ಬೆಂಗಳೂರಿನ ಬಿ ಖಾತಾದಾರರಿಗೆ ಗುಡ್ ನ್ಯೂಸ್: ಲಕ್ಷಾಂತರ ಅಪಾರ್ಟ್ಮೆಂಟ್ಗಳಿಗೆ ಸಿಗಲಿದೆ ಎ ಖಾತಾ!
ಕಳೆದ ನವೆಂಬರ್ನಲ್ಲಿ ಜಿಬಿಎ ವ್ಯಾಪ್ತಿಯಲ್ಲಿ ಖಾತಾ ಪರಿವರ್ತನೆಗೆ ಅವಕಾಶ ನೀಡಲಾಗಿತ್ತು. ಮೊದಲ ಹಂತದಲ್ಲಿ ಬಿ ಖಾತಾ ನಿವೇಶನಗಳಿಗೆ ಮಾತ್ರ ಎ ಖಾತಾ ನೀಡವ ಸೂಚನೆ ಇತ್ತು. ಆದರೆ ಈಗ ರಾಜ್ಯ ಸರ್ಕಾರ ಬಿ ಖಾತಾ ಹೊಂದಿರುವ ಫ್ಲ್ಯಾಟ್ಗಳಿಗೂ ಗುಡ್ ನ್ಯೂಸ್ ಕೊಟ್ಟಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.
- Web contact
- Updated on: Jan 10, 2026
- 7:03 am
ಪಿಎಂ ಶ್ರೀ ಶಾಲಾ ಯೋಜನೆ: ಪ್ರೆಸಿಡೆನ್ಸಿ ವಿವಿಯಲ್ಲಿ ಶಿಕ್ಷಕರಿಗೆ ನಾವೀನ್ಯತೆ, ಉದ್ಯಮಶೀಲತೆ ಶಿಬಿರ
ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಪಿಎಂ ಶ್ರೀ ಯೋಜನೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ 2020ಕ್ಕೆ ಪೂರಕವಾಗಿ ಪ್ರಾಂಶುಪಾಲರು ಹಾಗೂ ಶಿಕ್ಷಕರಿಗೆ ನಾವೀನ್ಯತೆ, ವಿನ್ಯಾಸ ಮತ್ತು ಉದ್ಯಮಶೀಲತೆ ಶಿಬಿರ ನಡೆದಿದೆ. ಡಾ. ಅಭಯ್ ಜೆರೆ ಸೇರಿದಂತೆ ಗಣ್ಯರು ಭಾಗವಹಿಸಿ, ಶಾಲೆಗಳಲ್ಲಿ ಚಿಕ್ಕ ವಯಸ್ಸಿನಿಂದಲೇ ನಾವೀನ್ಯತೆ ಮತ್ತು ಉದ್ಯಮಶೀಲತಾ ಚಿಂತನೆಯನ್ನು ಉತ್ತೇಜಿಸಲು ಕರೆ ನೀಡಿದರು.
- Web contact
- Updated on: Jan 9, 2026
- 8:20 pm
Bengaluru: ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ; ಬೈಕ್ ಸವಾರಿಗೆ ಬಿತ್ತು ಗೂಸಾ
ಬೈಕ್ ಸವಾರರು ಡೆಲಿವರಿ ಬಾಯ್ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಜ.4ರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಡೆಲಿವರಿ ಬಾಯ್ ಅಡ್ಡಬಂದ ಕಾರಣ ನಿಯಂತ್ರಣತಪ್ಪಿ ಬೈಕ್ ಸವಾರರು ಕೆಳಗೆ ಬಿದ್ದಿದ್ದಾರೆ. ಇದೇ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ. ಸಮಾಧಾನ ಪಡಿಸಿದರೂ ಸುಮ್ಮನಾಗದ ಹಿನ್ನೆಲೆ ಸ್ಥಳೀಯರು ಬೈಕ್ ಸವಾರರಿಗೆ ಧರ್ಮದೇಟು ನೀಡಿದ್ದು, ಅವರು ಸ್ಥಳದಿಂದ ಎಸ್ಕೇಪ್ ಅಗಿದ್ದಾರೆ.
- Web contact
- Updated on: Jan 9, 2026
- 1:50 pm
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ, ಸ್ಥಳದಲ್ಲೇ ಪ್ರಾಣ ಬಿಟ್ಟ ಇಬ್ಬರು ಯುವಕರು
ಬೆಂಗಳೂರಿನ ಮಾಚೋಹಳ್ಳಿ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಗಗನ್ (27) ಮತ್ತು ದರ್ಶನ್ (26) ಎಂಬ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಮಾಗಡಿ ರಸ್ತೆಯಲ್ಲಿ ಬೊಲೆರೊ ವಾಹನ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಇದು ನಗರದಲ್ಲಿ ನಡೆದ ಮತ್ತೊಂದು ದುರಂತ ರಸ್ತೆ ಅಪಘಾತ.
- Web contact
- Updated on: Jan 5, 2026
- 3:06 pm
‘ನಮ್ರತಾ-ಕಾರ್ತಿ ಬೆಸ್ಟ್ ಜೋಡಿ, ಮದುವೆ ಆದ್ರೆ ನಂಗೆ ಖುಷಿ’; ಸಂಗೀತಾ ಶೃಂಗೇರಿ ಅಚ್ಚರಿಯ ಮಾತು
ಬಿಗ್ ಬಾಸ್ ಕನ್ನಡ 10 ಸ್ಪರ್ಧಿಗಳಾದ ಕಾರ್ತಿಕ್ ಮಹೇಶ್ ಮತ್ತು ನಮ್ರತಾ ಗೌಡ ಅವರ ಪ್ರೀತಿಯ ಕುರಿತು ಅನೇಕ ಊಹಾಪೋಹಗಳಿವೆ. ಇತ್ತೀಚೆಗೆ ಅವರ ಸುತ್ತಾಟದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಸಂಗೀತಾ ಶೃಂಗೇರಿ ಪ್ರತಿಕ್ರಿಯಿಸಿದ್ದಾರೆ. ಅವರು ಮದುವೆ ಆದರೆ ತುಂಬಾ ಖುಷಿ ಪಡುತ್ತೇನೆ ಎಂದಿದ್ದಾರೆ.
- Web contact
- Updated on: Jan 3, 2026
- 8:36 am
Daily Devotional: ವೇಂಕಟೇಶ್ವರನಿಗೆ ಕಾಣಿಕೆ ಕಟ್ಟುವ ವಿಧಾನ ಹೇಗೆ ಗೊತ್ತಾ?
ಹರಕೆ ಕಟ್ಟುವ ವಿಧಾನ ಹೀಗಿದೆ. ಶನಿವಾರದಂದು ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಸ್ನಾನ ಮಾಡಿ ಶುದ್ಧರಾಗಿ, ಮನೆಯಲ್ಲಿರುವ ವೆಂಕಟೇಶ್ವರನ ಚಿತ್ರ ಅಥವಾ ವಿಗ್ರಹದ ಮುಂದೆ ಕುಳಿತು ದೀಪಾರಾಧನೆ ಮಾಡಬೇಕು. ಗಣಪತಿ ಸ್ತೋತ್ರ ಪಠಿಸಿ, ಶುದ್ಧವಾದ ಬಿಳಿಯ ವಸ್ತ್ರಕ್ಕೆ ಅರಿಶಿನ ಲೇಪಿಸಿ ಹಳದಿ ಬಣ್ಣಕ್ಕೆ ಬದಲಾಯಿಸಬೇಕು.
- Web contact
- Updated on: Dec 28, 2025
- 6:59 am
ಪೈರಸಿ ಮಾಡಿ ಸಿಕ್ಕಿ ಬಿದ್ರೆ ಇದೆ ಮಾರಿಹಬ್ಬ
‘ಪೈರಸಿ ಕಾಟ ಜೋರಾಗಿದೆ. ಎಲ್ಲಾ ಸಿನಿಮಾಗಳು ಸಂಕಷ್ಟ ಅನುಭವಿಸುತ್ತಿವೆ. ಈಗ ಪೈರಸಿ ಕಾಟದ ಬಗ್ಗೆ ಝೈದ್ ಖಾನ್ ಮಾತನಾಡಿದ್ದಾರೆ. ಪೈರಸಿ ಕಾಟವನ್ನು ಅವರು ಖಂಡಿಸಿದ್ದಾರೆ. ಸಿಕ್ಕಿ ಬಿದ್ದರೆ ಜೈಲೂಟ ಫಿಕ್ಸ್ ಎಂದು ಅವರು ಹೇಳಿದ್ದಾರೆ. ಆದರೂ ಎಚ್ಚೆತ್ತುಕೊಳ್ಳದೆ ಕೆಲವರು ಪೈರಸಿ ಮಾಡೋದನ್ನು ಮುಂದುವರಿಸಿದ್ದಾರೆ.
- Web contact
- Updated on: Dec 26, 2025
- 11:49 am
KSCA ಅಂಡರ್ 14 ಕ್ರಿಕೆಟ್: ಬೆಂಗಳೂರಿನ ವಿದ್ಯಾನಿಕೇತನ ಶಾಲೆಗೆ 410 ರನ್ಗಳ ಭರ್ಜರಿ ಜಯ
2025-26ನೇ ಸಾಲಿನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(KSCA) ಬಿ.ಟಿ.ಆರ್ 14 ವರ್ಷದೊಳಗಿನವರ ಎರಡನೇ ಡಿವಿಷನ್ ಕ್ರಿಕೆಟ್ ಪಂದ್ಯದಲ್ಲಿ ಬೆಂಗಳೂರಿನ ವಿದ್ಯಾನಿಕೇತನ ಶಾಲೆ ಭರ್ಜರಿ ಗೆಲುವು ಸಾಧಿಸಿದೆ. ಬ್ಯಾಟಿಂಗ್ , ಬೌಲಿಂಗ್ನ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಕಾರ್ಮೆಲ್ ಶಾಲೆಯನ್ನು ಮಣಿಸಿದೆ. ಅದು ಬರೋಬ್ಬರಿ 410 ರನ್ಗಳಿಂದ ಗೆಲುವಿನ ನಗೆ ಬೀರಿದೆ.
- Web contact
- Updated on: Dec 25, 2025
- 9:11 pm
ಹೋಟೆಲ್, ರೆಸ್ಟೋರೆಂಟ್, ಬೇಕರಿಗಳ ಮೇಲೆ ಅಧಿಕಾರಿಗಳ ದಾಳಿ: 2-3 ದಿನದ ಹಳೆಯ ಮಾಂಸ, ಪನ್ನೀರ್ ಪತ್ತೆ
ರಾಯಚೂರಿನ ಹೋಟೆಲ್, ರೆಸ್ಟೋರೆಂಟ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ ನಡೆಸಿ, ಕಳಪೆ ಹಾಗೂ ಕಲಬೆರಕೆ ಆಹಾರ ಪದಾರ್ಥಗಳನ್ನು ಪತ್ತೆ ಮಾಡಿದೆ. ಹಳೆಯ ಮಾಂಸ, ಪನ್ನೀರ್, ಅನೈರ್ಮಲ್ಯ ಮತ್ತು ಪರವಾನಗಿ ಇಲ್ಲದಿರುವುದು ಕಂಡುಬಂದಿದೆ. ಅಪಾಯಕಾರಿ ಸಿಲಿಂಡರ್ಗಳನ್ನು ಸಹ ಜಪ್ತಿ ಮಾಡಲಾಗಿದ್ದು, ನಿಯಮ ಉಲ್ಲಂಘಿಸಿದ 19 ಸಂಸ್ಥೆಗಳಿಗೆ 1.08 ಲಕ್ಷ ದಂಡ ವಿಧಿಸಿ, ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಎಚ್ಚರದಿಂದಿರಲು ಸಲಹೆ.
- Web contact
- Updated on: Dec 25, 2025
- 1:13 pm
‘ಇದು ಬೆಂಗಳೂರಿನಲ್ಲಿ ಸಹಿಸಲಾಗದ ಕ್ಷಣ’: ಟ್ರಾಫಿಕ್ನಲ್ಲಿ ಕಸದ ಲಾರಿಯ ಪಕ್ಕದಲ್ಲಿ ಸಿಲುಕಿಕೊಂಡ ಆಟೋದಲ್ಲಿದ್ದ ಮಹಿಳೆ
ಬೆಂಗಳೂರಿನ ಟ್ರಾಫಿಕ್ ಮತ್ತು ನೈರ್ಮಲ್ಯದ ಸಮಸ್ಯೆಗಳನ್ನು ಪವಿತ್ರಾ ಕುಲಕರ್ಣಿ ಅವರ ವೈರಲ್ ವಿಡಿಯೋದ ಮೂಲಕ ತಿಳಿಸಿದ್ದಾರೆ. ತಮ್ಮ ರಿಕ್ಷಾ ಪಕ್ಕದಲ್ಲೇ ಕಸ ಲಾರಿಯೊಂದು ಬಂದು ನಿಂತಿದೆ. ತನ್ನ ಗಮ್ಯಸ್ಥಾನವನ್ನು ತಲುಪಲು 78 ನಿಮಿಷಗಳು ಬೇಕು. ಜತೆಗೆ ಟ್ರಾಫಿಕ್, ಅದರ ನಡುವೆ ಈ ಕಸ ವಾಸನೆ, ಇದು ಪ್ರತಿದಿನದ ನರಕಯಾತನೆ ಎಂದು ಹೇಳಿದ್ದಾರೆ.
- Web contact
- Updated on: Dec 23, 2025
- 11:35 am
Pushya Masa: ಪಿತೃ, ಶನಿ ದೋಷದಿಂದ ಮುಕ್ತಿ ಪಡೆಯಲು ಪುಷ್ಯ ಮಾಸದಲ್ಲಿ ಈ ರೀತಿ ಮಾಡಿ
ಪುಷ್ಯ ಮಾಸವು ಚಂದ್ರನ ಕ್ಯಾಲೆಂಡರ್ನ 10ನೇ ಮಾಸ. ಇದು ಮಕರ ಸಂಕ್ರಾಂತಿಯಿಂದ ಆರಂಭವಾಗಿ ಉತ್ತರಾಯಣಕ್ಕೆ ದಾರಿ ಮಾಡಿಕೊಡುತ್ತದೆ. ಆಧ್ಯಾತ್ಮಿಕವಾಗಿ ಮಹತ್ವಪೂರ್ಣವಾಗಿದ್ದರೂ, ಇದನ್ನು 'ಶೂನ್ಯ ಮಾಸ' ಎಂದು ಪರಿಗಣಿಸಿ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಪಿತೃ ದೋಷ, ಶನಿ ದೋಷ ನಿವಾರಣೆಗೆ ಪೂಜೆ, ತೈಲಾಭಿಷೇಕ ಮತ್ತು ದಾನ ಮಾಡುವುದು ವಿಶೇಷ ಫಲಗಳನ್ನು ನೀಡುತ್ತದೆ. ಲಕ್ಷ್ಮಿ ನಾರಾಯಣ ಆರಾಧನೆ, ಪವಿತ್ರ ಸ್ನಾನ, ವೇದ ಅಧ್ಯಯನಕ್ಕೆ ಉತ್ತಮ.
- Web contact
- Updated on: Dec 20, 2025
- 9:32 am
‘ನಾನು ನಿಮ್ಮ ಭಾಷೆ ಕಲಿತಿದ್ದು ಪುನೀತ್ಗಾಗಿ’; ಕನ್ನಡದ ಬಗ್ಗೆ ಪ್ರೀತಿ ಹೊರ ಹಾಕಿದ ಪ್ರಿಯಾ ಆನಂದ್
ನಟಿ ಪ್ರಿಯಾ ಆನಂದ್ ಅವರು ಪುನೀತ್ ರಾಜ್ಕುಮಾರ್ ಅವರಿಗಾಗಿ ಕನ್ನಡ ಕಲಿತೆ ಎಂದಿದ್ದಾರೆ. ‘ರಾಜಕುಮಾರ’ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ ಪ್ರಿಯಾ, ಪುನೀತ್ ವ್ಯಕ್ತಿತ್ವದಿಂದ ಪ್ರಭಾವಿತರಾಗಿದ್ದರು. ಇತ್ತೀಚೆಗೆ ‘ಬಲರಾಮನ ದಿನಗಳು’ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್ ಕನ್ನಡ ಕಲಿಯಲು ಪ್ರೇರಣೆ ನೀಡಿದರು ಎಂದರು.
- Web contact
- Updated on: Dec 18, 2025
- 12:51 pm