30,000 ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನದ ಪೈಲಟ್ಗೆ ಹೃದಯಾಘಾತ; ಪ್ರಯಾಣಿಕರ ಕತೆ ಏನಾಯ್ತು?
ಜೆಟ್2 ವಿಮಾನದ ಪೈಲಟ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ. LS1266 ವಿಮಾನವು ಟೆನೆರೈಫ್ನಿಂದ ಬರ್ಮಿಂಗ್ಹ್ಯಾಮ್ಗೆ ಪ್ರಯಾಣಿಸುತ್ತಿದ್ದಾಗ 220 ಪ್ರಯಾಣಿಕರಿದ್ದ ವಿಮಾನ ಓಲಾಡಲಾರಂಭಿಸಿತು. ಈ ವೇಳೆ ಸ್ಟೀವಾರ್ಡೆಸ್ಗಳು ಕಣ್ಣೀರು ಸುರಿಸುತ್ತಾ ಓಡುತ್ತಿರುವುದು ಕಂಡುಬಂದಿತು. ಯಾವುದಾದರೂ ಪ್ರಯಾಣಿಕರು ಹೃದಯಕ್ಕೆ ಸಂಬಂಧಿಸಿದ ಪ್ರಥಮ ಚಿಕಿತ್ಸೆ ವೈದ್ಯಕೀಯ ತರಬೇತಿ ಪಡೆದಿದ್ದಾರೆಯೇ? ಎಂದು ಮೈಕ್ನಲ್ಲಿ ಕೇಳಲಾಯಿತು. ಎಂದು ಕೇಳುವುದು ಕೇಳಿಸಿತು. ಆಮೇಲೇನಾಯ್ತು?
- Sushma Chakre
- Updated on: May 24, 2026
- 6:19 pm
ಬೆನ್ನಿಗೆ ಚೂರಿ ಹಾಕಿದವರನ್ನು ಮತ್ತೆ ನಂಬುವುದಿಲ್ಲ; ಕಾಂಗ್ರೆಸ್ ವಿರುದ್ಧ ಉದಯನಿಧಿ ಸ್ಟಾಲಿನ್ ಆಕ್ರೋಶ
ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ತಮಿಳುನಾಡಿನಲ್ಲಿ ಅಧಿಕಾರಕ್ಕಾಗಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಜೊತೆ ಕೈಜೋಡಿಸಿದ ನಂತರ, ತಮ್ಮ ಪಕ್ಷವನ್ನು ಕಾಂಗ್ರೆಸ್ ನಮ್ಮ ಬೆನ್ನಿಗೆ ಇರಿದಿದೆ ಎಂದು ಡಿಎಂಕೆ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಇದಲ್ಲದೆ, ತಮ್ಮ ಪಕ್ಷವು ಮತ್ತೆ ಎಂದಿಗೂ ಕಾಂಗ್ರೆಸ್ ಅನ್ನು ನಂಬುವುದಿಲ್ಲ ಎಂದು ಅವರು ಹೇಳಿದ್ದಾರೆ. ಚೆನ್ನೈನಲ್ಲಿ ನಡೆದ ಡಿಎಂಕೆ ಯುವ ಘಟಕದ ಸಭೆಯಲ್ಲಿ ಉದಯನಿಧಿ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಮತ್ತು ಡಿಎಂಕೆ 2026 ರ ತಮಿಳುನಾಡು ಚುನಾವಣೆಯಲ್ಲಿ ಚುನಾವಣಾ ಪೂರ್ವ ಮೈತ್ರಿಯಲ್ಲಿ ಸ್ಪರ್ಧಿಸಿದವು. ಡಿಎಂಕೆ 59 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 5 ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿತು. ಫಲಿತಾಂಶಗಳು ಪ್ರಕಟವಾದ ನಂತರ ಟಿವಿಕೆ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತು.
- Sushma Chakre
- Updated on: May 24, 2026
- 5:54 pm
ಪೆನ್ಷನ್ ಹಣಕ್ಕಾಗಿ 90 ವರ್ಷದ ಅತ್ತೆಯನ್ನು ಎತ್ತಿಕೊಂಡು 9 ಕಿ.ಮೀ ನಡೆದ ಬುಡಕಟ್ಟು ಮಹಿಳೆ
ಛತ್ತೀಸ್ಗಢದ ಮಹಿಳೆಯೊಬ್ಬರು ಪಿಂಚಣಿಗಾಗಿ 90 ವರ್ಷದ ಅತ್ತೆಯನ್ನು ಕಾಡಿನಲ್ಲಿ 9 ಕಿ.ಮೀ. ಹೊತ್ತುಕೊಂಡು ಹೋಗಿದ್ದಾರೆ. ಸುಖ್ಮಾನಿಯಾ ಬಾಯಿ ಎಂಬ ಮಹಿಳೆ ಬ್ಯಾಂಕಿನಿಂದ ಪಿಂಚಣಿ ಹಣ ಪಡೆಯಲು ತನ್ನ ಅತ್ತೆಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಸುಮಾರು 9 ಕಿಲೋಮೀಟರ್ ನಡೆದಿದ್ದಾರೆ. ಆಕೆ ಇದೇ ರೀತಿ ಕೆಲವು ತಿಂಗಳಿನಿಂದ ತನ್ನ ಅತ್ತೆಯನ್ನು ಎತ್ತಿಕೊಂಡು ಬ್ಯಾಂಕ್ಗೆ ನಡೆಯುತ್ತಿದ್ದಾರೆ. ಪಿಂಚಣಿ ನಿಯಮಗಳ ಪ್ರಕಾರ ಬ್ಯಾಂಕ್ ಫಲಾನುಭವಿಗೆ ಪಿಂಚಣಿ ಪಾವತಿಸುವ ಮೊದಲು ಫಲಾನುಭವಿಗಳು ಗುರುತಿನ ಪರಿಶೀಲನೆಗಾಗಿ ಬ್ಯಾಂಕಿನಲ್ಲಿ ದೈಹಿಕವಾಗಿ ಹಾಜರಿರಬೇಕು.
- Sushma Chakre
- Updated on: May 24, 2026
- 3:47 pm
ಅಮೆರಿಕದ ವೀಸಾ ಸಮಸ್ಯೆ ಬಗ್ಗೆ ಸಚಿವ ಜೈಶಂಕರ್ ಕಳವಳ; ಭಾರತವನ್ನು ಟಾರ್ಗೆಟ್ ಮಾಡಿಲ್ಲ ಎಂದ ರೂಬಿಯೊ
ಭಾರತದ ಸಚಿವ ಜೈಶಂಕರ್ ಮತ್ತು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ದೆಹಲಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿದ್ದಾರೆ. ಈ ಭೇಟಿಯ ವೇಳೆ ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಭದ್ರತೆ, ಹಡಗು ಸಂಚಾರದ ರಕ್ಷಣೆ ಮತ್ತು ರಕ್ಷಣಾ ತಂತ್ರಜ್ಞಾನ ಸಹಕಾರದ ಬಗ್ಗೆ ಮಾತುಕತೆ ನಡೆಸಲಾಯಿತು. ಇದಕ್ಕೂ ಮುನ್ನ ಪ್ರವಾಸದ ಮೊದಲ ದಿನ ಮಾರ್ಕೊ ರೂಬಿಯೋ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
- Sushma Chakre
- Updated on: May 24, 2026
- 2:41 pm
ಪಾಕಿಸ್ತಾನದ ಸೈನಿಕರನ್ನು ಕರೆದೊಯ್ಯುತ್ತಿದ್ದ ರೈಲಿನ ಮೇಲೆ ಆತ್ಮಾಹುತಿ ಬಾಂಬ್ ದಾಳಿ; 24 ಜನ ಸಾವು, 70 ಮಂದಿಗೆ ಗಾಯ
ಪಾಕಿಸ್ತಾನದ ಕ್ವೆಟ್ಟಾದಲ್ಲಿನ ಚಮನ್ ಫಾಟಕ್ ಬಳಿ ಕ್ಯಾಂಟ್ ಕಡೆಗೆ ಹೋಗುತ್ತಿದ್ದ ಪ್ರಯಾಣಿಕ ರೈಲಿನ ಮೇಲೆ ಆತ್ಮಾಹುತಿ ದಾಳಿ ನಡೆಸಲಾಗಿದೆ. ಇದರಿಂದಾಗಿ 24 ಜನ ಸಾವನ್ನಪ್ಪಿದ್ದಾರೆ ಮತ್ತು 70 ಮಂದಿ ಗಾಯಗೊಂಡಿದ್ದಾರೆ. ಈ ವೇಳೆ ರೈಲು ಹಳಿ ತಪ್ಪಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಈ ಸ್ಥಳದಲ್ಲಿ ಗುಂಡಿನ ಚಕಮಕಿಯೂ ಕೇಳಿಬಂದಿದೆ. ತಕ್ಷಣ ಆಂಬ್ಯುಲೆನ್ಸ್ಗಳು ಮತ್ತು ಭದ್ರತಾ ಪಡೆಗಳು ಸ್ಥಳಕ್ಕೆ ತಲುಪಿವೆ. ಈ ದಾಳಿಯ ಹೊಣೆಯನ್ನು ನಿಷೇಧಿತ ಉಗ್ರಗಾಮಿ ಸಂಘಟನೆಯಾದ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ಹೊತ್ತುಕೊಂಡಿದೆ.
- Sushma Chakre
- Updated on: May 24, 2026
- 2:06 pm
ಹಾರ್ಮುಜ್ ಜಲಸಂಧಿ ಮಾರ್ಗ ತೆರೆಯುವ ಸುಳಿವು ನೀಡಿದ ಟ್ರಂಪ್
ಜಾಗತಿಕ ನಾಯಕರೊಂದಿಗೆ ಉನ್ನತ ಮಟ್ಟದ ಮಾತುಕತೆಈ ಒಪ್ಪಂದವನ್ನು ಅಂತಿಮಗೊಳಿಸುವ ಮುನ್ನ ಟ್ರಂಪ್ ಅವರು ಮಧ್ಯಪ್ರಾಚ್ಯದ ಪ್ರಮುಖ ರಾಷ್ಟ್ರಗಳ ನಾಯಕರೊಂದಿಗೆ ಸುದೀರ್ಘ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಸೌದಿ ಅರೇಬಿಯಾ, ಯುಎಇ (UAE), ಕತಾರ್, ಈಜಿಪ್ಟ್, ಜೋರ್ಡಾನ್, ಬಹ್ರೇನ್, ಟರ್ಕಿ ಮತ್ತು ಈ ಒಪ್ಪಂದಕ್ಕೆ ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನದ ನಾಯಕರೊಂದಿಗೆ ಅವರು ಚರ್ಚಿಸಿದ್ದಾರೆ. ಇದಲ್ಲದೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೂ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ಅದು ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.
- Sushma Chakre
- Updated on: May 24, 2026
- 12:39 pm
ಸಂಸ್ಕರಿತ ಯುರೇನಿಯಂ ಬಿಟ್ಟುಕೊಡಲು ಇರಾನ್ ಒಪ್ಪಿಗೆ; ಅಮೆರಿಕದ ಹೊಸ ಒಪ್ಪಂದದಲ್ಲೇನಿದೆ?
ಇರಾನ್ ಜೊತೆ ಕದನವಿರಾಮ ಮಾಡಿಕೊಳ್ಳಲು ಇರಾನ್ನಲ್ಲಿನ ಯುರೇನಿಯಂ ಸಂಗ್ರಹವನ್ನು ದೇಶದಿಂದ ಹೊರಗೆ ಕಳುಹಿಸಬೇಕು ಎಂದು ಅಮೆರಿಕ ಷರತ್ತು ವಿಧಿಸಿತ್ತು. ಆದರೆ, ಇದಕ್ಕೆ ಇರಾನ್ ಸುತಾರಾಂ ಒಪ್ಪಿರಲಿಲ್ಲ. ಆದರೆ, ಇದೀಗ ಅಮೆರಿಕದ ಪ್ರಸ್ತಾವಿತ ಶಾಂತಿ ಒಪ್ಪಂದದ ಭಾಗವಾಗಿ ಸಂಸ್ಕರಿತ ಯುರೇನಿಯಂ ಅನ್ನು ಬಿಟ್ಟುಕೊಡಲು ಇರಾನ್ ಸಿದ್ಧವಾಗಿರುವುದಾಗಿ ಘೋಷಿಸಿದೆ. ಯುಎಸ್ ಜೊತೆಗಿನ ಹೊಸ ಒಪ್ಪಂದದ ಭಾಗವಾಗಿ ಇರಾನ್ ಯುರೇನಿಯಂ ದಾಸ್ತಾನು ಬಿಟ್ಟುಕೊಡಲು ಒಪ್ಪಿಕೊಂಡಿದೆ. ಇದು ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಕೊನೆಗೊಳ್ಳುವ ಪ್ರಮುಖ ಮುನ್ಸೂಚನೆಯಾಗಿದೆ.
- Sushma Chakre
- Updated on: May 24, 2026
- 12:20 pm
ಎಬೋಲಾ ಆತಂಕ; ಕಾಂಗೋ, ಉಗಾಂಡಾ, ದಕ್ಷಿಣ ಸುಡಾನ್ ಪ್ರಯಾಣಿಕರಿಗೆ ಭಾರತದಿಂದ ಮಾರ್ಗಸೂಚಿ ಬಿಡುಗಡೆ
Ebola Outbreak: ಆಫ್ರಿಕಾದ ಕೆಲವು ಭಾಗಗಳಲ್ಲಿ ಹೆಚ್ಚುತ್ತಿರುವ ಎಬೋಲಾ ಸೋಂಕಿನ ಹಿನ್ನೆಲೆಯಲ್ಲಿ ಭಾರತದ ಪ್ರಜೆಗಳು ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ (DRC), ಉಗಾಂಡಾ ಮತ್ತು ದಕ್ಷಿಣ ಸುಡಾನ್ಗೆ ತೀರಾ ಅನಿವಾರ್ಯವಲ್ಲದಿದ್ದರೆ ಪ್ರಯಾಣ ಮಾಡದಂತೆ ಸೂಚನೆ ನೀಡಿದೆ. ಮೇ 17ರಂದು ವಿಶ್ವ ಆರೋಗ್ಯ ಸಂಸ್ಥೆ (WHO) ಎಬೋಲಾವನ್ನು "ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ" ಎಂದು ಘೋಷಿಸಿದ ನಂತರ ಭಾರತದಿಂದ ಈ ಸಲಹೆ ಬಂದಿದೆ.
- Sushma Chakre
- Updated on: May 24, 2026
- 11:27 am
ರಾಜಸ್ಥಾನ ಸರ್ಕಾರದಲ್ಲಿ ವಿದೇಶಿ ಪ್ರಯಾಣಕ್ಕೆ ಅವಕಾಶವಿಲ್ಲ, ಇವಿ ಅಳವಡಿಕೆಗೆ ಆದೇಶ
ವೆಚ್ಚ ಕಡಿಮೆಗೊಳಿಸುವ ಉದ್ದೇಶದಿಂದ ರಾಜಸ್ಥಾನ ಸರ್ಕಾರವು ಮಂತ್ರಿಗಳು, ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಸರ್ಕಾರಿ ಅನುದಾನಿತ ವಿದೇಶ ಪ್ರಯಾಣದ ಮೇಲೆ ನಿರ್ಬಂಧಗಳನ್ನು ವಿಧಿಸಿದೆ. ಇದರ ಜೊತೆಗೆ ರಾಜ್ಯ ಸರ್ಕಾರದ ಇಲಾಖೆಗಳಿಗೆ ಎಲೆಕ್ಟ್ರಿಕ್ ವಾಹನಗಳು, ಡಿಜಿಟಲ್ ಆಡಳಿತ ಕ್ರಮಗಳು ಮತ್ತು ವೆಚ್ಚ ಕಡಿತಗಳನ್ನು ಅಳವಡಿಸಿಕೊಳ್ಳುವಂತೆ ನಿರ್ದೇಶಿಸಲಾಗಿದೆ. ಸಾರ್ವಜನಿಕ ವೆಚ್ಚದಲ್ಲಿ ಸಂಪನ್ಮೂಲಗಳ ಪರಿಣಾಮಕಾರಿ ನಿರ್ವಹಣೆ ಮತ್ತು ಆರ್ಥಿಕ ಶಿಸ್ತನ್ನು ಅಳವಡಿಸಿಕೊಳ್ಳಲು ಇಲಾಖೆಗಳಿಗೆ ಸೂಚಿಸಲಾಗಿದೆ.
- Sushma Chakre
- Updated on: May 24, 2026
- 10:09 am
ಹಾವು ಕಚ್ಚಿದರೆ ಜೀವ ಉಳಿಸಲು ಮೊದಲು ಏನು ಮಾಡಬೇಕು? ಏನು ಮಾಡಬಾರದು?
ಹಾವು ಕಚ್ಚಿದಾಗ ಎಲ್ಲರಿಗೂ ಆತಂಕವಾಗುವುದು ಸಹಜ. ಎಲ್ಲ ಹಾವುಗಳೂ ವಿಷಕಾರಿಯಾಗಿರುವುದಿಲ್ಲ. ಒಂದಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿದರೆ ವಿಷ ಮೈಗೆ ಏರದಂತೆ ನೋಡಿಕೊಳ್ಳಬಹುದು. ಹಾವು ಕಚ್ಚಿದ ಮೊದಲ 1 ಗಂಟೆ ಅತ್ಯಂತ ನಿರ್ಣಾಯಕವಾಗಿದ್ದು, ಅದನ್ನು 'ಗೋಲ್ಡನ್ ಅವರ್' ಎನ್ನಲಾಗುತ್ತದೆ. ಸಾಧ್ಯವಾದರೆ ಕಚ್ಚಿದ ಹಾವಿನ ಬಣ್ಣ ಅಥವಾ ಗುರುತನ್ನು ನೆನಪಿನಲ್ಲಿಟ್ಟುಕೊಳ್ಳಿ ಅಥವಾ ದೂರದಿಂದ ಫೋಟೋ ತೆಗೆದುಕೊಳ್ಳಿ. ಇದು ವೈದ್ಯರಿಗೆ ಚಿಕಿತ್ಸೆ ನೀಡಲು ಸುಲಭವಾಗುತ್ತದೆ. ಹಾವು ಕಚ್ಚಿದಾಗ ಏನು ಮಾಡಬೇಕು? ಏನು ಮಾಡಬಾರದು? ಎಂಬ ಮಾಹಿತಿ ಇಲ್ಲಿದೆ.
- Sushma Chakre
- Updated on: May 22, 2026
- 10:41 pm
ರೋಜ್ಗಾರ್ ಮೇಳದಡಿ ನಾಳೆ ಪ್ರಧಾನಿ ಮೋದಿಯಿಂದ 51,000ಕ್ಕೂ ಅಧಿಕ ಯುವಕರಿಗೆ ನೇಮಕಾತಿ ದಾಖಲೆ ಹಸ್ತಾಂತರ
ಕೇಂದ್ರ ಸರ್ಕಾರದ 'ರೋಜ್ಗಾರ್ ಮೇಳ'ದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 23ರಂದು ದೇಶಾದ್ಯಂತ ಹೊಸದಾಗಿ ಆಯ್ಕೆಯಾದ 51,000ಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ದಾಖಲೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಸ್ತಾಂತರಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಯುವಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನ ಮಂತ್ರಿ ಮೋದಿಯ ಬದ್ಧತೆಗೆ ಅನುಗುಣವಾಗಿ ರೋಜ್ಗಾರ್ ಮೇಳವನ್ನು ಆಯೋಜಿಸಲಾಗಿದೆ.
- Sushma Chakre
- Updated on: May 22, 2026
- 10:33 pm
ಕೋರ್ಟ್ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಮಧ್ಯಪ್ರದೇಶ ನ್ಯಾಯಾಲಯದಲ್ಲಿ ಶರಣಾದ ನಂತರ ತ್ವಿಶಾ ಶರ್ಮಾ ಅವರ ಪತಿ ಸಮರ್ಥ್ ಸಿಂಗ್ ಅವರನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ. ಈ ಬಂಧನದ ನಂತರ ಪತಿ ಸಮರ್ಥ್ ಸಿಂಗ್ ಅವರ ಬಾರ್ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ತ್ವಿಶಾ ಶರ್ಮಾ ಸಾವಿನ ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ, ಅವರ ಪತಿ ಸಮರ್ಥ್ ಸಿಂಗ್ ಇಂದು ಸಂಜೆ ಮಧ್ಯಪ್ರದೇಶದ ಜಬಲ್ಪುರ್ ಜಿಲ್ಲಾ ನ್ಯಾಯಾಲಯದಲ್ಲಿ ಶರಣಾಗಿದ್ದಾರೆ.
- Sushma Chakre
- Updated on: May 22, 2026
- 9:49 pm