AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ

ಹಿರಿಯ ಉಪಸಂಪಾದಕಿ - TV9 Kannada

sushma.chakre@tv9.com

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow On:
ಪ್ರಯಾಣಿಕರಿದ್ದಾಗಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ, ಇಂಡಿಗೋ ನಡುವೆ ಡಿಕ್ಕಿ

ಪ್ರಯಾಣಿಕರಿದ್ದಾಗಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ, ಇಂಡಿಗೋ ನಡುವೆ ಡಿಕ್ಕಿ

ಮುಂಬೈ ವಿಮಾನ ನಿಲ್ದಾಣದಲ್ಲಿ ದೊಡ್ಡ ದುರಂತವೊಂದು ಸಣ್ಣದರಲ್ಲಿ ತಪ್ಪಿದಂತಾಗಿದೆ. ಪ್ರಯಾಣಿಕರು ವಿಮಾನದಲ್ಲಿದ್ದಾಗಲೇ ಏರ್ ಇಂಡಿಯಾ ಹಾಗೂ ಇಂಡಿಗೋ ವಿಮಾನಗಳ ರೆಕ್ಕೆಗಳು ಡಿಕ್ಕಿ ಹೊಡೆದಿವೆ. ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಗಳು ಉಂಟಾಗಿಲ್ಲ. ವಿಮಾನಕ್ಕೆ ಆಗಿರುವ ಹಾನಿಯ ಪ್ರಮಾಣ, ವಿಮಾನದಲ್ಲಿದ್ದ ಪ್ರಯಾಣಿಕರ ಸಂಖ್ಯೆ ಮತ್ತು ಯಾವುದೇ ಗಾಯಗಳ ಕುರಿತು ವಿವರಗಳು ತಿಳಿದುಬಂದಿಲ್ಲ.

ಹೈ ವೋಲ್ಟೇಜ್ ತಂತಿ ತಗುಲಿ ಯುವಕ ಸಾವು; ಇಲ್ಲಿದೆ ವಿಡಿಯೋ

ಹೈ ವೋಲ್ಟೇಜ್ ತಂತಿ ತಗುಲಿ ಯುವಕ ಸಾವು; ಇಲ್ಲಿದೆ ವಿಡಿಯೋ

ಮೋಗಾ ಜಿಲ್ಲೆಯ ಬೂತಾರ್ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದಾಗ 11,000 ಕೆವಿ ಹೈಟೆನ್ಷನ್ ಲೈನ್‌ಗೆ ವಿದ್ಯುತ್ ಸ್ಪರ್ಶಿಸಿ 22 ವರ್ಷದ ಯುವಕ ದುರಂತವಾಗಿ ಸಾವನ್ನಪ್ಪಿದ್ದಾನೆ. ಮೃತನನ್ನು ರಾನಿಯಾ ಗ್ರಾಮದ ನಿವಾಸಿ ಮನ್ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಬೂತಾರ್ ಗ್ರಾಮದ ನಿವಾಸಿ ಸತ್ನಮ್ ಸಿಂಗ್ ಅವರ ಹೊಸದಾಗಿ ನಿರ್ಮಿಸಲಾಗುತ್ತಿರುವ ಮನೆಯಲ್ಲಿ ಪೈಪ್‌ಗಳನ್ನು ಅಳವಡಿಸುವ ಕೆಲಸದಲ್ಲಿ ಮನ್ಪ್ರೀತ್ ಸಿಂಗ್ ಕೆಲಸ ಮಾಡುತ್ತಿದ್ದ. ಆಗ ಈ ಘಟನೆ ನಡೆದಿದೆ. ತಕ್ಷಣ ಸ್ಥಳದಲ್ಲಿದ್ದ ಸಹೋದ್ಯೋಗಿಗಳು ಆತನನ್ನು ಆಂಬ್ಯುಲೆನ್ಸ್ ಸಹಾಯದಿಂದ ಮೋಗಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಅಲ್ಲಿ ವೈದ್ಯರು ಆತನನ್ನು ಮೃತಪಟ್ಟಿರುವುದಾಗಿ ಘೋಷಿಸಿದರು.

ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿ, ಕಳ್ಳತನ; ಭಾರತದಿಂದ ಖಂಡನೆ

ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿ, ಕಳ್ಳತನ; ಭಾರತದಿಂದ ಖಂಡನೆ

ಭಾರತವು ಈ ವಿಷಯವನ್ನು ಆಸ್ಟ್ರೇಲಿಯಾದ ಅಧಿಕಾರಿಗಳೊಂದಿಗೆ ಔಪಚಾರಿಕವಾಗಿ ಚರ್ಚಿಸಿದೆ. ಪ್ರತಿಮೆಯನ್ನು ಕಳ್ಳತನ ಮಾಡಿದವರನ್ನು ತಕ್ಷಣ ಹುಡುಕಲು ಒತ್ತಾಯಿಸಲಾಗಿದೆ. ದಿ ಆಸ್ಟ್ರೇಲಿಯಾ ಟುಡೇ ಪ್ರಕಾರ, ಈ ಪ್ರತಿಮೆಯನ್ನು ನವದೆಹಲಿಯ ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಮಂಡಳಿ (ICCR) ಉಡುಗೊರೆಯಾಗಿ ನೀಡಿತ್ತು. ಇದನ್ನು 12 ನವೆಂಬರ್ 2021ರಂದು ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಸ್ಕಾಟ್ ಮಾರಿಸನ್ ಉದ್ಘಾಟಿಸಿದ್ದರು.

ಪ್ರಧಾನಿ ಮೋದಿ ಜೊತೆ ಟ್ರಂಪ್ ಮಾಡಿಕೊಂಡ ವ್ಯಾಪಾರ ಒಪ್ಪಂದದ 7 ಹೈಲೈಟ್ಸ್ ಇಲ್ಲಿವೆ

ಪ್ರಧಾನಿ ಮೋದಿ ಜೊತೆ ಟ್ರಂಪ್ ಮಾಡಿಕೊಂಡ ವ್ಯಾಪಾರ ಒಪ್ಪಂದದ 7 ಹೈಲೈಟ್ಸ್ ಇಲ್ಲಿವೆ

ಭಾರತ ಹಾಗೂ ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ನಡೆದಿದೆ. ಇದಕ್ಕೆ ಪ್ರಧಾನಿ ಮೋದಿ ಹಾಗೂ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ ಎನ್ನಲಾಗಿದೆ. ರಷ್ಯಾದ ತೈಲವನ್ನು ಖರೀದಿಸುವುದನ್ನು ನಿಲ್ಲಿಸಲು ಭಾರತ ಒಪ್ಪಿಕೊಂಡ ನಂತರ ಸೋಮವಾರ ಭಾರತೀಯ ಸರಕುಗಳ ಮೇಲಿನ ವ್ಯಾಪಾರ ಸುಂಕವನ್ನು ಶೇ. 50ರಿಂದ ಶೇ. 18ಕ್ಕೆ ಇಳಿಸುವುದಾಗಿ ಟ್ರಂಪ್ ಹೇಳಿದ್ದಾರೆ ಎನ್ನಲಾಗಿದೆ. ಆದರೆ, ರಷ್ಯಾದ ಬಗ್ಗೆ ಭಾರತ ತೆಗೆದುಕೊಂಡ ನಿಲುವಿನ ಬಗ್ಗೆ ಮೋದಿ ಸರ್ಕಾರದಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ.

ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

ಮಣಿಪುರದ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ. ಅವರೇ ಮಣಿಪುರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಸದ್ಯಕ್ಕೆ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯಿದೆ. ಬಿರೇನ್ ಸಿಂಗ್ ರಾಜೀನಾಮೆ ನೀಡಿ ಜನಾಂಗೀಯ ಹಿಂಸಾಚಾರದ ನಡುವೆ ರಾಷ್ಟ್ರಪತಿ ಆಳ್ವಿಕೆ ಹೇರಿದ ನಂತರ 1 ವರ್ಷದ ಅವಧಿಯವರೆಗೂ ಸಿಎಂ ಕುರ್ಚಿ ಖಾಲಿಯಾಗಿತ್ತು.

ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನೇ ಕೊಂದ ಅಪ್ಪ!

ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನೇ ಕೊಂದ ಅಪ್ಪ!

ತನ್ನ ಸ್ವಾರ್ಥಕ್ಕಾಗಿ ತಾನು ಜನ್ಮ ಕೊಟ್ಟ ಪುಟ್ಟ ಮಗಳನ್ನೇ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು 6 ವರ್ಷದ ಮಗಳನ್ನೇ ಕೊಂದಿದ್ದಾನೆ. ಈ ಕೊಲೆಗೂ ಪಂಚಾಯತ್ ಚುನಾವಣೆಗೂ ಏನು ಸಂಬಂಧ? ಎಂದು ನಿಮಗೆ ಆಶ್ಚರ್ಯವಾಗಬಹುದು. ಈ ಕಾರಣ ಕೇಳಿದರೆ ನಿಮಗೆ ಶಾಕ್ ಆಗುವುದು ಗ್ಯಾರಂಟಿ.

ಪ್ರಧಾನಿ ಮೋದಿ ರಾಜಿ ಮಾಡಿಕೊಂಡು ರಾಷ್ಟ್ರವನ್ನೇ ಮಾರಿದ್ದಾರೆ; ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಆರೋಪ

ಪ್ರಧಾನಿ ಮೋದಿ ರಾಜಿ ಮಾಡಿಕೊಂಡು ರಾಷ್ಟ್ರವನ್ನೇ ಮಾರಿದ್ದಾರೆ; ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಆರೋಪ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸ್ಫೋಟಕ ಆರೋಪಗಳನ್ನು ಹೊರಿಸಿದ್ದಾರೆ. ಒತ್ತಡದಿಂದ ಪ್ರಧಾನಿ ಮೋದಿ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಆದರೆ, ಈಗ ಅದು ಅವರ ಇಮೇಜ್‌ಗೆ ಹಾನಿ ಉಂಟುಮಾಡಬಹುದು ಎಂದು ಭಯಪಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಲೋಕಸಭಾ ಅಧಿವೇಶನದಲ್ಲಿ ಮಾತನಾಡಲು ಎದ್ದು ನಿಂತಾಗ ಆಡಳಿತ ಪಕ್ಷದವರು ವಿರೋಧಿಸಿದರು. ಇದರಿಂದ ಕೆಲಕಾಲ ಸದನದಲ್ಲಿ ಮಾತಿನ ಚಕಮಕಿ ಏರ್ಪಟ್ಟು, ಕಲಾಪವನ್ನು ಮುಂದೂಡಲಾಯಿತು.

ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು

ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು

Parliament Budget Session: ಲೋಕಸಭಾ ಅಧಿವೇಶನದ ವೇಳೆ ಸ್ಪೀಕರ್ ಮೇಲೆ ಪೇಪರ್ ತೂರಿದ್ದ ವಿಪಕ್ಷಗಳ 8 ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬಜೆಟ್ ಅಧಿವೇಶನ ಮುಗಿಯುವವರೆಗೂ ಈ ಸಂಸದರನ್ನು ಸದನಕ್ಕೆ ಹಾಜರಾಗದಂತೆ ಅಮಾನತುಗೊಳಿಸಲಾಗಿದೆ. ಸಂಸದರಾದ ಕಿರಣ್ ರೆಡ್ಡಿ, ರಾಜಾ ವಾರಿಂಗ್, ಗುರ್ಜಿತ್ ಔಜಲಾ, ಹಿಬಿ ಈಡನ್ ಸೇರಿದಂತೆ 8 ಸಂಸದರು ಈ ಪಟ್ಟಿಯಲ್ಲಿದ್ದಾರೆ. ಇವರಲ್ಲಿ 7 ಸಂಸದರು ಕಾಂಗ್ರೆಸ್​​ನವರೇ ಆಗಿದ್ದಾರೆ. ಅಮಾನತುಗೊಳಿಸಿದ ನಂತರವೂ ಸ್ಪೀಕರ್ ಮೇಲೆ ಸಂಸದರು ಪೇಪರ್ ತೂರಿದ್ದರು.

ನಿರ್ಬಂಧಗಳಿಲ್ಲದ ರಾಷ್ಟ್ರಗಳಿಂದ ತೈಲ ಖರೀದಿಸಲಿದೆ; ಭಾರತದ ಮೂಲಗಳಿಂದ ಸ್ಪಷ್ಟನೆ

ನಿರ್ಬಂಧಗಳಿಲ್ಲದ ರಾಷ್ಟ್ರಗಳಿಂದ ತೈಲ ಖರೀದಿಸಲಿದೆ; ಭಾರತದ ಮೂಲಗಳಿಂದ ಸ್ಪಷ್ಟನೆ

ಸೋಮವಾರ ರಾತ್ರಿ ದಿಢೀರನೆ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಫೋನ್ ಮಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವುದಾಗಿ ಘೋಷಿಸಿದ್ದರು. ರಷ್ಯಾದ ತೈಲ ಖರೀದಿಗಾಗಿ ಭಾರತದ ಮೇಲೆ ಹೇರಲಾಗಿದ್ದ ಶೇ. 25ರಷ್ಟು ಹೆಚ್ಚುವರಿ ಸುಂಕವನ್ನು ರದ್ದುಗೊಳಿಸಿ, ಈಗಾಗಲೇ ಇರುವ ಶೇ. 25ರಷ್ಟು ಸುಂಕವನ್ನು ಶೇ. 18ಕ್ಕೆ ಇಳಿಸುವುದಾಗಿ ಅಮೆರಿಕ ಘೋಷಿಸಿತ್ತು. ಇದರ ಬೆನ್ನಲ್ಲೇ ಅಮೆರಿಕ ಭಾರತಕ್ಕೆ ಕೆಲವು ಷರತ್ತುಗಳನ್ನು ಕೂಡ ಹಾಕಿದೆ ಎನ್ನಲಾಗಿದೆ.

ಜಾಗತಿಕ ಶಾಂತಿಗೆ ಟ್ರಂಪ್ ನಾಯಕತ್ವ ಅತ್ಯಗತ್ಯ; ಸುಂಕ ಕಡಿತದ ಬಳಿಕ ಅಮೆರಿಕಕ್ಕೆ ಪ್ರಧಾನಿ ಮೋದಿ ಧನ್ಯವಾದ

ಜಾಗತಿಕ ಶಾಂತಿಗೆ ಟ್ರಂಪ್ ನಾಯಕತ್ವ ಅತ್ಯಗತ್ಯ; ಸುಂಕ ಕಡಿತದ ಬಳಿಕ ಅಮೆರಿಕಕ್ಕೆ ಪ್ರಧಾನಿ ಮೋದಿ ಧನ್ಯವಾದ

ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ವೇಳೆ ಅವರು ಭಾರತದ ಮೇಲಿನ ಸುಂಕವನ್ನು ಶೇ. 25ರಿಂದ ಶೇ. 18ಕ್ಕೆ ಇಳಿಸುವುದಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್​ಗೆ ಬಹಿರಂಗವಾಗಿ ಧನ್ಯವಾದ ತಿಳಿಸಿದ್ದಾರೆ. ಅಮೆರಿಕದ ಈ ಸುಂಕ ಕಡಿತ ಭಾರತಕ್ಕೆ ಅಪಾರ ಅವಕಾಶಗಳನ್ನು ತೆರೆಯುತ್ತದೆ ಎಂದಿದ್ದಾರೆ.

ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್

ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್

ಭಾರತ ಯುರೋಪ್ ಟ್ರೇಡ್ ಒಪ್ಪಂದ ಹಾಗೂ ಅರಬ್ ಲೀಗ್ ಟ್ರೇಡ್ ಡೀಲ್ ಮಾಡಿಕೊಳ್ಳುತ್ತಿದ್ದಂತೆ ಅಲರ್ಟ್ ಆಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿಢೀರನೆ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಫೋನ್ ಮಾಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಪೋನ್‌ನಲ್ಲಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಬೃಹತ್ ಘೋಷಣೆಯೊಂದನ್ನು ಮಾಡಿದ್ದಾರೆ. ಆಪ್ತ ಸ್ನೇಹಿತರಾಗಿದ್ದ ಟ್ರಂಪ್ ಮತ್ತು ಮೋದಿ ನಡುವೆ ಅಮೆರಿಕ ಭಾರತದ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ ಬಳಿಕ ಅಂತರ ಸೃಷ್ಟಿಯಾಗಿತ್ತು.

Viral Video: ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

Viral Video: ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಕೇರಳದ ಒಂದು ವಿಡಿಯೋ ವೈರಲ್ ಆಗುತ್ತಿದ್ದು, ಅದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಒಂದು ಕಾಡುಕೋಣ ಇದ್ದಕ್ಕಿದ್ದಂತೆ ಬೈಕ್ ಶೋ ರೂಂಗೆ ನುಗ್ಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಎಕ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಹಂಚಿಕೊಳ್ಳಲಾಗಿದೆ. ಕಾಡುಕೋಣವೊಂದು ಬೈಕ್ ಶೋರೂಂನ ಗಾಜಿನ ಬಾಗಿಲನ್ನು ಒಡೆದು ಒಳಗೆ ನುಗ್ಗಿದೆ. ಅದು ಅಚಾನಕ್ಕಾಗಿ ಒಳಗೆ ನುಗ್ಗಿದ್ದಾ ಅಥವಾ ಬೇಕೆಂದೇ ಶೋರೂಂನೊಳಗೆ ನುಗ್ಗಿದ್ದಾ ಎಂಬುದು ಗೊತ್ತಿಲ್ಲ.