AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ

Senior Sub-Editor - TV9 Kannada

sushma.chakre@tv9.com

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow On:
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ ನೋಡಿ

ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ ನೋಡಿ

ಮಹಾರಾಷ್ಟ್ರದ ಪಾಲಘರ್ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸತತ ಮಳೆಯ ಪರಿಣಾಮವಾಗಿ ಜಿಲ್ಲೆಯ ಪ್ರಮುಖ ಜಲಾಶಯಗಳು ತುಂಬಿ ಹರಿಯುತ್ತಿದ್ದು, ನದಿ-ನಾಲೆಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಾಗಿದೆ. ಸೂರ್ಯ ಯೋಜನೆಯಡಿ ಬರುವ ಪ್ರಮುಖ ಧಾಮಣಿ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹಣೆ ಶೇ. 93ರಷ್ಟಾಗಿದೆ. ಜಲಾಶಯದ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಮತ್ತು ಹೆಚ್ಚುವರಿ ನೀರನ್ನು ಹೊರಬಿಡಲು ಅಣೆಕಟ್ಟಿನ 5 ಗೇಟ್‌ಗಳನ್ನು ತೆರೆಯಲಾಗಿದೆ.

ಪ್ರತಿಭಟನೆ ಬಗ್ಗೆ ಸುಳ್ಳು ಸುದ್ದಿ ಪ್ರಸಾರ; ಪಾಕಿಸ್ತಾನ ಮೂಲದ 480 ಖಾತೆಗಳಿಗೆ ದೆಹಲಿ ಪೊಲೀಸ್ ನಿರ್ಬಂಧ

ಪ್ರತಿಭಟನೆ ಬಗ್ಗೆ ಸುಳ್ಳು ಸುದ್ದಿ ಪ್ರಸಾರ; ಪಾಕಿಸ್ತಾನ ಮೂಲದ 480 ಖಾತೆಗಳಿಗೆ ದೆಹಲಿ ಪೊಲೀಸ್ ನಿರ್ಬಂಧ

ಸಂಘಟಿತ ರೀತಿಯಲ್ಲಿ ಭಾರತದ ವಿರುದ್ಧ ಸುಳ್ಳು ಸುದ್ದಿ ಹಾಗೂ ತಪ್ಪು ಮಾಹಿತಿಗಳನ್ನು ಹರಡುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಸುಮಾರು 480 ಸಾಮಾಜಿಕ ಜಾಲತಾಣ ಖಾತೆಗಳನ್ನು ಗುರುತಿಸಿ, ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ದೇಶದಲ್ಲಾಗುತ್ತಿರುವ ಪ್ರಸ್ತುತ ವಿದ್ಯಾರ್ಥಿ ಪ್ರತಿಭಟನೆಯ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ವದಂತಿಗಳನ್ನು ಹರಡುತ್ತಿರುವ ಇಂತಹ ವಿದೇಶಿ ಖಾತೆಗಳ ಬಗ್ಗೆ ಜಾಗರೂಕರಾಗಿರುವಂತೆ ದೆಹಲಿ ಪೊಲೀಸರು ವಿದ್ಯಾರ್ಥಿಗಳು ಮತ್ತು ಯುವಜನತೆಯಲ್ಲಿ ಮನವಿ ಮಾಡಿದ್ದಾರೆ.

2024ರ ನೀಟ್ -ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಸಂಜೀವ್ ಮುಖಿಯಾಗೆ ಸಿಬಿಐನಿಂದ ಕ್ಲೀನ್​ಚಿಟ್

2024ರ ನೀಟ್ -ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಸಂಜೀವ್ ಮುಖಿಯಾಗೆ ಸಿಬಿಐನಿಂದ ಕ್ಲೀನ್​ಚಿಟ್

2024ರಲ್ಲಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನೀಟ್-ಯುಜಿ (NEET-UG) ಪೇಪರ್ ಲೀಕ್ ಪ್ರಕರಣದ 'ಕಿಂಗ್‌ಪಿನ್' ಎಂದು ಭಾವಿಸಲಾಗಿದ್ದ ಸಂಜೀವ್ ಕುಮಾರ್ ಅಲಿಯಾಸ್ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ. ಬಿಹಾರ ಪೊಲೀಸರಿಂದ ತನಿಖೆಯನ್ನು ತನ್ನ ವಶಕ್ಕೆ ಪಡೆದುಕೊಂಡಿದ್ದ ಕೇಂದ್ರೀಯ ತನಿಖಾ ದಳವು (CBI) ಈ ನಿರ್ಧಾರ ಪ್ರಕಟಿಸಿದೆ. ಕಳುವಾದ ನೀಟ್-ಯುಜಿ ಪ್ರಶ್ನೆಪತ್ರಿಕೆಯ ಕಳವು ಅಥವಾ ಹಂಚಿಕೆಯಲ್ಲಿ ಸಂಜೀವ್ ಮುಖಿಯಾ ಭಾಗಿಯಾಗಿರುವುದನ್ನು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಸಿಬಿಐ ತಿಳಿಸಿದೆ.

ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ; ಗಾಂಧಿ ಸ್ಮೃತಿಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸದರ ಮೆರವಣಿಗೆ

ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ; ಗಾಂಧಿ ಸ್ಮೃತಿಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸದರ ಮೆರವಣಿಗೆ

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೆಹಲಿಯಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ನೀಟ್ (NEET) ಪೇಪರ್ ಲೀಕ್‌ನಿಂದಾಗಿ ಮನನೊಂದು ಜೀವ ಕಳೆದುಕೊಂಡ ಹಾಗೂ ಪ್ರತಿಭಟನೆಯ ವೇಳೆ ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಮರಿಸಲು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯ (INDIA) ಒಕ್ಕೂಟದ ಸಂಸದರು ತೀಸ್ ಜನವರಿ ಮಾರ್ಗದಲ್ಲಿರುವ ಗಾಂಧಿ ಸ್ಮೃತಿಗೆ ತೆರಳಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಪಿಒಕೆ ಪ್ರಧಾನಿಯಾಗಬೇಕೆಂಬ ನವಾಜ್ ಶರೀಫ್ ಆಸೆಗೆ ಅಲ್ಲಿನ ಕಾನೂನೇ ಅವರಿಗೆ ತೊಡಕು!

ಪಿಒಕೆ ಪ್ರಧಾನಿಯಾಗಬೇಕೆಂಬ ನವಾಜ್ ಶರೀಫ್ ಆಸೆಗೆ ಅಲ್ಲಿನ ಕಾನೂನೇ ಅವರಿಗೆ ತೊಡಕು!

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಹೊಸ ಆಸೆಯೊಂದನ್ನು ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಸರ್ಕಾರದ ವಿರೋಧಿ ಬೃಹತ್ ಪ್ರತಿಭಟನೆಗಳಿಂದಾಗಿ ತತ್ತರಿಸುತ್ತಿರುವ ಪಾಕ್ ಆಕ್ರಮಿತ ಕಾಶ್ಮೀರದ (PoK) ಪ್ರಧಾನಿಯಾಗಲು ತಾವು ಬಯಸುವುದಾಗಿ ಅವರು ಹೇಳಿದ್ದಾರೆ. ಪಾಕಿಸ್ತಾನದ ಹಾಲಿ ಪ್ರಧಾನಿ ಶಹಬಾಜ್ ಶರೀಫ್ ಅವರ ಅಣ್ಣ ಕೂಡ ಆಗಿರುವ ನವಾಜ್ ಶರೀಫ್, ಪಿಒಕೆ ತಮ್ಮ ಎರಡನೇ ಮನೆ ಎಂದು ಬಣ್ಣಿಸಿದ್ದು, ಆ ಪ್ರದೇಶದ ಅಭಿವೃದ್ಧಿಯನ್ನು ಖುದ್ದಾಗಿ ಮೇಲ್ವಿಚಾರಣೆ ಮಾಡಲು ಬಯಸುವುದಾಗಿ ತಿಳಿಸಿದ್ದಾರೆ. ಆದರೆ, ಅವರು ಪಿಒಕೆಯ ಪ್ರಧಾನಿಯಾಗುವುದು ಸುಲಭವಲ್ಲ. ಕಾರಣ ಗೊತ್ತಾ?

ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ, 2 ಲಕ್ಷ ಮನೆಗಳಿಗೆ ವಿದ್ಯುತ್ ಸ್ಥಗಿತ

ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ, 2 ಲಕ್ಷ ಮನೆಗಳಿಗೆ ವಿದ್ಯುತ್ ಸ್ಥಗಿತ

ಮಹಾರಾಷ್ಟ್ರದ ಕರಾವಳಿ ಜಿಲ್ಲೆಯಾದ ಪಾಲ್ಘರ್‌ನಲ್ಲಿ ಮಳೆಯಿಂದಾಗಿ ಭಾರಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ದಹನು ಮತ್ತು ತಲಸರಿ ತಾಲೂಕುಗಳ ಹಲವಾರು ಹಳ್ಳಿಗಳು ಜಲಾವೃತಗೊಂಡು ದ್ವೀಪದಂತಾಗಿದ್ದು, ಸಾರಿಗೆ ಹಾಗೂ ಸಂಪರ್ಕ ವ್ಯವಸ್ಥೆ ಸಂಪೂರ್ಣವಾಗಿ ಕಡಿತಗೊಂಡಿದೆ. ಪ್ರವಾಹದ ಪರಿಸ್ಥಿತಿ ತೀವ್ರಗೊಳ್ಳುತ್ತಿದ್ದಂತೆ NDRF, VVMC ತಂಡಗಳು ಮತ್ತು ಸ್ಥಳೀಯ ರಕ್ಷಣಾ ಪಡೆಗಳು ಜಂಟಿಯಾಗಿ ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ. ತಗ್ಗು ಪ್ರದೇಶಗಳಲ್ಲಿ ಸಿಲುಕಿದ್ದ 218 ಕುಟುಂಬಗಳ ಒಟ್ಟು 891 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗಿದೆ.

ಪ್ರತಿಭಟನಾಕಾರರು ಮಾತುಕತೆಗೆ ನನ್ನ ಮನೆ, ಕಚೇರಿಗೆ ಬರಬಹುದು; ಕೇಂದ್ರ ಸಚಿವ ಜೆ.ಪಿ. ನಡ್ಡಾ

ಪ್ರತಿಭಟನಾಕಾರರು ಮಾತುಕತೆಗೆ ನನ್ನ ಮನೆ, ಕಚೇರಿಗೆ ಬರಬಹುದು; ಕೇಂದ್ರ ಸಚಿವ ಜೆ.ಪಿ. ನಡ್ಡಾ

ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಪುನರುಚ್ಛರಿಸಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿಕೆ ನೀಡಿದ ಬೆನ್ನಲ್ಲೇ ಜೆಪಿ ನಡ್ಡಾ ಕೂಡ ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಭರವಸೆಗೂ ಒಪ್ಪದ ಸಿಜೆಪಿ; ನಾಳೆ ದೇಶಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಭರವಸೆಗೂ ಒಪ್ಪದ ಸಿಜೆಪಿ; ನಾಳೆ ದೇಶಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ

ನೀಟ್ (NEET) ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹೋರಾಟ ನಡೆಸುತ್ತಿರುವ 'ಕಾಕ್ರೋಚ್ ಜನತಾ ಪಾರ್ಟಿ' (CJP) ಶುಕ್ರವಾರ (ನಾಳೆ) ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದೆ. ಪರೀಕ್ಷಾ ಅಕ್ರಮಗಳ ವಿರುದ್ಧ ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಜುಲೈ 24ರಂದು ದೇಶದ ಎಲ್ಲಾ ಪ್ರಮುಖ ನಗರಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಶಾಂತಿಯುತ ಧರಣಿ ಹಾಗೂ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸುವಂತೆ ವಿದ್ಯಾರ್ಥಿಗಳು, ಯುವಜನರು ಮತ್ತು ಸಾರ್ವಜನಿಕರಲ್ಲಿ ಸಿಜೆಪಿ ನಾಯಕರು ಮನವಿ ಮಾಡಿದ್ದಾರೆ.

‘ಯಾವುದೇ ಸ್ಥಳದಲ್ಲಿ, ಯಾವ ಸಮಯದಲ್ಲಾದರೂ ಚರ್ಚೆಗೆ ಸಿದ್ಧ’; 4ನೇ ಬಾರಿ ಸಿಜೆಪಿಗೆ ಕೇಂದ್ರ ಸರ್ಕಾರ ಆಹ್ವಾನ

‘ಯಾವುದೇ ಸ್ಥಳದಲ್ಲಿ, ಯಾವ ಸಮಯದಲ್ಲಾದರೂ ಚರ್ಚೆಗೆ ಸಿದ್ಧ’; 4ನೇ ಬಾರಿ ಸಿಜೆಪಿಗೆ ಕೇಂದ್ರ ಸರ್ಕಾರ ಆಹ್ವಾನ

ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಮಾತುಕತೆಗೆ ಆಹ್ವಾನ ನೀಡಿರುವ ಕೇಂದ್ರ ಸರ್ಕಾರ, ಯಾವುದೇ ಸಮಯದಲ್ಲಿ, ಯಾವುದೇ ಸ್ಥಳದಲ್ಲಿ ಬೇಕಾದರೂ ಚರ್ಚೆ ನಡೆಸಲು ಸಿದ್ಧ ಎಂದು ಪುನರುಚ್ಚರಿಸಿದೆ. ನಿನ್ನೆ ಮಧ್ಯಾಹ್ನದಿಂದ ಚರ್ಚೆಗಾಗಿ ಸರ್ಕಾರ ಈಗಾಗಲೇ 4 ಪ್ರಸ್ತಾವನೆಗಳನ್ನು ಕಳುಹಿಸಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ಸರ್ಕಾರದ ಪ್ರಸ್ತಾವನೆಗಳ ಕುರಿತು ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಪ್ರತಿಭಟನಾಕಾರರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ.

‘ಡ್ರಗ್ಸ್ ಪ್ರಕರಣದಲ್ಲಿ ನಿನ್ನನ್ನು ಸಿಲುಕಿಸುತ್ತೇನೆ’; ಪ್ರತಿಭಟನಾಕಾರರಿಗೆ ಬೆದರಿಕೆ ಹಾಕಿದ ಮುಂಬೈ ಪೊಲೀಸ್ ಅಮಾನತು

‘ಡ್ರಗ್ಸ್ ಪ್ರಕರಣದಲ್ಲಿ ನಿನ್ನನ್ನು ಸಿಲುಕಿಸುತ್ತೇನೆ’; ಪ್ರತಿಭಟನಾಕಾರರಿಗೆ ಬೆದರಿಕೆ ಹಾಕಿದ ಮುಂಬೈ ಪೊಲೀಸ್ ಅಮಾನತು

ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತೆ ಪ್ರತಿಭಟನೆಯಲ್ಲಿ ಭಾಗವಹಿಸಿದರೆ ಅವರ ವಿರುದ್ಧ ಸುಳ್ಳು ಡ್ರಗ್ಸ್ ಪ್ರಕರಣ ಹೂಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸರು ತನಿಖೆಗೆ ಆದೇಶಿಸಿದ್ದು, ಚಾಲಕನಾಗಿದ್ದ ಪೊಲೀಸ್ ಅಧಿಕಾರಿಯನ್ನು ಹಾಲಿ ಹುದ್ದೆಯಿಂದ ತೆರವುಗೊಳಿಸಿದ್ದಾರೆ. ನೀಟ್ ಅಕ್ರಮದ ವಿರುದ್ಧ ಬುಧವಾರ ನಡೆದ ಪ್ರತಿಭಟನೆಯ ನಂತರ ಬಂಧಿತ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವ್ಯಾನ್‌ನೊಳಗೆ ಚಿತ್ರೀಕರಿಸಲಾಗಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಜಂತರ್ ಮಂತರ್‌ನಲ್ಲಿ ಮತ್ತೆ ಭುಗಿಲೆದ್ದ ಗಲಭೆ; ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ, ಎಸಿಪಿಗಳಿಗೆ ಗಾಯ

ಜಂತರ್ ಮಂತರ್‌ನಲ್ಲಿ ಮತ್ತೆ ಭುಗಿಲೆದ್ದ ಗಲಭೆ; ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ, ಎಸಿಪಿಗಳಿಗೆ ಗಾಯ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಮತ್ತೊಮ್ಮೆ ಗಲಭೆ ಸೃಷ್ಟಿಸಿದ್ದಾರೆ. ಪ್ರತಿಭಟನಾಕಾರರಲ್ಲಿ ದುಷ್ಕರ್ಮಿಗಳು ಆರ್‌ಎಎಫ್ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಎಸಿಪಿಗಳು ಸೇರಿದಂತೆ 5 ಪೊಲೀಸರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಉದ್ವಿಗ್ನವಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ದೆಹಲಿ ಪೊಲೀಸರ ಪ್ರಕಾರ, ದುಷ್ಕರ್ಮಿಗಳ ದಾಳಿಯಲ್ಲಿ ಇದುವರೆಗೆ 5 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರು ಎಸಿಪಿಗಳು, ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಸೇರಿದ್ದಾರೆ.

ಪುಣೆಯಲ್ಲಿ ಕಾರಿನ ಮೇಲೆ ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

ಪುಣೆಯಲ್ಲಿ ಕಾರಿನ ಮೇಲೆ ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

ಪುಣೆಯ ಕಾತ್ರಾಜ್ ಪ್ರದೇಶದಲ್ಲಿ ಸೋಮವಾರ ರಾತ್ರಿ ಬಾಲಕನನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಅಪ್ರಾಪ್ತ ಬಾಲಕನ ಕೊಲೆ ಪ್ರಕರಣದಲ್ಲಿ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದೆ. ಬಾಲಕ ತನ್ನ ಸ್ನೇಹಿತನೊಂದಿಗೆ ಮೊಬೈಲ್ ಫೋನ್ ತರಲು ಹೋಗಿದ್ದಾಗ, ಮೂರು ಬೈಕ್‌ಗಳಲ್ಲಿ ಬಂದ 7 ಮಂದಿ ಆತನನ್ನು ಬೆನ್ನಟ್ಟಿದ್ದರು. ಬಾಲಕ ತಪ್ಪಿಸಿಕೊಂಡು ಓಡಲು ಯತ್ನಿಸಿದನಾದರೂ, ದಾಳಿಕೋರರು ಆತನನ್ನು ಹಿಡಿದು ಚೂಪಾದ ಆಯುಧಗಳಿಂದ ಹಲ್ಲೆ ನಡೆಸಿದ್ದರು. ಆ ಬಾಲಕ ನೆಲಕ್ಕೆ ಕುಸಿದುಬಿದ್ದ ನಂತರವೂ ಆತನ ಮೇಲೆ ದಾಳಿ ಮುಂದುವರಿಸಿದ್ದರು. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದ್ದರು. ಹಳೇ ದ್ವೇಷದಿಂದ ಈ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
NEET ಹೋರಾಟ: ಪ್ರತಿಭಟನಾಕಾರರ ಬಗ್ಗೆ ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ
NEET ಹೋರಾಟ: ಪ್ರತಿಭಟನಾಕಾರರ ಬಗ್ಗೆ ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ
ಪಶ್ಚಿಮ ಘಟ್ಟದಲ್ಲಿ ಮತ್ತೆ ಮಳೆ, ಕೃಷ್ಣಾ ನದಿ ಹರಿವಿನ ಮಟ್ಟ ಏರಿಕೆ
ಪಶ್ಚಿಮ ಘಟ್ಟದಲ್ಲಿ ಮತ್ತೆ ಮಳೆ, ಕೃಷ್ಣಾ ನದಿ ಹರಿವಿನ ಮಟ್ಟ ಏರಿಕೆ
ಗುಂಡ್ಲುಪೇಟೆ ಮುಖ್ಯ ರಸ್ತೆಗಳನ್ನು ಸ್ವಂತ ವೆಚ್ಚದಲ್ಲಿ ಮುಚ್ಚಿದ ಕೂಲಿ ಕಾರ್ಮ
ಗುಂಡ್ಲುಪೇಟೆ ಮುಖ್ಯ ರಸ್ತೆಗಳನ್ನು ಸ್ವಂತ ವೆಚ್ಚದಲ್ಲಿ ಮುಚ್ಚಿದ ಕೂಲಿ ಕಾರ್ಮ
ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆ ಚಾಮುಂಡಿದೇವಿಗೆ ವಿಜೃಂಭಣೆಯ ಪೂಜೆ
ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆ ಚಾಮುಂಡಿದೇವಿಗೆ ವಿಜೃಂಭಣೆಯ ಪೂಜೆ
ಗುಂಡ್ಲುಪೇಟೆಯಲ್ಲಿ ವ್ಯಾಘ್ರನ ಬಿಂದಾಸ್ ಓಡಾಟ
ಗುಂಡ್ಲುಪೇಟೆಯಲ್ಲಿ ವ್ಯಾಘ್ರನ ಬಿಂದಾಸ್ ಓಡಾಟ
ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನ, ಪೂಜೆಗೆ ನಿರ್ಬಂಧ
ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನ, ಪೂಜೆಗೆ ನಿರ್ಬಂಧ
ಎರಡನೇ ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯ ಅಲಂಕಾರ ಹೇಗಿದೆ ನೋಡಿ
ಎರಡನೇ ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯ ಅಲಂಕಾರ ಹೇಗಿದೆ ನೋಡಿ
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ