AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ

Senior Sub-Editor - TV9 Kannada

sushma.chakre@tv9.com

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow On:
‘ಪ್ರಜಾಪ್ರಭುತ್ವದ ಕೊಲೆ’; ನಂದಿಗ್ರಾಮದ ಅಭ್ಯರ್ಥಿ ಬಂಧನಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

‘ಪ್ರಜಾಪ್ರಭುತ್ವದ ಕೊಲೆ’; ನಂದಿಗ್ರಾಮದ ಅಭ್ಯರ್ಥಿ ಬಂಧನಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಪಶ್ಚಿಮ ಬಂಗಾಳದ ಹೈಪ್ರೊಫೈಲ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆ ಅಖಾಡದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರ ದಿಢೀರ್ ಬಂಧನವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿಯ ಈ ನಡೆಯನ್ನು "ರಾಜಕೀಯ ಸೇಡಿನ ಕೃತ್ಯ ಮತ್ತು ಪ್ರಜಾಪ್ರಭುತ್ವದ ಕೊಲೆ" ಎಂದು ಟೀಕಿಸಿದ್ದಾರೆ. ಇಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಬಣವು ನಂದಿಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರಿಗೆ ಪೂರ್ಣ ಬೆಂಬಲ ಘೋಷಿಸಿತ್ತು. ಆದರೆ, ಈ ಪ್ರಕಟಣೆ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಮಿಲನ್ ಪ್ರಧಾನ್ ಅವರನ್ನು ಬಂಧಿಸಿದ್ದಾರೆ.

‘ಕಡಲ ನಿಯಮಗಳ ಉಲ್ಲಂಘನೆ’; ಸಮುದ್ರದಲ್ಲಿ ಯುದ್ಧನೌಕೆಯ ಡಿಕ್ಕಿಗೆ ಪಾಕಿಸ್ತಾನಕ್ಕೆ ಭಾರತ ತರಾಟೆ

‘ಕಡಲ ನಿಯಮಗಳ ಉಲ್ಲಂಘನೆ’; ಸಮುದ್ರದಲ್ಲಿ ಯುದ್ಧನೌಕೆಯ ಡಿಕ್ಕಿಗೆ ಪಾಕಿಸ್ತಾನಕ್ಕೆ ಭಾರತ ತರಾಟೆ

ಅರೇಬಿಯನ್ ಸಮುದ್ರದಲ್ಲಿ ಇತ್ತೀಚೆಗೆ ಭಾರತೀಯ ನೌಕಾಪಡೆಯ ಯುದ್ಧನೌಕೆ ಮತ್ತು ಪಾಕಿಸ್ತಾನಿ ನೌಕೆಯ ನಡುವೆ ಸಂಭವಿಸಿದ ಢಿಕ್ಕಿ ಘಟನೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಆರೋಪಗಳನ್ನು ಭಾರತ ಇಂದು ತೀವ್ರವಾಗಿ ಖಂಡಿಸಿದೆ. ಬುಧವಾರವೇ ಭಾರತದ ವಿದೇಶಾಂಗ ಸಚಿವಾಲಯವು ನವದೆಹಲಿಯಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿಯ ಪ್ರಭಾರಿ ಅವರನ್ನು ಕರೆಸಿ ತೀವ್ರ ಪ್ರತಿಭಟನೆ ದಾಖಲಿಸಿತ್ತು. ಇಂದು ಮಾಧ್ಯಮ ಗೋಷ್ಠಿಯಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಪಾಕಿಸ್ತಾನದ ಸುಳ್ಳು ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ; ‘ಪ್ರಾಜೆಕ್ಟ್ ಚೀತಾ’ ಯೋಜನೆಯ ಹೊಸ ಮೈಲಿಗಲ್ಲು

ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ; ‘ಪ್ರಾಜೆಕ್ಟ್ ಚೀತಾ’ ಯೋಜನೆಯ ಹೊಸ ಮೈಲಿಗಲ್ಲು

ಭಾರತಕ್ಕೆ ಚಿರತೆಗಳನ್ನು ಮರುಪರಿಚಯಿಸುವ ಯೋಜನೆಯಡಿ, ವಿದೇಶದಿಂದ ತರಲಾದ ಚಿರತೆಗಳು ಭಾರತದಲ್ಲಿ ಮರಿಗಳಿಗೆ ಜನ್ಮ ನೀಡಿದ್ದವು. ಆದರೆ ಈಗ ಭಾರತದಲ್ಲೇ ಹುಟ್ಟಿದ ಚಿರತೆಯು 4 ಆರೋಗ್ಯಕರ ಮರಿಗಳಿಗೆ ಜನ್ಮ ನೀಡುವ ಮೂಲಕ ಭಾರತೀಯ ವಾತಾವರಣಕ್ಕೆ ಚಿರತೆಗಳು ಸಂಪೂರ್ಣವಾಗಿ ಒಗ್ಗಿಕೊಂಡಿವೆ ಎಂಬುದನ್ನು ಸಾಬೀತುಪಡಿಸಿದೆ. ಈ 4 ಹೊಸ ಮರಿಗಳ ಜನನದೊಂದಿಗೆ ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಗಳ ಒಟ್ಟು ಸಂಖ್ಯೆ ಗಮನಾರ್ಹವಾಗಿ ಏರಿಕೆಯಾಗಿದ್ದು, ಭಾರತದಲ್ಲಿ ಚಿರತೆಗಳ ಸಂತತಿ ಬೆಳೆಸುವ ಕೇಂದ್ರ ಸರ್ಕಾರದ ಕನಸಿಗೆ ಭಾರಿ ಬಲ ಬಂದಿದೆ.

ಪ್ರಧಾನಿ ಮೋದಿ, ಯುಎಇ ಅಧ್ಯಕ್ಷರ ನಡುವೆ ಮಹತ್ವದ ದೂರವಾಣಿ ಸಂಭಾಷಣೆ; ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಚರ್ಚೆ

ಪ್ರಧಾನಿ ಮೋದಿ, ಯುಎಇ ಅಧ್ಯಕ್ಷರ ನಡುವೆ ಮಹತ್ವದ ದೂರವಾಣಿ ಸಂಭಾಷಣೆ; ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಚರ್ಚೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಯುಎಇ ಅಧ್ಯಕ್ಷ ಶೇಕ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ಇಂದು ದೂರವಾಣಿ ಕರೆ ಮೂಲಕ ಸಂಭಾಷಣೆ ನಡೆಸಿದರು. ಈ ವೇಳೆ ಪಶ್ಚಿಮ ಏಷ್ಯಾದಲ್ಲಿ ಪ್ರಸ್ತುತ ಎದುರಾಗಿರುವ ಬಿಕ್ಕಟ್ಟು, ತೈಲ ಭದ್ರತೆ ಹಾಗೂ ಭಾರತ-ಯುಎಇ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಉಭಯ ನಾಯಕರು ವಿಚಾರ ವಿನಿಮಯ ಮಾಡಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಮರುದಿನವೇ ಈ ಕರೆ ನಡೆದಿದ್ದು, ಯುಎಇ ಅಧ್ಯಕ್ಷರು ಪ್ರಧಾನಿ ಮೋದಿಯವರಿಗೆ ಜನ್ಮದಿನದ ಹೃದಯಪೂರ್ವಕ ಶುಭಾಶಯ ಕೋರಿದರು.

ನಂದಿಗ್ರಾಮ ಉಪಚುನಾವಣೆ; ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಬಂಧನ!

ನಂದಿಗ್ರಾಮ ಉಪಚುನಾವಣೆ; ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಬಂಧನ!

ಪಶ್ಚಿಮ ಬಂಗಾಳದ ಹೈಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮದ ಉಪಚುನಾವಣೆ ಕಣದಲ್ಲಿ ಇಂದು ಒಂದರ ಮೇಲೊಂದರಂತೆ ಅಚ್ಚರಿಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಟಿಎಂಸಿ ಮಮತಾ ಬ್ಯಾನರ್ಜಿ ಬಣದ ಅಭ್ಯರ್ಥಿ ಸಂಚಿತಾ ಪ್ರಧಾನ್ ಡೇ ತಮ್ಮ ನಾಮಪತ್ರ ಹಿಂಪಡೆದ ಬೆನ್ನಲ್ಲೇ, 'ಇಂಡಿಯಾ' ಮೈತ್ರಿಕೂಟದ ಭಾಗವಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಿಸಿದ್ದರು. ಆದರೆ ಈ ಬೆಂಬಲ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದು ತೀವ್ರ ಚರ್ಚೆಗೆ ಕಾರಣವಾಗಿದ್ದು, ಈ ಬೆಳವಣಿಗೆಯ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ವಿಪಕ್ಷಗಳು ಆರೋಪಿಸಿವೆ.

ಜಪಾನ್‌ ಸಂಸ್ಥೆ ಜೊತೆ ಐತಿಹಾಸಿಕ ಒಪ್ಪಂದ; ಕೆಲವೇ ತಿಂಗಳಲ್ಲಿ ಭಾರತಕ್ಕೆ ಲಭ್ಯವಾಗಲಿದೆ ಮೊದಲ ಡೆಂಗ್ಯೂ ಲಸಿಕೆ

ಜಪಾನ್‌ ಸಂಸ್ಥೆ ಜೊತೆ ಐತಿಹಾಸಿಕ ಒಪ್ಪಂದ; ಕೆಲವೇ ತಿಂಗಳಲ್ಲಿ ಭಾರತಕ್ಕೆ ಲಭ್ಯವಾಗಲಿದೆ ಮೊದಲ ಡೆಂಗ್ಯೂ ಲಸಿಕೆ

ಡೆಂಗ್ಯೂ ಮಹಾಮಾರಿಯ ವಿರುದ್ಧದ ಹೋರಾಟದಲ್ಲಿ ಭಾರತ ದೊಡ್ಡ ಮೈಲಿಗಲ್ಲು ಸಾಧಿಸಿದ್ದು, ದೇಶದ ಮೊದಲ ಡೆಂಗ್ಯೂ ಲಸಿಕೆ 'ಕ್ಯೂಡೆಂಗಾ' ಮುಂದಿನ ವರ್ಷ ಅಂದರೆ 2027ರ ಮೊದಲಾರ್ಧದಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಜಪಾನ್‌ನ ಪ್ರಸಿದ್ಧ 'ಟಕೆಡಾ ಫಾರ್ಮಾಸ್ಯುಟಿಕಲ್ಸ್' ಸಂಸ್ಥೆಯೊಂದಿಗೆ ಭಾರತದ 'ಡಾ. ರೆಡ್ಡೀಸ್ ಲ್ಯಾಬೊರೇಟರೀಸ್' ಮಾಡಿಕೊಂಡಿರುವ ಐತಿಹಾಸಿಕ ಒಪ್ಪಂದದ ಭಾಗವಾಗಿ ಈ ಲಸಿಕೆಯನ್ನು ದೇಶದಾದ್ಯಂತ ವಿತರಿಸಲಾಗುವುದು. ಕಳೆದ ಜುಲೈನಲ್ಲಿ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರದಿಂದ ಮಾರುಕಟ್ಟೆ ಮಾನ್ಯತೆ ಪಡೆದಿದ್ದ ಈ ಲಸಿಕೆ ಡೆಂಗ್ಯೂ ತಡೆಗಟ್ಟುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಸಾಬೀತಾಗಿದೆ.

‘ಹೆದರಿ ತಲೆಬಾಗಲ್ಲ, ತಿರುಗಿಬೀಳುತ್ತೇವೆ’; ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

‘ಹೆದರಿ ತಲೆಬಾಗಲ್ಲ, ತಿರುಗಿಬೀಳುತ್ತೇವೆ’; ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಟಿಎಂಸಿ ಪಕ್ಷದ ಅಭ್ಯರ್ಥಿ ಚುನಾವಣಾ ಅಖಾಡದಿಂದ ಹಿಂದೆ ಸರಿದ ಕಾರಣದಿಂದ ಮಮತಾ ಬ್ಯಾನರ್ಜಿ ನಂದಿಗ್ರಾಮ ಉಪಚುನಾವಣೆಯಲ್ಲಿ 'ಇಂಡಿಯಾ' ಒಕ್ಕೂಟದ ಭಾಗವಾಗಿರುವ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರಿಗೆ ಬೆಂಬಲ ನೀಡುವುದಾಗಿ ತೀರ್ಮಾನ ಕೈಗೊಂಡಿದ್ದಾರೆ. ಈಗಾಗಲೇ ನಾಮಪತ್ರ ಸಲ್ಲಿಸಲು ಗಡುವು ಮುಗಿದಿರುವುದರಿಂದ ಮಮತಾ ಬ್ಯಾನರ್ಜಿ ಈ ತಕ್ಷಣದ ನಿರ್ಧಾರ ತೆಗೆದುಕೊಂಡಿದ್ದಾರೆ. ಹೀಗಾಗಿ, ಅಕ್ಟೋಬರ್ 6ರಂದು ನಡೆಯಲಿರುವ ಈ ಉಪಚುನಾವಣೆಯು ಈಗ ಬಿಜೆಪಿ ಹಾಗೂ ಕಾಂಗ್ರೆಸ್-ಮಮತಾ ಬ್ಯಾನರ್ಜಿ ಪಕ್ಷದ ಮೈತ್ರಿಕೂಟದ ನಡುವಿನ ನೇರ ಕದನವಾಗಿ ಮಾರ್ಪಟ್ಟಿದೆ.

ನಂದಿಗ್ರಾಮ ಉಪಚುನಾವಣೆಗೆ ಹೊಸ ತಿರುವು; ಸುವೇಂದು ಭೇಟಿ ಬೆನ್ನಲ್ಲೇ ನಾಮಪತ್ರ ಹಿಂಪಡೆದ ಮಮತಾ ಬಣದ ಅಭ್ಯರ್ಥಿ

ನಂದಿಗ್ರಾಮ ಉಪಚುನಾವಣೆಗೆ ಹೊಸ ತಿರುವು; ಸುವೇಂದು ಭೇಟಿ ಬೆನ್ನಲ್ಲೇ ನಾಮಪತ್ರ ಹಿಂಪಡೆದ ಮಮತಾ ಬಣದ ಅಭ್ಯರ್ಥಿ

ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಭಾರಿ ರಾಜಕೀಯ ಕುತೂಹಲಕ್ಕೆ ಕಾರಣವಾಗುತ್ತಿದೆ. ಮಾಜಿ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ 'ಅಖಿಲ ಭಾರತ ತೃಣಮೂಲ ಕಾಂಗ್ರೆಸ್' (ಮಮತಾ ಬಣದ ಹೊಸ ಪಕ್ಷದ ಹೆಸರು) ಅಭ್ಯರ್ಥಿ ಸಂಚಿತಾ ಪ್ರಧಾನ್ ಡೇ ತಮ್ಮ ನಾಮಪತ್ರ ಹಿಂಪಡೆದಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮೂಲಗಳ ಪ್ರಕಾರ, ಸಂಚಿತಾ ಡೇ ನಿನ್ನೆ ಸಂಜೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಈ ರಹಸ್ಯ ಭೇಟಿಯ ಬೆನ್ನಲ್ಲೇ ಅವರು ತಮ್ಮ ಅಭ್ಯರ್ಥಿತ್ವವನ್ನು ವಾಪಸ್ ಪಡೆದಿದ್ದಾರೆ.

ಪಾಕಿಸ್ತಾನದ ಮಸೀದಿ ಬಳಿ ಭೀಕರ ಸ್ಫೋಟ; 15 ಜನ ಸಾವು, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಪಾಕಿಸ್ತಾನದ ಮಸೀದಿ ಬಳಿ ಭೀಕರ ಸ್ಫೋಟ; 15 ಜನ ಸಾವು, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕೋಹಾತ್‌ನಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ಹಳೆಯ ಪೊಲೀಸ್ ಲೈನ್ಸ್ ಬಳಿ ಭೀಕರ ಸ್ಫೋಟ ಸಂಭವಿಸಿದ್ದು, 15 ಜನರು ಮೃತಪಟ್ಟಿದ್ದಾರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಸ್ಫೋಟಕಗಳನ್ನು ತುಂಬಿದ ವಾಹನವನ್ನು ಹಳೆಯ ಪೊಲೀಸ್ ಲೈನ್ಸ್‌ಗೆ ಡಿಕ್ಕಿ ಹೊಡೆಸಲಾಗಿದೆ ಎಂದು ಪ್ರಾಥಮಿಕ ತನಿಖೆಗಳು ತಿಳಿಸಿವೆ. ಆದರೆ ಈ ಸ್ಫೋಟದ ಕಾರಣ ಮತ್ತು ದುಷ್ಕರ್ಮಿಗಳ ಗುರುತು ಇನ್ನೂ ತಿಳಿದುಬಂದಿಲ್ಲ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಎನ್‌ಟಿಎ ಕಚೇರಿಗೆ ಭೇಟಿ ನೀಡುವ ಸುಳಿವು ನೀಡಿದ ಸುಪ್ರೀಂ ಕೋರ್ಟ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಎನ್‌ಟಿಎ ಕಚೇರಿಗೆ ಭೇಟಿ ನೀಡುವ ಸುಳಿವು ನೀಡಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್​ಟಿಎ) ಪರೀಕ್ಷಾ ಪದ್ಧತಿಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆ ತರುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಎನ್‌ಟಿಎ ಸುಧಾರಣೆಗಳಿಗೆ ಸಂಬಂಧಿಸಿದ ತನ್ನ ಅಫಿಡವಿಟ್‌ ಅನ್ನು ತಕ್ಷಣವೇ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸುವಂತೆ ಕೋರ್ಟ್ ಸೂಚಿಸಿದೆ. ಅಲ್ಲದೆ, ಈಗಾಗಲೇ ರಚಿಸಲಾಗಿರುವ ನಿಲೇಕಣಿ ಸಮಿತಿ ಮುಂದಿನ 3 ವಾರಗಳ ಒಳಗಾಗಿ ಪ್ರಗತಿ ವರದಿಯ ಪ್ರಮಾಣಪತ್ರವನ್ನು ಸಲ್ಲಿಸಬೇಕೆಂದು ನ್ಯಾಯಪೀಠ ನಿರ್ದೇಶಿಸಿದೆ. ಸುಧಾರಣೆಗಳು ಕೇವಲ ಸಮಿತಿಯ ವರದಿಗಳಿಗೆ ಸೀಮಿತವಾಗದೆ, ಹಂತ-ಹಂತವಾಗಿ ನೈಜವಾಗಿ ಅನುಷ್ಠಾನಕ್ಕೆ ಬರಬೇಕು ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾಗಿ ಹೇಳಿದೆ.

ಕಾಲ್ಸಿ ದಡದಲ್ಲಿ 2,100 ದೀಪಗಳ ಬೆಳಕು; ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ

ಕಾಲ್ಸಿ ದಡದಲ್ಲಿ 2,100 ದೀಪಗಳ ಬೆಳಕು; ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ

ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಹರಿಪುರ್ ಕಾಲ್ಸಿಯಲ್ಲಿ ಪವಿತ್ರ ಯಮುನಾ ನದಿ ದಂಡೆಯ ಮೇಲೆ ಪೂಜ್ಯ ಸಾಧು-ಸಂತರು, ಸಾವಿರಾರು ಭಕ್ತರು ಮತ್ತು ಸ್ಥಳೀಯ ನಾಗರಿಕರೊಂದಿಗೆಗೂಡಿ ಯಮುನಾ ಆರತಿ ನೆರವೇರಿಸಿದರು. ದೇಶಾದ್ಯಂತ ಹಮ್ಮಿಕೊಳ್ಳಲಾಗಿರುವ 'ಆಶೀರ್ವಾದ ಕಾ ದಿಯಾ' ಕಾರ್ಯಕ್ರಮದ ಭಾಗವಾಗಿ, ಯಮುನಾ ನದಿಯ ನೂತನವಾಗಿ ನಿರ್ಮಿಸಲಾದ ಘಾಟ್‌ಗಳನ್ನು ಒಟ್ಟು 2,100 ಮಣ್ಣಿನ ದೀಪಗಳಿಂದ ಬೆಳಗಿಸಲಾಯಿತು.

ಶಿಪ್ರಾ ನದಿ ದಂಡೆಯಲ್ಲಿ ಲಕ್ಷಾಂತರ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃಹತ್ ಕಲಾಕೃತಿ!

ಶಿಪ್ರಾ ನದಿ ದಂಡೆಯಲ್ಲಿ ಲಕ್ಷಾಂತರ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃಹತ್ ಕಲಾಕೃತಿ!

ನರೇಂದ್ರ ಮೋದಿ ಅವರ 76ನೇ ಜನ್ಮದಿನ ಹಾಗೂ ಅವರ ಸಾರ್ವಜನಿಕ ಜೀವನದ 25ನೇ ವರ್ಷದ ನೆನಪಿಗಾಗಿ ಉಜ್ಜಯಿನಿಯ ಶಿಪ್ರಾ ನದಿಯ ರಾಮ್ ಘಾಟ್ ಪ್ರದೇಶದಲ್ಲಿ ಲಕ್ಷಾಂತರ ದೀಪಗಳನ್ನು ಬಳಸಿ ಪ್ರಧಾನಿ ಮೋದಿಯವರ ಬೃಹತ್ ಮುಖಚಿತ್ರ ಹಾಗೂ ವಿಶೇಷ ಕಲಾಕೃತಿಯನ್ನು ರಚಿಸಲಾಗಿದೆ. 'ಸೇವಾ ಸಂಕಲ್ಪ ಅಭಿಯಾನ'ದ ಭಾಗವಾಗಿ ಆಯೋಜಿಸಲಾಗಿದ್ದ ಈ ದೀಪೋತ್ಸವದಲ್ಲಿ, ಕಲಾ ವಿದ್ಯಾರ್ಥಿಗಳು ಮತ್ತು ಸ್ವಯಂಸೇವಕರು ಜಂಟಿಯಾಗಿ ಶಿಪ್ರಾ ನದಿಯ ಘಾಟ್‌ಗಳ ಮೇಲೆ ಸಾವಿರಾರು ಮಣ್ಣಿನ ದೀಪಗಳನ್ನು ನಿರ್ದಿಷ್ಟ ಶೈಲಿಯಲ್ಲಿ ಜೋಡಿಸಿ ಪ್ರಧಾನಿ ಮೋದಿಯವರ ಆಕರ್ಷಕ ಕಲಾಕೃತಿಯನ್ನು ಬಿಡಿಸಿದ್ದಾರೆ.

ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!