ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ತೀರ್ಥಹಳ್ಳಿಯ ಇಂದಿರಾನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಯ ಆರ್ಭಟಕ್ಕೆ ಗುಡ್ಡ ಕುಸಿದು , ಶೆಡ್ ಮೇಲೆ ಮಣ್ಣು ಬಿದ್ದ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ತಡರಾತ್ರಿ 2:30 ವೇಳೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಪಕ್ಕದ ಶೆಡ್ನಲ್ಲಿ ವಾಸವಿದ್ದವರಿಗೂ ಗಂಭೀರ ಗಾಯಗಳಾಗಿವೆ. ಕೊಪ್ಪಳ. ರಾಯಚೂರು, ದಾವಣಗೆರೆಸ ಜಿಲ್ಲೆಯ ಕೂಲಿ ಕಾರ್ಮಿಕರು ನೆಲೆಸಿದ್ದ ಶೆಡ್ಗಳ ಮೇಲೆ ತಡೆಗೋಡೆ ಕುಸಿದು ಬಿದ್ದು ನಂತರ ಗುಡ್ಡದ ಮಣ್ಣು ಶೆಡ್ ಮೇಲೆ ಬಿದ್ದಿದೆ.
- Web contact
- Updated on: Aug 2, 2026
- 7:36 pm
ಐಐಟಿ ಪ್ರಾಧ್ಯಾಪಕರನ್ನು ಗೋಮೂತ್ರ ತಜ್ಞ ಎಂದಿದ್ದ ಪ್ರಿಯಾಂಕಾ ಗಾಂಧಿ; 215ಕ್ಕೂ ಹೆಚ್ಚು ಶಿಕ್ಷಣ ತಜ್ಞರಿಂದ ತೀವ್ರ ಖಂಡನೆ
ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಬಿಜೆಪಿ ನಾಯಕ ಅನುರಾಗ್ ಠಾಕೂರ್ ನಡುವೆ ನಡೆದ ತೀವ್ರ ವಾಗ್ದಾಳಿಯ ನಂತರ, ಐಐಟಿ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಅವರನ್ನು "ಗೋಮೂತ್ರ ತಜ್ಞ" ಎಂದು ಟೀಕಿಸಿದ ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಯನ್ನು ಹಲವು ವಿಶ್ವವಿದ್ಯಾನಿಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳ ಕುಲಪತಿಗಳು ತೀವ್ರವಾಗಿ ಖಂಡಿಸಿದ್ದಾರೆ. ಬಹಿರಂಗ ಪತ್ರವೊಂದರಲ್ಲಿ ಈ ಹೇಳಿಕೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕುಲಪತಿಗಳು ಇದು ಶೈಕ್ಷಣಿಕ ಮತ್ತು ವೈಜ್ಞಾನಿಕ ಸಂಸ್ಥೆಗಳ ಘನತೆಗೆ ಧಕ್ಕೆ ತರುತ್ತದೆ ಎಂದು ಹೇಳಿದ್ದಾರೆ.
- Web contact
- Updated on: Jul 30, 2026
- 6:30 pm
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿ ಜಿಲ್ಲೆಯಲ್ಲಿ ಕಳೆದ ಒಂದೂವರೆ ಗಂಟೆಯಿಂದ ಭಾರೀ ಮಳೆ ಸುರಿದಿದೆ. ಬರದಿಂದ ತತ್ತರಿಸಿದ್ದ ರೈತರಿಗೆ ಇದು ದೊಡ್ಡ ನಿರಾಳತೆ ತಂದಿದೆ, ಅವರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಒಣಗುವ ಹಂತದಲ್ಲಿದ್ದ ಬೆಳೆಗಳಿಗೆ ಜೀವಕಳೆ ಬಂದಿದೆ. ಆದರೆ, ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡು ಸಾರ್ವಜನಿಕರಿಗೆ ತೊಂದರೆಯಾಗಿದೆ.
- Web contact
- Updated on: Jul 29, 2026
- 8:16 pm
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ: ನಿವಾಸಿಗಳಲ್ಲಿ ಹೆಚ್ಚಿದ ಆತಂಕ
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಚಿರತೆಯೊಂದು ಕಳೆದ ಒಂದು ತಿಂಗಳಿಂದ ಐದನೇ ಬಾರಿ ಕಾಣಿಸಿಕೊಂಡಿದೆ. ಮುಂಜಾನೆ 3:27ರ ಸುಮಾರಿಗೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಚಿರತೆ ಓಡಾಟದಿಂದ ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ. ಮಕ್ಕಳು ಹಾಗೂ ವೃದ್ಧರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದು, ಅರಣ್ಯ ಇಲಾಖೆಯ ನಿಷ್ಕ್ರಿಯತೆಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Web contact
- Updated on: Jul 29, 2026
- 5:52 pm
ನಮಗೇ ಕುಡಿಯೋಕೆ ನೀರಿಲ್ಲ: ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಕಾವೇರಿ ನದಿಯ ಕೆಆರ್ಎಸ್ ಜಲಾಶಯದಲ್ಲಿ ನೀರಿಲ್ಲದೇ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳ ಜನರು ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಮಳೆಯಿಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆ ಇಂದು (ಜುಲೈ 28) ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ. 15 ದಿನಗಳ ಕಾಲ ನಿತ್ಯ 3500 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದ್ದು, ಇದು ಕನ್ನಡಗರ ಆಕ್ರೋಕ್ಕೆ ಕಾರಣವಾಗಿದೆ. ಅದರಲ್ಲೂ ಮುಖ್ಯವಾಗಿ ಮಂಡ್ಯ ಜನತೆ ಆಕ್ರೋಶದ ಕಟ್ಟೆ ಹೊಡೆದಿದ್ದು, ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಒಂದು ವೇಳೆ ತಮಿಳುನಾಡಿಗೆ ನೀರು ಬಿಟ್ಟರೆ ಬೆಂಗಳೂರಿಗೆ ಹರಿಯುವ ನೀರಿನ ಪೈಪ್ ಹೊಡೆದು ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
- Web contact
- Updated on: Jul 28, 2026
- 4:45 pm
Anti-paper leak Bill 2026 Live Video: ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ 'ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026' ಅನ್ನು ಲೋಕಸಭೆಯಲ್ಲಿ ಮಂಡಿಸುತ್ತಿದೆ. ಈ ಹೊಸ ಕಾಯ್ದೆಯು ಪರೀಕ್ಷೆಗಳಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸುವ ಗುರಿ ಹೊಂದಿದೆ. ಸಿಬ್ಬಂದಿ ಮತ್ತು ತರಬೇತಿ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇದನ್ನು ಮಂಡಿಸಲಿದ್ದಾರೆ. ಇದು ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಬದ್ಧವಾಗಿದೆ.
- Web contact
- Updated on: Jul 27, 2026
- 11:48 am
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ನೀಟ್ (NEET UG) ಪರೀಕ್ಷಾ ಅಕ್ರಮದ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿದ್ದ (Breaking) ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ಅಂತ್ಯವಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದ್ದ ಸಿಜೆಪಿ ಜೊತೆ ಕೇಂದ್ರ ಸರ್ಕಾರದ ಪರವಾಗಿ ಸಚಿವ ಜೆಪಿ ನಡ್ಡಾ ಅವರು ನಡೆಸಿದ್ದ ಸಂಧಾನ ಮಾತುಕತೆ ಸಕ್ಸಸ್ ಆಗಿದೆ. ಸರ್ಕಾರದ ಮುಂದೆ 3 ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದ ಸಿಜೆಪಿಯ ಎಲ್ಲ ಬೇಡಿಕೆಗಳೂ ಈಡೇರಿಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಾಸ್ ಪಡೆಯುವುದಾಗಿ ಸಿಜೆಪಿ ಘೋಷಿಸಿದೆ.
- Web contact
- Updated on: Jul 25, 2026
- 6:26 pm
ಗುಂಡಿ ಬಿದ್ದ ಗುಂಡ್ಲುಪೇಟೆ ಮುಖ್ಯ ರಸ್ತೆಗಳನ್ನು ಸ್ವಂತ ವೆಚ್ಚದಲ್ಲಿ ಮುಚ್ಚಿದ ಕೂಲಿ ಕಾರ್ಮಿಕ
ಚಾಮರಾಜನಗರ-ಗುಂಡ್ಲುಪೇಟೆ ಮುಖ್ಯ ರಸ್ತೆಯಲ್ಲಿನ ಹದಗೆಟ್ಟ ಗುಂಡಿಗಳನ್ನು ಕೂಲಿ ಕಾರ್ಮಿಕ ಶಫಿಉಲ್ಲಾ ತಮ್ಮ ಸ್ವಂತ ಹಣದಿಂದ ಮುಚ್ಚಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಎಂಎಲ್ಎಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಲವು ಅಪಘಾತಗಳು ಸಂಭವಿಸುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ಈ ರಸ್ತೆಯ ದಯನೀಯ ಸ್ಥಿತಿ ಜನಪ್ರತಿನಿಧಿಗಳ ಕಾರ್ಯವೈಖರಿಗೆ ಕನ್ನಡಿ ಹಿಡಿದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
- Web contact
- Updated on: Jul 24, 2026
- 11:10 am
ಕರ್ನಾಟಕದಲ್ಲಿ ಮಳೆಯ ಕೃಪೆಯಿಂದ ಶುದ್ಧವಾದ ಗಾಳಿ: ನಿಮ್ಮ ಜಿಲ್ಲೆಯ ವಾಯು ಗುಣಮಟ್ಟ ಎಷ್ಟಿದೆ ಗೊತ್ತಾ?
ಮುಂಗಾರು ಮಳೆಯ ಸಕ್ರಿಯತೆಯಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವಾಯು ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿದೆ. ಪ್ರಸ್ತುತ ವಾಯು ಗುಣಮಟ್ಟ ಸೂಚ್ಯಂಕ (AQI) 'ಉತ್ತಮ' ಅಥವಾ 'ಸಾಧಾರಣ' ಮಟ್ಟದಲ್ಲಿದೆ. PM2.5 ಮತ್ತು PM10 ಕಣಗಳ ಪ್ರಮಾಣ ತಗ್ಗಿ, ಉಸಿರಾಟಕ್ಕೆ ಶುದ್ಧ ವಾತಾವರಣವಿದೆ. ಸಾರ್ವಜನಿಕರು ಮತ್ತು ಹಿರಿಯ ನಾಗರಿಕರಿಗೆ ಹೊರಾಂಗಣ ಚಟುವಟಿಕೆಗಳಿಗೆ ಇದು ಸೂಕ್ತ ಸಮಯವಾಗಿದೆ. Karnataka AQI Good: Clean Air Returns to Bengaluru and State as Monsoons Clear Pollution ಮುಂಗಾರು ಮಳೆಯ ಸಕ್ರಿಯತೆಯಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವಾಯು ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿದೆ. ಪ್ರಸ್ತುತ ವಾಯು ಗುಣಮಟ್ಟ ಸೂಚ್ಯಂಕ (AQI) 'ಉತ್ತಮ' ಅಥವಾ 'ಸಾಧಾರಣ' ಮಟ್ಟದಲ್ಲಿದೆ. PM2.5 ಮತ್ತು PM10 ಕಣಗಳ ಪ್ರಮಾಣ ತಗ್ಗಿ, ಉಸಿರಾಟಕ್ಕೆ ಶುದ್ಧ ವಾತಾವರಣವಿದೆ. ಸಾರ್ವಜನಿಕರು ಮತ್ತು ಹಿರಿಯ ನಾಗರಿಕರಿಗೆ ಹೊರಾಂಗಣ ಚಟುವಟಿಕೆಗಳಿಗೆ ಇದು ಸೂಕ್ತ ಸಮಯವಾಗಿದೆ.
- Web contact
- Updated on: Jul 23, 2026
- 7:13 am
ಅತಿಯಾಗಿ ಟಿವಿ ನೋಡ್ತೀರಾ?: ನಿಮ್ಮ ಮೆದುಳು ಕುಗ್ಗಬಹುದು ಹುಷಾರ್!; ಸಂಶೋಧನೆಯಲ್ಲಿ ಬೆಚ್ಚಿಬೀಳಿಸುವ ಸತ್ಯ
ಮಧ್ಯವಯಸ್ಸಿನಲ್ಲಿ ಅತಿಯಾದ ಟಿವಿ ವೀಕ್ಷಣೆ ಮೆದುಳಿನ ಆರೋಗ್ಯಕ್ಕೆ ಮಾರಕ. ಹೊಸ ಅಧ್ಯಯನದ ಪ್ರಕಾರ, ಇದು ಸ್ಮರಣಶಕ್ತಿ, ಕಲಿಕೆ ಮತ್ತು ನಿರ್ಧಾರ ತೆಗೆದುಕೊಳ್ಳುವ ಮೆದುಳಿನ ಭಾಗಗಳನ್ನು ಕುಗ್ಗಿಸುತ್ತದೆ. ಕೇವಲ ಕುಳಿತುಕೊಳ್ಳುವುದಕ್ಕಿಂತ, ಮಾನಸಿಕ ಶ್ರಮವಿಲ್ಲದ 'ನಿಷ್ಕ್ರಿಯ ಸ್ಕ್ರೀನ್ ಟೈಮ್' ಹೆಚ್ಚು ಅಪಾಯಕಾರಿ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಮೆದುಳನ್ನು ಸಕ್ರಿಯವಾಗಿಡಲು ಓದುವಿಕೆ, ವ್ಯಾಯಾಮ ಮತ್ತು ಸಾಮಾಜಿಕ ಸಂವಹನ ಅಗತ್ಯ. ಮೆದುಳಿನ ಆರೋಗ್ಯ ಕಾಪಾಡಲು ಇದು ನಿರ್ಣಾಯಕ.
- Web contact
- Updated on: Jul 22, 2026
- 10:08 pm
ವಿದೇಶಿ ತಂಡದ ಪರ ಪಾದಾರ್ಪಣೆ ಮಾಡಲಿರುವ ಕುಲ್ದೀಪ್ ಯಾದವ್
Kuldeep Yadav Joins Yorkshire: ಟೀಂ ಇಂಡಿಯಾದಲ್ಲಿ ಅವಕಾಶ ವಂಚಿತರಾಗಿದ್ದ ಅನುಭವಿ ಸ್ಪಿನ್ನರ್ ಕುಲ್ದೀಪ್ ಯಾದವ್ ಇದೀಗ ಇಂಗ್ಲೆಂಡ್ನ ಯಾರ್ಕ್ಷೈರ್ ಕೌಂಟಿ ತಂಡ ಸೇರಿಕೊಂಡಿದ್ದಾರೆ. 5 ಏಕದಿನ ಹಾಗೂ 3 ಕೌಂಟಿ ಪಂದ್ಯಗಳಿಗಾಗಿ ಒಪ್ಪಂದ ಮಾಡಿಕೊಂಡಿದ್ದು, ಜುಲೈ 24ರಂದು ಗ್ಲಾಮೋರ್ಗನ್ ವಿರುದ್ಧ ಏಕದಿನ ಕಪ್ ಪಂದ್ಯದ ಮೂಲಕ ಪದಾರ್ಪಣೆ ಮಾಡಲಿದ್ದಾರೆ. ಈ ಮೂಲಕ ಕುಲ್ದೀಪ್ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದ್ದಾರೆ.
- Web contact
- Updated on: Jul 22, 2026
- 6:58 pm
IND vs ENG: ಶತಕದ ಪಂದ್ಯದಲ್ಲಿ 78ನೇ ಏಕದಿನ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ
Virat Kohli's Historic Half-Centuryಕಾರ್ಡಿಫ್ನಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಸೋಫಿಯಾ ಗಾರ್ಡನ್ಸ್ನಲ್ಲಿ ತಮ್ಮ ಮೊದಲ ರನ್ ಮತ್ತು 78ನೇ ಅಂತರರಾಷ್ಟ್ರೀಯ ಅರ್ಧಶತಕವನ್ನು ಪೂರೈಸಿದರು. ಇಂಗ್ಲೆಂಡ್ ವಿರುದ್ಧ ಇದು ಅವರ 14ನೇ 50+ ಸ್ಕೋರ್ ಆಗಿದ್ದು, ವಿವ್ ರಿಚರ್ಡ್ಸ್ ದಾಖಲೆ ಸರಿಗಟ್ಟಿದರು. ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಜೊತೆಗೂಡಿ ಪ್ರಮುಖ ಜೊತೆಯಾಟ ಕಟ್ಟಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.:
- Web contact
- Updated on: Jul 16, 2026
- 8:04 pm