಕೋರ್ಟ್ ಜಡ್ಜ್ ಅಕ್ರಮ

ದೆಹಲಿ ನ್ಯಾಯಾಧೀಶ ಯಶವಂತ್ ವರ್ಮಾ ಅವರ ಬಂಗಲೆಗೆ ಬೆಂಕಿ ಬಿದ್ದ ಪರಿಣಾಮ ಅವರ ಮನೆಯಲ್ಲಿ ಭಾರಿ ಪ್ರಮಾಣದ ನಗದು ಇರುವುದು ಬೆಳಕಿಗೆ ಬಂದಿದೆ. ಅವರನ್ನು ಇದೀಗ ವರ್ಗಾವಣೆ ಮಾಡಲಾಗಿದೆ. ಈ ಘಟನೆ ಬೆಳಕಿಗೆ ಬಂದ ನಂತರ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅವರ ಮಾತೃ ನ್ಯಾಯಾಲಯಕ್ಕೆ ವಾಪಾಸ್ ಕಳುಹಿಸಲಾಗಿದೆ. ದೆಹಲಿ ಹೈಕೋರ್ಟ್ ನ್ಯಾಯಾಧೀಶರ ನಿವಾಸದಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ. ನ್ಯಾಯಮೂರ್ತಿ ಯಶವಂತ್ ವರ್ಮಾ ನಿವಾಸದಲ್ಲಿ ನಗದು ಪತ್ತೆಯಾಗಿದೆ.

ನೇಮಕಾತಿ ಆಯೋಗವನ್ನು ರಚಿಸಿದ್ದರೆ ನ್ಯಾಯಾಂಗ ಹೊಣೆಗಾರಿಕೆಯ ಸಮಸ್ಯೆ ಬಗೆಹರಿಸುತ್ತಿತ್ತು; ಜಗದೀಪ್ ಧಂಖರ್

ನೇಮಕಾತಿ ಆಯೋಗವನ್ನು ರಚಿಸಿದ್ದರೆ ನ್ಯಾಯಾಂಗ ಹೊಣೆಗಾರಿಕೆಯ ಸಮಸ್ಯೆ ಬಗೆಹರಿಸುತ್ತಿತ್ತು; ಜಗದೀಪ್ ಧಂಖರ್

ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧಂಖರ್ ಇಂದು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ (NJAC)ವನ್ನು ಉಲ್ಲೇಖಿಸಿದರು. ಇದರ ಮಹತ್ವದ ಬಗ್ಗೆ ಅವರು ಮಾತನಾಡಿದರು. ಇದು ನ್ಯಾಯಾಂಗ ಹೊಣೆಗಾರಿಕೆಯ ಸಮಸ್ಯೆಯನ್ನು ಪರಿಹರಿಸಲಾಗುತ್ತಿತ್ತು ಎಂದು ಹೇಳಿದರು. 2014ರಲ್ಲಿ ಪ್ರಧಾನಿ ಮೋದಿ ಸರ್ಕಾರವು ನ್ಯಾಯಾಧೀಶರ ನೇಮಕಾತಿಗಾಗಿ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ (NJAC)ವನ್ನು ರಚಿಸಿತ್ತು. ಆದರೆ, ಅದನ್ನು 2015ರಲ್ಲಿ ಸುಪ್ರೀಂ ಕೋರ್ಟ್ ಅಸಂವಿಧಾನಿಕ ಎಂದು ರದ್ದುಗೊಳಿಸಿತು.

ಹಸುವಿನ ಹಾಲು ಕುಡಿದು, ವಾಂತಿ ಮಾಡಿಕೊಂಡು ಮಹಿಳೆ ಸಾವು!

ಹಸುವಿನ ಹಾಲು ಕುಡಿದು, ವಾಂತಿ ಮಾಡಿಕೊಂಡು ಮಹಿಳೆ ಸಾವು!

ನಾಯಿಯೊಂದು ಹಸುವಿಗೆ ಕಚ್ಚಿತ್ತು. ಆ ಹಸುವಿನ ಹಾಲು ಕುಡಿದ ಮಹಿಳೆ ವಾಂತಿ ಮಾಡಲು ಪ್ರಾರಂಭಿಸಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ. ಗ್ರೇಟರ್ ನೊಯ್ಡಾದ ಜೆವಾರ್‌ನಲ್ಲಿ ಒಂದು ದುರಂತ ಘಟನೆ ಬೆಳಕಿಗೆ ಬಂದಿದೆ. ಹುಚ್ಚು ನಾಯಿ ಕಚ್ಚಿದ ಹಸುವಿನ ಹಾಲು ಕುಡಿದು ಥೋರಾ ಗ್ರಾಮದಲ್ಲಿ ರೇಬೀಸ್‌ನಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಆ ಮಹಿಳೆಯ ಸಾವಿನಿಂದ ಆಕೆಯ ಕುಟುಂಬ ತೀವ್ರ ದುಃಖಕ್ಕೆ ಒಳಗಾಗಿದ್ದಾರೆ.

ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!

ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!

ಬುಧವಾರ ರಾತ್ರಿ ಲಕ್ನೋದಲ್ಲಿ ಮಹಿಳೆಯೊಬ್ಬರು ಟ್ರಾಫಿಕ್ ಇರುವ ರಸ್ತೆಯ ಮಧ್ಯದಲ್ಲಿ ಕುಳಿತು ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದ ನಂತರ ಎಲ್ಲರೂ ಅಲ್ಲಿ ಜಮಾಯಿಸಿದರು. ನಗರದ ವಿಭೂತಿ ಖಾಂಡ್ ಪ್ರದೇಶದ ಲೋಹಿಯಾ ಆಸ್ಪತ್ರೆಯ ಹೊರಗೆ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳೆಯ ಪಕ್ಕದಲ್ಲಿರುವ ಕಪ್ಪು ಬಣ್ಣದ ಬ್ಯಾಗ್ ಕೂಡ ವಿಡಿಯೋದಲ್ಲಿ ಕಂಡುಬಂದಿದೆ. ಈ ಕ್ಲಿಪ್ ರಸ್ತೆಯ ಬದಿಯಿಂದ ವಾಹನಗಳು ಹಾದುಹೋಗುವುದನ್ನು ಸಹ ತೋರಿಸುತ್ತದೆ.

ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ

ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ

ತೀವ್ರವಾಗಿ ಸುಟ್ಟುಹೋದ ಮಹಿಳೆಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯ ಕುಟುಂಬವು ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಆಕೆ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದರು. ಮೃತಳನ್ನು ಸೋಮವತಿ ಎಂದು ಗುರುತಿಸಲಾಗಿದೆ. ಘಟನೆಯ ಸಮಯದಲ್ಲಿ, ಪತಿ ಮತ್ತು ಪತ್ನಿ ಮಾತ್ರ ಮನೆಯಲ್ಲಿದ್ದರು. ಹತ್ತಿರದ ಹಳ್ಳಿಯಲ್ಲಿ ನಡೆದ ಜಾತ್ರೆಯಲ್ಲಿ ಭಾಗವಹಿಸಲು ಇತರ ಕುಟುಂಬ ಸದಸ್ಯರು ಹೋಗಿದ್ದರು. ಈ ಸಮಯದಲ್ಲಿ, ದಂಪತಿಗಳ ನಡುವೆ ಯಾವುದೋ ವಿಷಯದ ಬಗ್ಗೆ ಜಗಳವಾಯಿತು. ಜಗಳ ಹೆಚ್ಚಾದಾಗ, ಸೋಮವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಳು. ಕಿರುಚಾಟ ಕೇಳಿ ನೆರೆಹೊರೆಯವರು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದರು.

ಮಹಾರಾಷ್ಟ್ರದಲ್ಲಿ ಕಾರ್ಬನ್ ಮಾನಾಕ್ಸೈಡ್ ಉಸಿರಾಡಿ 27 ವರ್ಷದ ವ್ಯಕ್ತಿ ಆತ್ಮಹತ್ಯೆ

ಮಹಾರಾಷ್ಟ್ರದಲ್ಲಿ ಕಾರ್ಬನ್ ಮಾನಾಕ್ಸೈಡ್ ಉಸಿರಾಡಿ 27 ವರ್ಷದ ವ್ಯಕ್ತಿ ಆತ್ಮಹತ್ಯೆ

ಮಹಾರಾಷ್ಟ್ರದ ವಸೈಯಲ್ಲಿ 27 ವರ್ಷದ ಯುವಕ ಬುಧವಾರ ಸಂಜೆ ಸಿಲಿಂಡರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸಾವನ್ನಪ್ಪಿದ್ದಾನೆ. ಪೊಲೀಸರು ಇದನ್ನು ಅತ್ಯಂತ ಅಸಾಮಾನ್ಯ ರೀತಿಯ ಆತ್ಮಹತ್ಯೆ ಎಂದು ಕರೆದಿದ್ದಾರೆ. ಮೃತನನ್ನು ಶ್ರೇಯ್ ಅಗರ್ವಾಲ್ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿಯ ಮೃತದೇಹ ಕಮನ್ ಪ್ರದೇಶದ ಬಾಡಿಗೆ ಮನೆಯಲ್ಲಿ ಪತ್ತೆಯಾಗಿದೆ. ಆ ಮನೆಯ ತುಂಬ ಸಿಲಿಂಡರ್‌ ಗ್ಯಾಸ್ ತುಂಬಿತ್ತು.

ಮೊಬೈಲ್ ಬಳಕೆಯಿಂದ 10 ವರ್ಷದಲ್ಲಿ ಜಗತ್ತು ಅಂತ್ಯಗೊಳ್ಳಲಿದೆ; ಬಿಹಾರ ಸಿಎಂ ಹೇಳಿಕೆಗೆ ಕಾಂಗ್ರೆಸ್ ವಾಗ್ದಾಳಿ

ಮೊಬೈಲ್ ಬಳಕೆಯಿಂದ 10 ವರ್ಷದಲ್ಲಿ ಜಗತ್ತು ಅಂತ್ಯಗೊಳ್ಳಲಿದೆ; ಬಿಹಾರ ಸಿಎಂ ಹೇಳಿಕೆಗೆ ಕಾಂಗ್ರೆಸ್ ವಾಗ್ದಾಳಿ

ಬಿಹಾರದ ವಿಧಾನಸಭೆಯೊಳಗೆ ಮೊಬೈಲ್ ಫೋನ್ ಬಳಕೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ವಿರೋಧ ಪಕ್ಷಗಳ ನಾಯಕರು ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಟೀಕಿಸಿದ್ದಾರೆ. ಇಂದು ಸದನದಲ್ಲಿ ಮೊಬೈಲ್ ಫೋನ್ ಬಳಸಿದ್ದಕ್ಕಾಗಿ ಆರ್ ಜೆಡಿ ನಾಯಕರ ವಿರುದ್ಧ ನಿತೀಶ್ ಕುಮಾರ್ ಆಕ್ರೋಶ ಹೊರಹಾಕಿದ್ದರು. ಸದನದೊಳಗೆ ಮೊಬೈಲ್ ಬಳಸುವವರನ್ನು ಹೊರಗೆ ಕಳುಹಿಸಿ ಎಂದು ಸ್ಪೀಕರ್ ಬಳಿ ಸಿಎಂ ಮನವಿ ಮಾಡಿದ್ದರು.

ವಿದ್ಯಾರ್ಥಿಗಳ ಮೇಲೆ ಅತ್ಯಾಚಾರ ನಡೆಸಿ ವಿಡಿಯೋ ರೆಕಾರ್ಡ್; ಹತ್ರಾಸ್ ಕಾಲೇಜು ಪ್ರೊಫೆಸರ್ ಬಂಧನ

ವಿದ್ಯಾರ್ಥಿಗಳ ಮೇಲೆ ಅತ್ಯಾಚಾರ ನಡೆಸಿ ವಿಡಿಯೋ ರೆಕಾರ್ಡ್; ಹತ್ರಾಸ್ ಕಾಲೇಜು ಪ್ರೊಫೆಸರ್ ಬಂಧನ

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿರುವ ಸೇಥ್ ಫೂಲ್ ಚಂದ್ ಬಾಗ್ಲಾ ಪಿಜಿ ಕಾಲೇಜಿನ ಪ್ರೊಫೆಸರ್ ರಜನೀಶ್ ಕುಮಾರ್ ಈ ವಾರದ ಆರಂಭದಲ್ಲಿ ಆರೋಪಗಳು ಹೊರಬಿದ್ದಾಗಿನಿಂದ ಪರಾರಿಯಾಗಿದ್ದಾರೆ. ಇದರ ಜೊತೆಗೆ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ವಿಡಿಯೋಗಳನ್ನು ಅವರು ಚಿತ್ರೀಕರಿಸಿಕೊಂಡಿದ್ದಾರೆ. ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ನಡೆಸಿ, ಅವರ ವಿಡಿಯೋ ಚಿತ್ರೀಕರಿಸಿದ ಕಾಲೇಜು ಪ್ರಾಧ್ಯಾಪಕನನ್ನು 72 ಗಂಟೆಗಳ ಹುಡುಕಾಟದ ನಂತರ ಬಂಧಿಸಲಾಗಿದೆ.

ವಿಧಾನಸಭೆಯಲ್ಲಿ ಆರ್‌ಜೆಡಿ ಶಾಸಕರು ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್

ವಿಧಾನಸಭೆಯಲ್ಲಿ ಆರ್‌ಜೆಡಿ ಶಾಸಕರು ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್

ಸ್ಪೀಕರ್ ನಂದ ಕಿಶೋರ್ ಯಾದವ್ ಅವರನ್ನು ಇದಕ್ಕೆ ತಡೆಯೊಡ್ಡುವಂತೆ ಒತ್ತಾಯಿಸಿದ ಸಿಎಂ ನಿತೀಶ್ ಕುಮಾರ್, "ಏನು ನಡೆಯುತ್ತಿದೆ? ಈ ನಿಯಮ 5-6 ವರ್ಷಗಳಿಂದ ಇದೆ. ಅವರಿಗೆ ನೆನಪಿಸಿ. ಯಾರಾದರೂ ಸದನದೊಳಗೆ ಮೊಬೈಲ್ ಬಳಸಿದರೆ ಅವರನ್ನು ಹೊರಗೆ ಕಳುಹಿಸಿ. ನಾನು ಕೂಡ ತುಂಬ ಮೊಬೈಲ್ ಅನ್ನು ಬಳಸುತ್ತಿದ್ದೆ. ಆದರೆ, ಅದರ ಅಡ್ಡ ಪರಿಣಾಮ ತಿಳಿದ ಮೇಲೆ ಈಗ ಮೊಬೈಲ್ ಬಳಕೆ ಕಡಿಮೆ ಮಾಡಿದ್ದೇನೆ ಎಂದು ಬಿಹಾರ ಸಿಎಂ ಹೇಳಿದರು.

ಮೀರತ್ ಕೊಲೆ ಪ್ರಕರಣ; ಕೊಲೆಯಾದ ಗಂಡನ ಜೊತೆ ಹಂತಕಿ ಮುಸ್ಕಾನ್ ಡ್ಯಾನ್ಸ್ ಮಾಡಿದ ಹಳೇ ವಿಡಿಯೋ ವೈರಲ್

ಮೀರತ್ ಕೊಲೆ ಪ್ರಕರಣ; ಕೊಲೆಯಾದ ಗಂಡನ ಜೊತೆ ಹಂತಕಿ ಮುಸ್ಕಾನ್ ಡ್ಯಾನ್ಸ್ ಮಾಡಿದ ಹಳೇ ವಿಡಿಯೋ ವೈರಲ್

ಈ ವಿಡಿಯೋದಲ್ಲಿ ಕೊಲೆಗಾರ್ತಿ ಮುಸ್ಕಾನ್ ತನ್ನ ಮಗಳ ಹುಟ್ಟುಹಬ್ಬದಂದು ತನ್ನ ಪತಿ ಮತ್ತು ಮಗಳೊಂದಿಗೆ ನೃತ್ಯ ಮಾಡುತ್ತಿರುವುದನ್ನು ನೋಡಬಹುದು. ಮಗಳ ಹುಟ್ಟುಹಬ್ಬ ಆಚರಿಸಲು ಬಂದ ಸೌರಭ್ ತನ್ನ ಹೆಂಡತಿಯ ಕೈಯಲ್ಲೇ ಕೊಲೆಯಾಗಿದ್ದಾನೆ. ಈ ವೀಡಿಯೊವನ್ನು ಕೊಲೆ ನಡೆಯುವ ಮೊದಲು ಚಿತ್ರೀಕರಿಸಲಾಗಿದೆ. ಈ ನೃತ್ಯದ ವೀಡಿಯೋ ಪತಿ ಮತ್ತು ಪತ್ನಿಯ ನಡುವಿನ ಉತ್ತಮ ಬಾಂಧವ್ಯವನ್ನು ತೋರಿಸುತ್ತದೆ. ಆದರೂ ಆಕೆ ಗಂಡನನ್ನು ಕೊಂದಿದ್ದಾಳೆ.

ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ