ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿಯ ಸಮಯದಲ್ಲಿ ಪ್ರಾಚೀನವಾದ ಶ್ರೀರಾಮನ ವಿಗ್ರಹ ಪತ್ತೆಯಾಗಿದೆ. ರಸ್ತೆ ಕಾಮಗಾರಿಯ ಸಮಯದಲ್ಲಿ ಅಗೆದ ಮಣ್ಣಿನಲ್ಲಿ ಶ್ರೀರಾಮನ ವಿಗ್ರಹ ಪತ್ತೆಯಾಗಿದೆ. ವಿಶಾಖಪಟ್ಟಣದ ಮಧುರವಾಡದಲ್ಲಿ ಪತ್ತೆಯಾದ ಈ ಕಲ್ಲಿನ ವಿಗ್ರಹ ಪ್ರಾಚೀನವಾದುದು ಎಂದು ಸ್ಥಳೀಯರು ನಂಬಿದ್ದರೂ ಈ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪುರಾತತ್ವ ಇಲಾಖೆಯ ಅಧಿಕಾರಿಗಳು ಕ್ಷೇತ್ರಕ್ಕೆ ಇಳಿದಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಶ್ರೀರಾಮನ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿದ್ದಾರೆ.
- Sushma Chakre
- Updated on: Dec 20, 2025
- 10:23 pm
ಊಟಿಯಲ್ಲಿ ಹಿಮಪಾತ; ಪ್ರವಾಸಿಗರನ್ನು ಸೆಳೆಯುತ್ತಿವೆ ಬಿಳಿ ಸೆರಗು ಹೊದ್ದ ಹೂಗಳು
ಊಟಿಯಲ್ಲಿ ಇಂದು ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ತಲುಪಬಹುದು. ಗಾಳಿಯು 40 ಡಿಗ್ರಿಗಳಷ್ಟು ಚಲಿಸಲಿದ್ದು, 2.78ರ ಆಸುಪಾಸಿನಲ್ಲಿ ಬೀಸಲಿದೆ. ಊಟಿಯಲ್ಲಿ ತಾಪಮಾನವು ಭಾನುವಾರದಿಂದ ಶುಕ್ರವಾರದವರೆಗೆ 7 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಹಿಮಪಾತವಾಗಿದ್ದು, ಕನಿಷ್ಠ ತಾಪಮಾನ 0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
- Sushma Chakre
- Updated on: Dec 20, 2025
- 9:57 pm
ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕಾಪ್ರಹಾರ
ಕೇಂದ್ರ ಸರ್ಕಾರ ಹಾಗೂ ಕರ್ನಾಟಕದ ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿರುವ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಸಮರ್ಥ ನಾಯಕ ಎಂದು ಟೀಕಿಸಿದ್ದಾರೆ. ಅಸಮರ್ಥರನ್ನು ಅಸಮರ್ಥ ಎನ್ನದೆ ಜಗದೇಕವೀರ ಎನ್ನಬೇಕೆ? ಎಂದು ಲೇವಡಿಯನ್ನೂ ಮಾಡಿದ್ದಾರೆ. ಬಾಂಗ್ಲಾ ವಲಸಿಗರ ಬಗ್ಗೆ ರಾಜ್ಯ ಸರ್ಕಾರವನ್ನು ಪದೇಪದೇ ಟೀಕಿಸುತ್ತಿರುವುದಕ್ಕೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
- Sushma Chakre
- Updated on: Dec 20, 2025
- 8:49 pm
ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ
ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮಂಡಿಸಿದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಿಗೆ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB-G RAM G) ಮಸೂದೆಯನ್ನು ಸಂಸತ್ತು ಅಂಗೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿ ಸರ್ಕಾರವು ನರೇಗಾ ಮೇಲೆ ಬುಲ್ಡೋಜರ್ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
- Sushma Chakre
- Updated on: Dec 20, 2025
- 7:52 pm
World Meditation Day: ವಿಶ್ವಸಂಸ್ಥೆಯಲ್ಲಿ ವಿಶ್ವ ಧ್ಯಾನ ದಿನದ ಪ್ರಯುಕ್ತ ಜಗತ್ತಿಗೆ ಧ್ಯಾನದ ಮಹತ್ವ ಸಾರಿದ ರವಿಶಂಕರ್ ಗುರೂಜಿ
ಭಾರತ, ಶ್ರೀಲಂಕಾ, ಅಂಡೋರಾ, ಮೆಕ್ಸಿಕೊ, ನೇಪಾಳ ಇತರ ಸದಸ್ಯ ರಾಷ್ಟ್ರಗಳು ಮತ್ತು ವಿಶ್ವಸಂಸ್ಥೆಯ ಖಾಯಂ ಪ್ರತಿನಿಧಿಗಳು, ಪ್ರಾಚೀನ ಪದ್ಧತಿಯಾದ ಧ್ಯಾನವನ್ನು ಆಚರಿಸಲು ಒಗ್ಗೂಡಿದ್ದಾರೆ. ಜಾಗತಿಕವಾಗಿ ಸಾಮಾಜಿಕ, ರಾಜಕೀಯ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುವಲ್ಲಿ ಧ್ಯಾನದ ಅಗತ್ಯ ಮತ್ತು ಪಾತ್ರವನ್ನು ಅವರು ಹಂಚಿಕೊಂಡಿದ್ದಾರೆ. ಆರ್ಟ್ ಆಫ್ ಲಿವಿಂಗ್ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ವಿಶ್ವಸಂಸ್ಥೆಯಲ್ಲಿ ವಿಶ್ವ ಧ್ಯಾನ ದಿನಾಚರಣೆಯ ಅಂಗವಾಗಿ ಪ್ರಾಸ್ತಾವಿಕ ಭಾಷಣ ಮಾಡಿದ್ದಾರೆ.
- Sushma Chakre
- Updated on: Dec 20, 2025
- 6:36 pm
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ
ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸದಾಗಿ ಉದ್ಘಾಟನೆಗೊಂಡ ಟರ್ಮಿನಲ್ ಭಾರತದ ಮೊದಲ ಪ್ರಕೃತಿ ಪ್ರೇರಿತ ವಿಮಾನ ನಿಲ್ದಾಣದ ಟರ್ಮಿನಲ್ ಆಗಿದೆ. ಅಸ್ಸಾಂ ಪ್ರದೇಶದ ನೈಸರ್ಗಿಕ ಭೂದೃಶ್ಯವನ್ನು ಪ್ರತಿಬಿಂಬಿಸುವಂತೆ ವಿನ್ಯಾಸಗೊಳಿಸಲಾದ ಈ ಟರ್ಮಿನಲ್ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಮತ್ತು ಸಂಪರ್ಕವನ್ನು ಸುಧಾರಿಸುತ್ತದೆ. ಹಾಗೇ, ಅಸ್ಸಾಂ ಮತ್ತು ನೆರೆಯ ರಾಜ್ಯಗಳಲ್ಲಿ ಪ್ರವಾಸೋದ್ಯಮ, ವ್ಯಾಪಾರ ಮತ್ತು ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
- Sushma Chakre
- Updated on: Dec 20, 2025
- 5:08 pm
ಮಮತಾ ಬ್ಯಾನರ್ಜಿ ಸರ್ಕಾರ ನುಸುಳುಕೋರರನ್ನು ರಕ್ಷಿಸಲು ಎಸ್ಐಆರ್ ಅನ್ನು ವಿರೋಧಿಸುತ್ತಿದೆ; ಪ್ರಧಾನಿ ಮೋದಿ ಆರೋಪ
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅವಕಾಶ ನೀಡುವಂತೆ ಅವರು ಬಂಗಾಳದ ಜನರಿಗೆ ಮನವಿ ಮಾಡಿದ್ದಾರೆ. ದಟ್ಟವಾದ ಮಂಜಿನಿಂದಾಗಿ ತಾಹೆರ್ಪುರ ರ್ಯಾಲಿಯ ಸ್ಥಳವನ್ನು ತಲುಪಲು ವಿಫಲವಾದ ಕಾರಣದಿಂದಾಗಿ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ವರ್ಚುವಲ್ ಆಗಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಮೋದಿ ಈ ಹೇಳಿಕೆಗಳನ್ನು ನೀಡಿದ್ದಾರೆ. ಇಂದು ಮಧ್ಯಾಹ್ನ ಅವರು ರ್ಯಾಲಿಯ ಸ್ಥಳಕ್ಕೆ ತಲುಪಬೇಕಿತ್ತು. ಆದರೆ ಕೆಟ್ಟ ಹವಾಮಾನದಿಂದಾಗಿ ಅವರ ಹೆಲಿಕಾಪ್ಟರ್ ತಾಹೆರ್ಪುರ ಹೆಲಿಪ್ಯಾಡ್ ಮೇಲೆ ಸ್ವಲ್ಪ ಹೊತ್ತು ಹಾರಾಡುತ್ತಾ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಬೇಕಾಯಿತು.
- Sushma Chakre
- Updated on: Dec 20, 2025
- 4:49 pm
ಬಾಂಗ್ಲಾದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ; ಯೂನಸ್ ಸರ್ಕಾರದಿಂದ 7 ಜನರ ಬಂಧನ
ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಮೇಲೆ ನಡೆದ ಗುಂಪು ಹಲ್ಲೆ ಪ್ರಕರಣದಲ್ಲಿ 7 ಜನರನ್ನು ಬಂಧಿಸಲಾಗಿದೆ. ಬಾಂಗ್ಲಾದೇಶ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಈ ಘೋರ ಅಪರಾಧವನ್ನು ಖಂಡಿಸಿದ್ದಾರೆ. ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಹಿಂದೂ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿದೆ. ಈ ಬಂಧನದ ಸುದ್ದಿಯನ್ನು ದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ದೃಢಪಡಿಸಿದ್ದಾರೆ. ಬಾಂಗ್ಲಾದೇಶದ ಮೈಮೆನ್ಸಿಂಗ್ ಪ್ರದೇಶದಲ್ಲಿ ಧರ್ಮನಿಂದನೆಯ ಆರೋಪದ ಮೇಲೆ ಹಿಂದೂ ವ್ಯಕ್ತಿಯನ್ನು ಗುಂಪು ಗುಂಪಾಗಿ ಹೊಡೆದು ಸಾಯಿಸಲಾಯಿತು.
- Sushma Chakre
- Updated on: Dec 20, 2025
- 3:38 pm
ಬಿಹಾರದ ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್ಗಂಜ್ ಜಿಲ್ಲೆಯ ಥಾವೆ ದೇವಸ್ಥಾನ ಸೇರಿದಂತೆ ಬಿಹಾರದ 2 ಹಿಂದೂ ದೇವಾಲಯಗಳಿಂದ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಹಾಗೂ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 'ಥಾವೆ ವಾಲಿ ಮಾತಾ' ಎಂದು ಕರೆಯಲ್ಪಡುವ ದುರ್ಗಾ ದೇವಿಗೆ ಸಮರ್ಪಿತವಾದ ಥಾವೆ ದೇವಸ್ಥಾನದಿಂದ ಸುಮಾರು 500 ಗ್ರಾಂ ತೂಕದ ವಿಗ್ರಹದ ಚಿನ್ನದ ಕಿರೀಟ, ಹಾರ ಮತ್ತು ಇನ್ನೊಂದು ಆಭರಣದೊಂದಿಗೆ ಇಬ್ಬರು ಮುಸುಕುಧಾರಿಗಳು ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಗಳಲ್ಲಿ ನೋಡಬಹುದು.
- Sushma Chakre
- Updated on: Dec 19, 2025
- 10:42 pm
ಆಂಧ್ರದ ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಆಂಧ್ರಪ್ರದೇಶದ ಶ್ರೀಕಾಳಹಸ್ತಿ ದೇವಸ್ಥಾನಕ್ಕೆ ರಷ್ಯಾದ ಭಕ್ತರು ಸಾಂಪ್ರದಾಯಿಕ ಉಡುಪಿನಲ್ಲಿ ಆಗಮಿಸಿದರು. ಅವರು ರಾಹು-ಕೇತು ಪೂಜೆಯಲ್ಲಿ ಭಾಗವಹಿಸಿದರು. ದೇವಾಲಯದ ಐತಿಹಾಸಿಕ ಶಿಲ್ಪಗಳು ಮತ್ತು ರಚನೆಗಳಿಂದ ತೀವ್ರವಾಗಿ ಪ್ರಭಾವಿತರಾದರು. ದೇವಾಲಯದ ವಿಶಿಷ್ಟ ವೈಶಿಷ್ಟ್ಯಗಳ ಬಗ್ಗೆ ಅರ್ಚಕರಿಂದ ತಿಳಿದುಕೊಂಡಾಗ ದೇವರು ಮತ್ತು ದೇವತೆಯ ಮೇಲಿನ ಅವರ ಭಕ್ತಿ ಮತ್ತಷ್ಟು ಹೆಚ್ಚಾಯಿತು.
- Sushma Chakre
- Updated on: Dec 19, 2025
- 10:18 pm
ನಿಮಗೂ ಗೂಗಲ್, ಯೂಟ್ಯೂಬ್ ಪೇಜ್ ಲೋಡ್ ಆಗುತ್ತಿಲ್ಲವೇ?
ಜಗತ್ತಿನಾದ್ಯಂತ ಸಾವಿರಾರು ಬಳಕೆದಾರರು ಗೂಗಲ್ ಹಾಗೂ ಯೂಟ್ಯೂಬ್ನಲ್ಲಿ ನಿಧಾನಗತಿಯ ಲೋಡಿಂಗ್, ವಿಡಿಯೋ ಪ್ಲೇಬ್ಯಾಕ್ ಸಮಸ್ಯೆಗಳು ಮತ್ತು ಸರ್ವರ್ ಸಂಪರ್ಕ ಸಮಸ್ಯೆಗಳ ಬಗ್ಗೆ ದೂರು ನೀಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೂ ಹ್ಯಾಶ್ಟ್ಯಾಗ್ ಟ್ರೆಂಡಿಂಗ್ನಲ್ಲಿದೆ. ಹಾಗಾದರೆ, ಈ ಸಮಸ್ಯೆ ಯಾವಾಗ ಸರಿಯಾಗುತ್ತದೆ, ಈ ಸಮಸ್ಯೆಗೆ ಕಾರಣವೇನೆಂಬುದರ ಬಗ್ಗೆ ಗೂಗಲ್ನಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
- Sushma Chakre
- Updated on: Dec 19, 2025
- 9:41 pm
ಪಾಂಡವಪುರದಲ್ಲಿ ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲನ್ನು ಇಳಿಯುವ ಭರದಲ್ಲಿ ರೈಲು ನಿಲ್ಲುವ ಮೊದಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಹಾರಿಬಿಡುತ್ತಾರೆ. ಇದರಿಂದ ಕೆಲವೊಮ್ಮೆ ಕೆಲವರು ರೈಲಿನಡಿ ಸಿಲುಕಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನು ಕೆಲವು ಜನರು ಕಾಲು ಮುರಿದುಕೊಂಡಿದ್ದಾರೆ. ಪಾಂಡವಪುರದಲ್ಲಿ ಡಿಸೆಂಬರ್ 13ರಂದು ಪಾಂಡವಪುರದ ಸ್ಟೇಷನ್ ಮಾಸ್ಟರ್ ಅಭಿಜಿತ್ ಸಿಂಗ್ ಅವರು ಚಲಿಸುವ ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕರೊಬ್ಬರನ್ನು ರಕ್ಷಿಸುವ ಮೂಲಕ ದಿಟ್ಟತನ ತೋರಿದ್ದಾರೆ. ರೈಲ್ವೆ ಇಲಾಖೆ ಸಿಸಿಟಿವಿಯಲ್ಲಿ ಸೆರೆಯಾದ ಈ ವಿಡಿಯೋವನ್ನು ಎಕ್ಸ್ನಲ್ಲಿ ಹಂಚಿಕೊಂಡಿದೆ.
- Sushma Chakre
- Updated on: Dec 19, 2025
- 8:45 pm