AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Web

TV9 Web

tv9 - TV9 Kannada

webcontact@tv9.com

TV9 Kannada

Follow On:
‘ನಾನು ನಿಮ್ಮ ಭಾಷೆ ಕಲಿತಿದ್ದು ಪುನೀತ್​​ಗಾಗಿ’; ಕನ್ನಡದ ಬಗ್ಗೆ ಪ್ರೀತಿ ಹೊರ ಹಾಕಿದ ಪ್ರಿಯಾ ಆನಂದ್

‘ನಾನು ನಿಮ್ಮ ಭಾಷೆ ಕಲಿತಿದ್ದು ಪುನೀತ್​​ಗಾಗಿ’; ಕನ್ನಡದ ಬಗ್ಗೆ ಪ್ರೀತಿ ಹೊರ ಹಾಕಿದ ಪ್ರಿಯಾ ಆನಂದ್

ನಟಿ ಪ್ರಿಯಾ ಆನಂದ್ ಅವರು ಪುನೀತ್ ರಾಜ್‌ಕುಮಾರ್ ಅವರಿಗಾಗಿ ಕನ್ನಡ ಕಲಿತೆ ಎಂದಿದ್ದಾರೆ. ‘ರಾಜಕುಮಾರ’ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ ಪ್ರಿಯಾ, ಪುನೀತ್ ವ್ಯಕ್ತಿತ್ವದಿಂದ ಪ್ರಭಾವಿತರಾಗಿದ್ದರು. ಇತ್ತೀಚೆಗೆ ‘ಬಲರಾಮನ ದಿನಗಳು’ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್ ಕನ್ನಡ ಕಲಿಯಲು ಪ್ರೇರಣೆ ನೀಡಿದರು ಎಂದರು.

ಸಚಿವ  ಕೃಷ್ಣಭೈರೇಗೌಡ ವಿರುದ್ಧ 21 ಎಕರೆ ಜಮೀನು ಕಬಳಿಕೆ ಆರೋಪ: ಬಿಜೆಪಿಯಿಂದ ದಾಖಲೆ ಬಿಡುಗಡೆ

ಸಚಿವ ಕೃಷ್ಣಭೈರೇಗೌಡ ವಿರುದ್ಧ 21 ಎಕರೆ ಜಮೀನು ಕಬಳಿಕೆ ಆರೋಪ: ಬಿಜೆಪಿಯಿಂದ ದಾಖಲೆ ಬಿಡುಗಡೆ

ಕಂದಾಯ ಸಚಿವ ಕೃಷ್ಣಭೈರೇಗೌಡ ಒಂದ ರೀತಿಯ ವೈಟ್ ಕಾಲರ್ ರಾಜಕಾರಣಿ. ಅವರ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪಗಳು ಇಲ್ಲ. ಹೀಗಾಗಿ ಅವರ ಕಾರ್ಯ ವೈಖರಿ ಬಗ್ಗೆ ಸಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ. ಹಾಸನಾಂಬೆ ಉತ್ಸದಲ್ಲಿ ಖುದ್ದು ಮೈಕ್ ಹಿಡಿದು ಓಡಾಡಿದ್ದು, ಅಭಿವೃದ್ಧಿ ಕೆಲಸ, ಇಲಾಖೆ ಕಾರ್ಯದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ಬಗ್ಗೆ ಶ್ಲಾಘನೆಗಳು ವ್ಯಕ್ತವಾಗಿವೆ. ಆದ್ರೆ, ಇದೀಗ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದಿದದೆ. ಇನ್ನು ಇದಕ್ಕೆ ಸಚಿವರು ಸಹ ಸ್ಪಷ್ಟನೆ ನೀಡಿದ್ದಾರೆ.

ಕೃತಕ ಬುದ್ಧಿಮತ್ತೆ ಮತ್ತು ಮಾನವೀಯತೆ: ಬೆಂಗಳೂರಿನ ಪ್ರೆಸಿಡೆನ್ಸಿ ವಿವಿಯಲ್ಲಿ ಸ್ಪ್ಯಾನಿಷ್ ರಾಯಭಾರಿಯಿಂದ ಪುಸ್ತಕ ಬಿಡುಗಡೆ

ಕೃತಕ ಬುದ್ಧಿಮತ್ತೆ ಮತ್ತು ಮಾನವೀಯತೆ: ಬೆಂಗಳೂರಿನ ಪ್ರೆಸಿಡೆನ್ಸಿ ವಿವಿಯಲ್ಲಿ ಸ್ಪ್ಯಾನಿಷ್ ರಾಯಭಾರಿಯಿಂದ ಪುಸ್ತಕ ಬಿಡುಗಡೆ

ಸ್ಪೇನ್ ರಾಯಭಾರಿ ಜುವಾನ್ ಆಂಟೋನಿಯೊ ಮಾರ್ಚ್ ಪೂಜೋಲ್ ಅವರು ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ‘ದಿ ಗ್ರೇಟ್ ರೀಸೆಟ್’ ಪುಸ್ತಕ ಬಿಡುಗಡೆ ಮಾಡಿ, ಕೃತಕ ಬುದ್ಧಿಮತ್ತೆ ಮತ್ತು ಮಾನವರ ನಡುವಿನ ನೈತಿಕ ಛೇದಕದ ಕುರಿತು ಮಾತನಾಡಿದರು. AI ಯುಗದಲ್ಲಿ ಮಾನವ ಕೇಂದ್ರಿತ ಚಿಂತನೆ, ಸೃಜನಶೀಲತೆ ಮತ್ತು ನೈತಿಕ ಜವಾಬ್ದಾರಿಯ ಅಗತ್ಯವನ್ನು ಒತ್ತಿ ಹೇಳಿದರು.

ಎಣ್ಣೆ ಪಾರ್ಟಿಗೆ ಬಂದು ಗೆಳೆಯನ ಹೆಂಡ್ತಿ ಜತೆ ಚಕ್ಕಂದ: ಕಣ್ಣಾರೆ ಕಂಡ ಪತಿ ಮಾಡಿದ್ದೇನು ಗೊತ್ತಾ?

ಎಣ್ಣೆ ಪಾರ್ಟಿಗೆ ಬಂದು ಗೆಳೆಯನ ಹೆಂಡ್ತಿ ಜತೆ ಚಕ್ಕಂದ: ಕಣ್ಣಾರೆ ಕಂಡ ಪತಿ ಮಾಡಿದ್ದೇನು ಗೊತ್ತಾ?

ಇಬ್ಬರು ಒಂದೇ ತಾಯಿ ಹೊಟ್ಟೆಯಲ್ಲಿ ಹುಟ್ಟದೇ ಇರಬಹುದು. ಆದರೆ ಒಂದೇ ತಟ್ಟೆಯಲ್ಲಿ ಉಂಡು- ಕುಡಿದು ಬೆಳೆದವರು. ಆದರೆ ತಮ್ಮನ ರೀತಿಯಲ್ಲಿ ಗೆಳೆಯನನ್ನು ಮನೆಗೆ ಕರೆದು ಎಣ್ಣೆ ಕೊಟ್ಟು ಊಟ ಹಾಕಿದ್ದಾನೆ. ಆದ್ರೆ, ಸ್ನೇಹಿತ ಮಾತ್ರ ಆತನ ಮಡದಿ ಮೇಲೆ ಕಣ್ಣು ಹಾಕಿದ್ದಾನೆ. ಎಣ್ಣೆಗೆ ಸೈಡ್ಸ್​​ ತರಲು ಹೋದಾಗ ಗೆಳೆಯ ತನ್ನ ಹೆಂಡ್ತಿ ಜತೆ ಚಕ್ಕಂದವಾಡತ್ತಿರುವುದನ್ನು ಕಣ್ಣಾರೆ ಕಂಡಿದ್ದಾನೆ. ಮೇಲೆ ನಡೆದಿದ್ದು ಎಲ್ಲವೂ ರಕ್ತಸಿಕ್ತ ಚರಿತ್ರೆ.

ಚಿಕ್ಕಬಳ್ಳಾಪುರ: ಸರಣಿ ಅಪಘಾತಕ್ಕೆ ವೃದ್ದ ಬಲಿ; ಆಟೋ ಛಿದ್ರ ಛಿದ್ರ

ಚಿಕ್ಕಬಳ್ಳಾಪುರ: ಸರಣಿ ಅಪಘಾತಕ್ಕೆ ವೃದ್ದ ಬಲಿ; ಆಟೋ ಛಿದ್ರ ಛಿದ್ರ

ಚಿಕ್ಕಬಳ್ಳಾಪುರ ಜಿಲ್ಲೆ ಭಾಗ್ಯನಗರ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಓರ್ವ ವೃದ್ದ ಅಸುನೀಗಿದ್ದಾರೆ. ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ರಿಕ್ಷಾ ಬಸ್​​ಗೆ ಗುದ್ದಿದೆ. ಘಟನೆಯಲ್ಲಿ 10 ಜನ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ.

ದುಬೈನಲ್ಲಿ ಅಮ್ಮನ 60ನೇ ಹುಟ್ಟುಹಬ್ಬ: ‘ಇದು ನಿನ್ನ ಮದುವೆಯಂತೆ ಭಾಸವಾಯಿತು ಅಮ್ಮ’

ದುಬೈನಲ್ಲಿ ಅಮ್ಮನ 60ನೇ ಹುಟ್ಟುಹಬ್ಬ: ‘ಇದು ನಿನ್ನ ಮದುವೆಯಂತೆ ಭಾಸವಾಯಿತು ಅಮ್ಮ’

ಉದ್ಯಮಿ ಆಕಾಶ್ ಮೆಹ್ತಾ ತಮ್ಮ ತಾಯಿಯ 60ನೇ ಹುಟ್ಟುಹಬ್ಬವನ್ನು ದುಬೈನಲ್ಲಿ ಅದ್ದೂರಿಯಾಗಿ ಆಚರಿಸಿದ್ದಾರೆ. ಮಗನ ಈ ಅದ್ಭುತ ಆಯೋಜನೆ ಮತ್ತು ತಾಯಿಯ ಮೇಲಿನ ಪ್ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಭಕ್ತಿಗೀತೆಗಳು, ಮರುಭೂಮಿ ಸಫಾರಿ ಸೇರಿದಂತೆ ಅನೇಕ ವಿಚಾರಗಳನ್ನು ಒಳಗೊಂಡ ಈ ವಿಡಿಯೋ ನೆಟ್ಟಿಗರ ಮನಸೂರೆಗೊಂಡಿದ್ದು, ಹಲವರು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಆರ್​ಸಿಬಿ ಅಭಿಮಾನಿಗಳಿಗೆ ಡಿಕೆ ಶಿವಕುಮಾರ್ ಗುಡ್ ನ್ಯೂಸ್ ನೀಡಿದ ಬೆನ್ನಲ್ಲೇ ಬೆಂಗಳೂರಲ್ಲಿ ಐಪಿಎಲ್​ಗೆ ಎದುರಾಯ್ತು ಹೊಸ ವಿಘ್ನ!

ಆರ್​ಸಿಬಿ ಅಭಿಮಾನಿಗಳಿಗೆ ಡಿಕೆ ಶಿವಕುಮಾರ್ ಗುಡ್ ನ್ಯೂಸ್ ನೀಡಿದ ಬೆನ್ನಲ್ಲೇ ಬೆಂಗಳೂರಲ್ಲಿ ಐಪಿಎಲ್​ಗೆ ಎದುರಾಯ್ತು ಹೊಸ ವಿಘ್ನ!

IPL 2026: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಐಪಿಎಲ್ ಪಂದ್ಯಗಳನ್ನು ಆಯೋಜಿಸುವ ಪ್ರಯತ್ನಗಳಿಗೆ ಹಿರಿಯ ವಕೀಲ ಅಮೃತೇಶ್ ವಿರೋಧ ವ್ಯಕ್ತಪಡಿಸಿದ್ದಾರೆ. ಪಂದ್ಯಗಳನ್ನು ಆಯೋಜಿಸದಂತೆ ಸರ್ಕಾರ ಹಾಗೂ ಹೈಕೋರ್ಟ್‌ಗೆ ಅವರು ಮನವಿ ಮಾಡಿದ್ದಾರೆ. ಐಪಿಎಲ್ ಸೇರಿ ಅಂತಾರಾಷ್ಟ್ರೀಯ ಮಟ್ಟದ ಪಂದ್ಯ ಆಯೋಜನೆಗೆ ಪ್ರಯತ್ನಿಸುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ ಬೆನ್ನಲ್ಲೇ ಈ ಮನವಿ ಸಲ್ಲಿಕೆಯಾಗಿರುವುದು ಮಹತ್ವ ಪಡೆದಿದೆ.

ಇಂಡಿಗೋ ವೈಫಲ್ಯದ‌ ಜೊತೆಗೆ ವಿದೇಶಿ ಕೈವಾಡ? ಭಾರತೀಯ ವಿಮಾನಯಾನದ ಬೆನ್ನೆಲುಬು ಮುರಿದದ್ದು ಯಾರು?

ಇಂಡಿಗೋ ವೈಫಲ್ಯದ‌ ಜೊತೆಗೆ ವಿದೇಶಿ ಕೈವಾಡ? ಭಾರತೀಯ ವಿಮಾನಯಾನದ ಬೆನ್ನೆಲುಬು ಮುರಿದದ್ದು ಯಾರು?

ಭಾರತದ ವಿಮಾನಯಾನ ಕ್ಷೇತ್ರವು ಪ್ರಸ್ತುತ ಒಂದು ಕಠಿಣ ವಾಸ್ತವವನ್ನು ಎದುರಿಸುತ್ತಿದೆ. ಮಾರುಕಟ್ಟೆಯಲ್ಲಿ ಬಹುತೇಕ ಏಕಸ್ವಾಮ್ಯವನ್ನು ಸಾಧಿಸಿರುವ ಇಂಡಿಗೋ (IndiGo) ವಿಮಾನಯಾನ ಸಂಸ್ಥೆಯ ಇತ್ತೀಚಿನ ತಲ್ಲಣಗಳು, ಕೇವಲ ತಾಂತ್ರಿಕ ದೋಷಗಳು ಅಥವಾ ಸಣ್ಣಪುಟ್ಟ ನಿರ್ವಹಣಾ ವೈಫಲ್ಯಗಳಾಗಿ ಉಳಿದಿಲ್ಲ. ಈ ಬಿಕ್ಕಟ್ಟು, ದೇಶದ ಆರ್ಥಿಕತೆಗೆ ಮತ್ತು ವಾಯುಯಾನ ಕ್ಷೇತ್ರದ ಭವಿಷ್ಯಕ್ಕೆ ದೊಡ್ಡ ಸವಾಲಾಗಿದೆ.

Bengaluru Power Cut: ಡಿಸೆಂಬರ್ 4ರಿಂದ 8ವರೆಗೆ ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ: ಯಾವೆಲ್ಲ ಪ್ರದೇಶದಲ್ಲಿ ಪವರ್​​ ಕಟ್​

Bengaluru Power Cut: ಡಿಸೆಂಬರ್ 4ರಿಂದ 8ವರೆಗೆ ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ: ಯಾವೆಲ್ಲ ಪ್ರದೇಶದಲ್ಲಿ ಪವರ್​​ ಕಟ್​

ಬೆಂಗಳೂರಿನಲ್ಲಿ ಡಿಸೆಂಬರ್ 4 ರಿಂದ 8 ರವರೆಗೆ ಬೆಸ್ಕಾಂ ನಿಗದಿತ ವಿದ್ಯುತ್ ವ್ಯತ್ಯಯ ಘೋಷಿಸಿದೆ. ಮಳೆಗಾಲದಿಂದ ವಿಳಂಬವಾದ ದುರಸ್ತಿ ಕಾರ್ಯಕ್ಕಾಗಿ ಈ ಕಡಿತ ಅನಿವಾರ್ಯ. ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಕಡಿತಗೊಳ್ಳಲಿದ್ದು, ಹಲವು ಬೆಂಗಳೂರು ಪ್ರದೇಶಗಳು ಪ್ರಭಾವಿತವಾಗಲಿವೆ. ನಿವಾಸಿಗಳು ಮೊಬೈಲ್ ಚಾರ್ಜ್, ನೀರಿನ ಸಂಗ್ರಹದಂತಹ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಬೆಸ್ಕಾಂ ಸೂಚಿಸಿದೆ.

‘ನಾನು ನಾಳೆ ನನ್ನ ಕೆಲಸವನ್ನು ಬಿಡುತ್ತಿದ್ದೇನೆ’: ಕಂಪನಿ ನೀಡುವ ಹಿಂಸೆಗೆ ಬೇಸತ್ತ ಯುವಕ

‘ನಾನು ನಾಳೆ ನನ್ನ ಕೆಲಸವನ್ನು ಬಿಡುತ್ತಿದ್ದೇನೆ’: ಕಂಪನಿ ನೀಡುವ ಹಿಂಸೆಗೆ ಬೇಸತ್ತ ಯುವಕ

ಇಂದಿನ ಯುವಜನತೆ ಕಾರ್ಪೊರೇಟ್ ಉದ್ಯೋಗದಲ್ಲಿ ಹೆಚ್ಚಿದ ಕೆಲಸದ ಒತ್ತಡದಿಂದ ನೆಮ್ಮದಿ ಕಳೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನ 22 ವರ್ಷದ ಅನ್ಶುಲ್ ಉತ್ತಯ್ಯ ಇದೇ ಕಾರಣಕ್ಕೆ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದು, ಅವರ ಈ ವಿಡಿಯೋ ವೈರಲ್ ಆಗಿದೆ. ಉದ್ಯೋಗದ ನಿರಸಕ್ತಿ, ಸಮಯದ ಕೊರತೆ ಮತ್ತು ಭವಿಷ್ಯದ ಯೋಜನೆಗಳು ಅವರ ನಿರ್ಧಾರಕ್ಕೆ ಕಾರಣವಾಗಿವೆ. ಇದು ಯುವಜನರ ಉದ್ಯೋಗದ ಆಯ್ಕೆ ಮತ್ತು ಜೀವನ ಸಮತೋಲನದ ಬಗ್ಗೆ ಚರ್ಚೆ ಹುಟ್ಟುಹಾಕಿದೆ.

ಕಾರ್ಯಕ್ರಮದಲ್ಲೇ  ಬ್ರೇಕ್ ಫಾಸ್ಟ್​​ಗೆ ಆಹ್ವಾನಿಸಿದ ಡಿಕೆಶಿ:  ಸಿಎಂಗೆ ಇಷ್ಟವಾದ ನಾಟಿ ಕೋಳಿ ರೆಸಿಪಿ

ಕಾರ್ಯಕ್ರಮದಲ್ಲೇ ಬ್ರೇಕ್ ಫಾಸ್ಟ್​​ಗೆ ಆಹ್ವಾನಿಸಿದ ಡಿಕೆಶಿ: ಸಿಎಂಗೆ ಇಷ್ಟವಾದ ನಾಟಿ ಕೋಳಿ ರೆಸಿಪಿ

ಸಿಎಂ ಕುರ್ಚಿ ಕದನ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದ ಬೆನ್ನಲ್ಲೇ ಹೈಕಮಾಂಡ್ ಸಿಎಂಗೆ ಕರೆ ಮಾಡಿ ಒಟ್ಟಿಗೆ ಸೇರಿ ಬ್ರೇಕ್ ಫಾಸ್ಟ್​ ಮಾಡುವಂತೆ ಕರೆ ನೀಡಿತ್ತು. ಇದರ ಬೆನ್ನಲ್ಲೇ ಸಿದ್ದರಾಮಯ್ಯನವರು ಡಿಸಿಎಂ ಡಿಕೆ ಶಿವಕುಮಾರ್​ ಕರೆ ಮಾಡಿ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದರು. ಬಳಿಕ ತಮ್ಮಿಬ್ಬರ ನಡುವೆಯಾವುದೇ ಗೊಂದಲ ಇಲ್ಲ ಎಂದು ಮಾಧ್ಯಮಗಳ ಮುಂದೆ ಒಗ್ಗಟ್ಟಿನ ಪ್ರದರ್ಶಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ಬ್ರೇಕ್ ಫಾಸ್ಟ್ ಮಾಡಲು ನಾಳೆ(ಡಿಸೆಂಬರ್ 02) ತಮ್ಮ ನಿವಾಸಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.

ನಾಳೆಯ ಹವಾಮಾನ: ಕರ್ನಾಟಕದಲ್ಲಿ ಮೈಕೊರೆಯುವ ಚಳಿ ಜತೆ ಮಳೆ, ಎಲ್ಲೆಲ್ಲಿ?

ನಾಳೆಯ ಹವಾಮಾನ: ಕರ್ನಾಟಕದಲ್ಲಿ ಮೈಕೊರೆಯುವ ಚಳಿ ಜತೆ ಮಳೆ, ಎಲ್ಲೆಲ್ಲಿ?

Karnataka Weather Tomorrow: ದಿತ್ವಾ ಚಂಡಮಾರುತದ ಎಫೆಕ್ಟ್​ ಕರ್ನಾಟಕದ ಮೇಲೆ ಆಗಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೂ ಮಳೆಯ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ (Bengaluru) ಬೆಳಗ್ಗೆಯೇ ತುಂತುರು ಮಳೆಯಾಗಿದೆ. ಕಳೆದೆರಡು ದಿನಗಳಿಂದ ಶೀತ ಗಾಳಿ ಬೀಸುತ್ತಿದ್ದು, ಮೈ ಕೊರೆಯುವ ಚಳಿಗೆ ಜನರು ನಡುಗುತ್ತಿದ್ದಾರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.