AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

Author - TV9 Kannada

syed.nizamuddin@tv9.com

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಕಳ್ಳ ಕಾಕರ ಅಡ್ಡೆಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ: ಅವೈಜ್ಞಾನಿಕ ಕಾಮಗಾರಿಯಿಂದಲೂ ಸಮಸ್ಯೆ

ಕಳ್ಳ ಕಾಕರ ಅಡ್ಡೆಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ: ಅವೈಜ್ಞಾನಿಕ ಕಾಮಗಾರಿಯಿಂದಲೂ ಸಮಸ್ಯೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಅಪಘಾತಗಳ ಜೊತೆಗೆ ಅಪರಾಧಗಳ ತಾಣವಾಗಿದೆ. ಸರ್ವೀಸ್ ರಸ್ತೆ ಕಾಮಗಾರಿ ಅಪೂರ್ಣ ಮತ್ತು ಅವೈಜ್ಞಾನಿಕವಾಗಿದ್ದು, ಸಿಸಿ ಕ್ಯಾಮೆರಾ, ಬೀದಿ ದೀಪ, ಪೊಲೀಸ್ ಗಸ್ತು ಇಲ್ಲದಿರುವುದರಿಂದ ಕಳ್ಳತನ & ದರೋಡೆಗಳು ಹೆಚ್ಚಿವೆ. ವಾಹನ ಸವಾರರ ಸುರಕ್ಷತೆ ದೊಡ್ಡ ಸವಾಲಾಗಿದ್ದು, ಪೊಲೀಸರನ್ನೇ ದೋಚಿದ ಘಟನೆ ಆತಂಕ ಮೂಡಿಸಿದೆ.

ಅಂಗನವಾಡಿಯಲ್ಲಿ ಮಗು ಹಠ ಮಾಡುತ್ತೆಂದು ಕೈಗೆ ಬರೆ: ಡೈಪರ್​ಗೆ ಖಾರದಪುಡಿ ಹಾಕಿ ವಿಕೃತಿ!

ಅಂಗನವಾಡಿಯಲ್ಲಿ ಮಗು ಹಠ ಮಾಡುತ್ತೆಂದು ಕೈಗೆ ಬರೆ: ಡೈಪರ್​ಗೆ ಖಾರದಪುಡಿ ಹಾಕಿ ವಿಕೃತಿ!

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹಾರಾಜಕಟ್ಟೆ ಗ್ರಾಮದ ಅಂಗನವಾಡಿ ಸಹಾಯಕಿಯಿಂದ ಎರಡು ವರ್ಷದ ಮಗುವಿನ ಮೇಲೆ ವಿಕೃತಿ ಮೆರೆಯಲಾಗಿದೆ. ಹಠ ಮಾಡುತ್ತಿದ್ದ ಎಂಬ ಕಾರಣಕ್ಕೆ ಮಗುವಿನ ಕೈಗೆ ಬರೆ ಎಳೆದು ಡೈಪರ್‌ಗೆ ಖಾರದಪುಡಿ ಹಾಕಿದ್ದಾರೆ. ಪೋಷಕರ ದೂರಿನ ಮೇರೆಗೆ ಅಂಗನವಾಡಿ ಸಹಾಯಕಿಯನ್ನು ಅಮಾನತುಗೊಳಿಸಲಾಗಿದೆ.

ಬಿಡದಿಯಲ್ಲಿ ಪಾಕ್​ ಪರ ಜೈಕಾರ, ಕನ್ನಡಿಗರ ಬಗ್ಗೆ ಅವಹೇಳನ ಬರಹ: ಇಬ್ಬರ ಬಂಧನ

ಬಿಡದಿಯಲ್ಲಿ ಪಾಕ್​ ಪರ ಜೈಕಾರ, ಕನ್ನಡಿಗರ ಬಗ್ಗೆ ಅವಹೇಳನ ಬರಹ: ಇಬ್ಬರ ಬಂಧನ

ಬಿಡದಿಯ ಟೊಯೋಟಾ ಬುಷೋಕೊ ಕಾರ್ಖಾನೆಯ ಶೌಚಾಲಯದ ಗೋಡೆಯ ಮೇಲೆ ದೇಶದ್ರೋಹಿ ಬರಹ ಬರೆದ ಆರೋಪದ ಮೇಲೆ ಇಬ್ಬರು ಯುವಕರನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕರ್ನಾಟಕದ ಹೈಮದ್ ಹುಸೇನ್ ಮತ್ತು ಸಾದಿಕ್ ಎಂಬುವವರು ಬಂಧಿತರು. ಕನ್ನಡಿಗರನ್ನು ಅವಮಾನಿಸುವ ಪದಗಳನ್ನೂ ಬಳಸಲಾಗಿತ್ತು. ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.

ರಾಮನಗರ: ಪ್ರತಿಷ್ಠಿತ ಕಂಪನಿಯಲ್ಲಿ ದೇಶದ್ರೋಹ ಕೃತ್ಯ, ಪಾಕಿಸ್ತಾನ ಪರ ಬರಹ

ರಾಮನಗರ: ಪ್ರತಿಷ್ಠಿತ ಕಂಪನಿಯಲ್ಲಿ ದೇಶದ್ರೋಹ ಕೃತ್ಯ, ಪಾಕಿಸ್ತಾನ ಪರ ಬರಹ

ರಾಮನಗರದ ಒಂದು ಪ್ರತಿಷ್ಠಿತ ಕಂಪನಿಯ ಶೌಚಾಲಯದ ಗೋಡೆಯ ಮೇಲೆ "ಪಾಕಿಸ್ತಾನ ಜೈ" ಮತ್ತು ಕನ್ನಡಿಗರನ್ನು ಅವಮಾನಿಸುವ ಬರಹಗಳು ಕಾಣಿಸಿಕೊಂಡಿವೆ. ಈ ದೇಶದ್ರೋಹದ ಕೃತ್ಯಕ್ಕೆ ಕಂಪನಿ ಉದ್ಯೋಗಿಗಳಿಗೆ ಸುತ್ತೋಲೆ ಹೊರಡಿಸಿದೆ ಮತ್ತು ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಕನ್ನಡಪರ ಸಂಘಟನೆಗಳು ಈ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿವೆ ಮತ್ತು ಕಿಡಿಗೇಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.

ಮಹಾ ಶಿವರಾತ್ರಿಯಂದೇ ಬಾಡೂಟ ಸವಿದ ಜನರು

ಮಹಾ ಶಿವರಾತ್ರಿಯಂದೇ ಬಾಡೂಟ ಸವಿದ ಜನರು

ರಾಮನಗರ ಜಿಲ್ಲೆಯ ಮಂಗಾಡಹಳ್ಳಿ ಗ್ರಾಮದಲ್ಲಿ ಮಹಾಶಿವರಾತ್ರಿಯಂದು ವಿಶೇಷ ಬಾಡೂಟದ ಆಚರಣೆ ನಡೆಯಿತು. ಚನ್ನಪ್ಪಸ್ವಾಮಿ ದೇವರಿಗೆ ನೈವೇದ್ಯವಾಗಿ ನೂರಾರು ಕೆಜಿ ಮಟನ್ ಮತ್ತು ಚಿಕನ್ ಬಳಸಿ ತಯಾರಿಸಿದ ಬಾಡೂಟವನ್ನು ಗ್ರಾಮಸ್ಥರು ಸವಿದಿದ್ದಾರೆ. ಇದು ಹಲವು ವರ್ಷಗಳಿಂದ ನಡೆಯುತ್ತಿರುವ ವಿಶಿಷ್ಟ ಪದ್ಧತಿಯಾಗಿದೆ. ಅಕ್ಕಪಕ್ಕದ ಗ್ರಾಮಗಳ ಜನರು ಕೂಡ ಭರ್ಜರಿ ಊಟ ಸವಿದಿದ್ದಾರೆ.

ಹೆಚ್​​ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ: ಕೋರ್ಟ್​​ ತರಾಟೆ ಬೆನ್ನಲ್ಲೇ ಸರ್ವೇ ಕಾರ್ಯ ಆರಂಭ

ಹೆಚ್​​ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ: ಕೋರ್ಟ್​​ ತರಾಟೆ ಬೆನ್ನಲ್ಲೇ ಸರ್ವೇ ಕಾರ್ಯ ಆರಂಭ

ರಾಮನಗರದ ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಸರ್ಕಾರಿ ಭೂಮಿ ಒತ್ತುವರಿ ಆರೋಪದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ನಡೆಸಿದ್ದಾರೆ. 110 ಎಕರೆಗೂ ಅಧಿಕ ಜಮೀನುಗಳ ಸರ್ವೆ ನಡೆದಿದ್ದು, 14 ಎಕರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಲಾಗಿದೆ ಎಂಬ ಆರೋಪಗಳಿವೆ. ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಈ ಸರ್ವೆ ನಡೆಸಲಾಗಿದೆ.

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ವೇನಲ್ಲಿ ಟೋಲ್​ ತಪ್ಪಿಸಿಕೊಳ್ಳುತ್ತಿದ್ದ ವಾಹನ ಸವಾರರಿಗೆ ಶಾಕ್..!

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ವೇನಲ್ಲಿ ಟೋಲ್​ ತಪ್ಪಿಸಿಕೊಳ್ಳುತ್ತಿದ್ದ ವಾಹನ ಸವಾರರಿಗೆ ಶಾಕ್..!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ಟೋಲ್ ಕಟ್ಟದೇ ತಪ್ಪಿಸಿಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್ ಕೊಟ್ಟಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳು ಹೆದ್ದಾರಿಯಿಂದ ಸರ್ವೀಸ್ ರಸ್ತೆ ಸಂಪರ್ಕ ಕಡಿತಗೊಳಿಸಲಾಗಿದೆ. ಇದರಿಂದ ಇನ್ಮುಂದೆ ಸರ್ವೀಸ್ ರಸ್ತೆ ಇಲ್ಲದೇ ವಾಹನ ಸವಾರರು ಟೋಲ್​ ಕಟ್ಟಲೇಬೇಕಿದೆ.

ಹಾಸ್ಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾದ ನರ್ಸಿಂಗ್​​ ವಿದ್ಯಾರ್ಥಿನಿ‌: ಆಡಳಿತ ಮಂಡಳಿ ವಿರುದ್ಧ ಕಿರುಕುಳ ಆರೋಪ

ಹಾಸ್ಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾದ ನರ್ಸಿಂಗ್​​ ವಿದ್ಯಾರ್ಥಿನಿ‌: ಆಡಳಿತ ಮಂಡಳಿ ವಿರುದ್ಧ ಕಿರುಕುಳ ಆರೋಪ

ರಾಮನಗರದ ದಯಾನಂದ್ ಸಾಗರ್ ಮೆಡಿಕಲ್ ಕಾಲೇಜಿನಲ್ಲಿ 19 ವರ್ಷದ ಕೇರಳ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜು ಆಡಳಿತ ಮಂಡಳಿಯ ಕಿರುಕುಳ ಮತ್ತು ಕೇರಳದ ವಿದ್ಯಾರ್ಥಿಗಳನ್ನು ಕೀಳಾಗಿ ಕಾಣುವ ಮನೋಭಾವದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಲಾಗಿದೆ. ಸದ್ಯ ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರತಿಭಟಿಸಿದ್ದು, ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ.

ಗಾಗಲ್ ಹಾಕಿ ಡಿಸಿಎಂ‌ ಡಿಕೆ ಶಿವಕುಮಾರ್​ ಜಾಲಿ ಬೋಟ್ ರೈಡ್!

ಗಾಗಲ್ ಹಾಕಿ ಡಿಸಿಎಂ‌ ಡಿಕೆ ಶಿವಕುಮಾರ್​ ಜಾಲಿ ಬೋಟ್ ರೈಡ್!

ಡಿಸಿಎಂ ಡಿಕೆ ಶಿವಕುಮಾರ್ ರವರು ರಾಮನಗರದ ಕಣ್ವ ಜಲಾಶಯಕ್ಕೆ ಭೇಟಿ ನೀಡಿ, ದೋಣಿ ಸವಾರಿ ಮಾಡಿದರು. ಶಾಸಕ ಸಿ.ಪಿ.ಯೋಗೇಶ್ವರ್ ಮತ್ತು ಮಾಜಿ ಸಂಸದ ಡಿಕೆ ಸುರೇಶ್ ಅವರೊಂದಿಗೆ ಅವರು ಆನಂದಿಸಿದರು. ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆಗಳನ್ನು ಪರಿಶೀಲಿಸುವ ಉದ್ದೇಶದಿಂದ ಈ ಭೇಟಿ ನಡೆದಿದೆ ಎಂದು ತಿಳಿದುಬಂದಿದೆ.

ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧರಾಗಿರುವ ಡಿಕೆ ಶಿವಕುಮಾರ್​: ಪರೋಕ್ಷವಾಗಿ ಮುಂದಿನ ಸಿಎಂ ಎಂದ ಬಾಲಕೃಷ್ಣ

ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧರಾಗಿರುವ ಡಿಕೆ ಶಿವಕುಮಾರ್​: ಪರೋಕ್ಷವಾಗಿ ಮುಂದಿನ ಸಿಎಂ ಎಂದ ಬಾಲಕೃಷ್ಣ

ಒಂದ್ಕಡೆ ಕಾಂಗ್ರೆಸ್​ನಲ್ಲಿ ಸಿಎಂ ಸಲಹೆಗಾರ ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದಾರೆ. ಇನ್ನೊಂದ್ಕಡೆ ಎಸ್​ಸಿ, ಎಸ್​ಟಿ ಸಚಿವರು ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮನೆಯಲ್ಲಿ ಮುಂದಿನ ಸಿಎಂ ಕೂಗು ಮುಂದುವರೆದಿದೆ. ಈ ಬಗ್ಗೆ ಹೈಕಮಾಂಡ್​ ವಾರ್ನ್​ ಮಾಡಿದರೂ ನಿಲ್ಲುತ್ತಿಲ್ಲ. ಸದ್ಯ ಚನ್ನಪಟ್ಟಣದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಪರೋಕ್ಷವಾಗಿ ಡಿಕೆ ಶಿವಕುಮಾರ್​ ಮುಂದಿನ ಸಿಎಂ ಎಂದು ಶಾಸಕ ಬಾಲಕೃಷ್ಣ ಹೇಳಿದ್ದಾರೆ.

ಬಿಡದಿಯಲ್ಲಿ ಯುವತಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಪರಿಸ್ಥಿತಿ ಕಂಡು ಪೊಲೀಸರೇ ಶಾಕ್

ಬಿಡದಿಯಲ್ಲಿ ಯುವತಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಪರಿಸ್ಥಿತಿ ಕಂಡು ಪೊಲೀಸರೇ ಶಾಕ್

ಬಿಡದಿಯಲ್ಲಿ 20 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿದ್ದು, ಪಕ್ಕದ ಮನೆಯ ಅಸ್ಸಾಂ ಮೂಲದ ಯುವಕನಿಂದ ಕೃತ್ಯವೆಸಗಲಾಗಿದೆ. ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಯುವತಿಯನ್ನು ಆತ ತನ್ನ ಕೋಣೆಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

KSRTC ಬಸ್‌ನಲ್ಲಿ ಟಿಕೆಟ್ ಮಷಿನ್ ಖಾಸಗಿ ವ್ಯಕ್ತಿಗೆ ಕೊಟ್ಟು ಕೆಲಸ ಕಳೆದುಕೊಂಡ ಕಂಡಕ್ಟರ್

KSRTC ಬಸ್‌ನಲ್ಲಿ ಟಿಕೆಟ್ ಮಷಿನ್ ಖಾಸಗಿ ವ್ಯಕ್ತಿಗೆ ಕೊಟ್ಟು ಕೆಲಸ ಕಳೆದುಕೊಂಡ ಕಂಡಕ್ಟರ್

KSRTC ಬಸ್‌ ಕಂಡಕ್ಟರ್​ ಖಾಸಗಿ ವ್ಯಕ್ತಿಯೋರ್ವನಿಗೆ ಮಷಿನ್ ನೀಡಿ ಟಿಕೆಟ್​ ನೀಡುವಂತೆ ಹೇಳಿ ಕೆಲಸ ಕಳೆದುಕೊಂಡಿದ್ದಾನೆ. ಇನ್ನು ಖಾಸಗಿ ವ್ಯಕ್ತಿ ತಾನು ಟಿಕೆಟ್​ ಕೊಡುವ ಅನುಭವ ಪಡೆಯುತ್ತಿದ್ದೇನೆಂದು ರಾಜಾರೋಷವಾಗಿ ಪ್ರಯಾಣಿಕರಿಂದ ಹಣ ಸ್ವೀಕರಿಸಿದ್ದ. ಅಲ್ಲದೇ ಹಣ ಪಡೆದುಕೊಂಡು ಟಿಕೆಟ್​ ನೀಡುತ್ತಿರಲಿಲ್ಲ. ಟಿಕೆಟ್​ ಅಂತ ಪ್ರಯಾಣಿಕರು ಕೇಳಿದ್ರೆ ನಾನು ನೋಡಿಕೊಳ್ಳುತ್ತೇನೆ, ನಮ್ಮನ್ನು ಚೆಕ್​ ಮಾಡಲು ಯಾರು ಬರಲ್ಲ ಎಂದು ಹೇಳಿಕೊಂಡಿದ್ದಾನೆ. ಇದೀಗ ಕಂಡಕ್ಟರ್​ ಕೆಲಸ ಕಳೆದುಕೊಳ್ಳುವಂತಾಗಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ