AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ

Senior Sub-Editor - TV9 Kannada

sushma.chakre@tv9.com

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow On:
ಕಾಶ್ಮೀರದ ದೋಡಾ ಜಿಲ್ಲೆಯ ಹೆದ್ದಾರಿಯಲ್ಲಿ ಭೀಕರ ಭೂಕುಸಿತ; ವಾಹನ ಸಂಚಾರ ಸಂಪೂರ್ಣ ಸ್ಥಗಿತ

ಕಾಶ್ಮೀರದ ದೋಡಾ ಜಿಲ್ಲೆಯ ಹೆದ್ದಾರಿಯಲ್ಲಿ ಭೀಕರ ಭೂಕುಸಿತ; ವಾಹನ ಸಂಚಾರ ಸಂಪೂರ್ಣ ಸ್ಥಗಿತ

ದೋಡಾ ಜಿಲ್ಲಾಡಳಿತವು ಸ್ಥಳೀಯ ನಿವಾಸಿಗಳು ಮತ್ತು ಪ್ರಯಾಣಿಕರಿಗೆ ಮುನ್ನೆಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ರಸ್ತೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಆಡಳಿತ ಮಂಡಳಿ ಹಸಿರು ನಿಶಾನೆ ನೀಡುವವರೆಗೆ ಈ ಮಾರ್ಗದಲ್ಲಿ ಪ್ರಯಾಣಿಸದಂತೆ ಮತ್ತು ಪರ್ಯಾಯ ರಸ್ತೆಗಳನ್ನು ಬಳಸುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ. ಗುಡ್ಡಗಾಡು ಪ್ರದೇಶವಾಗಿರುವುದರಿಂದ ಮತ್ತಷ್ಟು ಮಣ್ಣು ಕುಸಿಯುವ ಭೀತಿ ಇರುವುದರಿಂದ ರಕ್ಷಣಾ ಸಿಬ್ಬಂದಿ ಜಾಗರೂಕತೆಯಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಜೊತೆ ವಿಲೀನವಾಗುವ ವದಂತಿ ಸುಳ್ಳು; ಟಿಎಂಸಿ ಸ್ಪಷ್ಟನೆ

ಕಾಂಗ್ರೆಸ್ ಜೊತೆ ವಿಲೀನವಾಗುವ ವದಂತಿ ಸುಳ್ಳು; ಟಿಎಂಸಿ ಸ್ಪಷ್ಟನೆ

ತೃಣಮೂಲ ಕಾಂಗ್ರೆಸ್ (TMC) ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಲಾಗುತ್ತಿದೆ ಮತ್ತು ಮಮತಾ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್‌ನಲ್ಲಿ ಉನ್ನತ ಹುದ್ದೆಗಳನ್ನು ಆಫರ್ ನೀಡಲಾಗಿದೆ ಎಂಬ ವರದಿಗಳನ್ನು ಟಿಎಂಸಿ ಪಕ್ಷವು ಸಂಪೂರ್ಣವಾಗಿ ನಿರಾಕರಿಸಿದೆ. ಈ ವರದಿಗಳು ಆಧಾರರಹಿತ ಎಂದು ಸ್ಪಷ್ಟಪಡಿಸಿರುವ ಟಿಎಂಸಿ, ಕೇವಲ ರಾಜಕೀಯ ಮೈತ್ರಿಗೆ ಮಾತ್ರ ತಮ್ಮ ಬಾಗಿಲು ತೆರೆದಿದೆ ಎಂದು ತಿಳಿಸಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗಿನ ಭೇಟಿಯ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅನ್ನು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂಬ ಮಾಧ್ಯಮಗಳ ವರದಿಗಳನ್ನು ಟಿಎಂಸಿ ನಾಯಕತ್ವ ತಳ್ಳಿಹಾಕಿದೆ. ಪಕ್ಷದ ಅಸ್ತಿತ್ವವನ್ನು ಬಿಟ್ಟುಕೊಡುವ ಯಾವುದೇ ಪ್ರಶ್ನೆಯೇ ಇಲ್ಲ ಎಂದು ಟಿಎಂಸಿ ಹಿರಿಯ ನಾಯಕರು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್​​ ದುರಾಡಳಿತದಿಂದ ಭಾರತವನ್ನು ಮುಕ್ತಗೊಳಿಸಿದ್ದೇ ನಮ್ಮ ಸರ್ಕಾರದ ಅತಿದೊಡ್ಡ ಸಾಧನೆ; ಪ್ರಧಾನಿ ಮೋದಿ ವಾಗ್ದಾಳಿ

ಕಾಂಗ್ರೆಸ್​​ ದುರಾಡಳಿತದಿಂದ ಭಾರತವನ್ನು ಮುಕ್ತಗೊಳಿಸಿದ್ದೇ ನಮ್ಮ ಸರ್ಕಾರದ ಅತಿದೊಡ್ಡ ಸಾಧನೆ; ಪ್ರಧಾನಿ ಮೋದಿ ವಾಗ್ದಾಳಿ

ಎನ್‌ಡಿಎ ಸರ್ಕಾರದ 12 ವರ್ಷಗಳ ಸಾಧನೆಯನ್ನು ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಮಂದಗತಿಯ ಬೆಳವಣಿಗೆಯ ಅವಧಿಯನ್ನು ತಪ್ಪಾಗಿ 'ಹಿಂದೂ ಗ್ರೋತ್ ರೇಟ್' ಎಂದು ಕರೆಯಲಾಗಿತ್ತು. ವಾಸ್ತವದಲ್ಲಿ ಅದನ್ನು 'ಕಾಂಗ್ರೆಸ್ ಗ್ರೋತ್ ರೇಟ್' ಎಂದೇ ಕರೆಯಬೇಕಿತ್ತು ಎಂದರು. ಕಾಂಗ್ರೆಸ್ ಸರ್ಕಾರಗಳು ವರ್ಷಗಳ ಕಾಲ ತಮ್ಮ ನೀತಿ ಮತ್ತು ಆಡಳಿತಾತ್ಮಕ ವೈಫಲ್ಯಗಳ ಮೂಲಕ ದೇಶವನ್ನು ಅಸಹಾಯಕತೆ, ಸಂಕಷ್ಟ ಮತ್ತು ಕೀಳರಿಮೆಯ ಕೂಪಕ್ಕೆ ತಳ್ಳಿದ್ದವು ಎಂದು ಅವರು ಆರೋಪಿಸಿದರು. ದೇಶವನ್ನು ಕಾಂಗ್ರೆಸ್ ಆಡಳಿತದ ಹಳೆಯ ಪರಂಪರೆಯಿಂದ ಮುಕ್ತಗೊಳಿಸಿದ್ದೇ ಎನ್‌ಡಿಎ ಸರ್ಕಾರದ 12 ವರ್ಷಗಳ ಅಧಿಕಾರದ ಅತ್ಯಂತ ದೊಡ್ಡ ಸಾಧನೆ ಎಂದು ಮೋದಿ ಹೇಳಿದರು.

ಇಷ್ಟು ದೂರ ಬರುತ್ತೇನೆಂದು ಕನಸಲ್ಲೂ ಅಂದುಕೊಂಡಿರಲಿಲ್ಲ; ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

ಇಷ್ಟು ದೂರ ಬರುತ್ತೇನೆಂದು ಕನಸಲ್ಲೂ ಅಂದುಕೊಂಡಿರಲಿಲ್ಲ; ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

ಕೇಂದ್ರದ ಆಡಳಿತಾರೂಢ ಮೈತ್ರಿಕೂಟವು ಅಧಿಕಾರದಲ್ಲಿ 12 ವರ್ಷಗಳನ್ನು ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ಚುನಾಯಿತರಾದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಐತಿಹಾಸಿಕ ಸಂದರ್ಭವನ್ನು ಆಚರಿಸಲು ಇಂದು ರಾಷ್ಟ್ರ ರಾಜಧಾನಿಯ 'ಭಾರತ್ ಮಂಟಪ'ದಲ್ಲಿ ಎನ್‌ಡಿಎ ಪಾಲುದಾರ ಪಕ್ಷಗಳ ಬೃಹತ್ ಸಮಾವೇಶ ನಡೆಯಿತು. ಈ ನಿರ್ಣಾಯಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಬಿಜೆಪಿಯ ಹಿರಿಯ ನಾಯಕರು ಮತ್ತು ಎನ್​ಡಿಎ ಮೈತ್ರಿಕೂಟದ ಎಲ್ಲಾ ಪಾಲುದಾರ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ನ್ಯೂಸ್ ಪೇಪರ್​​ಗಳಲ್ಲಿ ಕಟ್ಟಿಕೊಟ್ಟ ತಿಂಡಿ ತಿನ್ನುತ್ತೀರಾ? ನಿಮ್ಮ ಇಷ್ಟದ ಆಹಾರ ವಿಷವಾದೀತು ಎಚ್ಚರ!

ನ್ಯೂಸ್ ಪೇಪರ್​​ಗಳಲ್ಲಿ ಕಟ್ಟಿಕೊಟ್ಟ ತಿಂಡಿ ತಿನ್ನುತ್ತೀರಾ? ನಿಮ್ಮ ಇಷ್ಟದ ಆಹಾರ ವಿಷವಾದೀತು ಎಚ್ಚರ!

ಆಹಾರ ಪದಾರ್ಥಗಳನ್ನು ದಿನಪತ್ರಿಕೆಗಳಲ್ಲಿ ಸುತ್ತುವುದು ಅಥವಾ ಸಂಗ್ರಹಿಸಿಡುವುದರ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಮತ್ತೊಮ್ಮೆ ಜನರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಅನೇಕ ಬೀದಿಬದಿಯ ಆಹಾರದ ಅಂಗಡಿಗಳು ಮತ್ತು ಉಪಾಹಾರ ಗೃಹಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಈ ಅಭ್ಯಾಸವು, ಆಹಾರವನ್ನು ಹಾನಿಕಾರಕ ರಾಸಾಯನಿಕಗಳು ಮತ್ತು ಜೀವಾಣುಗಳಿಗೆ ಒಡ್ಡಿಕೊಳ್ಳುವಂತೆ ಮಾಡುತ್ತದೆ ಹಾಗೂ ಆ ಆಹಾರವನ್ನು ಸೇವನೆಗೆ ಅಸುರಕ್ಷಿತವಾಗಿಸುತ್ತದೆ ಎಂದು ಪ್ರಾಧಿಕಾರ ಹೇಳಿದೆ.

ನೆಹರು ದಾಖಲೆ ಮುರಿದ ಪ್ರಧಾನಿ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ

ನೆಹರು ದಾಖಲೆ ಮುರಿದ ಪ್ರಧಾನಿ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ

ಈ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಇಂದು ರಾತ್ರಿ 7 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಮುಖ ಭಾಷಣ ಮಾಡಲಿದ್ದಾರೆ. ಸರ್ಕಾರಿ ಅಂಕಿ-ಅಂಶಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಧಾನಿ ಕಚೇರಿಯಲ್ಲಿ ಸತತ 4,399 ದಿನಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಜವಾಹರಲಾಲ್ ನೆಹರು ಅವರ 4,398 ದಿನಗಳ ಚುನಾಯಿತ ಅಧಿಕಾರಾವಧಿಯ ದಾಖಲೆಯನ್ನು ಅವರು ಹಿಂದಿಕ್ಕಿದ್ದಾರೆ.

ಪಿಒಕೆಯಲ್ಲಿ ಪಾಕಿಸ್ತಾನದ ಸೇನಾ ಹೆಲಿಕಾಪ್ಟರ್ ಪತನ; ಅಧಿಕಾರಿಗಳು ಸೇರಿದಂತೆ ಎಲ್ಲ ಸೈನಿಕರೂ ಸಜೀವದಹನ

ಪಿಒಕೆಯಲ್ಲಿ ಪಾಕಿಸ್ತಾನದ ಸೇನಾ ಹೆಲಿಕಾಪ್ಟರ್ ಪತನ; ಅಧಿಕಾರಿಗಳು ಸೇರಿದಂತೆ ಎಲ್ಲ ಸೈನಿಕರೂ ಸಜೀವದಹನ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ಸಮೀಪ ಇಂದು ಪಾಕಿಸ್ತಾನ ಸೇನಾ ವಿಮಾನಯಾನ ವಿಭಾಗಕ್ಕೆ ಸೇರಿದ ಎಂಐ-17 ಹೆಲಿಕಾಪ್ಟರ್ ಭೀಕರವಾಗಿ ಪತನಗೊಂಡಿದೆ. ಅದರಲ್ಲಿದ್ದ ಎಲ್ಲಾ ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪಾಕಿಸ್ತಾನ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ. ಈ ದುರಂತದಲ್ಲಿ ಯಾರೊಬ್ಬರೂ ಬದುಕುಳಿದಿಲ್ಲ ಎಂದು ಸೇನೆ ಖಚಿತಪಡಿಸಿದೆ. ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ವರದಿಯಾಗಿದ್ದರೂ, ಅಪಘಾತಕ್ಕೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ಅಧಿಕೃತ ತನಿಖೆಗೆ ಆದೇಶಿಸಿದ್ದಾರೆ.

ಕಾಂಗ್ರೆಸ್ ಜೊತೆ ವಿಲೀನವಾಗುತ್ತಾ ಟಿಎಂಸಿ? ಮಮತಾ ಬ್ಯಾನರ್ಜಿಗೆ ದೊಡ್ಡ ಹುದ್ದೆಯ ಆಫರ್

ಕಾಂಗ್ರೆಸ್ ಜೊತೆ ವಿಲೀನವಾಗುತ್ತಾ ಟಿಎಂಸಿ? ಮಮತಾ ಬ್ಯಾನರ್ಜಿಗೆ ದೊಡ್ಡ ಹುದ್ದೆಯ ಆಫರ್

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತದ ಹಿನ್ನೆಲೆಯಲ್ಲಿ ಟಿಎಂಸಿ ಸಂಸದರು ಮತ್ತು ನಾಯಕರು ಸಾಲು ಸಾಲು ರಾಜೀನಾಮೆ ನೀಡುತ್ತಿದ್ದಾರೆ. ಇದರ ಬೆನ್ನಲ್ಲೇ ಟಿಎಂಸಿ ಕಾಂಗ್ರೆಸ್ ಜೊತೆ ವಿಲೀನವಾಗಲಿದೆ ಎಂಬ ಸುದ್ದಿಗಳೂ ಹರಿದಾಡುತ್ತಿವೆ. ಮಮತಾ ಬ್ಯಾನರ್ಜಿ 2 ದಿನಗಳಿಂದ ಕಾಂಗ್ರೆಸ್ ನಾಯಕರೊಂದಿಗೆ ಸಾಲು ಸಾಲು ಮಾತುಕತೆ ನಡೆಸುತ್ತಿರುವುದು ಈ ವದಂತಿಗೆ ಇನ್ನಷ್ಟು ಪುಷ್ಠಿ ನೀಡಿದೆ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಜೊತೆ ಟಿಎಂಸಿ ವಿಲೀನವಾಗುತ್ತಾ? ಎಂಬ ಕುತೂಹಲ ಮೂಡಿದೆ.

ಮಮತಾ ಬ್ಯಾನರ್ಜಿಗೆ ಮತ್ತೊಂದು ಆಘಾತ; ಟಿಎಂಸಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ

ಮಮತಾ ಬ್ಯಾನರ್ಜಿಗೆ ಮತ್ತೊಂದು ಆಘಾತ; ಟಿಎಂಸಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಸ್ವಪಕ್ಷದ ಮೇಲಿನ ಹಿಡಿತ ದಿನದಿಂದ ದಿನಕ್ಕೆ ದುರ್ಬಲಗೊಳ್ಳುತ್ತಲೇ ಇದೆ. ಮಮತಾ ಬ್ಯಾನರ್ಜಿ ಅವರ ಅತ್ಯಂತ ಆಪ್ತ ನಾಯಕ ಸುಖೇಂದು ಶೇಖರ್ ರಾಯ್ ರಾಜ್ಯಸಭೆಗೆ ರಾಜೀನಾಮೆ ನೀಡಿದ ಕೇವಲ ಒಂದು ವಾರದೊಳಗೆ, ಈಗ ಸುಶ್ಮಿತಾ ದೇವ್ ಕೂಡ ಮೇಲ್ಮನೆ (ರಾಜ್ಯಸಭೆ) ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ಮಮತಾ ಬ್ಯಾನರ್ಜಿ ಪಾಳಯಕ್ಕೆ ಮತ್ತೊಂದು ಭಾರಿ ಹೊಡೆತ ನೀಡಿದ್ದಾರೆ.

ತನ್ನ ಅಭ್ಯರ್ಥಿಯ ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ

ತನ್ನ ಅಭ್ಯರ್ಥಿಯ ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ

ಈ ಪ್ರಕರಣದ ಹಿನ್ನೆಲೆಯನ್ನು ವಿವರವಾಗಿ ಪ್ರಸ್ತಾಪಿಸಿದ ಸುಧಾಂಶು ತ್ರಿವೇದಿ, "ಅದು ತೆಲಂಗಾಣದ ಒಬ್ಬ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೇ ತನ್ನದೇ ರಾಜ್ಯದ ಮತ್ತೊಬ್ಬ ಕಾಂಗ್ರೆಸ್ ನಾಯಕನ ವಿರುದ್ಧ ಲೈಂಗಿಕ ಶೋಷಣೆ ಮತ್ತು ಅನುಚಿತ ವರ್ತನೆಯ ಆರೋಪ ಹೊರಿಸಿ ದಾಖಲಿಸಿದ್ದ ಪ್ರಕರಣವಾಗಿತ್ತು. ಆಕೆ ನೀಡಿದ್ದ ದೂರಿನಲ್ಲಿ ಆ ಸಮಯದಲ್ಲಿ ಉಸ್ತುವಾರಿಯಾಗಿದ್ದ ಮೀನಾಕ್ಷಿ ನಟರಾಜನ್ ಹೆಸರನ್ನೂ ಈ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿಸಿದ್ದರು. ಕಾಂಗ್ರೆಸ್ ತನ್ನದೇ ಪಕ್ಷದ ಕಾರ್ಯಕರ್ತೆಯ ಮೇಲಾದ ದೌರ್ಜನ್ಯವನ್ನು ಮುಚ್ಚಿಟ್ಟಿತ್ತು" ಎಂದು ಟೀಕಿಸಿದ್ದಾರೆ.

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಕಾನೂನುಬಾಹಿರ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ಹೇಳಿದ್ದೇನು?

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಕಾನೂನುಬಾಹಿರ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ಹೇಳಿದ್ದೇನು?

ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಮರುದಿನವೇ, ಕಾಂಗ್ರೆಸ್‌ನ ಹಿರಿಯ ನಾಯಕರ ಉನ್ನತ ಮಟ್ಟದ ನಿಯೋಗ ಇಂದು ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿತು. ಚುನಾವಣಾ ಆಯೋಗದೊಂದಿಗಿನ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕರು, ನಾಮಪತ್ರ ರದ್ದತಿಯನ್ನು ಸಂಪೂರ್ಣ ಕಾನೂನುಬಾಹಿರ ಎಂದು ಕರೆದಿದ್ದಾರೆ. ಈ ವಿಷಯದಲ್ಲಿ ಚುನಾವಣಾ ಆಯೋಗದಿಂದ ಯಾವುದೇ ಸೂಕ್ತ ಭರವಸೆ ಸಿಗದ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ನ್ಯಾಯಾಲಯದ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.

ಹಾರ್ಮುಜ್ ಜಲಸಂಧಿ ಮೇಲೆ ಅಮೆರಿಕದ ಹೆಲಿಕಾಪ್ಟರ್‌ ಪತನ; ಇರಾನ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇವೆಂದ ಟ್ರಂಪ್

ಹಾರ್ಮುಜ್ ಜಲಸಂಧಿ ಮೇಲೆ ಅಮೆರಿಕದ ಹೆಲಿಕಾಪ್ಟರ್‌ ಪತನ; ಇರಾನ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇವೆಂದ ಟ್ರಂಪ್

ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್ ಅಪಾಚೆ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಕೊಂಡಿದ್ದಾರೆ. ಈ ದಾಳಿಗೆ ಪ್ರತೀಕಾರವನ್ನು ಅಮೆರಿಕ ತೀರಿಸಿಕೊಳ್ಳಲಿದೆ ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಯುದ್ಧದ ಸಮಯದಲ್ಲಿ ಇರಾನ್ ಪರಿಣಾಮಕಾರಿಯಾಗಿ ಮುಚ್ಚಿದ ಕಾರ್ಯತಂತ್ರದ ಜಲಮಾರ್ಗದ ಬಳಿ ಅಪಘಾತಕ್ಕೀಡಾದ ಅಪಾಚೆ ದಾಳಿ ಹೆಲಿಕಾಪ್ಟರ್‌ನ ಸಿಬ್ಬಂದಿಯನ್ನು ಡ್ರೋನ್ ದೋಣಿ ರಕ್ಷಿಸಿದ ನಂತರ ಟ್ರಂಪ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಈ ಹೇಳಿಕೆ ನೀಡಿದ್ದಾರೆ.