ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಪ್ರಕಾಶಂ ಜಿಲ್ಲೆಯ ಪಂಗುಲೂರು ಮಂಡಲದ ರೇನಿಂಗವರಂ ಗ್ರಾಮದಲ್ಲಿ ನಡೆದ ಟಗರು ಓಟದ ಸ್ಪರ್ಧೆಗಳು ಆಕರ್ಷಕವಾಗಿದ್ದವು. ಗ್ರಾಮದಲ್ಲಿ ಆಯೋಜಿಸಲಾದ ಟಗರು ಓಟದ ಸ್ಪರ್ಧೆಗಳಿಗೆ ಸ್ಥಳೀಯರು ಮತ್ತು ನೆರೆಯ ಹಳ್ಳಿಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರಕಾಶಂ, ಬಾಪಟ್ಲಾ ಮತ್ತು ಮಾರ್ಕಪುರಂ ಜಿಲ್ಲೆಗಳಿಂದ ಸುಮಾರು 41 ಜೋಡಿ ಟಗರುಗಳು ಬಂದವು.
- Sushma Chakre
- Updated on: Jan 1, 2026
- 10:06 pm
ಸ್ವಿಜರ್ಲೆಂಡ್ ಬಾರ್ನಲ್ಲಿ ಬೆಂಕಿ ಅವಘಡ; ಸಾವಿನ ಸಂಖ್ಯೆ 40ಕ್ಕೆ ಏರಿಕೆ
ಸ್ವಿಜರ್ಲೆಂಡ್ನ ಕ್ರಾನ್ಸ್-ಮೊಂಟಾನಾ ಬಾರ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆ. ಹೊಸ ವರ್ಷದ ಮುನ್ನಾದಿನದಂದು ಸ್ವಿಟ್ಜರ್ಲೆಂಡ್ ಬಾರ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವಿನ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಯಾವ ಕಾರಣದಿಂದ ಸ್ಫೋಟ ಸಂಭವಿಸಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಹೊಸ ವರ್ಷದ ಆಚರಣೆಯ ಸಮಯದಲ್ಲಿ ಆಲ್ಪ್ಸ್ನ ಜನದಟ್ಟಣೆಯ ಬಾರ್ನಲ್ಲಿ ಸಂಭವಿಸಿದ ಮಾರಕ ಸ್ಫೋಟ ಭಯೋತ್ಪಾದಕ ದಾಳಿಯಲ್ಲ ಎಂದು ಸ್ವಿಸ್ ಪೊಲೀಸರು ಖಚಿತಪಡಿಸಿದ್ದಾರೆ.
- Sushma Chakre
- Updated on: Jan 1, 2026
- 10:05 pm
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
2026ರ ಹೊಸ ವರ್ಷದ ಪ್ರಯುಕ್ತ ಬಿಎಪಿಎಸ್ ಸ್ವಾಮಿನಾರಾಯಣ ಸಂಸ್ಥೆಯು ಪ್ರಪಂಚದಾದ್ಯಂತದ ಭಕ್ತರಿಗೆ ತನ್ನ ಶುಭಾಶಯಗಳನ್ನು ತಿಳಿಸಿದೆ. 2026 ಮಹಾಂತ ಸ್ವಾಮಿ ಮಹಾರಾಜರ ಮಾರ್ಗದರ್ಶನದಲ್ಲಿ ಶಾಂತಿ, ಆರೋಗ್ಯ ಮತ್ತು ಆಧ್ಯಾತ್ಮಿಕ ಅಭಿವೃದ್ಧಿಯಿಂದ ತುಂಬಿದ ವರ್ಷವಾಗಲಿ ಎಂದು ಅದು ಹಾರೈಸಿದೆ. ಈ ಸಂದರ್ಭದಲ್ಲಿ, ಪ್ರಭು ನೀಲಕಂಠವರ್ಣಿ ಸ್ವಾಮಿಯ ಅಭಿಷೇಕ ದರ್ಶನದ ವಿಡಿಯೋವನ್ನು ಬಿಎಪಿಎಸ್ ತನ್ನ ಭಕ್ತರೊಂದಿಗೆ ಹಂಚಿಕೊಂಡಿದೆ.
- Sushma Chakre
- Updated on: Jan 1, 2026
- 8:28 pm
ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದೇಶದ ಶರಿಯತ್ಪುರ ಜಿಲ್ಲೆಯಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಮೇಲೆ ಗುಂಪೊಂದು ಕ್ರೂರವಾಗಿ ಹಲ್ಲೆ ನಡೆಸಿ ಬೆಂಕಿ ಹಚ್ಚಿದೆ. ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಹೊಸ ಕಳವಳ ವ್ಯಕ್ತಪಡಿಸಿದೆ. ಈ ಹಲ್ಲೆಯಲ್ಲಿ ಆ ವ್ಯಕ್ತಿಗೆ ತೀವ್ರ ಗಾಯಗಳಾಗಿವೆ. ಬಾಂಗ್ಲಾದೇಶದ ಶರಿಯತ್ಪುರ ಜಿಲ್ಲೆಯಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಮೇಲೆ ಗುಂಪೊಂದು ಕ್ರೂರವಾಗಿ ಹಲ್ಲೆ ನಡೆಸಿ ಬೆಂಕಿ ಹಚ್ಚಿದೆ ಎಂದು ಹೇಳಲಾಗಿದೆ. ಈ ದಾಳಿಯ ಕ್ರೌರ್ಯವು ಹಕ್ಕುಗಳ ಗುಂಪುಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ.
- Sushma Chakre
- Updated on: Jan 1, 2026
- 8:12 pm
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರ ಉದ್ಘಾಟನೆಯಾದಾಗಿನಿಂದ ಇದುವರೆಗೂ ರಾಹುಲ್ ಗಾಂಧಿ ಅಲ್ಲಿಗೆ ಭೇಟಿ ನೀಡದಿರುವ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸುವಾಗ ನಾನಾ ಪಟೋಲೆ ಈ ಹೇಳಿಕೆ ನೀಡಿದ್ದಾರೆ. "ರಾಹುಲ್ ಗಾಂಧಿ ರಾಮ ಮಾಡಿದ್ದ ಕೆಲಸವನ್ನು ಮಾಡುತ್ತಿದ್ದಾರೆ. ರಾಮನು ತುಳಿತಕ್ಕೊಳಗಾದ ಜನರ ಮತ್ತು ವಂಚಿತರ ನ್ಯಾಯದ ಪರವಾಗಿ ನಿಂತಿದ್ದ. ಈಗ ರಾಹುಲ್ ಗಾಂಧಿ ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ" ಎಂದು ಅವರು ಹೇಳಿದ್ದಾರೆ.
- Sushma Chakre
- Updated on: Jan 1, 2026
- 7:14 pm
ಗುವಾಹಟಿ-ಕೊಲ್ಕತ್ತಾ ಮಾರ್ಗದಲ್ಲಿ ಶೀಘ್ರದಲ್ಲೇ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ
ನೂತನ ವಂದೇ ಭಾರತ್ ಸ್ಲೀಪರ್ ರೈಲು ದೆಹಲಿ, ಉತ್ತರ ಪ್ರದೇಶ, ಬಿಹಾರ ಮತ್ತು ಬಂಗಾಳದ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದೆ. ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸುಧಾರಿತ ಸುರಕ್ಷತಾ ವ್ಯವಸ್ಥೆ, ವಿಶ್ವ ದರ್ಜೆಯ ಬೋಗಿಗಳನ್ನು ಹೊಂದಿದೆ. ಈ ರೈಲು ಯಾವಾಗಿಂದ ಸಂಚಾರ ಆರಂಭಿಸಲಿದೆ? ಯಾವ ಮಾರ್ಗದಲ್ಲಿ ಸಾಗಲಿದೆ? ಇದರ ದರ ಎಷ್ಟಿರಲಿದೆ? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
- Sushma Chakre
- Updated on: Jan 1, 2026
- 6:06 pm
Himachal Pradesh Blast: ಹಿಮಾಚಲ ಪ್ರದೇಶದ ಪೊಲೀಸ್ ಸ್ಟೇಷನ್ ಬಳಿ ಭಾರೀ ಸ್ಫೋಟ
ಹಿಮಾಚಲ ಪ್ರದೇಶದ ಪೊಲೀಸ್ ಠಾಣೆ ಬಳಿ ಪ್ರಬಲ ಸ್ಫೋಟ ನಡೆದಿದೆ. ಇದರಿಂದಾಗಿ ಸುತ್ತಲಿನ ಕಟ್ಟಡಗಳ ಕಿಟಕಿಗಳು ಒಡೆದುಹೋಗಿವೆ. ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ನಲಗಢದಲ್ಲಿ ಇಂದು ಪೊಲೀಸ್ ಠಾಣೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಇದರ ಪರಿಣಾಮವಾಗಿ ನೂರಾರು ಮೀಟರ್ ದೂರದಲ್ಲಿರುವ ಮನೆಗಳಲ್ಲಿಯೂ ಬಿರುಕು ಬಿಟ್ಟಿದೆ.
- Sushma Chakre
- Updated on: Jan 1, 2026
- 4:35 pm
ಸಿಗರೇಟ್, ಗುಟ್ಕಾ ಬಳಸುತ್ತೀರಾ? ಮುಂದಿನ ತಿಂಗಳಿಂದ ನಿಮ್ಮ ಜೇಬಿಗೆ ಕತ್ತರಿ ಗ್ಯಾರಂಟಿ
ಸಿಗರೇಟ್, ಬೀಡಿ, ಪಾನ್ ಮಸಾಲಾ ತಂಬಾಕು ಉತ್ಪನ್ನಗಳ ಬೆಲೆ ಮುಂದಿನ ತಿಂಗಳಿಂದ ದುಬಾರಿಯಾಗಲಿದೆ. ಫೆ. 1ರಿಂದ ಹೊಸ ತೆರಿಗೆ ನಿಯಮ ಜಾರಿಯಾಗಲಿದೆ. ತಂಬಾಕು ಮತ್ತು ಪಾನ್ ಮಸಾಲಾ ಮೇಲಿನ ಹೊಸ ತೆರಿಗೆಗಳು ಜಿಎಸ್ಟಿ ದರಕ್ಕಿಂತ ಹೆಚ್ಚಿರುತ್ತವೆ. ಫೆಬ್ರವರಿ 1ರಿಂದ ಪಾನ್ ಮಸಾಲಾ, ಸಿಗರೇಟ್, ತಂಬಾಕು ಉತ್ಪನ್ನಗಳು ಶೇ. 40ರಷ್ಟು ಜಿಎಸ್ಟಿ ದರವನ್ನು ಹೊಂದಲಿವೆ ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ.
- Sushma Chakre
- Updated on: Jan 1, 2026
- 4:07 pm
ಕಳೆದ ದಶಕದಲ್ಲಿ PRAGATIಯಿಂದ 85 ಲಕ್ಷ ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳು ವೇಗಗೊಂಡಿದೆ; ಪ್ರಧಾನಿ ಮೋದಿ
ನವದೆಹಲಿಯಲ್ಲಿ PRAGATIಯ 50ನೇ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನಕ್ಕಾಗಿ ಇದೊಂದು ಅದ್ಭುತ ವೇದಿಕೆ ಎಂದು ಹೇಳಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ರಸ್ತೆ, ರೈಲ್ವೆ, ವಿದ್ಯುತ್, ಜಲ ಸಂಪನ್ಮೂಲಗಳು ಮತ್ತು ಕಲ್ಲಿದ್ದಲು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ 5 ನಿರ್ಣಾಯಕ ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಿದರು. ಈ ಯೋಜನೆಗಳು ಐದು ರಾಜ್ಯಗಳನ್ನು ವ್ಯಾಪಿಸಿವೆ ಹಾಗೂ ಇದಕ್ಕೆ ಒಟ್ಟು 40 ಸಾವಿರ ಕೋಟಿ ರೂ.ಗಳಿಗಿಂತ ಹೆಚ್ಚು ವೆಚ್ಚವಾಗಿದೆ.
- Sushma Chakre
- Updated on: Dec 31, 2025
- 11:20 pm
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು; ವಿವಾದಕ್ಕೀಡಾಯ್ತು ವಿಡಿಯೋ
ಧುರಂಧರ್ ಸಿನಿಮಾದ 'ಬುರ್ಖಾ ಮತ್ತು ಹಿಜಾಬ್' ಹಾಡಿನಲ್ಲಿ ಪುರುಷರು ನೃತ್ಯ ಮಾಡಿದ ನಂತರ ಅಮ್ರೋಹಾ ಶಾಲೆಯಿಂದ ವೈರಲ್ ಆದ ವಿಡಿಯೋ ಆಕ್ರೋಶಕ್ಕೆ ಗುರಿಯಾಗಿದೆ. ವಿವಾದಾತ್ಮಕ ಸಿನಿಮಾ ಧುರಂಧರ್ನ ಹಾಡಿಗೆ ನೃತ್ಯ ಮಾಡುತ್ತಿರುವ ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಆಕ್ರೋಶವನ್ನು ಹುಟ್ಟುಹಾಕಿದೆ. ಹಿಜಾಬ್ ಮತ್ತು ಮುಸ್ಲಿಂ ಧಾರ್ಮಿಕ ಗುರುತನ್ನು ಅಪಹಾಸ್ಯ ಮಾಡಿದ ಆರೋಪದ ಮೇಲೆ ಈ ಕೃತ್ಯವನ್ನು ಟೀಕಿಸಲಾಗಿದೆ.
- Sushma Chakre
- Updated on: Dec 31, 2025
- 10:59 pm
ಗಂಡ-ಹೆಂಡತಿಯನ್ನು ಜೀವಂತವಾಗಿ ಸುಟ್ಟುಹಾಕಿದ ಗ್ರಾಮಸ್ಥರು; ಕಾರಣ ಕೇಳಿದರೆ ಶಾಕ್ ಆಗ್ತೀರ
ಅಸ್ಸಾಂನಲ್ಲಿ ಗ್ರಾಮಸ್ಥರು ಗಂಡ-ಹೆಂಡತಿಯನ್ನು ಜೀವಂತವಾಗಿ ಸುಟ್ಟುಹಾಕಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆ ದಂಪತಿ ಮಾಟಮಂತ್ರದಲ್ಲಿ ತೊಡಗಿದ್ದಾರೆ, ಇದರಿಂದಾಗಿಯೇ ಊರಿನಲ್ಲಿ ಅನಾರೋಗ್ಯ ಉಂಟಾಗಿದೆ ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಹೀಗಾಗಿ ಗುಂಪು ಕಟ್ಟಿಕೊಂಡು ಹೋಗಿ ಆ ದಂಪತಿಯನ್ನು ಸಜೀವದಹನ ಮಾಡಿದ್ದಾರೆ.
- Sushma Chakre
- Updated on: Dec 31, 2025
- 10:25 pm
ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ; ರಷ್ಯಾದಿಂದ ಮೊದಲ ವಿಡಿಯೋ ಬಿಡುಗಡೆ
ರಷ್ಯಾದ ನವ್ಗೊರೊಡ್ ಪ್ರದೇಶದಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸಂಬಂಧಿಸಿದ ನಿವಾಸವನ್ನು ಗುರಿಯಾಗಿಸುವ ಸಂಘಟಿತ ಪ್ರಯತ್ನದ ಭಾಗವಾಗಿ ಉಕ್ರೇನ್ ಡ್ರೋನ್ ಅನ್ನು ಹಾರಿಸಿದೆ ಎಂದು ರಷ್ಯಾ ಹೇಳಿಕೊಂಡಿದೆ. ಆದರೆ ಕೈವ್ ಈ ಆರೋಪವನ್ನು ಬಲವಾಗಿ ನಿರಾಕರಿಸಿದೆ. ಇದನ್ನು ಕಟ್ಟುಕಥೆ ಎಂದು ಕರೆದಿದೆ. ಇದರ ನಡುವೆ ರಷ್ಯಾ ಉಕ್ರೇನ್ನ ಡ್ರೋನ್ ದಾಳಿಯ ದೃಶ್ಯಗಳನ್ನು ಬಿಡುಗಡೆ ಮಾಡಿದೆ.
- Sushma Chakre
- Updated on: Dec 31, 2025
- 10:02 pm