AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ

ಹಿರಿಯ ಉಪಸಂಪಾದಕಿ - TV9 Kannada

sushma.chakre@tv9.com

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow On:
ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರು ನಿಧನರಾದ 1 ತಿಂಗಳ ನಂತರ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ಎನ್‌ಸಿಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಮಹಾರಾಷ್ಟ್ರದ ಡಿಸಿಎಂ ಹಾಗೂ ಎನ್‌ಸಿಪಿ ಮುಖ್ಯಸ್ಥರಾಗಿದ್ದ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ರಾಷ್ಟ್ರೀಯ ಅಧ್ಯಕ್ಷೆಯಾಗಿ ಆಯ್ಕೆ ಮಾಡಲಾಗಿದೆ ಎಂದು ಹಿರಿಯ ನಾಯಕ ಪ್ರಫುಲ್ ಪಟೇಲ್ ಪ್ರಕಟಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಮಂಡಿಸಿರುವುದಾಗಿ ಪಟೇಲ್ ಹೇಳಿದ್ದಾರೆ. ಅಲ್ಲಿ ಎಲ್ಲಾ ಸದಸ್ಯರಿಂದ ಸರ್ವಾನುಮತದ ಅನುಮೋದನೆ ಪಡೆಯಲಾಯಿತು.

ನ್ಯಾಯಾಂಗಕ್ಕೆ ಅಗೌರವ ತೋರುವ ಉದ್ದೇಶವಿಲ್ಲ; NCERT ಪಠ್ಯಪುಸ್ತಕ ವಿವಾದದ ತನಿಖೆಗೆ ಕೇಂದ್ರ ಸರ್ಕಾರ ಆದೇಶ

ನ್ಯಾಯಾಂಗಕ್ಕೆ ಅಗೌರವ ತೋರುವ ಉದ್ದೇಶವಿಲ್ಲ; NCERT ಪಠ್ಯಪುಸ್ತಕ ವಿವಾದದ ತನಿಖೆಗೆ ಕೇಂದ್ರ ಸರ್ಕಾರ ಆದೇಶ

ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಎಂಬ ವಿವಾದಾತ್ಮಕ ಪಠ್ಯವನ್ನು ಶಾಲಾ ಪುಸ್ತಕದಲ್ಲಿ ಸೇರಿಸಿರುವುದರಿಂದ ಉಂಟಾಗಿರುವ ಹಾನಿಯನ್ನು ತಡೆಯಲು NCERT ಪ್ರಯತ್ನಿಸುತ್ತಿದೆ. ಈಗಾಗಲೇ ಈ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ತರಾಟೆಗೆ ತೆಗೆದುಕೊಂಡಿದೆ. ಇದರ ನಡುವೆ ಇಂದು ಪ್ರತಿಕ್ರಿಯೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ನ್ಯಾಯಾಂಗವನ್ನು ಅಗೌರವಿಸುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಹೇಳಿದ್ದಾರೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಪ್ರಕಟಿಸಿದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಂಬ ಪಠ್ಯವನ್ನು ಸೇರಿಸಿದ್ದರಿಂದ ವಿವಾದ ಭುಗಿಲೆದ್ದಿತು.

4 ವರ್ಷದ ಮಗಳನ್ನು ಕೊಂದು ಏನೂ ಗೊತ್ತೇ ಇಲ್ಲವೆಂಬಂತೆ ನಾಟಕವಾಡಿದ ಭಾರತ ಮೂಲದ ವೈದ್ಯೆ

4 ವರ್ಷದ ಮಗಳನ್ನು ಕೊಂದು ಏನೂ ಗೊತ್ತೇ ಇಲ್ಲವೆಂಬಂತೆ ನಾಟಕವಾಡಿದ ಭಾರತ ಮೂಲದ ವೈದ್ಯೆ

ಭಾರತೀಯ ಮೂಲದ ವೈದ್ಯರೊಬ್ಬರು ತಮ್ಮ 4 ವರ್ಷದ ಮಗಳನ್ನು ಕೊಂದು ಆಕೆಯನ್ನು ನೀರಿನಲ್ಲಿ ಮುಳುಗಿಸಿದ್ದಾರೆ. ನಂತರ ಆಕೆಯದ್ದು ಆಕಸ್ಮಿಕ ಸಾವು ಎಂದು ಅದನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ. ಮಗಳು ಸಾವನ್ನಪ್ಪಿದ ಬಳಿಕ ತಾವೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ಆ ಪುಟ್ಟ ಮಗುವನ್ನು ತಾಯಿಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಈ ಕೊಲೆಗೆ ಕಾರಣವೇನೆಂಬುದು ಮಾತ್ರ ದೃಢಪಟ್ಟಿಲ್ಲ.

ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್​ನಲ್ಲಿ ಪ್ರಧಾನಿ ಮೋದಿ

ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್​ನಲ್ಲಿ ಪ್ರಧಾನಿ ಮೋದಿ

ಜೆರುಸಲೆಮ್‌ನಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 'ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಪಶುವಾಗಬಾರದು, ಭಾರತ ಗಾಜಾ ಶಾಂತಿ ಪ್ರಯತ್ನಗಳನ್ನು ಬೆಂಬಲಿಸುತ್ತದೆ' ಎಂದು ಹೇಳಿದ್ದಾರೆ. ಸಂಘರ್ಷದಿಂದಾಗಿ ಮಾನವೀಯತೆ ಎಂದಿಗೂ ಬಳಲಬಾರದು ಎಂದು ಮೋದಿ ಕಾಳಜಿ ವ್ಯಕ್ತಪಡಿಸಿದ್ದಾರೆ.

ರೈಲು ಹತ್ತುವಾಗ ಕಾಲು ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್

ರೈಲು ಹತ್ತುವಾಗ ಕಾಲು ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್

ರೈಲ್ವೆ ಇಲಾಖೆಯ ಮಹಿಳಾ ಕಾನ್ಸ್​ಟೆಬಲ್ ಒಬ್ಬರು 75 ವರ್ಷದ ವೃದ್ಧನ ಪಾಲಿಗೆ ದೇವರಾಗಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ರೈಲು ನಿಂತ ಕೂಡಲೆ ಕೆಳಗೆ ಇಳಿದಿದ್ದ 75 ವರ್ಷದ ಪ್ರಯಾಣಿಕ ಅಂಗಡಿಯಲ್ಲಿ ಏನೋ ತೆಗೆದುಕೊಳ್ಳುತ್ತಿದ್ದಾಗ ರೈಲು ಹೊರಟಾಗಿತ್ತು. ತಕ್ಷಣ ಓಡಿಹೋಗಿ ಚಲಿಸುತ್ತಿದ್ದ ರೈಲನ್ನು ಹತ್ತಿಕೊಳ್ಳುವಾಗ ಆಯತಪ್ಪಿ ರೈಲು ಹಾಗೂ ಪ್ಲಾಟ್​ಫಾರ್ಮ್ ನಡುವೆ ಇರುವ ಅಂತರದೊಳಗೆ ಸಿಲುಕಿಕೊಂಡಿದ್ದರು. ಅಷ್ಟರಲ್ಲೇ ಓಡೋಡಿ ಬಂದ ಆರ್‌ಪಿಎಫ್ ಮಹಿಳಾ ಕಾನ್‌ಸ್ಟೆಬಲ್ ರಮಾ ಶರ್ಮಾ ಆ ವ್ಯಕ್ತಿಯನ್ನು ಎಳೆದು ಪ್ಲಾಟ್‌ಫಾರ್ಮ್ ಮೇಲೆ ಹಾಕಿದರು.

ವಿಮಾನ ಪ್ರಯಾಣಿಕರಿಗೆ ಒಳ್ಳೆ ಸುದ್ದಿ; ಟಿಕೆಟ್ ಮರುಪಾವತಿಯ ನಿಯಮದಲ್ಲಿ ಮಹತ್ವದ ಬದಲಾವಣೆ

ವಿಮಾನ ಪ್ರಯಾಣಿಕರಿಗೆ ಒಳ್ಳೆ ಸುದ್ದಿ; ಟಿಕೆಟ್ ಮರುಪಾವತಿಯ ನಿಯಮದಲ್ಲಿ ಮಹತ್ವದ ಬದಲಾವಣೆ

ವಿಮಾನ ಪ್ರಯಾಣಿಕರಿಗೆ ಡಿಜಿಸಿಎ ಗುಡ್ ನ್ಯೂಸ್ ನೀಡಿದೆ. ವಿಮಾನದ ಟಿಕೆಟ್ ಮರುಪಾವತಿಯ ಮಾನದಂಡಗಳನ್ನು ಪರಿಷ್ಕರಿಸಲಾಗಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಪ್ರಯಾಣಿಕ ಸ್ನೇಹಿ ಮಾನದಂಡಗಳೊಂದಿಗೆ ವಿಮಾನ ಟಿಕೆಟ್ ನಿಯಮಗಳನ್ನು ಪರಿಷ್ಕರಿಸಿದೆ. ಹೆಸರು ತಿದ್ದುಪಡಿ ಶುಲ್ಕವಿಲ್ಲದೆ ವಿಮಾನ ಟಿಕೆಟ್ ಮರುಪಾವತಿ ಮಾನದಂಡಗಳನ್ನು ಪರಿಷ್ಕರಿಸಲಾಗಿದೆ. ಟಿಕೆಟ್ ಮರುಪಾವತಿ ಪ್ರಕ್ರಿಯೆಯನ್ನು ಸಡಿಲಗೊಳಿಸಲಾಗಿದೆ. ಪ್ರಯಾಣಿಕರು ಈಗ ಟಿಕೆಟ್ ಬುಕಿಂಗ್ ಮಾಡಿದ 48 ಗಂಟೆಗಳ ಒಳಗೆ ಹೆಚ್ಚುವರಿ ಶುಲ್ಕವನ್ನು ಪಾವತಿಸದೆ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಬಹುದು ಅಥವಾ ದಿನಾಂಕ ಬದಲಾಯಿಸಬಹುದು.

ಮನೆಕೆಲಸದಾಕೆಯೇ ವಿಲನ್; ಮಾಲೀಕರ ಮನೆಯಲ್ಲಿ ನಕಲಿ ಇಡಿ ದಾಳಿ ನಡೆಸಿ ಲಕ್ಷಗಟ್ಟಲೆ ಹಣ ದೋಚಿದ ಮಹಿಳೆ!

ಮನೆಕೆಲಸದಾಕೆಯೇ ವಿಲನ್; ಮಾಲೀಕರ ಮನೆಯಲ್ಲಿ ನಕಲಿ ಇಡಿ ದಾಳಿ ನಡೆಸಿ ಲಕ್ಷಗಟ್ಟಲೆ ಹಣ ದೋಚಿದ ಮಹಿಳೆ!

ಈಗಿನ ಕಾಲ ಎಷ್ಟು ಕೆಟ್ಟು ಹೋಗಿದೆಯೆಂದರೆ ಧೈರ್ಯವಾಗಿ ಯಾರನ್ನೂ ನಂಬಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಮನೆಕೆಲಸಕ್ಕೆ ಸೇರಿದ್ದ ಮಹಿಳೆ ತನ್ನ ಮಾಲೀಕರ ಮನೆಯನ್ನೇ ದೋಚುವ ಪ್ಲಾನ್ ಮಾಡಿದ್ದಳು. ಅದಕ್ಕಾಗಿ ಅವರ ಮನೆ ಮೇಲೆ ಇಡಿ ದಾಳಿ ನಡೆಸುವ ನಾಟಕವನ್ನೂ ಆಡಿದ್ದಳು. ದೆಹಲಿಯಲ್ಲಿ ತನಗೆ ಕೆಲಸ ನೀಡಿದ್ದವರ ನಿವಾಸದ ಮೇಲೆ ನಕಲಿ ಇಡಿ ದಾಳಿ ನಡೆಸಿದ್ದಕ್ಕಾಗಿ ಮನೆಕೆಲಸದಾಕೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ತನ್ನ ಉದ್ಯೋಗದಾತರ ನಿವಾಸದ ಮೇಲೆ ನಕಲಿ ಜಾರಿ ನಿರ್ದೇಶನಾಲಯದ (ಇಡಿ) ದಾಳಿ ನಡೆಸಲು ಸಂಚು ರೂಪಿಸಿದ್ದ ಆಕೆ ಪೊಲೀಸರ ಬಲೆಗೆ ಬಿದ್ದಿದ್ದಾಳೆ.

Viral News: ಶಾಲೆಯಲ್ಲಿ ಆಟವಾಡುತ್ತಿದ್ದಾಗಲೇ ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾವು!

Viral News: ಶಾಲೆಯಲ್ಲಿ ಆಟವಾಡುತ್ತಿದ್ದಾಗಲೇ ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾವು!

ರಾಜಸ್ಥಾನದ ಶಾಲೆಯಲ್ಲಿ ಆಟದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಇದು ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಪ್ರಕರಣಗಳ ಬಗ್ಗೆ ಕಾಳಜಿ ಉಂಟುಮಾಡಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರು ದಿವ್ಯಾಳ ದೇಹದ ಮೇಲೆ ಯಾವುದೇ ಬಾಹ್ಯ ಗಾಯಗಳು ಕಂಡುಬಂದಿಲ್ಲ ಎಂದು ದೃಢಪಡಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಆ ಹುಡುಗಿಯ ಕುಟುಂಬವು ಮರಣೋತ್ತರ ಪರೀಕ್ಷೆ ನಡೆಸಲು ನಿರಾಕರಿಸಿದ್ದು, ಶವವನ್ನು ಅವರಿಗೆ ಹಸ್ತಾಂತರಿಸಲಾಗಿದೆ. ಮರಣೋತ್ತರ ಪರೀಕ್ಷೆಯಿಲ್ಲದೆ ಆಕೆಯ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ ಶಪಥ

ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ ಶಪಥ

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸರ್ಕಾರ ರಚಿಸಿದ ನಂತರ ಒಳನುಸುಳುಕೋರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಮಿತ್ ಶಾ ಪ್ರತಿಜ್ಞೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಗಡಿಯಲ್ಲಿರುವ ಸೀಮಾಂಚಲ್ ಪ್ರದೇಶದ ಭಾಗವಾಗಿರುವ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ.

ಇಸ್ರೇಲ್ ಸಂಸತ್​​ನಲ್ಲಿ ಪ್ರತಿಧ್ವನಿಸಿದ ‘ಮೋದಿ, ಮೋದಿ’ ಘೋಷಣೆ; ಭಾರತದ ಪ್ರಧಾನಿಗೆ ಎದ್ದುನಿಂತು ಸ್ವಾಗತ

ಇಸ್ರೇಲ್ ಸಂಸತ್​​ನಲ್ಲಿ ಪ್ರತಿಧ್ವನಿಸಿದ ‘ಮೋದಿ, ಮೋದಿ’ ಘೋಷಣೆ; ಭಾರತದ ಪ್ರಧಾನಿಗೆ ಎದ್ದುನಿಂತು ಸ್ವಾಗತ

ಪ್ರಧಾನಿ ಮೋದಿ ಅವರು ಇಂದು ಸಂಜೆ ನೆಸ್ಸೆಟ್‌ಗೆ ಆಗಮಿಸಿದರು. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ನೆತನ್ಯಾಹು ಅಧಿಕೃತ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿದ್ದರು. ಮೋದಿ ಇಂದು ಇಸ್ರೇಲ್ ಸಂಸತ್ತಿನ ನೆಸ್ಸೆಟ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಆಗಮಿಸುತ್ತಿದ್ದಂತೆ ಇಸ್ರೇಲ್ ಸಂಸತ್ತಿನ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ ಗೌರವ ಸಲ್ಲಿಸಿದರು.

ಆಟವಾಡುತ್ತಿದ್ದ ಮಗುವನ್ನು ಎತ್ತಿ ನೆಲಕ್ಕೆ ಕುಕ್ಕಿದ ಯುವಕ; ಶಾಕಿಂಗ್ ವಿಡಿಯೋ ಇಲ್ಲಿದೆ

ಆಟವಾಡುತ್ತಿದ್ದ ಮಗುವನ್ನು ಎತ್ತಿ ನೆಲಕ್ಕೆ ಕುಕ್ಕಿದ ಯುವಕ; ಶಾಕಿಂಗ್ ವಿಡಿಯೋ ಇಲ್ಲಿದೆ

ಮನೆಯ ಹೊರಗೆ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ಒಬ್ಬ ವ್ಯಕ್ತಿ ತನ್ನ ತಲೆಯ ಎತ್ತರಕ್ಕೆ ಎತ್ತಿ, ನಂತರ ಜೋರಾಗಿ ತಲೆಕೆಳಗಾಗಿ ರಸ್ತೆಗೆ ಎಸೆದಿದ್ದಾನೆ. ನಂತರ ಮಗುವನ್ನು ಕ್ರೂರವಾಗಿ ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ಯಾಕೆ ಆ ರೀತಿ ಮಗುವಿನ ಜೊತೆ ಮೃಗದಂತೆ ವರ್ತಿಸಿದ್ದಾನೆ, ಆ ಮಗುವಿಗೂ ಆತನಿಗೂ ಏನು ಸಂಬಂಧ ಎಂಬುದು ಇನ್ನೂ ಗೊತ್ತಾಗಿಲ್ಲ.

ಪ್ರಧಾನಿ ಮೋದಿಗೆ ಇಸ್ರೇಲ್ ಸಂಸತ್​​ನ ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ ಪ್ರದಾನ

ಪ್ರಧಾನಿ ಮೋದಿಗೆ ಇಸ್ರೇಲ್ ಸಂಸತ್​​ನ ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ ಪ್ರದಾನ

ಪ್ರಧಾನಿ ಮೋದಿ ಅವರಿಗೆ ಇಸ್ರೇಲ್ ಸಂಸತ್ತು 'ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ' ನೀಡಿ ಗೌರವಿಸಿದೆ. ಈ ಗೌರವ ಪಡೆದ ಮೊದಲ ಭಾರತೀಯ ಪ್ರಧಾನಿ ಮೋದಿ. ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಎರಡರಿಂದಲೂ ಉನ್ನತ ನಾಗರಿಕ ಗೌರವಗಳನ್ನು ಪಡೆದ ಕೆಲವೇ ಜಾಗತಿಕ ನಾಯಕರಲ್ಲಿ ಮೋದಿ ಕೂಡ ಒಬ್ಬರು. 2018ರಲ್ಲಿ ವಿದೇಶಿ ಗಣ್ಯರಿಗೆ ನೀಡಲಾಗುವ ಅತ್ಯುನ್ನತ ಪ್ಯಾಲೆಸ್ಟೀನಿಯನ್ ಪ್ರಶಸ್ತಿಯಾದ ಪ್ಯಾಲೆಸ್ಟೈನ್ ರಾಜ್ಯದ ಗ್ರ್ಯಾಂಡ್ ಕಾಲರ್ ಅನ್ನು ಮೋದಿಗೆ ನೀಡಲಾಗಿತ್ತು.

ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು