ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಝೋಜಿಲಾ ಪ್ರದೇಶದ ಎತ್ತರದ ಪ್ರದೇಶಗಳಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ರಂಗಾ ಮೋಡ್ ಬಳಿ ಭಾರಿ ಪ್ರಮಾಣದ ಕೆಸರು ಮತ್ತು ಮಣ್ಣು ಸಂಗ್ರಹಗೊಂಡಿದ್ದು, ಲಡಾಖ್ ಮತ್ತು ಕಾಶ್ಮೀರವನ್ನು ಸಂಪರ್ಕಿಸುವ ಈ ಪ್ರಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಕಡಿತಗೊಂಡಿದೆ. ರಸ್ತೆಯನ್ನು ತೆರವುಗೊಳಿಸಿ ಆದಷ್ಟು ಬೇಗ ಸಂಚಾರವನ್ನು ಯಥಾಸ್ಥಿತಿಗೆ ತರಲು ಗಡಿ ರಸ್ತೆಗಳ ಸಂಸ್ಥೆಯ ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ತಕ್ಷಣವೇ ಸ್ಥಳಕ್ಕೆ ರವಾನಿಸಲಾಗಿದೆ.
- Sushma Chakre
- Updated on: Aug 13, 2026
- 10:59 pm
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ, ನಾಲ್ವರಿಗಾಗಿ ಶೋಧ ಕಾರ್ಯಾಚರಣೆ
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗವೊಂದರೊಳಗೆ ಇಂದು ಇದ್ದಕ್ಕಿದ್ದಂತೆ ಹೂಳು ಮತ್ತು ನೀರು ನುಗ್ಗಿದ ಪರಿಣಾಮವಾಗಿ ಭಾರಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದಾರೆ. 'ತೆಹ್ರಿ ಹೈಡ್ರೋ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್' (THDC)ನ ಅಂಗಸಂಸ್ಥೆಯಾದ 'ಹಿಂದೂಸ್ಥಾನ್ ಕನ್ಸ್ಟ್ರಕ್ಷನ್ ಕಂಪನಿ' (HCC) ಕಾಮಗಾರಿ ನಡೆಸುತ್ತಿದ್ದ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ರಕ್ಷಣಾ ತಂಡಗಳು ಇದುವರೆಗೆ ಸುರಂಗದಿಂದ 16 ಮಂದಿ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆದಿದ್ದು, ಒಳಗೆ ಸಿಲುಕಿರುವ ಉಳಿದವರ ಬಳಿಗೆ ತಲುಪಿ ಅವರನ್ನು ರಕ್ಷಿಸುವ ಪ್ರಯತ್ನಗಳು ನಿರಂತರವಾಗಿ ಸಾಗಿವೆ.
- Sushma Chakre
- Updated on: Aug 13, 2026
- 10:24 pm
ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಿಸಬೇಡಿ ಎಂದಿದ್ದ ನಲ್ಸಾರ್ ವಿದ್ಯಾರ್ಥಿಗಳ ಈ ವರ್ಷದ ನೋಂದಣಿ ತಡೆಹಿಡಿದ ಬಾರ್ ಕೌನ್ಸಿಲ್!
ಹೈದರಾಬಾದ್ನ ಪ್ರತಿಷ್ಠಿತ NALSAR ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನು ಆಹ್ವಾನಿಸುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ, 2026ರಲ್ಲಿ ಈ ಸಂಸ್ಥೆಯಿಂದ ಪದವಿ ಪಡೆಯುವ ಯಾವುದೇ ವಿದ್ಯಾರ್ಥಿಯನ್ನು ಮುಂದಿನ ಆದೇಶದವರೆಗೆ ವಕೀಲರನ್ನಾಗಿ ನೋಂದಾಯಿಸಿಕೊಳ್ಳದಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಎಲ್ಲಾ ರಾಜ್ಯ ಬಾರ್ ಕೌನ್ಸಿಲ್ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಮುಂಬರುವ ಘಟಿಕೋತ್ಸವಕ್ಕೆ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುವ ವಿಶ್ವವಿದ್ಯಾಲಯದ ಪ್ರಸ್ತಾವನೆಗೆ ಪದವಿ ಪಡೆಯಲಿರುವ ವಿದ್ಯಾರ್ಥಿಗಳ ಒಂದು ಗುಂಪು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
- Sushma Chakre
- Updated on: Aug 13, 2026
- 9:42 pm
ತಿರುಪತಿ ದೇವಸ್ಥಾನಕ್ಕೆ ಭಕ್ತರು ನೀಡುವ ಚಿನ್ನಾಭರಣವನ್ನು ಬಿಸ್ಕತ್ ಮಾಡಲು ಟಿಟಿಡಿ ನಿರ್ಧಾರ
ಕಲಿಯುಗದ ಜೀವಂತ ದೇವರು ಎಂದೇ ಹೇಳಲಾಗುವ ವೆಂಕಟೇಶ್ವರನಿಗೆ ಭಕ್ತರು ಅರ್ಪಿಸುವ ಹುಂಡಿ ಕಾಣಿಕೆಗಳಲ್ಲಿ ಪ್ರಮುಖ ಬದಲಾವಣೆಗಳಿಗೆ ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಪ್ರಸ್ತಾವನೆಗಳನ್ನು ಸಿದ್ಧಪಡಿಸಿದೆ. ತಿರುಪತಿ ಹುಂಡಿಯಲ್ಲಿ ಕಂಡುಬರುವ ಚಿನ್ನದ ಕಾಣಿಕೆಗಳನ್ನು ನೇರವಾಗಿ ಮಾರಾಟ ಮಾಡದಿರಲು ನಿರ್ಧರಿಸಿದೆ. ಅವುಗಳನ್ನು ಚಿನ್ನದ ಬಿಸ್ಕತ್ತುಗಳಾಗಿ ಪರಿವರ್ತಿಸಿ ಬ್ಯಾಂಕುಗಳಲ್ಲಿ ಚಿನ್ನದ ಠೇವಣಿಯಾಗಿ ಇಡುವ ನೀತಿಯನ್ನು ಅನುಸರಿಸಲು ಉದ್ದೇಶಿಸಿದೆ. ಮತ್ತೊಂದೆಡೆ, ಚಿನ್ನದ ಆಭರಣಗಳಲ್ಲಿರುವ ರತ್ನಗಳು ಮತ್ತು ಅಮೂಲ್ಯ ಕಲ್ಲುಗಳನ್ನು ಬೇರ್ಪಡಿಸಿ ಹರಾಜು ಹಾಕಲು ಪ್ರಸ್ತಾಪಿಸಿದೆ.
- Sushma Chakre
- Updated on: Aug 13, 2026
- 8:54 pm
ಏರ್ ಇಂಡಿಯಾದ ಎಲ್ಲ ಪೈಲಟ್ಗಳಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯಗೊಳಿಸಿದ ಸರ್ಕಾರ
ಏರ್ ಇಂಡಿಯಾ ಸಂಸ್ಥೆಯು ತನ್ನ ಎಲ್ಲಾ ಪೈಲಟ್ಗಳಿಗೆ ಕಡ್ಡಾಯವಾಗಿ ಮಾದಕದ್ರವ್ಯ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ. ಇತ್ತೀಚೆಗೆ ಫುಕೆಟ್ನಿಂದ ದೆಹಲಿಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಆಕಾಶದಲ್ಲಿ ಇದ್ದಕ್ಕಿದ್ದಂತೆ 300 ಅಡಿ ಎತ್ತರದಿಂದ ಕೆಳಕ್ಕೆ ಕುಸಿದಿದ್ದ ಘಟನೆಯ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ವಿಮಾನದ ಪೈಲಟ್ ಗಾಂಜಾ ಸೇವಿಸಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಈ ಪರೀಕ್ಷೆಗಳ ಮೂಲಕ, ವಿಮಾನಯಾನ ನಿಯಮಗಳ ಅಡಿಯಲ್ಲಿ ನಿಷೇಧಿಸಲಾದ ಮಾದಕವಸ್ತುಗಳು ಮತ್ತು ಆಕ್ಷೇಪಾರ್ಹ ಔಷಧಗಳ ಬಳಕೆಯನ್ನು ಏರ್ ಇಂಡಿಯಾ ತನಿಖೆ ಮಾಡಲಿದೆ. ಪೈಲಟ್ಗಳ ಹೋಮ್ ಬೇಸ್ ನಿಯೋಜಿತ ಸ್ಥಳಗಳಲ್ಲೂ ಈ ಪರೀಕ್ಷೆಗಳು ನಡೆಯಲಿವೆ. ಏರ್ ಇಂಡಿಯಾ ಮಾತ್ರವಲ್ಲದೆ 'ಏರ್ ಇಂಡಿಯಾ ಎಕ್ಸ್ಪ್ರೆಸ್' ಪೈಲಟ್ಗಳಿಗೂ ಈ ಪರೀಕ್ಷೆ ಅನ್ವಯಿಸಲಿದೆ.
- Sushma Chakre
- Updated on: Aug 13, 2026
- 8:08 pm
ನೇತಾಜಿಗೆ ಅವಮಾನಿಸಿದ ಬಿಜೆಪಿ ಸಂಸದ ಅನಂತ ಮಹಾರಾಜ್; ‘ಬಂಗ ವಿಭೂಷಣ’ ಪ್ರಶಸ್ತಿ ಹಿಂಪಡೆದ ಪಶ್ಚಿಮ ಬಂಗಾಳ ಸರ್ಕಾರ
ನೇತಾಜಿ ಸುಭಾಷ್ ಚಂದ್ರ ಬೋಸ್ ಕುರಿತು ನೀಡಿದ ಆಕ್ಷೇಪಾರ್ಹ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಸಭಾ ಸಂಸದ ನಾಗೇಂದ್ರನಾಥ್ ರಾಯ್ ಅಲಿಯಾಸ್ ಅನಂತ ಮಹಾರಾಜ್ ಅವರಿಗೆ ನೀಡಲಾಗಿದ್ದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಬಂಗ ವಿಭೂಷಣ'ವನ್ನು ಹಿಂಪಡೆಯುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಇಂದು (ಆಗಸ್ಟ್ 13) ಆದೇಶಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುವವರ ವಿರುದ್ಧ ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಜರುಗಿಸಿ ಬಂಧಿಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಪೊಲೀಸರಿಗೆ ನಿರ್ದೇಶನ ನೀಡಿದ 24 ಗಂಟೆಗಳ ಒಳಗೆ ಈ ಪ್ರಮುಖ ಕ್ರಮ ಕೈಗೊಳ್ಳಲಾಗಿದೆ.
- Sushma Chakre
- Updated on: Aug 13, 2026
- 6:57 pm
ಹಲ್ಲೆಗೊಳಗಾದ ಸುಖ್ಬೀರ್ ಸಿಂಗ್ ಬಾದಲ್ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ; ದಾಳಿಯ ತನಿಖೆಗೆ ಮಹಾರಾಷ್ಟ್ರ ಸಿಎಂ ಆದೇಶ
ಮಹಾರಾಷ್ಟ್ರದ ನಾಂದೇಡ್ನಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಹಾಗೂ ಪಂಜಾಬ್ನ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಬಾದಲ್ ಅವರ ಮೇಲೆ ಇಂದು ದಾಳಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಗಾಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಬಾದಲ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ದಾಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತನಿಖೆಗೆ ಆದೇಶಿಸಿದ್ದಾರೆ. ಈಗಾಗಲೇ ದಾಳಿಕೋರನನ್ನು ಬಂಧಿಸಲಾಗಿದ್ದು, ಆತ ಕಳೆದ 2 ವರ್ಷಗಳಿಂದ ಗುರುದ್ವಾರದಲ್ಲಿ ಸ್ವಯಂಸೇವಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದು, ಅದನ್ನು ತಡೆಯಲು ಯತ್ನಿಸಿದ ಪೊಲೀಸ್ ಅಧಿಕಾರಿಗೂ ಗಾಯಗಳಾಗಿವೆ.
- Sushma Chakre
- Updated on: Aug 13, 2026
- 6:04 pm
ಮಹಾರಾಷ್ಟ್ರದಲ್ಲಿ ಪಂಜಾಬ್ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ತಲ್ವಾರ್ ದಾಳಿ; ಆಸ್ಪತ್ರೆಗೆ ದಾಖಲು
ಮಹಾರಾಷ್ಟ್ರದ ನಾಂದೇಡ್ನಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ, ಪಂಜಾಬ್ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ತಲ್ವಾರ್ನಿಂದ ದಾಳಿ ನಡೆದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಖ್ಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್ನಲ್ಲಿರುವ 'ಗುರುದ್ವಾರ ಮಾತಾ ಸಾಹಿಬ್' ಬಳಿ ನಿಹಾಂಗ್ ಸಿಖ್ ಓರ್ವ ತಲ್ವಾರ್ನಿಂದ ದಾಳಿ ನಡೆಸಿದ್ದಾನೆ. ಕೆಲವೇ ದಿನಗಳ ಹಿಂದೆ ಸುಖ್ಬೀರ್ ಸಿಂಗ್ ಬಾದವ್ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು. ಅದರ ಬೆನ್ನಲ್ಲೇ ಈ ದಾಳಿ ನಡೆದಿದೆ.
- Sushma Chakre
- Updated on: Aug 13, 2026
- 5:32 pm
‘ರಾಹುಲ್ ಗಾಂಧಿಯ ಅಹಂಕಾರದಿಂದ ಇಡೀ ಅಧಿವೇಶನ ಹಾದಿ ತಪ್ಪಿತು’; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸದನದಲ್ಲಿ ಅರ್ಥಪೂರ್ಣ ಚರ್ಚೆಯಿಂದ ಪದೇ ಪದೇ ತಪ್ಪಿಸಿಕೊಂಡು, ವಿದೇಶಿ ನೆಲದಲ್ಲಿ ರಾಜಕೀಯ ಹೇಳಿಕೆಗಳನ್ನು ನೀಡುತ್ತಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಚರ್ಚೆ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಕಾಂಗ್ರೆಸ್ ಆಗ್ರಹಿಸಿತ್ತು. ಅದಕ್ಕೆ ಸರ್ಕಾರ ಒಪ್ಪಿಕೊಂಡಿದ್ದರೂ ವಿರೋಧ ಪಕ್ಷವು ಚರ್ಚೆಯಲ್ಲಿ ಭಾಗಿಯಾಗಿಲ್ಲ ಎಂದು ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.
- Sushma Chakre
- Updated on: Aug 13, 2026
- 4:26 pm
ತಲೈಮನ್ನಾರ್ ಬಳಿ ಶ್ರೀಲಂಕಾ ನೌಕಾಪಡೆಯಿಂದ 9 ಭಾರತೀಯ ಮೀನುಗಾರರ ಬಂಧನ
ಶ್ರೀಲಂಕಾದ ಜಲಪ್ರದೇಶದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 9 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ. ಹಾಗೇ, ಅವರ ಒಂದು ಹಡಗನ್ನು ವಶಪಡಿಸಿಕೊಳ್ಳಲಾಗಿದೆ. ತಲೈಮನ್ನಾರ್ನ ಉರುಮಲೈ ಪಾಯಿಂಟ್ ಬಳಿ ಬುಧವಾರ ರಾತ್ರಿ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ತಿಳಿಸಿದೆ. ಭಾರತೀಯ ಮೀನುಗಾರರ ಹಡಗು ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು ದಾಟಿ ಶ್ರೀಲಂಕಾ ಜಲಪ್ರದೇಶವನ್ನು ಪ್ರವೇಶಿಸಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ಹೇಳಿಕೊಂಡಿದೆ.
- Sushma Chakre
- Updated on: Aug 13, 2026
- 3:49 pm
ಮೂತ್ರದ ಬಾಟಲಿಗಳು, 7,000 ಟನ್ ಕಸ; ಕನ್ವರ್ ಯಾತ್ರೆ ಬಳಿಕ ಹರಿದ್ವಾರ ಹೇಗಾಗಿದೆ ನೋಡಿ!
ಹರಿದ್ವಾರದ ಘಾಟ್ಗಳಲ್ಲಿ ಟನ್ಗಟ್ಟಲೆ ಬಟ್ಟೆಗಳು, ಪ್ಲಾಸ್ಟಿಕ್ ವಸ್ತುಗಳು, ಮೂತ್ರ ತುಂಬಿದ ಬಾಟಲಿಗಳು ರಾಶಿ ಬಿದ್ದಿರುವ ದೃಶ್ಯಗಳು ಕಂಡುಬಂದಿವೆ. ಹರಿದ್ವಾರದ ನೂರಕ್ಕೂ ಹೆಚ್ಚು ಘಾಟ್ಗಳಲ್ಲಿ ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧವಾದ 'ಹರ್ ಕಿ ಪೌರಿ' ಘಾಟ್ನ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿರಲಿಲ್ಲ. ಬಟ್ಟೆ ಬದಲಾಯಿಸುವ ಕೊಠಡಿಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಮೂತ್ರ ತುಂಬಿ ಹಾಗೆಯೇ ಬಿಟ್ಟು ಹೋಗಿರುವುದು ಕಂಡುಬಂದಿದೆ. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಘಟನೆಯು ಹರಿದ್ವಾರದ ಸ್ಥಳೀಯ ನಿವಾಸಿಗಳು ಮತ್ತು ಮಠಾಧೀಶರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
- Sushma Chakre
- Updated on: Aug 12, 2026
- 10:50 pm
ಆಟೋ, ಕ್ಯಾಬ್ ಬಳಸುವ ಗ್ರಾಹಕರಿಗೆ ಒಳ್ಳೆ ಸುದ್ದಿ; ಟ್ರಿಪ್ ಪೂರ್ಣಗೊಳ್ಳುವ ಮುನ್ನ ಟಿಪ್ ಕೋರುವಂತಿಲ್ಲ ಎಂದ ಸರ್ಕಾರ
ರೈಡ್ ಸ್ವೀಕರಿಸುವ ಮುನ್ನ ಅಥವಾ ಪ್ರಯಾಣ ಪೂರ್ಣಗೊಳ್ಳುವ ಮೊದಲು ಆ್ಯಪ್ಗಳಲ್ಲಿ ಪ್ರಕಟವಾಗುವ ‘ಟಿಪ್’ ನೀಡುವ ಎಲ್ಲಾ ಆಯ್ಕೆಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮೋಟಾರು ವಾಹನ ಅಗ್ರಿಗೇಟರ್ಗಳಿಗೆ (ಆನ್ಲೈನ್ ಟ್ಯಾಕ್ಸಿ ಬುಕಿಂಗ್ ಆ್ಯಪ್ಗಳು) ನಿರ್ದೇಶನ ನೀಡಿದೆ. ಇದರಿಂದಾಗಿ ಆಟೋ, ಟ್ಯಾಕ್ಸಿ, ಕ್ಯಾಬ್, ಬೈಕ್ ರೈಡ್ ಬುಕ್ ಮಾಡುವ ಗ್ರಾಹಕರಿಗೆ ಇನ್ನೂ ಸ್ವಲ್ಪ ನಿರಾಳವಾಗಿದೆ. ಆನ್ಲೈನ್ ಕ್ಯಾಬ್ ಬುಕಿಂಗ್ ಆ್ಯಪ್ಗಳು ‘ಮೋಟಾರು ವಾಹನ ಅಗ್ರಿಗೇಟರ್ ಮಾರ್ಗದರ್ಶಿ ಸೂತ್ರಗಳು, 2025’ರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ಹೇಳಿದೆ.
- Sushma Chakre
- Updated on: Aug 12, 2026
- 10:28 pm