AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ

ಹಿರಿಯ ಉಪಸಂಪಾದಕಿ - TV9 Kannada

sushma.chakre@tv9.com

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow On:
ಬಿಹಾರದ ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಬಿಹಾರದ ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಗೋಪಾಲ್‌ಗಂಜ್ ಜಿಲ್ಲೆಯ ಥಾವೆ ದೇವಸ್ಥಾನ ಸೇರಿದಂತೆ ಬಿಹಾರದ 2 ಹಿಂದೂ ದೇವಾಲಯಗಳಿಂದ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಹಾಗೂ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 'ಥಾವೆ ವಾಲಿ ಮಾತಾ' ಎಂದು ಕರೆಯಲ್ಪಡುವ ದುರ್ಗಾ ದೇವಿಗೆ ಸಮರ್ಪಿತವಾದ ಥಾವೆ ದೇವಸ್ಥಾನದಿಂದ ಸುಮಾರು 500 ಗ್ರಾಂ ತೂಕದ ವಿಗ್ರಹದ ಚಿನ್ನದ ಕಿರೀಟ, ಹಾರ ಮತ್ತು ಇನ್ನೊಂದು ಆಭರಣದೊಂದಿಗೆ ಇಬ್ಬರು ಮುಸುಕುಧಾರಿಗಳು ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಗಳಲ್ಲಿ ನೋಡಬಹುದು.

ಆಂಧ್ರದ ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಆಂಧ್ರದ ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಆಂಧ್ರಪ್ರದೇಶದ ಶ್ರೀಕಾಳಹಸ್ತಿ ದೇವಸ್ಥಾನಕ್ಕೆ ರಷ್ಯಾದ ಭಕ್ತರು ಸಾಂಪ್ರದಾಯಿಕ ಉಡುಪಿನಲ್ಲಿ ಆಗಮಿಸಿದರು. ಅವರು ರಾಹು-ಕೇತು ಪೂಜೆಯಲ್ಲಿ ಭಾಗವಹಿಸಿದರು. ದೇವಾಲಯದ ಐತಿಹಾಸಿಕ ಶಿಲ್ಪಗಳು ಮತ್ತು ರಚನೆಗಳಿಂದ ತೀವ್ರವಾಗಿ ಪ್ರಭಾವಿತರಾದರು. ದೇವಾಲಯದ ವಿಶಿಷ್ಟ ವೈಶಿಷ್ಟ್ಯಗಳ ಬಗ್ಗೆ ಅರ್ಚಕರಿಂದ ತಿಳಿದುಕೊಂಡಾಗ ದೇವರು ಮತ್ತು ದೇವತೆಯ ಮೇಲಿನ ಅವರ ಭಕ್ತಿ ಮತ್ತಷ್ಟು ಹೆಚ್ಚಾಯಿತು.

ನಿಮಗೂ ಗೂಗಲ್, ಯೂಟ್ಯೂಬ್ ಪೇಜ್ ಲೋಡ್ ಆಗುತ್ತಿಲ್ಲವೇ?

ನಿಮಗೂ ಗೂಗಲ್, ಯೂಟ್ಯೂಬ್ ಪೇಜ್ ಲೋಡ್ ಆಗುತ್ತಿಲ್ಲವೇ?

ಜಗತ್ತಿನಾದ್ಯಂತ ಸಾವಿರಾರು ಬಳಕೆದಾರರು ಗೂಗಲ್ ಹಾಗೂ ಯೂಟ್ಯೂಬ್​ನಲ್ಲಿ ನಿಧಾನಗತಿಯ ಲೋಡಿಂಗ್, ವಿಡಿಯೋ ಪ್ಲೇಬ್ಯಾಕ್ ಸಮಸ್ಯೆಗಳು ಮತ್ತು ಸರ್ವರ್ ಸಂಪರ್ಕ ಸಮಸ್ಯೆಗಳ ಬಗ್ಗೆ ದೂರು ನೀಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೂ ಹ್ಯಾಶ್​​ಟ್ಯಾಗ್ ಟ್ರೆಂಡಿಂಗ್​ನಲ್ಲಿದೆ. ಹಾಗಾದರೆ, ಈ ಸಮಸ್ಯೆ ಯಾವಾಗ ಸರಿಯಾಗುತ್ತದೆ, ಈ ಸಮಸ್ಯೆಗೆ ಕಾರಣವೇನೆಂಬುದರ ಬಗ್ಗೆ ಗೂಗಲ್​ನಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಪಾಂಡವಪುರದಲ್ಲಿ ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್

ಪಾಂಡವಪುರದಲ್ಲಿ ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್

ರೈಲನ್ನು ಇಳಿಯುವ ಭರದಲ್ಲಿ ರೈಲು ನಿಲ್ಲುವ ಮೊದಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಹಾರಿಬಿಡುತ್ತಾರೆ. ಇದರಿಂದ ಕೆಲವೊಮ್ಮೆ ಕೆಲವರು ರೈಲಿನಡಿ ಸಿಲುಕಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನು ಕೆಲವು ಜನರು ಕಾಲು ಮುರಿದುಕೊಂಡಿದ್ದಾರೆ. ಪಾಂಡವಪುರದಲ್ಲಿ ಡಿಸೆಂಬರ್ 13ರಂದು ಪಾಂಡವಪುರದ ಸ್ಟೇಷನ್ ಮಾಸ್ಟರ್ ಅಭಿಜಿತ್ ಸಿಂಗ್ ಅವರು ಚಲಿಸುವ ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕರೊಬ್ಬರನ್ನು ರಕ್ಷಿಸುವ ಮೂಲಕ ದಿಟ್ಟತನ ತೋರಿದ್ದಾರೆ. ರೈಲ್ವೆ ಇಲಾಖೆ ಸಿಸಿಟಿವಿಯಲ್ಲಿ ಸೆರೆಯಾದ ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಈಶಾನ್ಯ ರಾಜ್ಯಗಳ ಅತಿದೊಡ್ಡ ವಿಮಾನ ನಿಲ್ದಾಣ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಈಶಾನ್ಯ ರಾಜ್ಯಗಳ ಅತಿದೊಡ್ಡ ವಿಮಾನ ನಿಲ್ದಾಣ

ಗುವಾಹಟಿಯಲ್ಲಿ ನಾಳೆ ಈಶಾನ್ಯ ರಾಜ್ಯದ ಅತಿ ದೊಡ್ಡ ಹಾಗೂ ನೈಸರ್ಗಿಕ ಥೀಮ್​​ನ ವಿಮಾನ ನಿಲ್ದಾಣದ ಟರ್ಮಿನಲ್ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಇದು ಅಸ್ತಿತ್ವದಲ್ಲಿರುವ ಟರ್ಮಿನಲ್‌ಗಿಂತ 7 ಪಟ್ಟು ದೊಡ್ಡದಾಗಿದೆ. "ನಾನು ನಾಳೆ ಅಸ್ಸಾಂನ ಗುವಾಹಟಿಯನ್ನು ತಲುಪುತ್ತೇನೆ. ಅಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಾಗುವುದು. 

ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಮೊದಲೆಲ್ಲ ಗಂಡುಮಕ್ಕಳಿಗೆ ಮಾತ್ರ ಅಪ್ಪನ ಆಸ್ತಿಯಲ್ಲಿ ಪಾಲು ಎಂಬ ನಿಯಮವಿತ್ತು. ಆದರೆ, ಹೊಸ ಕಾನೂನು ಹೆಣ್ಣುಮಕ್ಕಳಿಗೂ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕಿನ ಅವಕಾಶ ನೀಡಿದೆ. ಹೀಗಿದ್ದರೂ, ಒಂದುವೇಳೆ ಮಗಳು ಸಮುದಾಯದಿಂದ ಹೊರಗೆ ವಿವಾಹವಾದರೆ ಅಥವಾ ಅಪ್ಪನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಆಕೆಗೆ ಆಸ್ತಿಯಲ್ಲಿ ಪಾಲು ನೀಡಲೇಬೇಕೆಂದೇನೂ ಇಲ್ಲ. ಅಂತಹ ಪರಿಸ್ಥಿತಿಯಲ್ಲಿ ಅಪ್ಪನ ನಿರ್ಧಾರವೇ ಸರ್ವೋಚ್ಚವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ; ಯೂನಸ್ ಸರ್ಕಾರದಿಂದ ಖಡಕ್ ಎಚ್ಚರಿಕೆ

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ; ಯೂನಸ್ ಸರ್ಕಾರದಿಂದ ಖಡಕ್ ಎಚ್ಚರಿಕೆ

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಕಟ್ಟಿ ಹಾಕಿ ಥಳಿಸಿ, ಬೆಂಕಿ ಹಚ್ಚಿ ಸುಟ್ಟಿರುವುದು ಅಲ್ಲಿ ಹೆಚ್ಚುತ್ತಿರುವ ಕೋಮುವಾದಿ ಧಂಗೆಗೆ ನಿದರ್ಶನವಾಗಿದೆ. ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ನೇತೃತ್ವ ವಹಿಸಿರುವ ಮುಹಮ್ಮದ್ ಯೂನಸ್ ಪ್ರತಿಕ್ರಿಯಿಸಿದ್ದು, ಈ ಹತ್ಯೆಯನ್ನು ಖಂಡಿಸಿದ್ದಾರೆ. ಹಾಗೇ, ಹೊಸ ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ ಸ್ಥಳವಿಲ್ಲ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಧ್ಯಾನ ಫ್ಯಾಷನ್ ಅಲ್ಲ, ಇಂದಿನ ಸಮಾಜದ ಅಗತ್ಯ; ಜಿನೀವಾದಲ್ಲಿ ರವಿಶಂಕರ್ ಗುರೂಜಿ ಅಭಿಮತ

ಧ್ಯಾನ ಫ್ಯಾಷನ್ ಅಲ್ಲ, ಇಂದಿನ ಸಮಾಜದ ಅಗತ್ಯ; ಜಿನೀವಾದಲ್ಲಿ ರವಿಶಂಕರ್ ಗುರೂಜಿ ಅಭಿಮತ

ಧ್ಯಾನವೆಂಬುದು ಐಷಾರಾಮಿಯಲ್ಲ, ಅದೊಂದು ಅಗತ್ಯ. ವೈಯಕ್ತಿಕ ಶಾಂತಿಗೆ ಮಾತ್ರವಲ್ಲದೆ, ದಣಿವು, ಒತ್ತಡ, ಘರ್ಷಣೆ, ಅನಿಶ್ಚಿತತೆ ಮತ್ತು ಭಾವನಾತ್ಮಕ ಸಂಕಟಗಳಿಂದ ಬಳಲುತ್ತಿರುವ ಸಮಾಜಕ್ಕೆ ಧ್ಯಾನ ಅತ್ಯಂತ ಅಗತ್ಯ. ಜಾಗತಿಕ ಸವಾಲುಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುವ ಶಕ್ತಿಶಾಲಿ ಸಾಧನವೆಂದರೆ ಅದು ಧ್ಯಾನ ಎಂದು ಆರ್ಟ್ ಆಫ್ ಲಿವಿಂಗ್‌ನ ಸಂಸ್ಥಾಪಕ ಹಾಗೂ ಜಾಗತಿಕ ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್‌ ಗುರೂಜಿ ಹೇಳಿದ್ದಾರೆ. ವಿಶ್ವ ಧ್ಯಾನ ದಿನದ ಹಿನ್ನೆಲೆಯಲ್ಲಿ ಅವರು ಜಿನೀವಾದಲ್ಲಿ ಮಾತನಾಡಿದ್ದಾರೆ.

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಪಕ್ಷಗಳ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಪಕ್ಷಗಳ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ

ಸಂಸತ್ತಿನ ಚಳಿಗಾಲದ ಅಧಿವೇಶನದ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್ತಿನ ಭವನದ ತಮ್ಮ ಕೊಠಡಿಯಲ್ಲಿ ಲೋಕಸಭೆಯ ಪಕ್ಷಗಳ ನಾಯಕರು ಮತ್ತು ಸಂಸತ್ ಸದಸ್ಯರೊಂದಿಗೆ ಸಭೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ, ಪ್ರಿಯಾಂಕಾ ಗಾಂಧಿ, ರಾಜನಾಥ್ ಸಿಂಗ್ ಸೇರಿದಂತೆ ಎಲ್ಲ ನಾಯಕರು ಹಾಗೂ ಸಂಸದರು ಈ ಸಭೆಯಲ್ಲಿ ಹಾಜರಿದ್ದರು.

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್​​ಗೆ ಪಾಕಿಸ್ತಾನದ ಗ್ಯಾಂಗ್​​ಸ್ಟರ್​​ನಿಂದ ಬೆದರಿಕೆ

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್​​ಗೆ ಪಾಕಿಸ್ತಾನದ ಗ್ಯಾಂಗ್​​ಸ್ಟರ್​​ನಿಂದ ಬೆದರಿಕೆ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಲವಂತವಾಗಿ ಯುವ ಮುಸ್ಲಿಂ ವೈದ್ಯೆಯೊಬ್ಬರ 'ಹಿಜಾಬ್' (ಮುಖದ ಪರದೆ) ಎಳೆದ ವಿಡಿಯೋ ಭಾರೀ ವೈರಲ್ ಆಗಿತ್ತು. ಕಾರ್ಯಕ್ರಮವೊಂದರಲ್ಲಿ ಸರ್ಟಿಫಿಕೆಟ್ ನೀಡುವಾಗ ಈ ಘಟನೆ ನಡೆದಿತ್ತು. ಈ ಬಗ್ಗೆ ಸಿಎಂ ನಿತೀಶ್ ಕುಮಾರ್ ಕ್ಷಮೆಯನ್ನು ಕೂಡ ಕೇಳಿರಲಿಲ್ಲ. ಈ ಘಟನೆಯಿಂದ ಆ ವೈದ್ಯೆ ತೀವ್ರ ಮುಜುಗರಕ್ಕೀಡಾಗಿದ್ದರು. ಇದೀಗ ಬಿಹಾರದ ಮುಖ್ಯಮಂತ್ರಿಯ ಈ ವರ್ತನೆಯನ್ನು ಪಾಕಿಸ್ತಾನ ಬಲವಾಗಿ ಖಂಡಿಸಿದೆ. ಪಾಕಿಸ್ತಾನದ ಗ್ಯಾಂಗ್​ಸ್ಟರ್​ ಶಹಜಾದ್ ಭಟ್ಟಿ ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಬೆದರಿಕೆಯನ್ನೂ ಹಾಕಿದ್ದಾರೆ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ವಿಶಾಖಪಟ್ಟಣಂ ಜಿಲ್ಲೆಯ ಯಾರಡಾ ಬೀಚ್‌ನಲ್ಲಿ ಮೀನುಗಾರರಿಗೆ ದೊಡ್ಡ ಶಾಕ್ ಕಾದಿತ್ತು. ಇಲ್ಲಿ ಬೃಹತ್ ತಿಮಿಂಗಿಲವೊಂದು ತೀರಕ್ಕೆ ಬಂದು ಸಾವನ್ನಪ್ಪಿದೆ. ಸುಮಾರು 15 ಅಡಿ ಉದ್ದದ ತಿಮಿಂಗಿಲವು ಉಸಿರುಗಟ್ಟಿಸುತ್ತಿರುವುದನ್ನು ಕಂಡು ಮೀನುಗಾರರು ಅದನ್ನು ಸಮುದ್ರಕ್ಕೆ ಬಿಡಲು ಪ್ರಯತ್ನಿಸಿದರು. ಆದರೂ ಯಾವುದೇ ಪ್ರಯೋಜನವಾಗಲಿಲ್ಲ. ಆ ತಿಮಿಂಗಿಲವು ದಡದಲ್ಲಿಯೇ ಸತ್ತುಹೋಯಿತು. ಅದು ಗಾಯಗೊಂಡಿರಬಹುದು ಅಥವಾ ಬಲೆಯಲ್ಲಿ ಸಿಲುಕಿ ಸತ್ತಿರಬಹುದು ಎಂದು ಶಂಕಿಸಲಾಗಿದೆ.

ಮಗುವನ್ನು ಕಸದ ಬುಟ್ಟಿಗೆ ಹಾಕಿ, ನಾನು ಹಾಲು ಕುಡಿಸೋದಿಲ್ಲ; ಒಂದೇಸಮನೆ ಹಠ ಹಿಡಿದ ಬಾಣಂತಿ

ಮಗುವನ್ನು ಕಸದ ಬುಟ್ಟಿಗೆ ಹಾಕಿ, ನಾನು ಹಾಲು ಕುಡಿಸೋದಿಲ್ಲ; ಒಂದೇಸಮನೆ ಹಠ ಹಿಡಿದ ಬಾಣಂತಿ

ಉತ್ತರ ಪ್ರದೇಶದಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದೆ. ಆಗಷ್ಟೇ ಮಗುವಿಗೆ ಜನ್ಮ ನೀಡಿದ್ದ ತಾಯಿಯೊಬ್ಬಳು ತಾನು ಹೆತ್ತ ಮಗುವಿಗೆ ಎದೆಹಾಲು ಕುಡಿಸುವುದಿಲ್ಲ ಎಂದು ಹಠ ಹಿಡಿದಿದ್ದಾಳೆ. "ಅದನ್ನು ಕಸದ ಬುಟ್ಟಿಗೆ ಎಸೆಯಿರಿ, ನಾನು ಅದಕ್ಕೆ ಹಾಲು ಕೊಡುವುದಿಲ್ಲ" ಎಂದು ಗೋರಖ್‌ಪುರದಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ ಹಠ ಮಾಡುವ ಮೂಲಕ ವೈದ್ಯರನ್ನು ಅಚ್ಚರಿಗೊಳಿಸಿದ್ದಾಳೆ.

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್