ಮಸ್ಕತ್ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಒಮಾನ್ನಲ್ಲಿರುವ ಭಾರತೀಯ ಸಮುದಾಯದಿಂದ ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ ದೊರಕಿದೆ. ಮಸ್ಕತ್ನಲ್ಲಿ ನೂರಾರು ಜನರು ಅವರನ್ನು ಸ್ವಾಗತಿಸಲು ಭಾರತೀಯ ಧ್ವಜಗಳನ್ನು ಬೀಸುತ್ತಾ ಮತ್ತು ದೇಶಭಕ್ತಿಯ ಘೋಷಣೆಗಳನ್ನು ಕೂಗುತ್ತಾ ನೆರೆದಿದ್ದರು. ಹೋಟೆಲ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಭಾರತೀಯ ಅನಿವಾಸಿಗಳನ್ನು ಪ್ರಧಾನಿ ಸ್ವಾಗತಿಸಿದರು ಮತ್ತು ಅವರೊಂದಿಗೆ ಸಂವಾದ ನಡೆಸಿದರು. ಸ್ವಾಗತ ಸಮಾರಂಭದ ಭಾಗವಾಗಿ ಆಯೋಜಿಸಲಾದ ಸಾಂಸ್ಕೃತಿಕ ಪ್ರದರ್ಶನಗಳನ್ನು ಸಹ ಅವರು ವೀಕ್ಷಿಸಿದರು.
- Sushma Chakre
- Updated on: Dec 17, 2025
- 11:13 pm
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್ಗೆ ತೆರಳಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತಕ್ಕಾಗಿ ಇಂದು ಮಸ್ಕತ್ ತಲುಪಿದರು. ಅವರನ್ನು ಒಮನ್ನ ರಕ್ಷಣಾ ವ್ಯವಹಾರಗಳ ಉಪ ಪ್ರಧಾನ ಮಂತ್ರಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ಬರಮಾಡಿಕೊಂಡರು. ಸುಮಾರು 7 ಲಕ್ಷ ಭಾರತೀಯರು ವಾಸಿಸುವ ಒಮಾನ್ಗೆ ಇದು ಮೋದಿ ಅವರ ಎರಡನೇ ಭೇಟಿಯಾಗಿದೆ.
- Sushma Chakre
- Updated on: Dec 17, 2025
- 10:57 pm
ಕೊನೆಗೂ ಮಹಾರಾಷ್ಟ್ರದ ಸಚಿವ ಸ್ಥಾನಕ್ಕೆ ಮಾಣಿಕ್ರಾವ್ ಕೊಕಾಟೆ ರಾಜೀನಾಮೆ; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ
ಮಹಾರಾಷ್ಟ್ರದ ಸಚಿವ ಮಾಣಿಕ್ರಾವ್ ಕೊಕಾಟೆ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದ ಎನ್ಸಿಪಿ ನಾಯಕ ಮಾಣಿಕ್ರಾವ್ ಕೊಕಾಟೆ ಅವರನ್ನು ಕ್ರೀಡೆ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯಿಂದ ತೆಗೆದುಹಾಕಲಾಗಿದೆ. ಕೊಕಾಟೆ ಅವರು ಯಾವುದೇ ಖಾತೆಯಿಲ್ಲದೆ ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಮುಂದುವರೆದಿದ್ದರು. ಇದೀಗ ಅವರು ರಾಜೀನಾಮೆ ನೀಡುವ ಮೂಲಕ ಮಹಾರಾಷ್ಟ್ರ ಸರ್ಕಾರದಲ್ಲಿನ ಮೊದಲ ವಿಕೆಟ್ ಪತನವಾಗಿದೆ. ಅವರ ಬದಲು ಬೇರೆ ಯಾರು ಸಚಿವರಾಗಲಿದ್ದಾರೆ ಎಂಬ ಕುತೂಹಲಕ್ಕೆ ನಾಳೆ ಉತ್ತರ ಸಿಗುವ ಸಾಧ್ಯತೆಯಿದೆ.
- Sushma Chakre
- Updated on: Dec 17, 2025
- 10:20 pm
ಬಾಂಗ್ಲಾದೇಶದಲ್ಲಿ ಭದ್ರತಾ ಬಿಕ್ಕಟ್ಟು; ಢಾಕಾದಲ್ಲಿರುವ ವೀಸಾ ಅರ್ಜಿ ಕೇಂದ್ರ ಮುಚ್ಚಿದ ಭಾರತ
ಭದ್ರತಾ ಪರಿಸ್ಥಿತಿಯಿಂದಾಗಿ ಬಾಂಗ್ಲಾದೇಶದ ಢಾಕಾದಲ್ಲಿರುವ ವೀಸಾ ಅರ್ಜಿ ಕೇಂದ್ರವನ್ನು ಭಾರತವು ಮುಚ್ಚಿದೆ. ಉಗ್ರಗಾಮಿ ಬೆದರಿಕೆಗಳು ಮತ್ತು ಬಾಂಗ್ಲಾದೇಶ ನಾಯಕರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ಭದ್ರತಾ ಕಳವಳಗಳ ನಡುವೆ ಭಾರತವು ಇಂದು ಢಾಕಾದಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರವನ್ನು ಮುಚ್ಚಿದೆ. ಬಾಂಗ್ಲಾದೇಶದ ಭಾರತೀಯ ರಾಯಭಾರ ಕಚೇರಿಯ ಎದುರು ಇಸ್ಲಾಮಿಸ್ಟ್ ಗುಂಪುಗಳು ದಾಳಿ ಮಾಡಲು ಪ್ರಯತ್ನಿಸಿದ್ದವು. ಈ ಹಿನ್ನೆಲೆಯಲ್ಲಿ ಭಾರತ ಬಾಂಗ್ಲಾದೇಶದ ರಾಯಭಾರ ಕಚೇರಿಗೆ ಸಮನ್ಸ್ ಜಾರಿ ಮಾಡಿತ್ತು.
- Sushma Chakre
- Updated on: Dec 17, 2025
- 9:55 pm
12 ವರ್ಷಗಳಾದರೂ ಬಯಲಾಗಿಲ್ಲ ಗೀತಾಂಜಲಿ ಸಾವಿನ ರಹಸ್ಯ; ಸೊಸೆಯ ವರದಕ್ಷಿಣೆ ಕೇಸಲ್ಲಿ ಮಾಜಿ ನ್ಯಾಯಾಧೀಶರ ಕುಟುಂಬ ಖುಲಾಸೆ
ಹರ್ಯಾಣದ ಮಾಜಿ ನ್ಯಾಯಾಧೀಶರ ಸೊಸೆ 12 ವರ್ಷಗಳ ಹಿಂದೆ ನಿಗೂಢವಾಗಿ ಸಾವನ್ನಪ್ಪಿದ್ದರು. ಅವರ ಮೈಮೇಲೆ 4 ಬುಲೆಟ್ ಗುಂಡುಗಳ ಗುರುತಿತ್ತು. ವರದಕ್ಷಿಣೆಗಾಗಿ ಗೀತಾಂಜಲಿ ಅವರನ್ನು ಅವರ ಗಂಡನ ಮನೆಯವರೇ ಕೊಲೆ ಮಾಡಿದ್ದಾರೆಂದು ಕೇಸ್ ದಾಖಲಾಗಿತ್ತು. ಆದರೆ, ಸಿಬಿಐ ತನಿಖೆ ನಡೆಸಿದರೂ ಕೊನೆಗೂ ಆಕೆಯ ಸಾವಿನ ರಹಸ್ಯ ಬಯಲಾಗಿಲ್ಲ. ಇಂದು ಸಿಬಿಐ ನ್ಯಾಯಾಲಯವು ಹರ್ಯಾಣದ ನ್ಯಾಯಾಧೀಶ ಮತ್ತು ಅವರ ಮಗ, ಹೆಂಡತಿಯನ್ನು ಈ ಪ್ರಕರಣದಲ್ಲಿ ಖುಲಾಸೆಗೊಳಿಸಿದೆ.
- Sushma Chakre
- Updated on: Dec 17, 2025
- 9:12 pm
ದೆಹಲಿಯಲ್ಲಿ ನಾಳೆಯಿಂದ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ, ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಕಡ್ಡಾಯ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯದ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಖಾಸಗಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡಲು ಆದೇಶ ಹೊರಡಿಸಲಾಗಿದೆ. ಈ ಆದೇಶ ಉಲ್ಲಂಘನೆ ಮಾಡಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ನಿರಂತರವಾಗಿ ವಾಯು ಮಾಲಿನ್ಯ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೂ ಆನ್ ಲೈನ್ ಮೂಲಕ ತರಗತಿ ನಡೆಸಲು ದೆಹಲಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
- Sushma Chakre
- Updated on: Dec 17, 2025
- 7:37 pm
ಢಾಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಬೆದರಿಕೆ; ಭಾರತದಿಂದ ಬಾಂಗ್ಲಾದೇಶ ಹೈಕಮಿಷನರ್ಗೆ ಸಮನ್ಸ್ ಜಾರಿ
ಢಾಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಭದ್ರತೆಗಾಗಿ ಬಾಂಗ್ಲಾದೇಶ ಹೈಕಮಿಷನರ್ಗೆ ಭಾರತದ ವಿದೇಶಾಂಗ ಸಚಿವಾಲಯ ಸಮನ್ಸ್ ಜಾರಿ ಮಾಡಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದರಿಂದ ಕಳೆದ ವರ್ಷದಿಂದ ಭಾರತ-ಬಾಂಗ್ಲಾದೇಶದ ಸಂಬಂಧಗಳು ಹದಗೆಟ್ಟಿವೆ. ಹಿಂದೂಗಳು ಸೇರಿದಂತೆ ಬಾಂಗ್ಲಾದೇಶದ ಅಲ್ಪಸಂಖ್ಯಾತರ ಮೇಲಿನ ದಬ್ಬಾಳಿಕೆಯನ್ನು ನಿಭಾಯಿಸಲು ವಿಫಲವಾದ ಉಸ್ತುವಾರಿ ಆಡಳಿತವನ್ನು ನವದೆಹಲಿ ಪದೇ ಪದೇ ಟೀಕಿಸುತ್ತಿದೆ.
- Sushma Chakre
- Updated on: Dec 17, 2025
- 6:26 pm
ತಮ್ಮದೇ ಕಾರಿನಲ್ಲಿ ಮೋದಿಯನ್ನು ವಿಮಾನ ನಿಲ್ದಾಣಕ್ಕೆ ಬಿಟ್ಟು, ಕೈಮುಗಿದ ಇಥಿಯೋಪಿಯನ್ ಪ್ರಧಾನಿ
ಇಥಿಯೋಪಿಯನ್ ಪ್ರಧಾನಿ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ವಿದಾಯ ಹೇಳಲು ತಮ್ಮ ಕಾರಿನಲ್ಲಿ ಕೂರಿಸಿಕೊಂಡು ವಿಮಾನ ನಿಲ್ದಾಣಕ್ಕೆ ಕರೆದೊಯ್ದಿದ್ದಾರೆ. ಪ್ರಧಾನಿ ಮೋದಿ ಎರಡು ದಿನಗಳ ಭೇಟಿಗಾಗಿ ಇಥಿಯೋಪಿಯಾಕ್ಕೆ ಆಗಮಿಸಿದಾಗ ಆಫ್ರಿಕನ್ ರಾಷ್ಟ್ರಕ್ಕೆ ಅವರ ಮೊದಲ ದ್ವಿಪಕ್ಷೀಯ ಪ್ರವಾಸವಾಗಿತ್ತು. ಇಥಿಯೋಪಿಯನ್ ಪ್ರಧಾನಿ ಅಬಿ ಅಹ್ಮದ್ ಅಲಿ ಅವರನ್ನು ಅಡಿಸ್ ಅಬಾಬಾ ವಿಮಾನ ನಿಲ್ದಾಣದಲ್ಲಿ ವೈಯಕ್ತಿಕವಾಗಿ ಬರಮಾಡಿಕೊಂಡು ಹೋಟೆಲ್ಗೆ ಕರೆದೊಯ್ಯುವ ಮೂಲಕ ಗಮನಸೆಳೆದಿದ್ದರು. ಇಥಿಯೋಪಿಯನ್ ಪ್ರಧಾನಿ ಇಂದು ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ತಮ್ಮ ಕಾರಿನಲ್ಲಿ ವಿಮಾನ ನಿಲ್ದಾಣಕ್ಕೆ ಕರೆದೊಯ್ದು ವೈಯಕ್ತಿಕವಾಗಿ ವಿದಾಯ ಹೇಳಿದ್ದಾರೆ.
- Sushma Chakre
- Updated on: Dec 17, 2025
- 5:05 pm
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಸೈಕ್ಲಿಂಗ್ ಅಪಘಾತದಲ್ಲಿ ತಮ್ಮನನ್ನು ಉಳಿಸಲು ಅಣ್ಣ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ. ಈ ವಿಡಿಯೋ ಕ್ಲಿಪ್ ವೈರಲ್ ಆಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಸಹೋದರ ಧೈರ್ಯವನ್ನು ಪ್ರದರ್ಶಿಸುವ ಹೃದಯಸ್ಪರ್ಶಿ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಡಿಸೆಂಬರ್ 11ರಂದು ನಡೆದ ಈ ದೃಶ್ಯದಲ್ಲಿ, ಇಬ್ಬರು ಅಣ್ಣ-ತಮ್ಮಂದಿರು ಗುಡ್ಡಗಾಡು ರಸ್ತೆಯ ಬಳಿಯ ಉದ್ಯಾನದಂತಹ ಪ್ರದೇಶದಲ್ಲಿ ತಮ್ಮ ಮನೆಯ ಹೊರಗೆ ಸೈಕಲ್ ತುಳಿಯುತ್ತಿರುವುದನ್ನು ನೋಡಬಹುದು. ಆದರೆ ಹಠಾತ್ ಅಪಘಾತವು ಬಹುತೇಕ ದುರಂತವಾಗಿ ಬದಲಾಗುತ್ತದೆ.
- Sushma Chakre
- Updated on: Dec 17, 2025
- 4:19 pm
ಆಪರೇಷನ್ ಸಿಂಧೂರ್ನ ಮೊದಲ ದಿನವೇ ಭಾರತ ಸೋತಿತ್ತು; ಮಾಜಿ ಸಿಎಂ ಪೃಥ್ವಿರಾಜ್ ಚವಾಣ್ ವಿವಾದಾತ್ಮಕ ಹೇಳಿಕೆ
Operation Sindoor: ಪಹಲ್ಗಾಮ್ ದಾಳಿಯ ವಿರುದ್ಧ ಭಾರತ ಆಪರೇಷನ್ ಸಿಂಧೂರ್ ಆರಂಭಿಸಿದ ಮೊದಲ ದಿನವೇ ಭಾರತ ಸೋತಿತ್ತು ಎಂಬ ಹೇಳಿಕೆ ನೀಡುವ ಮೂಲಕ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ವಿವಾದಕ್ಕೀಡಾಗಿದ್ದಾರೆ. ಆಪರೇಷನ್ ಸಿಂಧೂರ್ನ ಮೊದಲ ದಿನದಂದು ಭಾರತೀಯ ಮಿಲಿಟರಿ ವಿಮಾನಗಳನ್ನು ಪಾಕ್ ಪಡೆಗಳು ಹೊಡೆದುರುಳಿಸಿದವು ಎಂದು ಹೇಳಿದ ನಂತರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಬಿಜೆಪಿ ಹಾಗೂ ಎನ್ಡಿಎ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು.
- Sushma Chakre
- Updated on: Dec 17, 2025
- 3:36 pm
1 ಕೋಟಿ ರೂ. ಹಣಕ್ಕಾಗಿ ತನ್ನ ಕಾರಿನಲ್ಲಿ ಬೇರೆಯವನಿಗೆ ಬೆಂಕಿ ಹಚ್ಚಿ ಸಾವಿನ ಕತೆ ಕಟ್ಟಿದ ವ್ಯಕ್ತಿ!
ಮಹಾರಾಷ್ಟ್ರದಲ್ಲಿ ಕೆಲವು ದಿನಗಳ ಹಿಂದೆ ಕಾರೊಂದರಲ್ಲಿ ಸುಟ್ಟು ಕರಕಲಾದ ವ್ಯಕ್ತಿಯ ಶವ ಪತ್ತೆಯಾಗಿತ್ತು. ಕಾರಿನ ಚಾಲಕರ ಸೀಟಿನಲ್ಲಿದ್ದ ವ್ಯಕ್ತಿಯೇ ಸಾವನ್ನಪ್ಪಿದ್ದರಿಂದ ಆ ಕಾರಿನ ಮಾಲೀಕರೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾವಿಸಿದ್ದರು. ಆದರೆ, ಈ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಯಾರನ್ನು ಸತ್ತಿದ್ದಾನೆಂದು ಪೊಲೀಸರು ಭಾವಿಸಿದ್ದರೋ ಆತ ವಿಮೆ ಹಣಕ್ಕಾಗಿ ತನ್ನ ಸಾವಿನ ಕತೆ ಕಟ್ಟಿದ್ದಾನೆ ಎಂದು ಬಯಲಾಗಿದೆ.
- Sushma Chakre
- Updated on: Dec 16, 2025
- 10:53 pm
ಆಸ್ಟ್ರೇಲಿಯಾ ಬೀಚ್ ಶೂಟರ್ಗೆ ಹೈದರಾಬಾದ್ ನಂಟು; 6 ಬಾರಿ ಭಾರತಕ್ಕೆ ಬಂದಿದ್ದ ಆರೋಪಿ
ಆಸ್ಟ್ರೇಲಿಯಾದ ಬೋಂಡಿ ಬೀಚ್ ಗುಂಡಿನ ದಾಳಿ ಪ್ರಕರಣದ ಆರೋಪಿ ಸಾಜಿದ್ ಅಕ್ರಮ್ ಪಾಕಿಸ್ತಾನಿ ಪ್ರಜೆ ಎಂಬ ಸಂಗತಿ ಬಯಲಾಗಿದೆ. ಆದರೆ, ಅದಕ್ಕೂ ಮುಖ್ಯವಾಗಿ ಆತನಿಗೂ ಭಾರತಕ್ಕೂ ನಂಟಿತ್ತು ಎಂಬ ಅಚ್ಚರಿಯ ಸಂಗತಿಯನ್ನೂ ಪತ್ತೆಹಚ್ಚಲಾಗಿದೆ. ಆರೋಪಿ ಸಾಜಿದ್ ಅಕ್ರಮ್ ಭಾರತಕ್ಕೆ 6 ಬಾರಿ ಭೇಟಿ ನೀಡಿದ್ದ. ಆತನ ಕುಟುಂಬದವರು ಹಲವು ವರ್ಷಗಳ ಹಿಂದೆಯೇ ಆತನೊಂದಿಗೆ ಸಂಬಂಧ ಕಡಿತಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
- Sushma Chakre
- Updated on: Dec 16, 2025
- 9:51 pm